ರಸ್ತೆ ದುರಸ್ತಿಗಾಗಿ 97 ಲಕ್ಷ ರೂ. ಕ್ರಿಯಾಯೋಜನೆ 


Team Udayavani, Sep 7, 2018, 5:33 PM IST

7-september-24.jpg

ಅಳ್ನಾವರ: ಪಟ್ಟಣ ವ್ಯಾಪ್ತಿಯಲ್ಲಿ ಮಳೆಯಿಂದ ಹಾಳಾದ ರಸ್ತೆಗಳ ದುರಸ್ತಿಗೆ ಪ್ರಕೃತಿ ವಿಕೋಪ ಪರಿಹಾರ ನಿ ಧಿಯಲ್ಲಿ ಹಣ ಬಿಡುಗಡೆಗೆ 97 ಲಕ್ಷ ರೂ. ಕ್ರಿಯಾ ಯೋಜನೆ ತಯಾರಿಸಿ ಜಿಲ್ಲಾಧಿಕಾರಿಗೆ ಸಲ್ಲಿಸಲಾಗಿದೆ ಎಂದು ಮುಖ್ಯಾಧಿಕಾರಿ ವೈ.ಜಿ. ಗದ್ದಿಗೌಡರ ತಿಳಿಸಿದರು.ಪಪಂ ಮಾಸಿಕ ಸಾಮಾನ್ಯ ಸಭೆಯಲ್ಲಿ ಅವರು ಮಾಹಿತಿ ನೀಡಿ, ಗಣೇಶ ಉತ್ಸವ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಮತ್ತು ಗಣೇಶ ಮೆರವಣಿಗೆ ಸುಗಮವಾಗಿ ಸಾಗಲು ಅನುಕೂಲ ಕಲ್ಪಿಸಲು ಹಾಳಾದ ರಸ್ತೆಗಳನ್ನು ತುರ್ತಾಗಿ ದುರಸ್ತಿ ಮಾಡಬೇಕಿದೆ ಎಂದು ಸಭೆಗೆ ತಿಳಿಸಿ, ಅಗತ್ಯವಿರುವ ಕಡೆಗಳಲ್ಲಿ ಕಾಮಗಾರಿ ಕೈಕೊಳ್ಳಲು ಅನುಮೋದನೆ ಪಡೆದುಕೊಂಡರು.

ಪಟ್ಟಣ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡಿರುವ ಬಡಾವಣೆಗಳ ಆಸ್ತಿಗಳಿಗೆ ಹೆಚ್ಚುವರಿ ಕರ ವಿಧಿಸುವ ಬಗ್ಗೆ ಚರ್ಚೆ ನಡೆಯಿತು. ಆಯಾ ಬಡಾವಣೆಗಳ ನಿವಾಸಿಗಳ ಗಮನಕ್ಕೆ ತಂದು ಸ್ವಯಂಪ್ರೇರಿತವಾಗಿ ಕರ ತುಂಬಿಸಿಕೊಂಡು ಮೂಲಸೌಕರ್ಯ ಒದಗಿಸಲು ಸಹಕರಿಸಲು ಮನವೊಲಿಸುವ ಬಗ್ಗೆ ಅಭಿಪ್ರಾಯ ವ್ಯಕ್ತವಾಯಿತು. ಪಟ್ಟಣದಲ್ಲಿ ಸುಮಾರು 760 ಅನಧಿಕೃತ ವಸತಿ ಆಸ್ತಿಗಳಿದ್ದು, ಪಪಂಗೆ ಆದಾಯ ಬರುವಂತೆ ಕ್ರಮಕೈಕೊಳ್ಳುವ ಅಗತ್ಯವಿದೆ ಎಂದು ಸದಸ್ಯರು ಹೇಳಿದರು.

