ಕಿಮ್ಸ್‌ನಲ್ಲಿನ್ನು  ಸಿಟಿ ಸ್ಕ್ಯಾನಿಂಗ್‌ ಸೌಲಭ್ಯ


Team Udayavani, Sep 3, 2018, 3:04 PM IST

3-september-18.jpg

ಹುಬ್ಬಳ್ಳಿ: ಕಿಮ್ಸ್‌ನಲ್ಲಿ 128 ಸ್ಲೈಸ್‌ ಸ್ಕ್ಯಾನಿಂಗ್‌ ಯಂತ್ರವನ್ನು ಜುಲೈನಲ್ಲಿ ಅಳವಡಿಸಲಾಗಿದ್ದು, ಕಂಪನಿಯವರು ಸೋಮವಾರ ಕಿಮ್ಸ್‌ಗೆ ಬಂದು ವೈದ್ಯರಿಗೆ ಇದರ ಬಳಕೆ, ನಿರ್ವಹಣೆ ಬಗ್ಗೆ ತರಬೇತಿ ನೀಡಿ, ಪ್ರಮಾಣ ಪತ್ರ ನೀಡಿದ ನಂತರ ಸೇವೆಗೆ ಮುಕ್ತವಾಗಲಿದೆ.

ಅಂದಾಜು 5.32 ಕೋಟಿ ರೂ. ವೆಚ್ಚದ 128 ಸ್ಲೈಸ್‌ ಸಿಟಿ ಸ್ಕ್ಯಾನ್‌ ಯಂತ್ರ ರೋಗಿಯ ದೇಹದ ಯಾವುದೇ ಭಾಗವನ್ನು ಸಿಟಿ ಸ್ಕ್ಯಾನ್‌ ಮಾಡಿ ಅದರ ಮಾಹಿತಿಯನ್ನು ಕ್ಷಣಾರ್ಧದಲ್ಲಿ ಪಡೆಯಬಹುದು. ರೋಗಿಯ ದೇಹವು ಯಂತ್ರದೊಳಗೆ ಸೇರುತ್ತಿದ್ದಂತೆ ರಕ್ತನಾಳ, ಎಲುಬು, ಸ್ನಾಯು, ಹೃದಯಕ್ಕೆ ರಕ್ತ ಸರಬರಾಜು ಮಾಡುವ ಕರನೊರಿ ಆರ್ಟಿಸ್‌, ಪುಪ್ಪಸದ ಸ್ಕ್ಯಾನ್‌ ಸೇರಿದಂತೆ ದೇಹದ ಎಲ್ಲ ಭಾಗದ ಚಿತ್ರವು ಉತ್ಕೃಷ್ಟ ಗುಣಮಟ್ಟ,3 ಡಿ ಪರಿಣಾಮವಾಗಿ ಸಿಗುವುದರಿಂದ ರೋಗಿಗೆ ಇಂತಹುದೆ ರೋಗವಿದೆ ಎಂದು ತಜ್ಞ ವೈದ್ಯರಿಗೆ ಪತ್ತೆ ಮಾಡಲು ಸಹಕಾರಿಯಾಗಲಿದೆ. ಅತಿ ಕಡಿಮೆ ಅವಧಿಯಲ್ಲಿ ಸ್ಕ್ಯಾನ್‌ ಆಗುವುದರಿಂದ ರೋಗಿಗಳ ಮೇಲೆ ಕ್ಷ-ಕಿರಣದಿಂದ ಉಂಟಾಗಬಹುದಾದ ದುಷ್ಪರಿಣಾಮ ಕಡಿಮೆಯಾಗಲಿದೆ. ಅಲ್ಲದೇ ಸ್ಕ್ಯಾನ್‌ಗಾಗಿ ರೋಗಿಗಳು ತಾಸುಗಟ್ಟಲೇ ಕಾಯುವುದು, ಅಲೆಯುವುದು ತಪ್ಪಲಿದೆ.

