ಜೆಡಿಎಸ್‌-ಜೆಡಿಯು ಕಚೇರಿ ಕಲಹ


Team Udayavani, Sep 12, 2018, 5:30 PM IST

12-sepctember-24.jpg

ಹುಬ್ಬಳ್ಳಿ: ಇಲ್ಲಿನ ಲ್ಯಾಮಿಂಗ್ಟನ್‌ ರಸ್ತೆಯಲ್ಲಿರುವ ಜೆಡಿಯು ಕಚೇರಿ ಯಾರಿಗೆ ಸೇರಿದ್ದು ಎಂಬುದರ ಕುರಿತು ಜನತಾ ಪರಿವಾರದ ದಾಯಾದಿ ಕಲಹ ಇದ್ದೇ ಇದೆ. ಇದರ ನಡುವೆ ನಮ್ಮ ಪಕ್ಷದ ಅಧ್ಯಕ್ಷರ ಹೆಸರಿಗೆ ಕಚೇರಿಯ ಆಸ್ತಿ ಕರ ನೋಟಿಸ್‌ ಬಂದಿದೆ. ಕಚೇರಿ ನಮಗೆ ಸೇರಿದ್ದು ಎಂದು ಜೆಡಿಎಸ್‌ ಕಾರ್ಯಕರ್ತರು ಮಂಗಳವಾರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಜನತಾ ಪಕ್ಷದ ನಂತರ ಜನತಾದಳ ಬಳಿಕ ಸಂಯುಕ್ತ ಜನತಾದಳಕ್ಕೆ ಸೇರಿದ ಈ ಕಚೇರಿಯ ಬಗ್ಗೆ ಜನತಾ ಪರಿವಾರದ ದಾಯಾದಿಗಳ ನಡುವೆ ಕಲಹ ಇದೆ. ಸದ್ಯಕ್ಕೆ ಅದು ಜೆಡಿಯು ಸುಪರ್ದಿಯಲ್ಲಿದೆ. ಆದರೆ, ಪಾಲಿಕೆಯವರು ಜೆಡಿಎಸ್‌ ಮಹಾನಗರ ಜಿಲ್ಲಾಧ್ಯಕ್ಷರಿಗೆ ಸುಮಾರು 15 ಲಕ್ಷ ರೂ. ಆಸ್ತಿಕರ ಬಾಕಿ ಪಾವತಿಸುವಂತೆ ನೋಟಿಸ್‌ ಜಾರಿ ಮಾಡಿದ್ದಾರೆ.

ಕಚೇರಿಯೇ ತಮ್ಮ ಸುಪರ್ದಿಯಲ್ಲಿ ಇಲ್ಲ. ನಾವೇಕೆ ಆಸ್ತಿಕರ ಪಾವತಿಸಬೇಕು ಎಂಬುದು ಜೆಡಿಎಸ್‌ನವರ ವಾದವಾಗಿದೆ. ಅಲ್ಲದೆ ದಾಖಲೆಗಳಲ್ಲಿ ನಮ್ಮ ಹೆಸರೇ ಇರುವುದರಿಂದ ಕಚೇರಿ ತಮಗೆ ಸೇರಿದ್ದು, ಅದನ್ನು ಬಿಟ್ಟುಕೊಡಬೇಕು ಎಂದು ಒತ್ತಾಯಿಸಿ ಜೆಡಿಎಸ್‌ನ ಕೆಲ ಕಾರ್ಯಕರ್ತರು ಮಂಗಳವಾರ ಜೆಡಿಎಸ್‌ ಕಚೇರಿ ಕಟ್ಟಡದ ಎದುರು ಪ್ರತಿಭಟನೆ ನಡೆಸಿದರು. ಅಲ್ಲದೆ ಜೆಡಿಎಸ್‌ ಕಚೇರಿ ಎಂದು ನಾಮಫ‌ಲಕ ಹಾಕಿ, ಪಕ್ಷದ ಬಾವುಟ ಕಟ್ಟಿರುವುದು ಗೊಂದಲಕ್ಕೆ ಕಾರಣವಾಗಿದೆ. ಇಬ್ಬರ ನಡುವೆ ಒಪ್ಪಂದ: ಜನತಾ ಪಾರ್ಟಿ ಅಧ್ಯಕ್ಷರ ಹೆಸರಲ್ಲಿ ಆಸ್ತಿ ಇರುವುದರಿಂದ ಜೆಡಿಎಸ್‌ ಹಾಗೂ ಜೆಡಿಯು ಎರಡೂ ಪಕ್ಷಗಳಿಗೆ ಈ ಕಚೇರಿ ಅನ್ವಯಿಸುತ್ತದೆ. ಗಣೇಶ ಹಬ್ಬ ಇರುವುದರಿಂದ ಯಾವುದೇ ಬೆಳವಣಿಗೆಗೆ ಆಸ್ಪದ ನೀಡದೆ ಹಬ್ಬ ಮುಗಿದ ನಂತರ ಎರಡು ಪಕ್ಷದ ರಾಜ್ಯ ನಾಯಕರ ಸಮ್ಮುಖದಲ್ಲಿ ಪ್ರಕರಣ ಇತ್ಯರ್ಥ ಪಡಿಸಿಕೊಳ್ಳುವ ಒಪ್ಪಂದಕ್ಕೆ ಬಂದಿದ್ದು, ಸದ್ಯ ತಾತ್ಕಾಲಿಕವಾಗಿ ಪ್ರಕರಣಕ್ಕೆ ತೆರೆ ಬಿದ್ದಿದೆ.

