ಗುಣಮಟ್ಟದ ಶಿಕ್ಷಣ ಬೋಧಿಸುವ ಗುರುಗಳು ಅಗತ್ಯ


Team Udayavani, Sep 3, 2018, 5:23 PM IST

3-september-23.jpg

ಕಲಘಟಗಿ: ತನ್ನನ್ನು ತಾನು ಸುಟ್ಟು ಬೆಳಕನ್ನು ಯಾವುದೇ ಭೇದ ಭಾವವಿಲ್ಲದೇ ನೀಡುವ ಜ್ಯೋತಿ ಸ್ವರೂಪದಂತೆ ಗುಣಮಟ್ಟದ ಶಿಕ್ಷಣ ಬೋಧಿಸುವ ಗುರುಗಳು ಇಂದು ವಿಶ್ವದಾದ್ಯಂತ ಅತೀ ಅವಶ್ಯವಾಗಿದ್ದಾರೆ ಎಂದು ಶಾಸಕ ಸಿ.ಎಂ. ನಿಂಬಣ್ಣವರ ಹೇಳಿದರು. ಪಟ್ಟಣದ ಜನತಾ ಇಂಗ್ಲಿಷ್‌ ಮತ್ತು ಗರ್ಲ್ಸ್‌ ಇಂಗ್ಲಿಷ್‌ ಸ್ಕೂಲ್‌ನ 1997-98ನೇ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ 1999-2000ನೇ ಸಾಲಿನ ಜಿ.ಇ. ಕಾಲೇಜಿನ ಪಿಯು ವಿದ್ಯಾರ್ಥಿಗಳು ತಾವು ಕಲಿತ ಶಾಲೆಯಲ್ಲಿಯೇ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಗತ್ತಿನಲ್ಲಿ ಬೆಲೆ ಕಟ್ಟಲಾಗದ ಯಾವುದಾದರೊಂದು ಸ್ಥಾನವಿದ್ದರೆ ಅದು ಗುರುವಿನ ಸ್ಥಾನ. ಕಳೆದ 20 ವರ್ಷಗಳಿಂದ ಸಮಾಜದ ನಾನಾ ರಂಗಗಳಲ್ಲಿ ತಮ್ಮದೇ ಆದ ವೈಶಿಷ್ಟಪೂರ್ಣ ಜೀವನ ನಡೆಸುತ್ತಿದ್ದು, ಇಂದು ಎಲ್ಲರೂ ಒಂದೆಡೆ ಸೇರಿ ತಮ್ಮ ಬಾಲ್ಯದ ಗುರುಗಳನ್ನು ನೆನೆಯುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ. ಇಲ್ಲಿನ ಶಿಕ್ಷಣ ಸಂಸ್ಥೆಯಲ್ಲಿ ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದೆ ಎಂದು ಎಲ್ಲ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನೂ ಅಭಿನಂದಿಸಿದರು.

ಕಲಘಟಗಿ ಶಿಕ್ಷಣ ಸಮಿತಿಯ ಜನತಾ ಇಂಗ್ಲಿಷ್‌ ಸ್ಕೂಲ್‌, ಪ್ರೊಗ್ರೆಸ್ಸಿವ್‌ ಎಜುಕೇಶನಲ್‌ ಸೊಸೈಟಿಯ ಗರ್ಲ್ಸ್‌ ಇಂಗ್ಲಿಷ್‌ ಸ್ಕೂಲ್‌ ಹಾಗೂ ಜಿ.ಇ. ಸಂಯುಕ್ತ ಪಿಯು ಮಹಾವಿದ್ಯಾಲಯದ ಆಡಳಿತ ಮಂಡಳಿಯವರನ್ನು, ನಿವೃತ್ತ ಮತ್ತು ಹಾಲಿ ಗುರುವೃಂದದವರನ್ನು ಹಾಗೂ ಬೋಧಕೇತರ ಸಿಬ್ಬಂದಿಯನ್ನೂ ಹಳೆಯ ವಿದ್ಯಾರ್ಥಿಗಳು ಸನ್ಮಾನಿಸಿದರು.

ಹನ್ನೆರಡುಮಠದ ಶ್ರೀ ರೇವಣಸಿದ್ಧ ಶಿವಾಚಾರ್ಯರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸಂಸ್ಥೆಯ ಚೇರ್‌ಮನ್‌ ಡಾ| ಎಚ್‌.ಬಿ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಆಡಳಿತ ಮಂಡಳಿ ಕಾರ್ಯದರ್ಶಿ ಕೆ.ಬಿ. ಪಾಟೀಲಕುಲಕರ್ಣಿ, ನಿರ್ದೇಶಕರಾದ ಎಸ್‌.ಎಸ್‌. ಸಾವುಕಾರ, ವಾಮನ ನಾಡಗೇರ, ಎಮ್‌.ಎ. ವರದಾನಿ, ಪ್ರಾಚಾರ್ಯ ಎಸ್‌.ಎಸ್‌. ಹಾವೇರಿ, ಮುಖ್ಯೋಪಾಧ್ಯಾಯರಾದ ಕೆ.ಐ. ಕೊಂಗಿ, ಶ್ರೀಧರ ಪಾಟೀಲಕುಲಕರ್ಣಿ, ಸೈನಿಕ ಸೇವೆಯಲ್ಲಿರುವ ಹಳೆಯ ವಿದ್ಯಾರ್ಥಿ ಎನ್‌.ಸಿ. ಪಾಟೀಲ ಮಾತನಾಡಿದರು. ನಿವೃತ್ತ ಶಿಕ್ಷಕರಾದ ಎಲ್‌.ಆರ್‌. ಯಾದಪ್ಪನವರ, ಎ.ಜಿ. ಅಸೂಟಿ, ಯು.ಜಿ. ಅಸೂಟಿ, ಆರ್‌.ಎಲ್‌. ಕುಲಕರ್ಣಿ, ಆರ್‌.ಸಿ. ಕರಗುದರಿ, ಎಸ್‌.ಡಿ. ಪೂಜಾರ ಸನ್ಮಾನ ಸ್ವೀಕರಿಸಿದರು. ಹಳೆಯ ವಿದ್ಯಾರ್ಥಿಗಳಾದ ದೀಪಕ ಶೆಟ್ಟಿ, ಸಂತೋಷ ವಾಲಿಶೆಟ್ಟರ, ಮುಕುಂದ ಢವಳೆ, ರಾಘವೇಂದ್ರ ಅಳ್ನಾವರ, ರಾಜಶೇಖರ ದಾಗಿನದಾರ, ಪ್ರಕಾಶ ಬೆಟದೂರ, ಮೃತ್ಯುಂಜಯ ಬಾಳಿಕಾಯಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಅಕ್ಷತಾ ಕರಡೆಣ್ಣವರ ಮತ್ತು ಮಂಜುಳಾ ಜಾವೂರ ನಿರೂಪಿಸಿದರು. ಪರಿಮಳಾ ದೇಶಪಾಂಡೆ ಸ್ವಾಗತಿಸಿದರು. ಡಾ| ತ್ರಿವೇಣಿ ಸಾವಂತ ಪ್ರಾಸ್ತಾವಿಕ ಮಾತನಾಡಿದರು. ಮಹೇಶ ಪತ್ತಾರ ವಂದಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.