ತನ್ನ ಮನೆಯಲ್ಲೇ ಕಳ್ಳತನ ಮಾಡಿ ಸಿಕ್ಕಿ ಬಿದ್ದ ಭೂಪ!
Team Udayavani, Sep 2, 2018, 4:44 PM IST
ಹುಬ್ಬಳ್ಳಿ: ತನ್ನ ಮನೆಯಲ್ಲೇ ಅಂದಾಜು 5.50 ಲಕ್ಷ ರೂ. ಮೌಲ್ಯದ ನಗ-ನಾಣ್ಯ ಕಳುವು ಮಾಡಿದ್ದ ವ್ಯಕ್ತಿಯೊಬ್ಬನನ್ನು ಗ್ರಾಮೀಣ ಠಾಣೆ ಪೊಲೀಸರು ಕಳ್ಳತನ ಮಾಡಿದ್ದ ವಸ್ತುಗಳೊಂದಿಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಲೂಕಿನ ಭಂಡಿವಾಡ ಗ್ರಾಮದ ರೆಹಿಮಾನಸಾಬ ಸಿ. ದಂಡಿನ ಎಂಬಾತನೆ ಬಂಧನಕ್ಕೊಳಗಾಗಿದ್ದಾನೆ. ಈತ ತನ್ನ ಮನೆಯ ಬಾಗಿಲ ಬೀಗ ಮುರಿದು ಕಳುವು ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.
ಚಂದುಸಾಬ ದಂಡಿನ ಎಂಬುವರ ಮನೆಯ ಕಬ್ಬಿಣದ ಅಲ್ಮೇರಾದಲ್ಲಿಟ್ಟಿದ್ದ ನಗ-ನಾಣ್ಯ ಬುಧವಾರ ಕಳುವು ಆಗಿತ್ತು. ಈ ಕುರಿತು ಅವರು ತಮ್ಮ ಹಿರಿಯ ಮಗನ ಮೇಲೆ ಸಂಶಯವಿದೆ ಎಂದು ಗ್ರಾಮೀಣ ಠಾಣೆಯಲ್ಲಿ ದೂರು ಕೊಟ್ಟಿದ್ದರು. ದೂರಿನನ್ವಯ ಎಸ್ಪಿ ಸಂಗೀತಾ ಜಿ., ಡಿಎಸ್ಪಿ ಬಿ.ಪಿ. ಚಂದ್ರಶೇಖರ ಹಾಗೂ ಠಾಣಾಧಿಕಾರಿ ಎಂ.ಎಸ್. ಪಾಟೀಲ ಮಾರ್ಗದರ್ಶನದಲ್ಲಿ ಪಿಎಸ್ಐ ಮಂಜುಳಾ ಸದಾರಿ ಹಾಗೂ ಸಿಬ್ಬಂದಿಯುಳ್ಳ ತನಿಖಾ ತಂಡ ರಚಿಸಲಾಗಿತ್ತು. ತಂಡವು ಪ್ರಕರಣದ ಜಾಡು ಹಿಡಿದು ರೆಹಿಮಾನಸಾಬನನ್ನು ಅಣ್ಣಿಗೇರಿಯ ಅಂಬಿಗೇರ ಕ್ರಾಸ್ ಬಳಿ ವಶಕ್ಕೆ ಪಡೆದು ವಿಚಾರಿಸಿದಾಗ, ಮನೆಯಲ್ಲಿದ್ದ ಅಂದಾಜು 2.40 ಲಕ್ಷ ರೂ. ಮೌಲ್ಯದ 100 ಗ್ರಾಂ ಚಿನ್ನಾಭರಣ ಹಾಗೂ 3.10 ಲಕ್ಷ ನಗದು ಕಳುವು ಮಾಡಿಕೊಂಡು, ಅಣ್ಣಿಗೇರಿ ಸಮೀಪದ ಸೈದಾಪುರ ಗ್ರಾಮದ ಸದ್ದಾಂಹುಸೇನ ಖುದಾವಂದ ಅವರ ದನದ ಕೊಟ್ಟಿಗೆ ಹಿಂದೆ ಮುಚ್ಚಿಟ್ಟಿದ್ದಾಗಿ ಬಾಯಿಬಿಟ್ಟಿದ್ದ. ನಂತರ ಆತನನ್ನು ಕಳುವಿನ ವಸ್ತುಗಳೊಂದಿಗೆ ಬಂಧಿಸಿ, ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