ಕರ್ನಾಟಕ ಅರಣ್ಯ ಪ್ರದೇಶ ಶೇ. 33ಕ್ಕೆ ಹೆಚ್ಚಿಸಲು ಯತ್ನ 


Team Udayavani, Aug 19, 2018, 5:21 PM IST

19-agust-16.jpg

ನರೇಗಲ್ಲ: ಮನೆಗೊಂದು ಮರ, ಊರಿಗೊಂದು ತೋಪು, ತಾಲೂಕಿಗೊಂದು ಕಿರು ಅರಣ್ಯ, ಜಿಲ್ಲೆಗೊಂದು ವನ ಎಂಬ ಧ್ಯೇಯ ವಾಕ್ಯದೊಂದಿಗೆ ಪ್ರಸಕ್ತ ಆಯವ್ಯಯದಲ್ಲಿ ಹಸಿರು ಕರ್ನಾಟಕ ಆಂದೋಲನವನ್ನು ಎಲ್ಲೆಡೆ ಹಮ್ಮಿಕೊಳ್ಳಲಾಗಿದೆ ಎಂದು ರೋಣ ಉಪ ವಲಯ ಅರಣ್ಯಾಧಿಕಾರಿ ಎಸ್‌. ರಂಗಣ್ಣವರ ಹೇಳಿದರು. ಪಟ್ಟಣದ ಸರ್ಕಾರಿ ಕಾಲೇಜು ಆವರಣದಲ್ಲಿ ಅರಣ್ಯ ಇಲಾಖೆ ಗದಗ, ಪಟ್ಟಣ ಪಂಚಾಯತ್‌ ನರೇಗಲ್‌, ಗ್ರೀನ್‌ ಆರ್ಮಿ ತಂಡ, ಸರಕಾರಿ ಪ್ರೌಢಶಾಲೆ, ಪಿಯು ಕಾಲೇಜು ಹಾಗೂ ಪದವಿ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ಹಸಿರು ಕರ್ನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಹಸಿರು ಕರ್ನಾಟಕ ಯೋಜನೆಗೆ ಅಗತ್ಯವಿರುವ ಸಸಿಗಳನ್ನು ಇಲಾಖೆಯಿಂದ ಪೂರೈಸಲಾಗುತ್ತದೆ. ಈ ಕಾರ್ಯಕ್ರಮದಡಿ ಸಣ್ಣಪುಟ್ಟ ಬೋಳು ಗುಡ್ಡಗಳು, ಗೋಮಾಳಗಳು, ಸರಕಾರಿ ಜಮೀನುಗಳು, ಸರಕಾರಿ ಇಲಾಖೆಯ ಕಚೇರಿ ಬಯಲು ಆವರಣ, ಶಾಲಾ-ಕಾಲೇಜು ಆವರಣ, ರೈತರ ಜಮೀನು, ಉದ್ಯಾನವನ ಮತ್ತು ಹಂತ ಹಂತವಾಗಿ ಮನೆಗಳ ಅಂಗಳಗಳಲ್ಲಿ ಮರಗಿಡಗಳನ್ನು ಬೆಳೆಸುವ ಮೂಲಕ ಹಸಿರು ಹೊದಿಕೆ ಹೆಚ್ಚಿಸಲಾಗುವುದು. ಈ ನಿಟ್ಟಿನಲ್ಲಿ ಎಲ್ಲ ಇಲಾಖೆಗಳು, ಶಾಲಾ ಕಾಲೇಜುಗಳು, ಸಾರ್ವಜನಿಕರು, ಸಂಘ ಸಂಸ್ಥೆಗಳು, ಸ್ವಯಂ ಸೇವಕರು ಸಕ್ರಿಯವಾಗಿ ಭಾಗವಹಿಸಬೇಕಾಗಿದೆ. ಕರ್ನಾಟಕ ಅರಣ್ಯ ಪ್ರದೇಶವನ್ನು ಶೇ. 33ಕ್ಕೆ ಹೆಚ್ಚಿಸಲು ಹಾಗೂ ಗದಗ ಜಿಲ್ಲೆಯಲ್ಲಿ ಕೇವಲ ಶೇ. 7ಕ್ಕಿಂತ ಕಡಿಮೆ ಅರಣ್ಯ ಪ್ರದೇಶ ಇದ್ದು, ಸಸಿಗಳನ್ನು ನೆಟ್ಟು ಅರಣ್ಯ ಪ್ರದೇಶವನ್ನು ಹೆಚ್ಚಿಸಬೇಕಾಗಿದೆ ಎಂದರು.

