ನ. 1ರಿಂದ ಚಿಗರಿ ಓಟಕ್ಕೆ ಅಗತ್ಯ ವ್ಯವಸ್ಥೆ: ಶೆಟ್ಟರ


Team Udayavani, Sep 7, 2018, 5:19 PM IST

7-september-23.jpg

ಹುಬ್ಬಳ್ಳಿ: ಬಿಆರ್‌ಟಿಎಸ್‌ ಕಾಮಗಾರಿ ವೇಗ ಪಡೆದುಕೊಂಡಿದೆ. ವಿಭಾಗೀಯ ಕಾರ್ಯಾಗಾರ, ಘಟಕಗಳ ಕಾಮಗಾರಿ ಶೇ. 99 ಪೂರ್ಣಗೊಂಡಿದೆ. ರಸ್ತೆ ಕಾಮಗಾರಿ 10 ದಿನದೊಳಗೆ ಪೂರ್ಣಗೊಳ್ಳಲಿದೆ ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ. ನ. 1ರಂದು ಬಸ್‌ ಸೇವೆ ಆರಂಭಿಸುವ ನಿಟ್ಟಿನಲ್ಲಿ ವ್ಯವಸ್ಥೆ ಕೈಗೊಳ್ಳಲಾಗುವುದು ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದರು.

ಹು-ಧಾ ಬಿಆರ್‌ಟಿಎಸ್‌ ಯೋಜನೆಯ ವಿವಿಧ ಕಾಮಗಾರಿ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬಿಆರ್‌ಟಿಎಸ್‌ ಸೇವೆ ಆರಂಭವಾಗುವುದರಿಂದ ಹೊಸೂರು-ಉಣಕಲ್ಲ ಸಂಪರ್ಕ ರಸ್ತೆ ಸಂಚಾರ ದಟ್ಟಣೆ ಹೆಚ್ಚಾಗಲಿದೆ. ಹೀಗಾಗಿ ಬಿಆರ್‌ಟಿಎಸ್‌ ಹಾಗೂ ಸಿಆರ್‌ಎಫ್ ನಿಧಿಯಲ್ಲಿ ಚತುಷ್ಪಥವಾಗಿ ಅಭಿವೃದ್ಧಿಗೊಳ್ಳಲಿದೆ. 

ಮುಂದೆ ಭೂ ಸ್ವಾಧೀನ ಮಾಡಿಕೊಳ್ಳಬೇಕಾಗುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ಅಲ್ಲಿನ ನಿವಾಸಿಗಳನ್ನು ತೆರವುಗೊಳಿಸುವ ಪ್ರಶ್ನೆ ಇಲ್ಲ ಎಂದು ತಿಳಿಸಿದರು. ವಿವಿಧೆಡೆ ಭೇಟಿ-ಮಾಹಿತಿ ಸಂಗ್ರಹ: ಗೋಕುಲ ರಸ್ತೆಯಲ್ಲಿ ವಿಭಾಗೀಯ ಕಾರ್ಯಾಗಾರ, ಬಸ್‌ ಘಟಕ, ಹೊಸೂರು ವೃತ್ತದಲ್ಲಿ ರಸ್ತೆ, ಬಸ್‌ ನಿಲ್ದಾಣ, ಉಣಕಲ್ಲನ ಫ್ಲೈಓವರ್‌ ಕೆಳ ಭಾಗದ ರಸ್ತೆ ಸೇರಿದಂತೆ ಬಿಆರ್‌ಟಿಎಸ್‌ ರಸ್ತೆ ನಿರ್ಮಾಣ ಕಾಮಗಾರಿ ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಉಣಕಲ್ಲ ಹಾಗೂ ಪ್ರಸಿಡೆಂಟ್‌ ಹೋಟೆಲ್‌ ಮುಂಭಾಗದಲ್ಲಿರುವ ಬಿಆರ್‌ಟಿಎಸ್‌ ರಸ್ತೆಯನ್ನು 10 ದಿನದೊಳಗೆ ಪೂರ್ಣಗೊಳಿಸುವುದಾಗಿ ಬಿಆರ್‌ ಟಿಎಸ್‌ ಅಧಿಕಾರಿಗಳು ತಿಳಿಸಿದರು.

