ರಸ್ತೆ ದುರಸ್ತಿಗಾಗಿ 97 ಲಕ್ಷ ರೂ. ಕ್ರಿಯಾಯೋಜನೆ 


Team Udayavani, Sep 7, 2018, 5:33 PM IST

7-september-24.jpg

ಅಳ್ನಾವರ: ಪಟ್ಟಣ ವ್ಯಾಪ್ತಿಯಲ್ಲಿ ಮಳೆಯಿಂದ ಹಾಳಾದ ರಸ್ತೆಗಳ ದುರಸ್ತಿಗೆ ಪ್ರಕೃತಿ ವಿಕೋಪ ಪರಿಹಾರ ನಿ ಧಿಯಲ್ಲಿ ಹಣ ಬಿಡುಗಡೆಗೆ 97 ಲಕ್ಷ ರೂ. ಕ್ರಿಯಾ ಯೋಜನೆ ತಯಾರಿಸಿ ಜಿಲ್ಲಾಧಿಕಾರಿಗೆ ಸಲ್ಲಿಸಲಾಗಿದೆ ಎಂದು ಮುಖ್ಯಾಧಿಕಾರಿ ವೈ.ಜಿ. ಗದ್ದಿಗೌಡರ ತಿಳಿಸಿದರು.ಪಪಂ ಮಾಸಿಕ ಸಾಮಾನ್ಯ ಸಭೆಯಲ್ಲಿ ಅವರು ಮಾಹಿತಿ ನೀಡಿ, ಗಣೇಶ ಉತ್ಸವ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಮತ್ತು ಗಣೇಶ ಮೆರವಣಿಗೆ ಸುಗಮವಾಗಿ ಸಾಗಲು ಅನುಕೂಲ ಕಲ್ಪಿಸಲು ಹಾಳಾದ ರಸ್ತೆಗಳನ್ನು ತುರ್ತಾಗಿ ದುರಸ್ತಿ ಮಾಡಬೇಕಿದೆ ಎಂದು ಸಭೆಗೆ ತಿಳಿಸಿ, ಅಗತ್ಯವಿರುವ ಕಡೆಗಳಲ್ಲಿ ಕಾಮಗಾರಿ ಕೈಕೊಳ್ಳಲು ಅನುಮೋದನೆ ಪಡೆದುಕೊಂಡರು.

ಪಟ್ಟಣ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡಿರುವ ಬಡಾವಣೆಗಳ ಆಸ್ತಿಗಳಿಗೆ ಹೆಚ್ಚುವರಿ ಕರ ವಿಧಿಸುವ ಬಗ್ಗೆ ಚರ್ಚೆ ನಡೆಯಿತು. ಆಯಾ ಬಡಾವಣೆಗಳ ನಿವಾಸಿಗಳ ಗಮನಕ್ಕೆ ತಂದು ಸ್ವಯಂಪ್ರೇರಿತವಾಗಿ ಕರ ತುಂಬಿಸಿಕೊಂಡು ಮೂಲಸೌಕರ್ಯ ಒದಗಿಸಲು ಸಹಕರಿಸಲು ಮನವೊಲಿಸುವ ಬಗ್ಗೆ ಅಭಿಪ್ರಾಯ ವ್ಯಕ್ತವಾಯಿತು. ಪಟ್ಟಣದಲ್ಲಿ ಸುಮಾರು 760 ಅನಧಿಕೃತ ವಸತಿ ಆಸ್ತಿಗಳಿದ್ದು, ಪಪಂಗೆ ಆದಾಯ ಬರುವಂತೆ ಕ್ರಮಕೈಕೊಳ್ಳುವ ಅಗತ್ಯವಿದೆ ಎಂದು ಸದಸ್ಯರು ಹೇಳಿದರು.

