ಪರ್ತಗಾಳಿ ಶ್ರೀಗಳ ಚಾತುರ್ಮಾಸ್ಯ ಸಂಪನ್ನ


Team Udayavani, Sep 26, 2018, 5:39 PM IST

26-sepctember-21.gif

ಹುಬ್ಬಳ್ಳಿ: ಕೇವಲ ಆಪತ್ಕಾಲದಲ್ಲಿ ಮಾತ್ರವಲ್ಲ, ಸದಾ ಕಾಲ ದೇವರ ಸ್ಮರಣೆ ಮಾಡಬೇಕು ಎಂದು ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಶ್ರೀ ವಿದ್ಯಾಧಿರಾಜ ತೀರ್ಥ ಶ್ರೀಪಾದ ಒಡೆಯರ ಸ್ವಾಮೀಜಿ ಹೇಳಿದರು. ಅಮರಗೋಳದ ವಿದ್ಯಾಧಿರಾಜ ಭವನದಲ್ಲಿ ಆಯೋಜಿಸಿದ್ದ ಚಾತುರ್ಮಾಸ್ಯದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಕೇವಲ ಕಷ್ಟಕಾಲ ಬಂದಾಗ ದೇವರನ್ನು ಸ್ಮರಿಸಿದರೆ ಸಾಲದು. ದೇವರ ಕೃಪೆ ನಮ್ಮ ಮೇಲಿದ್ದರೆ ಯಾವುದೇ ಆತಂಕ ಪಡಬೇಕಾಗಿಲ್ಲ. ಸಮಾಜದಲ್ಲಿ ಕೆಲವು ಮೂಢನಂಬಿಕೆಗಳು ರೂಢಿಯಲ್ಲಿವೆ. ಅವುಗಳನ್ನು ದೂರವಿಟ್ಟು ಪರಂಪರೆಯನ್ನು ಮುಂದುವರಿಸಬೇಕು ಎಂದು ತಿಳಿಸಿದರು.

ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ಒಡೆಯರ ಸ್ವಾಮೀಜಿ ಮಾತನಾಡಿ, ಸಮಾಜದಲ್ಲಿ ಯಾರೂ ಕೂಡ ಸಣ್ಣವರಲ್ಲ ಅಥವಾ ದೊಡ್ಡವರಲ್ಲ. ನಮಗೆ ಸಮಾಜ ಮುಖ್ಯ. ಕೈಗೆ ಸಣ್ಣ ಬೆರಳುಗಳೂ ಇರುತ್ತವೆ, ದೊಡ್ಡ ಬೆರಳುಗಳೂ ಇರುತ್ತವೆ. ಆದರೆ ಮುಷ್ಟಿಯಾದಾಗ ಹೆಚ್ಚಿನ ಸಾಮರ್ಥ್ಯ ಬರುತ್ತದೆ. ಸಮಾಜ ಬಾಂಧವರು ಒಗ್ಗಟ್ಟಾಗಿರಬೇಕು ಎಂದರು.

ನಮ್ಮ ಪರಂಪರೆ ಮುಂದುವರಿಯಬೇಕು. ಇಂದಿನ ಪೀಳಿಗೆಯವರು ಮುಂದಿನ ಪೀಳಿಗೆಯವರಿಗೆ ರಿಲೇಯಲ್ಲಿ ಬ್ಯಾಟನ್‌ ಹಸ್ತಾಂತರಿಸಿದಂತೆ ಪರಂಪರೆ, ಸಂಸ್ಕೃತಿಯನ್ನು ಹಸ್ತಾಂತರಿಸಬೇಕು. ನಮ್ಮ ಶ್ರೀಮಂತ ಸಂಸ್ಕೃತಿ ಉಳಿಸುವುದು ಅಗತ್ಯ ಎಂದು ತಿಳಿಸಿದರು. ಆರ್‌.ಎನ್‌. ನಾಯಕ, ದಿನೇಶ ನಾಯಕ, ಜಿ.ಎಸ್‌. ಕಾಮತ, ಆರ್‌.ಆರ್‌. ಕಾಮತ, ಸಂಜಯ ರಾಯ್ತೂರಕರ, ರಾಜನ್‌ ಕುಂಕಳೇಕರ, ವಿ.ಜಿ. ಪ್ರಭು, ಪ್ರಭಾಕರ ಕಾಮತ ಇದ್ದರು.

ಇದಕ್ಕೂ ಮೊದಲು ಉಣಕಲ್‌ ಕೆರೆಯಲ್ಲಿ ಶ್ರೀ ವಿದ್ಯಾಧಿರಾಜ ತೀರ್ಥ ಶ್ರೀಪಾದ ಒಡೆಯರ ಸ್ವಾಮೀಜಿ ಹಾಗೂ ಶ್ರೀ ವಿದ್ಯಾಧೀಶ ತೀರ್ಥ ಶೀಪಾದ ಒಡೆಯರ ಸ್ವಾಮೀಜಿ ಅವರು ಮೃತ್ತಿಕಾ ವಿಸರ್ಜನೆ ಮಾಡಿದರು. ನಂತರ ಈಶ್ವರ ನಗರದ ವಿದ್ಯಾಧೀಶ ವಿದ್ಯಾರ್ಥಿ ನಿಲಯ ಕಟ್ಟಡದಿಂದ ವಿದ್ಯಾಧಿರಾಜ ಭವನದ ವರೆಗೆ ದಿಗ್ವಿಜಯೋತ್ಸವ ನಡೆಯಿತು. ಉಭಯ ಸ್ವಾಮೀಜಿಗಳನ್ನು ಅಲಂಕೃತ ರಥದಲ್ಲಿ ಕುಳ್ಳರಿಸಿ ವಾದ್ಯ ಘೋಷಗಳೊಂದಿಗೆ ವೈಭವದಿಂದ ಕರೆತರಲಾಯಿತು. 

ಶ್ರೀಕೃಷ್ಣ ಸುವಾಸಿತ ಹಾಲು ಮಾರುಕಟ್ಟೆಗೆ: ಇದೇ ಸಂದರ್ಭದಲ್ಲಿ ಶ್ರೀ ಕೃಷ್ಣ ಮಿಲ್ಕ್ಸ್  ಸಂಸ್ಥೆಯ ನೂತನ ಸುವಾಸಿತ ‘ಮಸ್ಟ್‌’ ಹಾಲನ್ನು ಉಭಯ ಸ್ವಾಮೀಜಿಗಳ ಆಶೀರ್ವಾದದೊಂದಿಗೆ ಮಾರುಕಟ್ಟೆಗೆ ಲೋಕಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಮುತ್ತು ಪೈ, ದಿನೇಶ್‌ ಪೈ, ವ್ಯವಸ್ಥಾಪಕ ನಿರ್ದೇಶಕ ಮಹೇಶ ಕಾಮತ ಮೊದಲಾದವರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.