ಹೊಸೂರು ವೃತ್ತದ ಅಭಿವೃದ್ಧಿ ಕಾರ್ಯ ಇನ್ನೂ ಬಾಕಿ ಉಳಿದಿದ್ದು, ತರಾತುರಿಯಾಗಿ ಬಸ್‌ ಆರಂಭ ಮಾಡುವುದರಿಂದ ಇರುವ ರಸ್ತೆಯಲ್ಲೇ ಬಸ್‌ ಓಡಿಸುವಂತಾಗಲಿದೆ. ಬಸ್‌ ಸೇವೆ ಆರಂಭವಾಗುತ್ತಿದ್ದಂತೆ ಉಳಿದಿರುವ ಕಾಮಗಾರಿ ಕೈಗೊಳ್ಳಲು ಸಮಸ್ಯೆಯಾಗುತ್ತದೆ. ಆತುರದ ನಿರ್ಧಾರದಿಂದ ಸಂಚಾರ ವ್ಯವಸ್ಥೆಯಲ್ಲಿ ಸಾಕಷ್ಟು ಸಮಸ್ಯೆ ಉಂಟಾಗಲಿದೆ ಎನ್ನುವ ಅಭಿಪ್ರಾಯ ಸ್ಥಳೀಯರಿಂದ ವ್ಯಕ್ತವಾಯಿತು. ಇನ್ನೂ ವೃತ್ತಕ್ಕೆ ಹೊಂದಿಕೊಂಡು ನಿರ್ಮಾಣಗೊಂಡಿರುವ ಬಿಆರ್‌ ಟಿಎಸ್‌ ನಿಲ್ದಾಣದಿಂದ ಎರಡು ದಿಕ್ಕಿನಲ್ಲಿರುವ ರಸ್ತೆಗಳ ವಾಹನ ಸಂಚಾರಕ್ಕೆ ಸಾಕಷ್ಟು ತೊಂದರೆಯಾಗುತ್ತಿದೆ. ಇದಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸ್ಥಳೀಯರು ಮನವಿ ಮಾಡಿದರು. ಈ ಸಮಸ್ಯೆ ಪರಿಶೀಲಿಸುವಂತೆ ಮಾಜಿ ಸಿಎಂ ಶೆಟ್ಟರ ಅಧಿಕಾರಿಗಳಿಗೆ ಸೂಚಿಸಿದರು. ಪಾಲಿಕೆ ಸದಸ್ಯರಿಂದ ಮನವಿ: ಉಣಕಲ್ಲನಲ್ಲಿ ಪ್ರತಿ ಶನಿವಾರ ಸಂತೆ ಆಗುವುದರಿಂದ ಸಾಕಷ್ಟು ಸಂಚಾರ ದಟ್ಟಣೆ ಇರುತ್ತಿದೆ. ಹೀಗಾಗಿ ಉಣಕಲ್ಲ ಭಾಗದಿಂದ ಮುಖ್ಯ ರಸ್ತೆಗೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಮಾಡುವಂತೆ ಸ್ಥಳೀಯ ಪಾಲಿಕೆ ಸದಸ್ಯ ಉಮೇಶ ಕೌಜಗೇರಿ ಮನವಿ ಮಾಡಿದರು. ಪೂರ್ಣ ರಸ್ತೆಯನ್ನು ಅಭಿವೃದ್ಧಿಗೊಳಿಸಲು ಸಾಧ್ಯವಿಲ್ಲ ಎಂದು ಬಿಆರ್‌ ಟಿಎಸ್‌ ಅಧಿಕಾರಿಗಳು ತಳ್ಳಿಹಾಕಿದರು. ಹೇಗಾದರೂ ಮಾಡಿ ಒಂದಿಷ್ಟು ರಸ್ತೆಯನ್ನು ಅಭಿವೃದ್ಧಿಪಡಿಸುವಂತೆ ಶೆಟ್ಟರ ಸೂಚಿಸಿದರು.

ಬಿಆರ್‌ಟಿಎಸ್‌ ಡಿಜಿಎಂ ಬಸವರಾಜ ಕೇರಿ, ಪಾಲಿಕೆ ಸದಸ್ಯರಾದ ಮಹೇಶ ಬುರ್ಲಿ, ಉಮೇಶ ಕೌಜಗೇರಿ, ಮುಖಂಡರಾದ ನಾಗೇಶ ಕಲಬುರ್ಗಿ, ತಿಪ್ಪಣ್ಣ ಮಜ್ಜಗಿ ಹಾಗೂ ಬಿಆರ್‌ಟಿಎಸ್‌ ಅಧಿಕಾರಿಗಳು ಇದ್ದರು. 

ಟಾಪ್ ನ್ಯೂಸ್

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

Loksabha Election; SUCI announced 19 candidates

Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.