ನೇತ್ರದಾನ ಜಾಗೃತಿ ಹೆಚ್ಚಳ ಅವಶ್ಯ


Team Udayavani, Sep 9, 2018, 4:53 PM IST

9-sepctember-26.jpg

ಹುಬ್ಬಳ್ಳಿ: ಕಾರ್ನಿಯಾ ಸಮಸ್ಯೆಯಿಂದ ಬಳಲುತ್ತಿ ರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ನೇತ್ರದಾನ ಮಾಡುವವರ ಸಂಖ್ಯೆ ಅದಕ್ಕೆ ತಕ್ಕಂತೆ ಇಲ್ಲದಿರುವುದು ವಿಷಾದನೀಯ ಎಂದು ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣದ ಜಂಟಿ ನಿರ್ದೇಶಕ ಡಾ| ಬಿ.ಡಿ. ಅಥಣಿ ಹೇಳಿದರು. ನೇತ್ರದಾನ ಜಾಗೃತಿಗೆ ಸಕ್ಷಮ, ಕಿಮ್ಸ್‌ನ ಆಶಾಕಿರಣ ಹಾಗೂ ಹುಬ್ಬಳ್ಳಿ ಪಶ್ಚಿಮ ರೋಟರಿ ಕ್ಲಬ್‌ನಿಂದ ಶನಿವಾರ ಇಲ್ಲಿನ ಕಿಮ್ಸ್‌ ಗೋಲ್ಡನ್‌ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ‘ಕಣ್ಣಿಗೆ ಪಟ್ಟಿ ಕಟ್ಟಿಕೊಂಡು ನಡಿಗೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾರ್ನಿಯಾ ಬದಲಿಸುವ ಬಗ್ಗೆ ಜನರಲ್ಲಿ ತಿಳಿವಳಿಕೆ ನೀಡಬೇಕಿದೆ. ಸರಿಯಾದ ಸಂಪರ್ಕದ ಕೊರತೆಯಿಂದಲೂ ನೇತ್ರದಾನ ಬಗ್ಗೆ ಜನರಲ್ಲಿ ಜಾಗೃತಿ ಇಲ್ಲ. ಕಿಮ್ಸ್‌ನವರು ನೇತ್ರದಾನ ಮಾಡುವವರಿಗಾಗಿ ಪ್ರತ್ಯೇಕವಾದ ದೂರವಾಣಿ ಸಂಖ್ಯೆ ಮೀಸಲಿಡಬೇಕು. ಯಾರಾದರೂ ನೇತ್ರದಾನ ಮಾಡುವುದಾಗಿ ಕರೆ ಮಾಡಿದರೆ ತಕ್ಷಣ ನುರಿತ ತಜ್ಞ ವೈದ್ಯರು ಸ್ಥಳಕ್ಕೆ ತೆರಳಿ ಅವರ ಕಣ್ಣು ಪಡೆದು ಅವಶ್ಯವುಳ್ಳವರಿಗೆ ಅಳವಡಿಸುವ ಕಾರ್ಯ ಮಾಡಬೇಕು ಎಂದರು.

ಪದ್ಮಶ್ರೀ ಪುರಸ್ಕೃತ ಡಾ| ಎಂ.ಎಂ. ಜೋಶಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದೇಶದಲ್ಲಿ ಅಂದಾಜು 30 ಲಕ್ಷ ಜನರು ಕಾರ್ನಿಯಾದಿಂದ ಬಳಲುತ್ತಿದ್ದಾರೆ. ಪ್ರತಿ ವರ್ಷ ನಮ್ಮ ಆಸ್ಪತ್ರೆಯಲ್ಲಿ 200 ಜನರು ನೇತ್ರದಾನ ಮಾಡುತ್ತಿದ್ದಾರೆ. ಇದುವರೆಗೆ 4 ಸಾವಿರ ಜನರ ಕಾರ್ನಿಯಲ್‌ ಬದಲಿಸಲಾಗಿದೆ ಎಂದರು. ಕಿಮ್ಸ್‌ ನಿರ್ದೇಶಕ ಡಾ| ಡಿ.ಡಿ. ಬಂಟ್‌, ಸಕ್ಷಮದ ಉಪಾಧ್ಯಕ್ಷ ಡಾ| ವಿ.ವಿ. ಮನಗೋಳಿ ಮಾತನಾಡಿದರು. ಕಿಮ್ಸ್‌ ಪ್ರಾಂಶುಪಾಲ ಡಾ| ಕೆ.ಎಫ್‌. ಕಮ್ಮಾರ, ನೇತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥೆ ಡಾ| ಸವಿತಾ ಕನಕಪುರ, ವೈದ್ಯಕೀಯ ಅಧೀಕ್ಷಕ ಡಾ| ರಾಮಲಿಂಗಪ್ಪ ಅಂಟರಠಾನಿ, ನೇತ್ರ ಬ್ಯಾಂಕ್‌ ಅಧಿಕಾರಿ ಡಾ| ಶೋಭಾ ಗೌಡರ, ಹುಬ್ಬಳ್ಳಿ ಪಶ್ಚಿಮ ರೋಟರಿ ಕ್ಲಬ್‌ ಅಧ್ಯಕ್ಷ ಫಣಿರಾಜ ಎಚ್‌.ಕೆ., ಕಾರ್ಯದರ್ಶಿ ಜುಂಜಣ್ಣವರ ಎಂ.ಎಫ್‌., ಸಕ್ಷಮ ಉತ್ತರ ಪ್ರಾಂತ ಅಧ್ಯಕ್ಷ ಎಸ್‌.ಬಿ. ಶೆಟ್ಟಿ, ಕಿಮ್ಸ್‌ನ ಸಂಯೋಜನಾಧಿಕಾರಿ ಡಾ| ಮಹೇಶ ಕುಮಾರ ಎಸ್‌., ಇನ್ನರ್‌ ವೀಲ್‌ ಅಧ್ಯಕ್ಷೆ ಸ್ಮಿತಾ ಮಹೇಶ ಇದ್ದರು. ಸಕ್ಷಮ ಉತ್ತರ ಪ್ರಾಂತದ ಉಪಾಧ್ಯಕ್ಷ ಡಾ| ಸುನಿಲ ಗೋಖಲೆ ಸ್ವಾಗತಿಸಿದರು. ಸೌಮ್ಯ ಕಟ್ಟಿಮನಿ ಪ್ರತಿಜ್ಞಾವಿಧಿ ಬೋಧಿಸಿದರು.
ಶೇಖ್‌ ನಿಜಾಮುದ್ದೀನ್‌, ಸಂಪದಾ ಕಾನಿ ನಿರೂಪಿಸಿದರು. ಕಾರ್ಯಕ್ರಮಕ್ಕೂ ಮೊದಲು ವಿದ್ಯಾನಗರದ ಬಿವಿಬಿ ಕಾಲೇಜು ಆವರಣದಿಂದ ಕಿಮ್ಸ್‌ ವರೆಗೆ ಕಣ್ಣಿಗೆ ಪಟ್ಟಿ ಕಟ್ಟಿಕೊಂಡು ನಡಿಗೆ ನಡೆಯಿತು.

ಟಾಪ್ ನ್ಯೂಸ್

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.