ಬ್ಯಾಡಗಿ ಮೆಣಸಿನಕಾಯಿಗೂ ಬೇಕಿದೆ ಬ್ರಾಂಡ್
Team Udayavani, Sep 9, 2018, 4:43 PM IST
ಬ್ಯಾಡಗಿ: ಬೆಳೆದಂತಹ ಶೇ.42ರಷ್ಟು ಮೆಣಸಿನಕಾಯಿ ವಿದೇಶಗಳಿಗೆ ರಫ್ತಾಗುತ್ತಿದೆ. ಆದರೆ, ಅದಕ್ಕೆ ವಿಶ್ವ ಮಾರುಕಟ್ಟೆಯಲ್ಲಿ (ಡಬ್ಲೂಟಿಒ) ಬ್ರಾಂಡ್ ಸಿಗದಿರುವುದು ದುರಂತ. ಮೆಣಸಿನಕಾಯಿ ಮಾರಾಟವನ್ನು ಎರಡನೇ ಹಂತಕ್ಕೆ ಕೊಂಡೊಯ್ಯುಬೇಕಾಗಿದ್ದರೇ ಅತ್ಯಾಧುನಿಕ ತಂತ್ರಜ್ಞಾನ ಬಳಕೆ ಮಾಡಿಕೊಂಡು ಫುಡ್ ಪಾರ್ಕ್ ನಿರ್ಮಿಸಲು ಸಿದ್ಧರಾಗಬೇಕು ಎಂದು ಸಂಸದ ಶಿವಕುಮಾರ ಉದಾಸಿ ವರ್ತಕರಿಗೆ ಕರೆ ನೀಡಿದರು.
ವರ್ತಕರ ಸಂಘದ ಆಶ್ರಯದಲ್ಲಿ ಆಯೋಜಿಸಿದ್ದ ‘ಚಿಲ್ಲಿ ಎಕ್ಸಪೋ-2018’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಇಂದಿಗೂ ಮೂಲ ಸ್ಥಾನದಲ್ಲಿಯೇ ಉಳಿದುಕೊಂಡಿದೆ. ಇಲ್ಲಿ ವ್ಯಾಪಾರಸ್ಥರಿಗಿಂತಲೂ ಹೆಚ್ಚು ರೈತರಿಗೆ ಪ್ರಯೋಜನಗಳಾಗುತ್ತಿವೆ. ಬ್ಯಾಡಗಿ ಹೆಸರನ್ನು ಬಳಕೆ ಮಾಡಿಕೊಳ್ಳುತ್ತಿರುವ ನೂರಾರು ವಿದೇಶಿ ಕಂಪನಿಗಳು ಇಂದು ವಿಶ್ವ ಮಾರುಕಟ್ಟೆಯಲ್ಲಿ ಬ್ರಾಂಡ್ ಆಗಿ ಉಳಿದುಕೊಂಡಿವೆ ಎಂದರು.
ಬ್ಯಾಡಗಿಯಲ್ಲಿನ ವರ್ತಕರು ಕೇವಲ ವ್ಯಾಪಾರ ವಹಿವಾಟಿಗಷ್ಟೇ ಸೀಮಿತವಾಗಿದ್ದಾರೆ. ಇದರ ಬದಲಾಗಿ ಎರಡನೇ ಹಂತದ ಮಾರುಕಟ್ಟೆ ಪ್ರವೇಶಿಸಬೇಕು. ಅದರ ಜೊತೆಗೆ ಬ್ಯಾಡಗಿಯಿಂದಲೇ ನೇರವಾಗಿ ರಫ್ತು ಮಾಡಲು ಸಿದ್ಧರಾಗಬೇಕು. ಇದಕ್ಕೆ ಅವಶ್ಯವಿರುವ ಬಂಡವಾಳ ಸೊಸೈಟಿ ಮಾದರಿಯಲ್ಲಿ ಕ್ರೋಡೀಕರಿಸುವ ಮೂಲಕ ನೇರ ರಫ್ತಿಗೆ ಮುಂದಾಗಬೇಕು ಎಂದರು.
ಮೂಲ ತಳಿ ಮೆಣಸಿನಕಾಯಿ ಕೆಲವೇ ವರ್ಷಗಳಲ್ಲಿ ಮಾಯವಾಗುವ ಹಂತಕ್ಕೆ ಬಂದು ತಲುಪಿದೆ. ಇದರಲ್ಲಿರುವ ಕಡಿಮೆ ಖಾರ ಮತ್ತು ನೈಸರ್ಗಿಕ ಬಣ್ಣ ವಿಶ್ವದ ಯಾವುದೇ ತಳಿ ಮೆಣಸಿನಕಾಯಿಯಲ್ಲಿಯೂ ಸಿಗದು. ಈ ಕುರಿತು ಕೃಷಿಕರಲ್ಲಿ ಸಮಗ್ರ ಮಾಹಿತಿ ನೀಡುವ ಮೂಲಕ ತಾಂತ್ರಿಕತೆ ಬಳಸಿ ಒಣಗಿಸುವ (ಸೋಲಾರ್ ಟ್ರೈಯಾರ್ಡ್) ಕಣಗಳನ್ನು ನಿರ್ಮಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
ನಾಮಪತ್ರ ಹಿಂದೆ ತೆಗೆದುಕೊಂಡಾಕ್ಷಣ ನನ್ನ ಧರ್ಮ ಯುದ್ಧ ನಿಂತಿಲ್ಲ: ದಿಂಗಾಲೇಶ್ವರ ಸ್ವಾಮೀಜಿ
ಐಎನ್ಡಿಐಎಯ ಅರ್ಧದಷ್ಟು ನಾಯಕರು ಜೈಲಿನಲ್ಲಿ: ನಡ್ಡಾ
MUST WATCH
ಹೊಸ ಸೇರ್ಪಡೆ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?