ನ. 1ರಿಂದ ಚಿಗರಿ ಓಟಕ್ಕೆ ಅಗತ್ಯ ವ್ಯವಸ್ಥೆ: ಶೆಟ್ಟರ


Team Udayavani, Sep 7, 2018, 5:19 PM IST

7-september-23.jpg

ಹುಬ್ಬಳ್ಳಿ: ಬಿಆರ್‌ಟಿಎಸ್‌ ಕಾಮಗಾರಿ ವೇಗ ಪಡೆದುಕೊಂಡಿದೆ. ವಿಭಾಗೀಯ ಕಾರ್ಯಾಗಾರ, ಘಟಕಗಳ ಕಾಮಗಾರಿ ಶೇ. 99 ಪೂರ್ಣಗೊಂಡಿದೆ. ರಸ್ತೆ ಕಾಮಗಾರಿ 10 ದಿನದೊಳಗೆ ಪೂರ್ಣಗೊಳ್ಳಲಿದೆ ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ. ನ. 1ರಂದು ಬಸ್‌ ಸೇವೆ ಆರಂಭಿಸುವ ನಿಟ್ಟಿನಲ್ಲಿ ವ್ಯವಸ್ಥೆ ಕೈಗೊಳ್ಳಲಾಗುವುದು ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದರು.

ಹು-ಧಾ ಬಿಆರ್‌ಟಿಎಸ್‌ ಯೋಜನೆಯ ವಿವಿಧ ಕಾಮಗಾರಿ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬಿಆರ್‌ಟಿಎಸ್‌ ಸೇವೆ ಆರಂಭವಾಗುವುದರಿಂದ ಹೊಸೂರು-ಉಣಕಲ್ಲ ಸಂಪರ್ಕ ರಸ್ತೆ ಸಂಚಾರ ದಟ್ಟಣೆ ಹೆಚ್ಚಾಗಲಿದೆ. ಹೀಗಾಗಿ ಬಿಆರ್‌ಟಿಎಸ್‌ ಹಾಗೂ ಸಿಆರ್‌ಎಫ್ ನಿಧಿಯಲ್ಲಿ ಚತುಷ್ಪಥವಾಗಿ ಅಭಿವೃದ್ಧಿಗೊಳ್ಳಲಿದೆ. 

ಮುಂದೆ ಭೂ ಸ್ವಾಧೀನ ಮಾಡಿಕೊಳ್ಳಬೇಕಾಗುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ಅಲ್ಲಿನ ನಿವಾಸಿಗಳನ್ನು ತೆರವುಗೊಳಿಸುವ ಪ್ರಶ್ನೆ ಇಲ್ಲ ಎಂದು ತಿಳಿಸಿದರು. ವಿವಿಧೆಡೆ ಭೇಟಿ-ಮಾಹಿತಿ ಸಂಗ್ರಹ: ಗೋಕುಲ ರಸ್ತೆಯಲ್ಲಿ ವಿಭಾಗೀಯ ಕಾರ್ಯಾಗಾರ, ಬಸ್‌ ಘಟಕ, ಹೊಸೂರು ವೃತ್ತದಲ್ಲಿ ರಸ್ತೆ, ಬಸ್‌ ನಿಲ್ದಾಣ, ಉಣಕಲ್ಲನ ಫ್ಲೈಓವರ್‌ ಕೆಳ ಭಾಗದ ರಸ್ತೆ ಸೇರಿದಂತೆ ಬಿಆರ್‌ಟಿಎಸ್‌ ರಸ್ತೆ ನಿರ್ಮಾಣ ಕಾಮಗಾರಿ ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಉಣಕಲ್ಲ ಹಾಗೂ ಪ್ರಸಿಡೆಂಟ್‌ ಹೋಟೆಲ್‌ ಮುಂಭಾಗದಲ್ಲಿರುವ ಬಿಆರ್‌ಟಿಎಸ್‌ ರಸ್ತೆಯನ್ನು 10 ದಿನದೊಳಗೆ ಪೂರ್ಣಗೊಳಿಸುವುದಾಗಿ ಬಿಆರ್‌ ಟಿಎಸ್‌ ಅಧಿಕಾರಿಗಳು ತಿಳಿಸಿದರು.

