ಹುಬ್ಬಳ್ಳಿ ವಿಮಾನ ಪ್ರಯಾಣಿಕರ ಸಂಖ್ಯೆ ಶೇ. 82 ಹೆಚ್ಚಳ
Team Udayavani, Sep 3, 2018, 5:47 PM IST
ಹುಬ್ಬಳ್ಳಿ: ನಗರದಲ್ಲಿ ವಿಮಾನ ಪ್ರಯಾಣಿಕರ ಸಂಖ್ಯೆ ಪ್ರತಿ ತಿಂಗಳು ಗಣನೀಯವಾಗಿ ವೃದ್ಧಿಯಾಗುತ್ತಿದ್ದು, ಜೂನ್ದಿಂದ ಜುಲೈವರೆಗೆ ಪ್ರಯಾಣಿಕರ ಸಂಚಾರದಟ್ಟಣೆ ಶೇ. 82ಕ್ಕೂ ಅಧಿಕ ಹೆಚ್ಚಳವಾಗಿದೆ. ಹುಬ್ಬಳ್ಳಿಯಿಂದ ಅಹ್ಮದಾಬಾದ್, ಬೆಂಗಳೂರು, ಗೋವಾ, ಚೆನ್ನೈ, ಹೈದರಾಬಾದ್, ಜಬಲಪುರ, ಮಂಗಳೂರು, ಕೊಚ್ಚಿ, ಮುಂಬಯಿಗೆ ಪ್ರಯಾಣಿಸುವವರ ಸಂಖ್ಯೆ ಹೆಚ್ಚಳಗೊಂಡಿದೆ. ಜೂನ್ ತಿಂಗಳಲ್ಲಿ ಹುಬ್ಬಳ್ಳಿಯಿಂದ ವಿವಿಧ ಪ್ರದೇಶಗಳಿಗೆ ಸಂಚರಿಸುವ ವಿಮಾನಯಾನಿಗಳ ಹಾಗೂ ಸರಕು, ಕೋರಿಯರ್ ಸಂಖ್ಯೆ 25,023 ಇದ್ದದ್ದು ಜುಲೈ ತಿಂಗಳಲ್ಲಿ 45,548ಕ್ಕೆ ತಲುಪಿದೆ. ಈ ಹೆಚ್ಚಳ ಶೇ. 82ಕ್ಕೂ ಅಧಿಕವಾಗಿದೆ.
ಜುಲೈ ತಿಂಗಳಲ್ಲಿ ಅಹ್ಮದಾಬಾದ್ ನಿಂದ ಹುಬ್ಬಳ್ಳಿಗೆ 2346 ಪ್ರಯಾಣಿಕರು ಪ್ರಯಾಣಿಸಿದರೆ, ಹುಬ್ಬಳ್ಳಿಯಿಂದ ಅಹ್ಮದಾಬಾದ್ ಗೆ 2566 ಜನ, ಬೆಂಗಳೂರಿನಿಂದ ಹುಬ್ಬಳ್ಳಿಗೆ 9745, ಹುಬ್ಬಳ್ಳಿಯಿಂದ ಬೆಂಗಳೂರಿಗೆ 11145, ಮುಂಬಯಿಯಿಂದ ಹುಬ್ಬಳ್ಳಿಗೆ 2701, ಹುಬ್ಬಳ್ಳಿಯಿಂದ ಮುಂಬಯಿಗೆ 2642, ಗೋವಾದಿಂದ ಹುಬ್ಬಳ್ಳಿಗೆ 1176, ಹುಬ್ಬಳ್ಳಿಯಿಂದ ಗೋವಾಕ್ಕೆ 1334, ಹುಬ್ಬಳ್ಳಿಯಿಂದ ಚೆನ್ನೈಗೆ 2963, ಚೆನ್ನೈನಿಂದ 3078, ಹುಬ್ಬಳ್ಳಿಯಿಂದ ಹೈದರಾಬಾದ್ಗೆ 1704, ಹೈದರಾಬಾದ್ನಿಂದ ಹುಬ್ಬಳ್ಳಿಗೆ 1651, ಕೊಚ್ಚಿಯಿಂದ ಹುಬ್ಬಳ್ಳಿಗೆ 1256, ಹುಬ್ಬಳ್ಳಿಯಿಂದ ಕೊಚ್ಚಿಗೆ 1095, ಹುಬ್ಬಳ್ಳಿಯಿಂದ ಮಂಗಳೂರಿಗೆ 58, ಮಂಗಳೂರಿನಿಂದ ಹುಬ್ಬಳ್ಳಿಗೆ 66 ಹಾಗೂ ಹುಬ್ಬಳ್ಳಿಯಿಂದ ಜಬಲಪುರಕ್ಕೆ 8 ಮತ್ತು ಜಬಲಪುರದಿಂದ ಹುಬ್ಬಳ್ಳಿಗೆ 14 ಜನರು ವಿಮಾನಯಾನ ಮಾಡಿದ್ದಾರೆ. ಜುಲೈ ತಿಂಗಳಲ್ಲಿ ವಿಮಾನಯಾನ ಮೂಲಕ ವಿವಿಧ ಪ್ರದೇಶಗಳಿಂದ ಹುಬ್ಬಳ್ಳಿಗೆ 21957 ಜನ ಆಗಮಿಸಿದ್ದರೆ, ಹುಬ್ಬಳ್ಳಿಯಿಂದ ವಿವಿಧ ಸ್ಥಳಗಳಿಗೂ 23591ಜನ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್