ಮೀಸಲಾತಿ ನೀಡದಿದ್ದರೆ ಹೋರಾಟ ಇನ್ನಷ್ಟು ತೀವ್ರ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಆ.22ರವರೆಗೂ ರಾಜ್ಯ ಸರ್ಕಾರಕ್ಕೆ ಗಡುವು; ಶಿಕ್ಷಣ-ಉದ್ಯೋಗಕ್ಕೆ ಮೀಸಲಾತಿ ಅನಿವಾರ್ಯ

Team Udayavani, Jul 11, 2022, 5:03 PM IST

14

ಧಾರವಾಡ: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಲು ಆ.22ರವರೆಗೂ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದ್ದು, ಅಷ್ಟರೊಳಗೆ ಸರ್ಕಾರ ಮೀಸಲಾತಿ ಘೋಷಣೆ ಮಾಡುವ ಭರವಸೆ ಇದೆ. ಒಂದು ವೇಳೆ ಮೀಸಲು ನೀಡದೆ ಹೋದರೆ ಮುಂದಿನ ಹೋರಾಟ ಇನ್ನಷ್ಟು ತೀವ್ರವಾಗಿ ನಡೆಯಲಿದೆ ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ನರೇಂದ್ರದಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲು ನೀಡುವ ಕುರಿತ ಹೋರಾಟದ ಜಾಗೃತಿ ಸಭೆ ಹಾಗೂ ಪ್ರತಿಜ್ಞೆ ಪಂಚಾಯತ್‌ನಲ್ಲಿ ಮಾತನಾಡಿದರು.

ಅಖಂಡ ಲಿಂಗಾಯತ ಸಮುದಾಯದಲ್ಲಿ ಹಿಂದುಳಿದ ಉಪಜಾತಿಗಳಿಗೆ ಈಗಾಗಲೇ ಮೀಸಲಾತಿ ಲಭಿಸಿದೆ. ಆದರೆ ಕೃಷಿಯನ್ನು ಆಧಾರವಾಗಿ ಇಟ್ಟುಕೊಂಡು ಬಂದಿರುವ ಪಂಚಮಸಾಲಿ ಸಮುದಾಯಕ್ಕೆ ಮಾತ್ರ ಮೀಸಲಾತಿ ಲಭಿಸಿಲ್ಲ. ಈ ಸಮುದಾಯದ ಬಡ ಮಕ್ಕಳಿಗೆ ಶಿಕ್ಷಣ ನೀಡಲು ಪೋಷಕರು ಪರದಾಡುವಂತಾಗಿದೆ. ಇನ್ನು ಕೃಷಿ ಅವಲಂಬಿಸಿ ಬದುಕಲು ಸಾಧ್ಯವಿಲ್ಲ. ಹೀಗಾಗಿ ಪಂಚಮಸಾಲಿ ಸಮಾಜದ ಯುವಕರು ಉದ್ಯೋಗ ಅರಸಿ ಅಲೆದಾಡುತ್ತಿದ್ದಾರೆ. ಅವರ ಭವಿಷ್ಯ ಮೀಸಲಾತಿ ಲಭಿಸದೆ ಹೋದರೆ ಕರಾಳವಾಗಲಿದೆ. ಹೀಗಾಗಿ ಸರ್ಕಾರ ಮೀನ-ಮೇಷ ಎಣಿಸುವುದನ್ನು ಬಿಟ್ಟು ಕೂಡಲೇ ಮೀಸಲಾತಿ ಘೋಷಿಸಬೇಕು ಎಂದು ಆಗ್ರಹಿಸಿದರು.

ಒಂದು ಮನೆಯ ಐದು ಜನ ಅಣ್ಣ ತಮ್ಮಂದಿರಲ್ಲಿ ನಾಲ್ಕು ಜನರು ಮೀಸಲಾತಿ, ಸರ್ಕಾರಿ ಸೌಲಭ್ಯ ಪಡೆದು ಉತ್ತಮ ಸ್ಥಿತಿಯಲ್ಲಿ ಇದ್ದು, ಇನ್ನೊರ್ವ ಸಹೋದರನಿಗೆ ಯಾವುದೇ ಮೀಸಲಾತಿ ಸಿಗದೇ ಕಷ್ಟದಲ್ಲಿ ಇದ್ದಾಗ ಇತರರು ಆತನಿಗೆ ಸಹಾಯ ಮಾಡಬೇಕು. ಇದು ನ್ಯಾಯ ಮತ್ತು ಧರ್ಮ. ಹೀಗಾಗಿ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವಂತೆ ಎಲ್ಲಾ ಸಮುದಾಯಗಳು ಬೆನ್ನಿಗೆ ನಿಂತಿವೆ ಎಂದರು.