ಹೊಸೂರು ವೃತ್ತದ ಅಭಿವೃದ್ಧಿ ಕಾರ್ಯ ಇನ್ನೂ ಬಾಕಿ ಉಳಿದಿದ್ದು, ತರಾತುರಿಯಾಗಿ ಬಸ್‌ ಆರಂಭ ಮಾಡುವುದರಿಂದ ಇರುವ ರಸ್ತೆಯಲ್ಲೇ ಬಸ್‌ ಓಡಿಸುವಂತಾಗಲಿದೆ. ಬಸ್‌ ಸೇವೆ ಆರಂಭವಾಗುತ್ತಿದ್ದಂತೆ ಉಳಿದಿರುವ ಕಾಮಗಾರಿ ಕೈಗೊಳ್ಳಲು ಸಮಸ್ಯೆಯಾಗುತ್ತದೆ. ಆತುರದ ನಿರ್ಧಾರದಿಂದ ಸಂಚಾರ ವ್ಯವಸ್ಥೆಯಲ್ಲಿ ಸಾಕಷ್ಟು ಸಮಸ್ಯೆ ಉಂಟಾಗಲಿದೆ ಎನ್ನುವ ಅಭಿಪ್ರಾಯ ಸ್ಥಳೀಯರಿಂದ ವ್ಯಕ್ತವಾಯಿತು. ಇನ್ನೂ ವೃತ್ತಕ್ಕೆ ಹೊಂದಿಕೊಂಡು ನಿರ್ಮಾಣಗೊಂಡಿರುವ ಬಿಆರ್‌ ಟಿಎಸ್‌ ನಿಲ್ದಾಣದಿಂದ ಎರಡು ದಿಕ್ಕಿನಲ್ಲಿರುವ ರಸ್ತೆಗಳ ವಾಹನ ಸಂಚಾರಕ್ಕೆ ಸಾಕಷ್ಟು ತೊಂದರೆಯಾಗುತ್ತಿದೆ. ಇದಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸ್ಥಳೀಯರು ಮನವಿ ಮಾಡಿದರು. ಈ ಸಮಸ್ಯೆ ಪರಿಶೀಲಿಸುವಂತೆ ಮಾಜಿ ಸಿಎಂ ಶೆಟ್ಟರ ಅಧಿಕಾರಿಗಳಿಗೆ ಸೂಚಿಸಿದರು. ಪಾಲಿಕೆ ಸದಸ್ಯರಿಂದ ಮನವಿ: ಉಣಕಲ್ಲನಲ್ಲಿ ಪ್ರತಿ ಶನಿವಾರ ಸಂತೆ ಆಗುವುದರಿಂದ ಸಾಕಷ್ಟು ಸಂಚಾರ ದಟ್ಟಣೆ ಇರುತ್ತಿದೆ. ಹೀಗಾಗಿ ಉಣಕಲ್ಲ ಭಾಗದಿಂದ ಮುಖ್ಯ ರಸ್ತೆಗೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಮಾಡುವಂತೆ ಸ್ಥಳೀಯ ಪಾಲಿಕೆ ಸದಸ್ಯ ಉಮೇಶ ಕೌಜಗೇರಿ ಮನವಿ ಮಾಡಿದರು. ಪೂರ್ಣ ರಸ್ತೆಯನ್ನು ಅಭಿವೃದ್ಧಿಗೊಳಿಸಲು ಸಾಧ್ಯವಿಲ್ಲ ಎಂದು ಬಿಆರ್‌ ಟಿಎಸ್‌ ಅಧಿಕಾರಿಗಳು ತಳ್ಳಿಹಾಕಿದರು. ಹೇಗಾದರೂ ಮಾಡಿ ಒಂದಿಷ್ಟು ರಸ್ತೆಯನ್ನು ಅಭಿವೃದ್ಧಿಪಡಿಸುವಂತೆ ಶೆಟ್ಟರ ಸೂಚಿಸಿದರು.

ಬಿಆರ್‌ಟಿಎಸ್‌ ಡಿಜಿಎಂ ಬಸವರಾಜ ಕೇರಿ, ಪಾಲಿಕೆ ಸದಸ್ಯರಾದ ಮಹೇಶ ಬುರ್ಲಿ, ಉಮೇಶ ಕೌಜಗೇರಿ, ಮುಖಂಡರಾದ ನಾಗೇಶ ಕಲಬುರ್ಗಿ, ತಿಪ್ಪಣ್ಣ ಮಜ್ಜಗಿ ಹಾಗೂ ಬಿಆರ್‌ಟಿಎಸ್‌ ಅಧಿಕಾರಿಗಳು ಇದ್ದರು. 

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.