ತೆರಿಗೆ ಯಾರು ತುಂಬಬೇಕು: ಜೆಡಿಯು ಸುಪರ್ದಿಯಲ್ಲಿರುವ ಈ ಕಚೇರಿಯ ಆಸ್ತಿಕರ 15,69,847 ಬಾಕಿಯಿದ್ದು, ಇಷ್ಟೊಂದು ದೊಡ್ಡ ಮೊತ್ತದ ಬಾಕಿ ಹಣ ತುಂಬುವವರು ಯಾರು ಎಂಬುದು ಪ್ರಶ್ನೆಯಾಗಿದೆ. ಈ ಕಟ್ಟಡದ ಆಸ್ತಿ ಜನತಾ ಪಕ್ಷದ ಅಧ್ಯಕ್ಷರ ಹೆಸರಲ್ಲಿ ನೋಂದಣಿಯಾಗಿದೆ. ಇದೀಗ ಜನತಾ ಪಕ್ಷ ಇಲ್ಲಿ ಅಸ್ತಿತ್ವವೇ ಇಲ್ಲವಾಗಿದ್ದು, ಕರ ಪಾವತಿ ಯಾರು ಮಾಡಬೇಕು ಎಂಬ ಗೊಂದಲ ಸೃಷ್ಟಿಯಾಗಿದೆ.

ತೆರಿಗೆ ಪಾವತಿಸಲು ನಾವು ಸಿದ್ಧರಿದ್ದೇವೆ. ಆದರೆ ಇಲ್ಲಿಯವರೆಗೆ ಜೆಡಿಯು ಪಕ್ಷದವರು ಈ ಆಸ್ತಿಯನ್ನು ಅನುಭವಿಸಿದ್ದಾರೆ. ಅಲ್ಲದೆ ಈ ಆಸ್ತಿ ಜನತಾ ಪಾರ್ಟಿ ಅಧ್ಯಕ್ಷರ ಹೆಸರಲ್ಲಿ ಇರುವುದರಿಂದ ತೆರಿಗೆ ಪಾವತಿ ಮಾಡುವಲ್ಲಿ ಗೊಂದಲ ಸೃಷ್ಟಿಸಿದೆ. ಈ ಕುರಿತು ರಾಜ್ಯ ನಾಯಕರ ಸಮ್ಮುಖದಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು.
ರಾಜಣ್ಣ ಕೊರವಿ
ಮಹಾನಗರ ಜೆಡಿಎಸ್‌ ಅಧ್ಯಕ್ಷ

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.