ಹೆಸರು ಖರೀದಿ ವಿಳಂಬ ಖಂಡಿಸಿ ಪ್ರತಿಭಟನೆ
Team Udayavani, Sep 26, 2018, 5:31 PM IST
ನವಲಗುಂದ: ಸರಕಾರ ಬೆಂಬಲ ಬೆಲೆ ಯೋಜನೆಯಡಿ ಹೆಸರು ಖರೀದಿ ನೋಂದಣಿ ಮುಗಿದು 10 ದಿನ ಗತಿಸಿದರೂ ಇನ್ನೂವರೆಗೆ ರೈತರಿಂದ ಹೆಸರು ಖರೀದಿ ಪ್ರಾರಂಭಿಸದಿರುವುದನ್ನು ಖಂಡಿಸಿ ಪಕ್ಷಾತೀತ ಹೋರಾಟ ಸಮಿತಿ ರೈತ ಹೋರಾಟಗಾರರು ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಒಂದು ಗಂಟೆಗೂ ಹೆಚ್ಚು ಕಾಲ ತಡೆದು ಪ್ರತಿಭಟಿಸಿದರು.
ನೋಂದಣಿ ವೇಳೆ ರೈತರಿಂದ 10 ಕ್ವಿಂಟಲ್ ಹೆಸರು ಖರೀದಿಸುವ ಕುರಿತು ವಾಗ್ಧಾನ ಮಾಡಿದ್ದ ಸರಕಾರಗಳು ಈಗ ಹೊಸ ಆದೇಶ ಪ್ರಕಟಿಸಿ ಕೇವಲ ನಾಲ್ಕು ಕ್ವಿಂಟಲ್ ಖರೀದಿಗೆ ಮುಂದಾಗಿದ್ದು, ರೈತರಿಗೆ ದಿಕ್ಕು ತೋಚದಂತಾಗಿದೆ. ರೈತರು ಅನಿವಾರ್ಯವಾಗಿ ಬೀದಿಗೆ ಇಳಿಯುವ ಪರಿಸ್ಥಿತಿ ನಿರ್ಮಾಣಗೊಂಡಿದೆ ಎಂದು ಉಭಯ ಸರಕಾರಗಳ ವಿರುದ್ಧ ಕಿಡಿಕಾರಿದರು. ಕೂಡಲೇ ಹೊಸ ಆದೇಶ ಹಿಂಪಡೆದು 10 ಕ್ವಿಂಟಲ್ ಹೆಸರು ಖರೀದಿಗೆ ಸರಕಾರ ಮುಂದಾಗಬೇಕು. ಸೆ. 30ರ ಒಳಗಾಗಿ ಖರೀದಿ ಆರಂಭಿಸಬೇಕು. ಜೊತೆಗೆ ಬಾಕಿ ಉಳಿದ ರೈತರ ನೋಂದಣಿ ಕಾರ್ಯವನ್ನು ಮಾಡಿ ರೈತರ ನೆರವಿಗೆ ಧಾವಿಸದೇ ಹೋದರೆ ಅ. 1ರಿಂದ ಸರಕಾರಿ ಕಚೇರಿಗಳಿಗೆ ಬೀಗ ಜಡಿದು ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ರೈತ ಹೋರಾಟಗಾರು ಎಚ್ಚರಿಸಿದರು. ಬಳಿಕ ತಹಶೀಲ್ದಾರ್ ನವೀನ ಹುಲ್ಲೂರ ಅವರಿಗೆ ಮನವಿ ಸಲ್ಲಿಸಿದರು.
ಪಕ್ಷಾತೀತ ಹೋರಾಟ ಸಮಿತಿ ಅಧ್ಯಕ್ಷ ಬಸಪ್ಪ ಬೀರಣ್ಣವರ, ರೈತ ಮುಖಂಡ ಡಿ.ವಿ. ಕುರಹಟ್ಟಿ, ಸುಭಾಸಚಂದ್ರಗೌಡ ಪಾಟೀಲ, ಬಸಯ್ಯ ಮಠಪತಿ, ಸಿದ್ದಪ್ಪ ಮುಪ್ಪಯ್ಯನವರ, ಮಲ್ಲಪ್ಪ ರಡ್ಡೇರ, ರಘುನಾಥ ನಡವಿನಮನಿ, ಆರ್.ಎಂ. ನಾಯ್ಕರ, ಸಿದ್ದಲಿಂಗಪ್ಪ ಹಳ್ಳದ, ನಾಗರಾಜ ಭೋವಿ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