ಕಿಮ್ಸ್‌ನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ಶವಾಗಾರ


Team Udayavani, Sep 10, 2018, 5:20 PM IST

secptember-23.jpg

ಹುಬ್ಬಳ್ಳಿ: ಕಿಮ್ಸ್‌ ಆಸ್ಪತ್ರೆಯಲ್ಲಿ ಅಂದಾಜು 1 ಕೋಟಿ ರೂ. ವೆಚ್ಚದಲ್ಲಿ ನೂತನ ಶವಾಗಾರ ಸ್ಥಾಪಿಸಲಾಗುತ್ತಿದೆ. ಈಗಾಗಲೇ ಪ್ಲಿಂತಪ್‌ ವರೆಗೆ ಕಾಮಗಾರಿ ಮುಗಿದಿದ್ದು, ಮಾರ್ಚ್‌ ಮೊದಲಾರ್ಧದಲ್ಲಿ ಈ ಕಟ್ಟಡ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಕರ್ನಾಟಕ ಆರೋಗ್ಯ ಪ್ರೋಜೆಕ್ಟ್ ಇಂಜಿನಿಯರಿಂಗ್‌ ವಿಭಾಗ (ಕೆಎಚ್‌ಆರ್‌ಡಿಪಿ) ಈ ಕಟ್ಟಡ ನಿರ್ಮಿಸುತ್ತಿದ್ದು, ಇದನ್ನು ಪೂರ್ಣಗೊಳಿಸಲು ಎಂಟು ತಿಂಗಳ ಕಾಲಾವಧಿ ನಿಗದಿಪಡಿಸಲಾಗಿದೆ. ಆದರೆ ಕೆಎಚ್‌ಆರ್‌ಡಿಪಿಯವರು ಆರೇ ತಿಂಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ಕಿಮ್ಸ್‌ನ ಆಡಳಿತ ಮಂಡಳಿಯವರಿಗೆ ಭರವಸೆ ನೀಡಿದ್ದಾರೆ.

ಈಗಿರುವ ಕಿಮ್ಸ್‌ನ ಶವಾಗಾರದಲ್ಲಿ ಈಗ ನಾಲ್ಕು ದೇಹಗಳನ್ನು ಮಾತ್ರ ಸಂಗ್ರಹಿಸಿ ಸಂರಕ್ಷಿಸಬಹುದು. ಅಲ್ಲದೆ ಇಲ್ಲಿ ಮೃತರು ಸಂಬಂಧಿಕರಿಗೆ ವಿಶ್ರಾಂತಿ ಕೊಠಡಿ ಇಲ್ಲ. ಮರಣೋತ್ತರ (ಶವ) ಪರೀಕ್ಷೆ ಮಾಡುವ ವೇಳೆ ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ದೇಹವನ್ನು ಯಾವ ರೀತಿ ಚ್ಛೇದನ ಮಾಡಬೇಕು. ಯಾವ್ಯಾವ ಪ್ರಮುಖ ಅಂಗಾಗಳನ್ನು ಪರೀಕ್ಷೆಗೆ ಒಳಪಡಿಸಬೇಕು ಎಂಬುದನ್ನು ನ್ಯಾಯವೈದ್ಯ ಶಾಸ್ತ್ರ (ಫೋರೆನ್ಸಿಕ್‌ ಮೆಡಿಸನ್‌) ವಿಭಾಗದವರು ಕೆಲವೇ ಕೆಲವು ವಿದ್ಯಾರ್ಥಿಗಳಿಗೆ ತಿಳಿಸಿಕೊಡಬಹುದಾಗಿತ್ತು. ಆದರೆ ಈಗ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಎಂಸಿಐ ಶಿಫಾರಸು ಪ್ರಕಾರ ಅಂದಾಜು 5ಸಾವಿರ ಚದರ ಅಡಿಯಲ್ಲಿ ನೂತನ ಶವಾಗಾರ ಕಟ್ಟಡ ನಿರ್ಮಿಸಲಾಗುತ್ತಿದ್ದು, ಇಲ್ಲಿ ಎಂಟು ದೇಹಗಳನ್ನು ಸಂಗ್ರಹಿಸಿ ಸಂರಕ್ಷಿಸಬಹುದು. 