ಪದವಿ ಪ್ರಾಚಾರ್ಯ ಬಸವರಾಜ ಬಳಗಾನೂರಮಠ ಮಾತನಾಡಿ, ಮಾನವ ಸಂಕುಲದ ಅಭಿವೃದ್ಧಿಗೆ ಪರಿಸರ ಉಳಿಸಿ ಬೆಳೆಸುವುದು ಅವಶ್ಯವಾಗಿದೆ. ನಾವಿಂದು ಕೇರಳ, ಕೊಡಗು, ಹಾಸನದಲ್ಲಿನ ಅತೀವೃಷ್ಟಿಯಿಂದಾಗಿ ಆಗುತ್ತಿರುವ ಜಲಪ್ರಳಯ, ಭೂಕುಸಿತ ಹಾಗೂ ಉತ್ತರ ಕರ್ನಾಟಕದಲ್ಲಿನ ಭೀಕರ ಬರಗಾಲ, ಅಂತರ್ಜಲ ಕುಸಿತ, ಹೆಚ್ಚುತ್ತಿರುವ ತಾಪಮಾನ ಪರಿಸರದ ನಾಶಕ್ಕೆ ಕಾರಣವಾಗಿದೆ. ಆದ್ದರಿಂದ ಎಲ್ಲರೂ ಪರಿಸರ ಸಂರಕ್ಷಣೆಗೆ ಕೈ ಜೋಡಿಸಬೇಕು ಎಂದರು.

ಪಪಂ ಆರೋಗ್ಯ ನಿರೀಕ್ಷಕ ಎನ್‌.ಎಂ. ಹಾದಿಮನಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಗಿಡ ಮರ ಬೆಳೆಸಿ ಹಸಿರೀಕರಣದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಈ ಅಭಿಯಾನದ ಮೂಲದ ಆಗಬೇಕಿದೆ. ಶಾಲಾ ಶಿಕ್ಷಕರಿಗೆ ಈ ಬಗ್ಗೆ ಹೆಚ್ಚು ತಿಳಿವಳಿಕೆ ನೀಡಿ ವಿದ್ಯಾರ್ಥಿಗಳನ್ನು ಉತ್ತೇಜಿಸುವಂತೆ ಮಾಡಬೇಕು ಎಂದರು. ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ ಕುರಿತು ಪ್ರತಿಜ್ಞಾವಿಧಿ ಬೋಧಿಸಲಾಯಿತು. ಸಸಿ ನೆಡುವ ಮೂಲಕ ಹಸಿರು ಕರ್ನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. 

ಪಿಯು ಪ್ರಾಚಾರ್ಯ ಎನ್‌.ಎಂ. ಪವಾಡಿಗೌಡರ, ಪ್ರೌಢಶಾಲೆ ಮುಖ್ಯ ಶಿಕ್ಷಕ ಎಸ್‌.ಬಿ. ನಿಡಗುಂದಿ, ಎಸ್‌.ಸಿ.ಗುಳಗೊಣ್ಣವರ, ಎಸ್‌.ಎನ್‌. ಚಕ್ರಸಾಲಿ, ಕೆ. ಶಿವುಕುಮಾರ, ಕೆ.ಎಚ್‌. ಅಂಜನಮೂರ್ತಿ, ಶಿವುಕುಮಾರ ಹಿರೆಹಾಳ, ಶಿವು ಕೊಪ್ಪದ, ಸಂತೋಷ ಮಣ್ಣೋಡ್ಡರ, ನಿಂಗಪ್ಪ ಮಡಿವಾಳ, ಎಂ.ಎಚ್‌. ಕಾತರಕಿ ಹಾಗೂ ಶಾಲಾ ಕಾಲೇಜಿನ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ, ಗ್ರೀನ್‌ ಆರ್ಮಿ ತಂಡದ ಸದಸ್ಯರು ಇದ್ದರು.

ಹಸಿರು ಕರ್ನಾಟಕ ಅಭಿಯಾನದಡಿ ನರೇಗಲ್ಲ ಪಟ್ಟಣದಲ್ಲಿ 900 ಸಸಿಗಳನ್ನು ಸರ್ಕಾರಿ ಶಾಲಾ ಕಾಲೇಜಿನ ಆವರಣದಲ್ಲಿ, ಹಿರೇಕೆರೆ ದಂಡೆಯ ಮೇಲೆ, ಎಸ್‌.ಡಬ್ಲೂ ಲೇಯವುಟ್‌ ಇತರೆ ಖಾಲಿ ಜಾಗಗಳಲ್ಲಿ ನೆಡಲಾಗುತ್ತದೆ. ಇಲಾಖೆಯವರು ಒದಗಿಸುವ ಸಸಿಗಳನ್ನು ರೈತರು ನೆಟ್ಟು ಪೋಷಿಸಿದ್ದಲ್ಲಿ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಡಿ ಪ್ರೋತ್ಸಾಹ ಧನವನ್ನೂ ನೀಡಲಾಗುವುದು.
ಎಸ್‌. ರಂಗಣ್ಣವರ,
ಉಪವಲಯ ಅರಣ್ಯಾಧಿಕಾರಿ ರೋಣ

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.