ಪಟ್ಟಣದ ರಿಸಂ 38.39ರ ಬಡಾವಣೆಯ ಅಭಿವೃದ್ಧಿಯ ಬಗ್ಗೆ ವಿಶೇಷ ಅನುದಾನಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಹಾಗೂ ಜನವಸತಿಯಿರುವ ರಸ್ತೆಗಳನ್ನು ಹಂತ ಹಂತವಾಗಿ ಸುಧಾರಣೆ ಮಾಡಲು ನಿರ್ಣಯಿಸಲಾಯಿತು. ಮನೆ ಮನೆಗೆ ತೆರಳಿ ತ್ಯಾಜ್ಯ ಸಂಗ್ರಹಣೆ ಮಾಡಲಾಗುತ್ತಿದೆ. ಕಸ ಸಂಗ್ರಹಕಾರರು ಬಂದಾಗ ಕಸ ಹಾಕುವಂತೆ, ರಸ್ತೆ ಬದಿಗಳಲ್ಲಿ ತ್ಯಾಜ್ಯ ಎಸೆಯದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ರಮಕೈಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಸ್ಥಾಯಿ ಸಮಿತಿ ರಚನೆ ವಿಷಯ ಚರ್ಚೆಗೆ ಬಂದಾಗ ಸದಸ್ಯರಲ್ಲಿ ಪರಸ್ಪರ ಮಾತಿನ ಚಕಮಕಿ ನಡೆದು, ಮತ್ತೂಂದು ದಿನ ನಿಗದಿ ಪಡಿಸಿ ಸಮಿತಿ ರಚನೆ ಮಾಡುವ ಬಗ್ಗೆ ನಿರ್ಣಯಿಸಲಾಯಿತು. ವಸತಿ ಯೋಜನೆ ಮತ್ತು ಪಪಂ ಪಕ್ಕದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ ಕುರಿತು, ಪಟ್ಟಣದ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಪಟ್ಟಣದಲ್ಲಿ ಬೀದಿ ದೀಪಗಳ ನಿರ್ವಹಣೆ ಸಮರ್ಪಕವಾಗಿಲ್ಲ ಎಂದು ಸದಸ್ಯ ಉಸ್ಮಾನ ಬಾತಖಂಡೆ ದೂರಿದಾಗ ಇನ್ನುಳಿದ ಸದಸ್ಯರು ಸಹಮತಿ ವ್ಯಕ್ತಪಡಿಸಿದರು. ಪಟ್ಟಣದ ಅಂಗನವಾಡಿಗಳಲ್ಲಿ ಮಕ್ಕಳಿಗೆ ಸರಿಯಾಗಿ ಆಹಾರ ಧಾನ್ಯ ಮತ್ತು ಇತರೆ ಸೌಲಭ್ಯ ನೀಡುತ್ತಿಲ್ಲ. ಹಾಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮತ್ತು ಅಂಗನವಾಡಿ ಕಾರ್ಯಕರ್ತರ ಸಭೆ ಆಯೋಜನೆ ಮಾಡುವಂತೆ ಸದಸ್ಯರು ಮುಖ್ಯಾಧಿಕಾರಿಗೆ ಹೇಳಿದರು.

ಪಪಂ ಅಧ್ಯಕ್ಷೆ ಭಾಗ್ಯವತಿ ಕುರುಬದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಕಿರಣ ಗಡಕರ, ಸ್ಥಾಯಿ ಸಮೀತಿ ಅಧ್ಯಕ್ಷ ರಾಜೇಶ ಬೈಕೇರಿಕರ, ಸದಸ್ಯರಾದ ಛಗನಲಾಲ ಪಟೇಲ, ಪರಮೇಶ್ವರ ತೇಗೂರ, ಜೈಲಾನಿ ಸುದರ್ಜಿ, ಶಪೀಕಹ್ಮದ ಖತೀಬ, ವಿನಾಯಕ ಕುರುಬರ, ಪರಶುರಾಮ ಬೇಕನೇಕರ, ಮಂಜುಳಾ ಮೇದಾರ, ನಾಗರತ್ನಾ ವಾಗ್ಮೋಡೆ, ಸುನಂದಾ
ಕಲ್ಲು, ಮಹ್ಮದಉಸ್ಮಾನ ಬಾತಖಂಡೆ ಹಾಜರಿದ್ದರು. ಸಮುದಾಯ ಸಂಘಟನಾ ಅಧಿ ಕಾರಿ ನಾಗರಾಜ ಗುರ್ಲಹೋಸುರ ಸಭೆಗೆ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.