ಪಟ್ಟಣದ ರಿಸಂ 38.39ರ ಬಡಾವಣೆಯ ಅಭಿವೃದ್ಧಿಯ ಬಗ್ಗೆ ವಿಶೇಷ ಅನುದಾನಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಹಾಗೂ ಜನವಸತಿಯಿರುವ ರಸ್ತೆಗಳನ್ನು ಹಂತ ಹಂತವಾಗಿ ಸುಧಾರಣೆ ಮಾಡಲು ನಿರ್ಣಯಿಸಲಾಯಿತು. ಮನೆ ಮನೆಗೆ ತೆರಳಿ ತ್ಯಾಜ್ಯ ಸಂಗ್ರಹಣೆ ಮಾಡಲಾಗುತ್ತಿದೆ. ಕಸ ಸಂಗ್ರಹಕಾರರು ಬಂದಾಗ ಕಸ ಹಾಕುವಂತೆ, ರಸ್ತೆ ಬದಿಗಳಲ್ಲಿ ತ್ಯಾಜ್ಯ ಎಸೆಯದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ರಮಕೈಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಸ್ಥಾಯಿ ಸಮಿತಿ ರಚನೆ ವಿಷಯ ಚರ್ಚೆಗೆ ಬಂದಾಗ ಸದಸ್ಯರಲ್ಲಿ ಪರಸ್ಪರ ಮಾತಿನ ಚಕಮಕಿ ನಡೆದು, ಮತ್ತೂಂದು ದಿನ ನಿಗದಿ ಪಡಿಸಿ ಸಮಿತಿ ರಚನೆ ಮಾಡುವ ಬಗ್ಗೆ ನಿರ್ಣಯಿಸಲಾಯಿತು. ವಸತಿ ಯೋಜನೆ ಮತ್ತು ಪಪಂ ಪಕ್ಕದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ ಕುರಿತು, ಪಟ್ಟಣದ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಪಟ್ಟಣದಲ್ಲಿ ಬೀದಿ ದೀಪಗಳ ನಿರ್ವಹಣೆ ಸಮರ್ಪಕವಾಗಿಲ್ಲ ಎಂದು ಸದಸ್ಯ ಉಸ್ಮಾನ ಬಾತಖಂಡೆ ದೂರಿದಾಗ ಇನ್ನುಳಿದ ಸದಸ್ಯರು ಸಹಮತಿ ವ್ಯಕ್ತಪಡಿಸಿದರು. ಪಟ್ಟಣದ ಅಂಗನವಾಡಿಗಳಲ್ಲಿ ಮಕ್ಕಳಿಗೆ ಸರಿಯಾಗಿ ಆಹಾರ ಧಾನ್ಯ ಮತ್ತು ಇತರೆ ಸೌಲಭ್ಯ ನೀಡುತ್ತಿಲ್ಲ. ಹಾಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮತ್ತು ಅಂಗನವಾಡಿ ಕಾರ್ಯಕರ್ತರ ಸಭೆ ಆಯೋಜನೆ ಮಾಡುವಂತೆ ಸದಸ್ಯರು ಮುಖ್ಯಾಧಿಕಾರಿಗೆ ಹೇಳಿದರು.

ಪಪಂ ಅಧ್ಯಕ್ಷೆ ಭಾಗ್ಯವತಿ ಕುರುಬದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಕಿರಣ ಗಡಕರ, ಸ್ಥಾಯಿ ಸಮೀತಿ ಅಧ್ಯಕ್ಷ ರಾಜೇಶ ಬೈಕೇರಿಕರ, ಸದಸ್ಯರಾದ ಛಗನಲಾಲ ಪಟೇಲ, ಪರಮೇಶ್ವರ ತೇಗೂರ, ಜೈಲಾನಿ ಸುದರ್ಜಿ, ಶಪೀಕಹ್ಮದ ಖತೀಬ, ವಿನಾಯಕ ಕುರುಬರ, ಪರಶುರಾಮ ಬೇಕನೇಕರ, ಮಂಜುಳಾ ಮೇದಾರ, ನಾಗರತ್ನಾ ವಾಗ್ಮೋಡೆ, ಸುನಂದಾ
ಕಲ್ಲು, ಮಹ್ಮದಉಸ್ಮಾನ ಬಾತಖಂಡೆ ಹಾಜರಿದ್ದರು. ಸಮುದಾಯ ಸಂಘಟನಾ ಅಧಿ ಕಾರಿ ನಾಗರಾಜ ಗುರ್ಲಹೋಸುರ ಸಭೆಗೆ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.