ದಿನಕ್ಕೆ 100 ಸ್ಕ್ಯಾನಿಂಗ್‌ ಸಾಧ್ಯ: ಕಿಮ್ಸ್‌ ಆಸ್ಪತ್ರೆಗೆ ಪ್ರತಿದಿನ ಉತ್ತರ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳಿಂದ ಸಾವಿರಾರು ರೋಗಿಗಳು ಬರುತ್ತಾರೆ. ಆದರೆ ರೋಗಿಗಳ ಶೀಘ್ರ ಶುಶ್ರೂಷೆ ಮಾಡಲು ಅವಶ್ಯವಿರುವ ಸ್ಕ್ಯಾನಿಂಗ್‌ ಯಂತ್ರವಿರಲಿಲ್ಲ. ಇದರಿಂದ ರೋಗಿಗಳಿಗೆ ಚಿಕಿತ್ಸೆ ನೀಡಲು ಸಮಸ್ಯೆ ಆಗುತ್ತಿತ್ತು. ಇದನ್ನೆಲ್ಲ ನಿವಾರಿಸಲು ಈ ಆಧುನಿಕ ಯಂತ್ರ ಅಳವಡಿಸಲಾಗಿದೆ. ಪ್ರತಿದಿನ 80-100 ರೋಗಿಗಳ ಸ್ಕ್ಯಾನಿಂಗ್‌ ಮಾಡಬಹುದಾಗಿದೆ. ಈ ಮೊದಲು ಕಿಮ್ಸ್‌ ನಲ್ಲಿದ್ದ ಹಳೆಯ ಸ್ಕ್ಯಾನಿಂಗ್‌ ಯಂತ್ರದಿಂದ ದಿನಕ್ಕೆ 15-20 ರೋಗಿಗಳಿಗೆ ಮಾತ್ರ ಸ್ಕ್ಯಾನಿಂಗ್‌ ಮಾಡಬಹುದಿತ್ತು. ಈ ಹೊಸ ಯಂತ್ರವು ಖಾಸಗಿ ಆಸ್ಪತ್ರೆಗಳನ್ನು ಹೊರತುಪಡಿಸಿದರೆ ಬೆಂಗಳೂರಿನ ವೈದ್ಯಕೀಯ ಕಾಲೇಜ್‌ನಲ್ಲಿದೆ. ಅದನ್ನು ಬಿಟ್ಟರೆ ರಾಜ್ಯದ ಸರಕಾರಿ ಆಸ್ಪತ್ರೆಯಲ್ಲಿ ಅಳವಡಿಸಲಾದ ಎರಡನೆಯ ಯಂತ್ರ ಇದಾಗಿದೆ.

ಕಿಮ್ಸ್‌ ಆಸ್ಪತ್ರೆಯಲ್ಲಿ ಹೊಸದಾಗಿ ಅಳವಡಿಸಲಾದ ಆಧುನಿಕ 128 ಸ್ಲೈಸ್‌ ಸಿಟಿ ಸ್ಕ್ಯಾನ್‌ ಯಂತ್ರ ಬಳಕೆ ಕುರಿತು ಕಂಪನಿಯವರು ವೈದ್ಯರಿಗೆ ಸೋಮವಾರ ತರಬೇತಿ ನೀಡಲಿದ್ದಾರೆ. ಆನಂತರ ಕಿಮ್ಸ್‌ನ ವೈದ್ಯರು ಈ ಯಂತ್ರವನ್ನು ರೋಗಿಗಳ ಮೇಲೆ ಬಳಕೆ ಮಾಡಬಹುದು ಎಂಬುದರ ಬಗ್ಗೆ ತಪಾಸಣೆ ನಡೆಸಿ ಪ್ರಮಾಣಪತ್ರ ನೀಡಲಿದ್ದಾರೆ. ನೂತನ ಯಂತ್ರದಿಂದಾಗಿ ರೋಗಿಗಳಿಗೆ ಅನುಕೂಲವಾಗಲಿದೆ.
 ಡಾ| ದತ್ತಾತ್ರೇಯ ಡಿ. ಬಂಟ್‌,
ನಿರ್ದೇಶಕ, ಕಿಮ್ಸ್‌

ಶಿವಶಂಕರ ಕಂಠಿ

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.