ಉಕ ಹಳ್ಳಿ ದತ್ತು ಪಡೆದು ಅಭಿವೃದ್ಧಿ : ನೀನಾಸಂ ಸತೀಶ 


Team Udayavani, Sep 2, 2018, 4:59 PM IST

2-september-25.jpg

ಧಾರವಾಡ: ಉತ್ತರ ಕರ್ನಾಟಕದ ಕುಗ್ರಾಮವೊಂದನ್ನು ದತ್ತು ಪಡೆದು ಪರಿಪೂರ್ಣ ಅಭಿವೃದ್ಧಿ ಮಾಡುತ್ತೇನೆ ಎಂದು ಚಿತ್ರನಟ ನೀನಾಸಂ ಸತೀಶ ಸುದ್ದಿಗೋಷ್ಠಿಯಲ್ಲಿ ಹೇಳಿದರು. ನನಗೆ ಉತ್ತರ ಕರ್ನಾಟಕದ ಬಗ್ಗೆ ಮೊದಲಿಂದಲೂ ಅಭಿಮಾನವಿದೆ. ನನ್ನ ಚಿತ್ರಗಳು ಈ ಭಾಗದಲ್ಲಿ ಚೆನ್ನಾಗಿ ಪ್ರದರ್ಶನ ಕಾಣುತ್ತಿವೆ. ನಾನು ಈ ಭಾಗದಲ್ಲಿನ ಹಳ್ಳಿಯೊಂದನ್ನು ಹುಡುಕಿ, ಅದನ್ನು ಪರಿಪೂರ್ಣ ಅಭಿವೃದ್ಧಿ ಮಾಡುವುದಕ್ಕೆ ಪ್ರಯತ್ನಿಸುತ್ತೇನೆ. ಪ್ರಸಂಗ ಬಂದರೆ ಜನರಿಂದ ಹಣ ಸಂಗ್ರಹಿಸಿಯಾದರೂ ಅಭಿವೃದ್ಧಿ ಮಾಡುತ್ತೇನೆ ಎಂದರು.

ಕಲೆಕ್ಷನ್‌ ಜೋರಿದೆ: ‘ಅಯೋಗ್ಯ’ ಚಿತ್ರವು 25 ದಿನ ಪೂರ್ಣಗೊಳಿಸಿದ್ದು, ಒಂದೇ ವಾರದಲ್ಲಿ ಲವ್‌ ಇನ್‌ ಇಂಡಿಯಾ ಚಿತ್ರ ಮಾಡಿದಷ್ಟು ಕಲೆಕ್ಷನ್‌ನ್ನು (12.82 ಕೋಟಿ) ಅಯೋಗ್ಯ ಚಿತ್ರ ಮಾಡಿದೆ. ಸಮಾಜಮುಖೀಯಾದ ಹಾಗೂ ಸಮಾಜ ಒಪ್ಪುವಂತ ಚಿತ್ರ ಇದಾಗಿದೆ. ಅಯೋಗ್ಯ ಚಿತ್ರದಲ್ಲಿ ಬಚ್ಚೇಗೌಡರ ಒಂದು ಪಾತ್ರ ಬರುತ್ತದೆ. ಅಂಥ ಬಚ್ಚೇಗೌಡರು
ಇಂದಿಗೂ ಹಳ್ಳಿಗಳಲ್ಲಿ ಇದ್ದಾರೆ. ಸಮಾಜಮುಖೀಯಾದ ಸಿನಿಮಾಗಳು ಬಂದು ಯಶಸ್ವಿ ಪ್ರದರ್ಶನ ಕಂಡಾಗ ಮಾತ್ರ ಅವುಗಳಿಗೆ ನಿಜವಾದ ಯಶಸ್ಸು ಸಿಗುತ್ತದೆ. ಇಂದು ಕನ್ನಡ ಚಿತ್ರರಂಗದಲ್ಲೂ ಪರಭಾಷೆ ಚಿತ್ರಗಳಿಗೆ ಸೆಡ್ಡು ಹೊಡೆಯುವಂತ ಕಥೆಗಳು ಬರುತ್ತಿವೆ ಎಂದರು.

ತಮಿಳು ಚಿತ್ರರಂಗದಲ್ಲಿ ನನಗೊಂದು ಅವಕಾಶ ಬಂದಿದ್ದು, ಅದಕ್ಕೆ ನಾನು ಸಹಿ ಕೂಡ ಹಾಕಿದ್ದೇನೆ. ತಮಿಳು ಚಿತ್ರರಂಗದಲ್ಲಿ ಕನ್ನಡದ ಒಂದು ಮೊಟ್ಟೆಯ ಕಥೆ, ರಾಜಕುಮಾರದಂಥ ಅನೇಕ ಸಿನಿಮಾಗಳ ಬಗ್ಗೆ ಚರ್ಚೆ ಆಗುತ್ತಿದೆ. ಡಬ್ಬಿಂಗ್‌ಗೋಸ್ಕರ ಸಿನಿಮಾ ಮಾಡುವುದು ಸರಿಯಲ್ಲ. ಇತ್ತೀಚೆಗೆ ಡಬ್ಬಿಂಗ್‌ ಬಗ್ಗೆ ತೀವ್ರ ಚರ್ಚೆಯಾಗುತ್ತಿದ್ದು, ಈ ಡಬ್ಬಿಂಗ್‌ನಿಂದ ಭಾಷೆ ಹಾಳಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಚಿತ್ರದ ನಿರ್ದೇಶಕ ಮಹೇಶಕುಮಾರ ಉಪತಸ್ಥಿತರಿದ್ದರು.

ಪದ್ಮಾ ಚಿತ್ರ ಮಂದಿರಕ್ಕೆ ಭೇಟಿ
ಅಯೋಗ್ಯ ಚಿತ್ರ ಪ್ರದರ್ಶನ ಕಾಣುತ್ತಿರುವ ಪದ್ಮ ಚಿತ್ರಮಂದಿರಕ್ಕೆ ಭೇಟಿಕೊಟ್ಟು ಸ್ವಲ್ಪ ಹೊತ್ತು ಅಭಿಮಾನಿಗಳೊಂದಿಗೆ ಕಾಲ ಕಳೆದ ನಟ ಸತೀಶ, ಧಾರವಾಡದ ಬಗ್ಗೆ ಮೆಚ್ಚುಗೆಯ ಮಾತನಾಡಿದರು. ನೂರಾರು ಯುವ ಅಭಿಮಾನಿಗಳು ನಟ ಸತೀಶ ಅವರನ್ನು ತಮ್ಮ ಕ್ಯಾಮರಾಗಳಲ್ಲಿ ಸೆರೆ ಹಿಡಿದುಕೊಂಡರು. ಕೆಲವರು ಸೆಲ್ಫಿಗೆ ಮುಗಿಬಿದ್ದರೆ, ಇನ್ನು ಕೆಲವರು ನಟ ಸತೀಶಗೆ ಜೈ ಎಂದರು.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.