ಅಡಕೆ ಬೆಳೆಗೆ ಕೊಳೆರೋಗ


Team Udayavani, Aug 25, 2018, 5:37 PM IST

25-agust-25.jpg

ಯಲ್ಲಾಪುರ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ಗ್ರಾಮೀಣ ಭಾಗಗಳ ಅಡಕೆ ತೋಟದಲ್ಲಿ ಕೊಳೆರೋಗ ಕಾಣಿಸಿಕೊಂಡಿದೆ. ಅಡಕೆ ಮಿಡಿಗಳು ಉದುರುತ್ತಿರುವುದರಿಂದ ರೈತರು ಚಿಂತಿತರಾಗಿದ್ದಾರೆ. 

ಮಳೆಗಾಲದ ಪ್ರಾರಂಭದಲ್ಲಿ ಅಡಕೆಗೆ ತಿಗಣೆ ಕಾಟದಿಂದ ಅಡಕೆ ಮುಗುಡು ಹಾಗೂ ಮಿಳ್ಳೆಗಳು ರಾಶಿ ರಾಶಿಯಾಗಿ ಉದುರಿ, ಉದುರಿದ ಅಡಕೆಯ ಒಳಗಡೆ ಬಿಳಿ ಬಣ್ಣದ ಸಣ್ಣ ಕ್ರಿಮಿಗಳು ಕಂಡು ಬಂದು ರೈತರ ಚಿಂತೆಗೆ ಕಾರಣವಾಗಿತ್ತು. ನಿರಂತರ ಮಳೆಯ ಕಾರಣದಿಂದ ಆರಂಭದಲ್ಲಿ ಕೆಲವು ಭಾಗದಲ್ಲಿ ಮಾತ್ರ ಬಯೋಫೈಟ್‌ ಸಿಂಪಡಿಸಿದ್ದು ಬಿಟ್ಟರೆ ಬಹುತೇಕ ರೈತರಿಗೆ ಔಷಧಿ ಸಿಂಪಡಿಸಲು ಸಾಧ್ಯವಾಗಿಲ್ಲ. ಎಡಬಿಡದೇ ಮಳೆ ಸುರಿಯುತ್ತಿದ್ದು, ತೋಟದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿ ಕೊಳೆರೋಗ ಕಾಣಿಸಿಕೊಂಡಿದೆ. ತಾಲೂಕಿನ ಬಾರೆ, ಮಲವಳ್ಳಿ, ಬೀಗಾರ, ಹೊನಗದ್ದೆ ಕಳಚೆ, ಮುಂತಾದ ಭಾಗಗಳಲ್ಲಿ ಕೊಳೆರೋಗ ವ್ಯಾಪಕವಾಗಿ ಹರಡಿದೆ. ಇದಕ್ಕೆ ಔಷಧಿ ಸಿಂಪಡಿಸಲೂ ಮಳೆ ತೊಡಕಾಗಿದೆ.

ತಾಲೂಕಿನ ಗ್ರಾಮೀಣ ಭಾಗದ ವಿವಿಧೆಡೆ ಅಡಕೆ ತೋಟಗಳಲ್ಲೆಲ್ಲಾ ಸಣ್ಣ ಅಡಕೆ ಮಿಳ್ಳೆಗಳು ರಾಶಿ ರಾಶಿಯಾಗಿ ಉದುರುತ್ತಿರುವುದು ಬೆಳೆಗಾರರ ಚಿಂತೆಗೆ ಕಾರಣವಾಗಿದೆ. ಗುರುವಾರದಿಂದ ಬಿಸಿಲು-ಮಳೆ ಮುಂದುವರಿದಿದ್ದು, ಕೊಳೆ ರೋಗ ಮತ್ತಷ್ಟು ವ್ಯಾಪಿಸಲು ಕಾರಣವಾಗುತ್ತಿದೆ.

ಕಳೆದ 2-3 ವರ್ಷಗಳಿಂದ ಅಡಿಕೆ ತೋಟಗಳಲ್ಲಿ ಬೆಳೆಯ ಏರು-ಪೇರು ರೈತರನ್ನು ಹೈರಾಣಾಗಿಸಿದೆ. ಬರಗಾಲದ ಪರಿಣಾಮವಾಗಿ ಎರಡು ವರ್ಷ ಅಡಕೆಯ ಸಿಂಗಾರ ಒಣಗಿ ಹೋಗಿ ರೈತರು ಬೆಳೆ ನಷ್ಟ ಅನುಭವಿಸಿದ್ದರು. ಕಳೆದ ಮೂರು ವರ್ಷಗಳಿಗೆ ಹೋಲಿಸಿದಾಗ ಈ ಬಾರಿ ಉತ್ತಮ ಬೆಳೆ ಬರಬಹುದೆಂಬ ನಿರೀಕ್ಷೆ ರೈತರಲ್ಲಿದ್ದರೂ ಕೂಡ ಕೊಳೆ ರೋಗದಿಂದಾಗಿ ನಿರೀಕ್ಷೆ ಹುಸಿಯಾಗಿದೆ.

ಈಗಾಗಲೇ ಶೇ.60 ರಷ್ಟು ಅಡಕೆ ಕೋಳೆ ರೋಗದಿಂದ ಹಾನಿಗೊಳಗಾಗಿದ್ದು, ಮುಂದಿನ ದಿನಗಳಲ್ಲಿ ಈ ಸಲದ ಬೆಳೆಯು ಸಂಪೂರ್ಣ ನಾಶವಾಗುವ ಮುನ್ಸೂಚನೆ ತೋರಿದೆ. ಕೊಳೆರೋಗಪಿಡಿತ ತಾಲೂಕೆಂದು ಪರಿಗಣಿಸಿ ತೋಟಿಗನಿಗೆ ನೇರವಾದ ಸಹಾಯಕ್ಕೆ ಸರಕಾರ ಮುಂದಾಗಬೇಕೆಂದು ಭಾರತೀಯ ಕಿಸಾನ್‌ ಸಂಘ ತಾಲೂಕ ಘಟಕ ಸರಕಾರವನ್ನು ಆಗ್ರಹಿಸಿದೆ. 

ಕೊಳೆ ರೋಗದಿಂದಾಗಿ ಅಡಕೆ ವ್ಯಾಪಕ ಪ್ರಮಾಣದಲ್ಲಿ ಉದುರುತ್ತಿದೆ. ಸಂಕಷ್ಟದಲ್ಲಿರುವ ರೈತರಿಗೆ ಗಾಯದ ಮೇಲೆ ಉಪ್ಪು ಸವರಿದಂತಾಗಿದೆ. ಕಾರಣ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಡಕೆ ಬೆಳೆಗಾರರ ನೆರವಿಗೆ ಧಾವಿಸಬೇಕು. ಕೊಳೆರೋಗದಿಂದ ನಷ್ಟ ಅನುಭವಿಸಿದ ಬೆಳೆಗಾರರಿಗೆ ಪರಿಹಾರ ನೀಡಬೇಕು.  
.ರಾಮಕೃಷ್ಣ ಭಟ್ಟ ಬಾರೆ ಕೃಷಿಕ

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.