ನಮ್ಮ ಹೋರಾಟದ ಫಲವಾಗಿ ಇಂದು ಸರ್ಕಾರದ ಮಟ್ಟದಲ್ಲಿ ಕೂಡ ಮೀಸಲಾತಿ ನೀಡುವುದು ಸೂಕ್ತ ಎನ್ನುವ ಹಂತಕ್ಕೆ ಎಲ್ಲರೂ ಬಂದಿದ್ದಾರೆ. ಆದಷ್ಟು ಬೇಗ ಮೀಸಲಾತಿ ಘೋಷಣೆ ಮಾಡಬೇಕು. ಮುಂಬರುವ ದಿನಮಾನದಲ್ಲಿ ಬಡ ಮತ್ತು ಕೃಷಿ ಆಧಾರಿತ ಪಂಚಮಸಾಲಿ ಕುಟುಂಬಗಳ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗಕ್ಕೆ ಮೀಸಲಾತಿ ಅನಿವಾರ್ಯವಾಗಿದ್ದು, ಪಕ್ಷ ಬೇಧ ಮರೆತು ಸಮಾಜದ ಎಲ್ಲ ಮುಖಂಡರು ಹೋರಾಟಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದರು.

ಜಿಲ್ಲಾ ಪಂಚಮಸಾಲಿ ಸಂಘದ ಅಧ್ಯಕ್ಷ ನಿಂಗಣ್ಣ ಕರಿಕಟ್ಟಿ ಮಾತನಾಡಿ, ಇಡೀ ರಾಜ್ಯಕ್ಕೆ ಪಂಚಮಸಾಲಿ ಸಮುದಾಯದ ಕೊಡುಗೆಯನ್ನು ಸರ್ಕಾರ ಒಮ್ಮೆ ಪರಿಶೀಲನೆ ಮಾಡಬೇಕು. ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಇಂದಿನವರೆಗೂ ಕೃಷಿ ಸೇರಿದಂತೆ ಹಲವು ಕ್ಷೇತ್ರದಲ್ಲಿ ಸಮಾಜ ಉತ್ತಮ ಕೊಡುಗೆ ನೀಡಿದೆ. ಇಂತಹ ಸಮಾಜದ ಬಡ ಮಕ್ಕಳ ಶಿಕ್ಷಣಕ್ಕೆ ಮತ್ತು ಉದ್ಯೋಗಕ್ಕೆ ಮೀಸಲು ನೀಡಲು ಹಿಂದೇಟು ಹಾಕುವುದು ಸರಿಯಲ್ಲ ಎಂದರು.

ತಾಲೂಕು ಪಂಚಮಸಾಲಿ ಸಂಘದ ಅಧ್ಯಕ್ಷ ಪ್ರದೀಪಗೌಡ, ಸಮಾಜದ ಮುಖಂಡ ಮಂಜುನಾಥ ತಿರ್ಲಾಪುರ ಇನ್ನಿತರರಿದ್ದರು.

ಜಿಲ್ಲೆಯ ಲಿಂಗಾಯತ ಸಮುದಾಯದಲ್ಲಿ ಹೆಚ್ಚು ಜನ ಪಂಚಮಸಾಲಿ ಸಮುದಾಯದ ಜನರಿದ್ದು, ಅವರೆಲ್ಲರೂ ಮೀಸಲಾತಿ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಹೀಗಾಗಿ ಜು.30ರವರೆಗೂ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಭೆ ಮತ್ತು ಪ್ರತಿಜ್ಞೆ ಪಂಚಾಯತಗಳನ್ನು ಮಾಡಿ ಇನ್ನಷ್ಟು ಜಾಗೃತಿ ಮೂಡಿಸುವ ಕೆಲಸ ನಡೆಯಲಿದೆ. ಕೊನೆಗೆ ಜು. 30ಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರು ಪಂಚಮಸಾಲಿ 2ಎ ಮೀಸಲಾತಿಗಾಗಿ ಒತ್ತಾಯ ಮಾಡಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುತ್ತದೆ. –ಬಸವ ಜಯಮೃತ್ಯುಂಜಯ ಸ್ವಾಮೀಜಿ

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.