ಸಸಿ ನೆಟ್ಟು ಬೆಳೆಸುವುದೇ ಭೂದೇವಿಯ ಪೂಜೆ


Team Udayavani, Sep 19, 2018, 5:48 PM IST

19-sepctember-23.jpg

ಹುಬ್ಬಳ್ಳಿ: ನಮ್ಮನ್ನು ಪೋಷಿಸುವ ಭೂಮಿಯನ್ನು ಇನ್ನಾದರೂ ರಕ್ಷಿಸಬೇಕಿದೆ. ಆ ನಿಟ್ಟಿನಲ್ಲಿ ಸಸಿ ನೆಟ್ಟು ಬೆಳೆಸುವುದೇ ಭೂದೇವಿಯ ಪೂಜೆಯೆಂದು ಪಾಲಿಸಬೇಕಾಗಿದೆ ಎಂದು ವೃಕ್ಷಕ್ರಾಂತಿ ಅಭಿಯಾನದ ಹರಿಕಾರ ಬಿ.ಎಸ್‌. ಕೊಣ್ಣೂರ ಹೇಳಿದರು. ಇಲ್ಲಿನ ವಿದ್ಯಾನಗರದ ಅಕ್ಷಯ ಕಾಲೊನಿಯ ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನದ ಕೋರ್‌ ವಿಜ್ಞಾನ ಚಟುವಟಿಕಾ ಕೇಂದ್ರದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ದೇಶಪಾಂಡೆ ಪ್ರತಿಷ್ಠಾನದ ಸಹಯೋಗದಲ್ಲಿ ವಿಶ್ವ ಓಝೋನ್‌ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಬೀಜ ಮೊಳೆಯಲು ಬೊಗಸೆ ಮಣ್ಣು ಅಭಿಯಾನ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಗಿಡ-ಮರಗಳು ಪ್ರಾಣವಾಯು ನೀಡುವ ಸಂಜೀವಿನಿ. ಉಸಿರಾಡುವವರೆಲ್ಲ ಸಸಿ ನೆಟ್ಟು ಹೆಮ್ಮರವಾಗಿ ಬೆಳೆಸಬೇಕು. ಮರಗಳೇ ಈ ಭೂಮಿಯನ್ನು ಅಮರವಾಗಿಸುವುದು. ಪ್ರಕೃತಿಯಲ್ಲಿನ ಹಸಿರು ಮನುಷ್ಯನ ದುರಾಸೆಯಿಂದ ಕ್ಷೀಣಿಸುತ್ತಿದೆ. ಜೀವರಾಶಿಗಳಿಗೆ ಇರುವುದೊಂದೇ ಭೂಮಿ. ಅದನ್ನು ವಿನಾಶದಂಚಿಗೆ ತಂದ ಮನುಷ್ಯನಿಗೆ ಇನ್ನೊಂದು ಭೂಮಿ ಸೃಷ್ಟಿಯಲು ಸಾಧ್ಯವಿಲ್ಲ ಎಂದರು.

ವಿಜ್ಞಾನ ಕೇಂದ್ರದ ಮುಖ್ಯಸ್ಥ ಗುರು ಮದ್ನಳ್ಳಿ ಪ್ರಾಸ್ತಾವಿಕ ಮಾತನಾಡಿ, ಪ್ರಕೃತಿಯನ್ನು ತಾನಿರುವಂತೆಯೇ ಬಿಟ್ಟಿದ್ದರೆ ಇಂದು ಪರಿಸರ ದಿನದ ಆಚರಣೆಗಳ ಅಗತ್ಯವಿರಲಿಲ್ಲ. ಮರಗಳನ್ನೆಲ್ಲ ಕಡಿದುಹಾಕಿ, ಇಡೀ ಭೂಮಿಯನ್ನೇ ಕಾಂಕ್ರೀಟ್‌ ಕಾಡಾಗಿಸಿ ಅದನ್ನೇ ಅಭಿವೃದ್ಧಿ ಎಂದು ಭಾವಿಸಿರುವ ಮನುಷ್ಯ ಉಸಿರಾಡುವ ಗಾಳಿ, ಸೇವಿಸುವ ಆಹಾರ, ಕುಡಿಯುವ ನೀರು ಎಲ್ಲವನ್ನೂ ತನ್ನ ದುರಾಸೆಯಿಂದ ವಿಷವಾಗಿಸಿದ್ದಾನೆ. ಜೀವಗ್ರಹದ ಎಲ್ಲ ಜೀವಿಗಳಿಗೂ ಕಂಟಕವಾಗಿದ್ದಾನೆ ಎಂದು ಹೇಳಿದರು.

ಶಿವಶಂಕರ ಗಾಣಗೇರ, ಇಮ್ರಾನ್‌ ಹಳ್ಳಿಕೇರಿ, ದೀಪಾ ಹಜೇರಿ, ಅಶ್ವಿ‌ನಿ ಟೊಂಗಳೆ ತಮ್ಮ ಅಭಿಪ್ರಾಯ ಹಂಚಿಕೊಂಡರು. ಕುಸುಗಲ್ಲನ ಸರಕಾರಿ ಪ್ರೌಢಶಾಲೆ ಹಾಗೂ ನಗರದ ಆರ್‌.ಕೆ. ಕೊಕಾಟೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಬಿ.ಎಸ್‌. ಕೊಣ್ಣೂರ ಮಾರ್ಗದರ್ಶನದಲ್ಲಿ ವೆಚ್ಚವಿಲ್ಲದೆ ಸಸಿ ತಯಾರಿಸುವ ಕುರಿತು ತರಬೇತಿ ಪಡೆದರು. ವಿದ್ಯಾರ್ಥಿಗಳು ತಮ್ಮ ಜನ್ಮದಿನದಂದು ಸಸಿ ನೆಟ್ಟು ಬೆಳೆಸುವ ಸಂಕಲ್ಪ ಮಾಡಿದರು. ವಿಜ್ಞಾನ ಕೇಂದ್ರದ ಶಂಕರ ಕುರುಬರ, ಬಸವರಾಜ ತಡಹಾಳ, ಫಕ್ಕೀರೇಶ್ವರ ಮಡಿವಾಳರ, ಶಶಿಕಲಾ ಗೌರಿ, ನಿವೇದಿತಾ ಜವಳಿಮಠ, ಸುಜಯ ಭೋಜಕರ, ದೀಪ್ತಿ ಗಾಯಕವಾಡ, ಪುಂಡಲೀಕ ದೇವರಮನಿ, ರಮೇಶ ಹಣಸಿ, ಬಸವರಾಜ ಮುದಗಲ್ಲ, ಜ್ಯೋತಿ ಕಾಪರೆ, ಹನ್ನಿಫಾ ಗೋಟೇಗಾರ ಇದ್ದರು. ನಿಂಗನಗೌಡ ಸತ್ತಿಗೌಡ್ರ, ಮಂಜುನಾಥ ಜಾಣಣ್ಣವರ ನಿರೂಪಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.