ಬ್ಯಾಡಗಿ ಮೆಣಸಿನಕಾಯಿಗೂ ಬೇಕಿದೆ ಬ್ರಾಂಡ್
Team Udayavani, Sep 9, 2018, 4:43 PM IST
ಬ್ಯಾಡಗಿ: ಬೆಳೆದಂತಹ ಶೇ.42ರಷ್ಟು ಮೆಣಸಿನಕಾಯಿ ವಿದೇಶಗಳಿಗೆ ರಫ್ತಾಗುತ್ತಿದೆ. ಆದರೆ, ಅದಕ್ಕೆ ವಿಶ್ವ ಮಾರುಕಟ್ಟೆಯಲ್ಲಿ (ಡಬ್ಲೂಟಿಒ) ಬ್ರಾಂಡ್ ಸಿಗದಿರುವುದು ದುರಂತ. ಮೆಣಸಿನಕಾಯಿ ಮಾರಾಟವನ್ನು ಎರಡನೇ ಹಂತಕ್ಕೆ ಕೊಂಡೊಯ್ಯುಬೇಕಾಗಿದ್ದರೇ ಅತ್ಯಾಧುನಿಕ ತಂತ್ರಜ್ಞಾನ ಬಳಕೆ ಮಾಡಿಕೊಂಡು ಫುಡ್ ಪಾರ್ಕ್ ನಿರ್ಮಿಸಲು ಸಿದ್ಧರಾಗಬೇಕು ಎಂದು ಸಂಸದ ಶಿವಕುಮಾರ ಉದಾಸಿ ವರ್ತಕರಿಗೆ ಕರೆ ನೀಡಿದರು.
ವರ್ತಕರ ಸಂಘದ ಆಶ್ರಯದಲ್ಲಿ ಆಯೋಜಿಸಿದ್ದ ‘ಚಿಲ್ಲಿ ಎಕ್ಸಪೋ-2018’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಇಂದಿಗೂ ಮೂಲ ಸ್ಥಾನದಲ್ಲಿಯೇ ಉಳಿದುಕೊಂಡಿದೆ. ಇಲ್ಲಿ ವ್ಯಾಪಾರಸ್ಥರಿಗಿಂತಲೂ ಹೆಚ್ಚು ರೈತರಿಗೆ ಪ್ರಯೋಜನಗಳಾಗುತ್ತಿವೆ. ಬ್ಯಾಡಗಿ ಹೆಸರನ್ನು ಬಳಕೆ ಮಾಡಿಕೊಳ್ಳುತ್ತಿರುವ ನೂರಾರು ವಿದೇಶಿ ಕಂಪನಿಗಳು ಇಂದು ವಿಶ್ವ ಮಾರುಕಟ್ಟೆಯಲ್ಲಿ ಬ್ರಾಂಡ್ ಆಗಿ ಉಳಿದುಕೊಂಡಿವೆ ಎಂದರು.
ಬ್ಯಾಡಗಿಯಲ್ಲಿನ ವರ್ತಕರು ಕೇವಲ ವ್ಯಾಪಾರ ವಹಿವಾಟಿಗಷ್ಟೇ ಸೀಮಿತವಾಗಿದ್ದಾರೆ. ಇದರ ಬದಲಾಗಿ ಎರಡನೇ ಹಂತದ ಮಾರುಕಟ್ಟೆ ಪ್ರವೇಶಿಸಬೇಕು. ಅದರ ಜೊತೆಗೆ ಬ್ಯಾಡಗಿಯಿಂದಲೇ ನೇರವಾಗಿ ರಫ್ತು ಮಾಡಲು ಸಿದ್ಧರಾಗಬೇಕು. ಇದಕ್ಕೆ ಅವಶ್ಯವಿರುವ ಬಂಡವಾಳ ಸೊಸೈಟಿ ಮಾದರಿಯಲ್ಲಿ ಕ್ರೋಡೀಕರಿಸುವ ಮೂಲಕ ನೇರ ರಫ್ತಿಗೆ ಮುಂದಾಗಬೇಕು ಎಂದರು.
ಮೂಲ ತಳಿ ಮೆಣಸಿನಕಾಯಿ ಕೆಲವೇ ವರ್ಷಗಳಲ್ಲಿ ಮಾಯವಾಗುವ ಹಂತಕ್ಕೆ ಬಂದು ತಲುಪಿದೆ. ಇದರಲ್ಲಿರುವ ಕಡಿಮೆ ಖಾರ ಮತ್ತು ನೈಸರ್ಗಿಕ ಬಣ್ಣ ವಿಶ್ವದ ಯಾವುದೇ ತಳಿ ಮೆಣಸಿನಕಾಯಿಯಲ್ಲಿಯೂ ಸಿಗದು. ಈ ಕುರಿತು ಕೃಷಿಕರಲ್ಲಿ ಸಮಗ್ರ ಮಾಹಿತಿ ನೀಡುವ ಮೂಲಕ ತಾಂತ್ರಿಕತೆ ಬಳಸಿ ಒಣಗಿಸುವ (ಸೋಲಾರ್ ಟ್ರೈಯಾರ್ಡ್) ಕಣಗಳನ್ನು ನಿರ್ಮಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