ಜೊತೆಗೆ ಸುಸಜ್ಜಿತ ನ್ಯಾಯವೈದ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರ ಕೊಠಡಿ, ಸಿಬ್ಬಂದಿ ಕೊಠಡಿ, ಶವಪರೀಕ್ಷೆಗಳ ವರದಿ ಸಿದ್ಧಪಡಿಸಲು ಪ್ರತ್ಯೇಕವಾದ ಪೊಲೀಸರ ಕೊಠಡಿ, ಮೃತರ ಸಂಬಂಧಿಕರಿಗೆ ವಿಶ್ರಾಂತಿ ಕೊಠಡಿ, 20-30 ವಿದ್ಯಾರ್ಥಿಗಳು ಆಸೀನರಾಗಬಹುದಾದ ಕೊಠಡಿ, ಸ್ನಾತಕೋತ್ತರ ವಿದ್ಯಾರ್ಥಿಗಳು ಶವಪರೀಕ್ಷೆಯ ವಿಧಿ-ವಿಧಾನ ತಿಳಿಯಲು ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಜೊತೆಗೆ ವೈದ್ಯಕೀಯ ಶಿಕ್ಷಣದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಚಿಕ್ಕದಾದ ಮ್ಯೂಸಿಯಂ ಸ್ಥಾಪಿಸಲಾಗುತ್ತಿದೆ. 

ಈ ವ್ಯವಸ್ಥೆಯಿಂದ ನ್ಯಾಯವೈದ್ಯ ಶಾಸ್ತ್ರ ವಿಭಾಗದ ತಜ್ಞವೈದ್ಯರು ಮಾತ್ರವಲ್ಲದೆ ಪಿಜಿ ವಿದ್ಯಾರ್ಥಿಗಳು ಸಹ ಮರಣೋತ್ತರ ಪರೀಕ್ಷೆ ಮಾಡಬಹುದಾಗಿದೆ. ಆ ಮೂಲಕ ಪಿಜಿ ವಿದ್ಯಾರ್ಥಿಗಳು ಸಹ ಕೇವಲ ರೋಗಿಗಳಿಗೆ ಮೆಡಿಸನ್‌ ಕೊಡುವುದು, ಚಿಕಿತ್ಸೆ ನೀಡುವುದಕ್ಕೆ ಮಾತ್ರ ಸೀಮಿತವಾಗದೆ ಮನುಷ್ಯನ ದೇಹದ ಪ್ರತಿಯೊಂದು ಅಂಗಾಂಗಗಳ ಬಗ್ಗೆ ತಿಳಿಯುವುದರ ಜೊತೆಗೆ ಶವಪರೀಕ್ಷೆಯನ್ನು ಸುಲಭವಾಗಿ ಮಾಡುವ ವಿಧಾನ ಕುರಿತು ಅರಿಯಬಹುದಾಗಿದೆ.

ಶವಾಗಾರವನ್ನು ಅಂದಾಜು 1ಕೋಟಿ ರೂ. ವೆಚ್ಚದಲ್ಲಿ 5 ಸಾವಿರ ಚದರ ಅಡಿ ವಿಸ್ತಾರದಲ್ಲಿ ನಿರ್ಮಿಸಲಾಗುತ್ತಿದೆ. ಅತ್ಯಾಧುನಿಕ ಸೌಲಭ್ಯ ಹೊಂದಿದ್ದು, ಫೆಬ್ರುವರಿ ಇಲ್ಲವೆ ಮಾರ್ಚ್‌ನಲ್ಲಿ ಈ ಕಟ್ಟಡ ಪೂರ್ಣಗೊಳ್ಳುವ ನಿರೀಕ್ಷೆಗಳಿವೆ.
 ಡಾ| ದತ್ತಾತ್ರೇಯ ಡಿ. ಬಂಟ್‌,
ನಿರ್ದೇಶಕ, ಕಿಮ್ಸ್‌

ಶಿವಶಂಕರ ಕಂಠಿ

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.