ಇಸ್ಕಾನ್‌ವರೆಗೆ  ಚಿಗರಿ


Team Udayavani, Oct 6, 2018, 5:38 PM IST

6-october-22.gif

ಹುಬ್ಬಳ್ಳಿ: ಕಳೆದ ನಾಲ್ಕು ದಿನಗಳಿಂದ ಕೆಲ ಸಮಸ್ಯೆಗಳ ನಡುವೆಯೂ ಜನರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗಿರುವ ಚಿಗರಿ ಸೇವೆಯನ್ನು ಇಸ್ಕಾನ್‌ ಮಂದಿರದವರೆಗೆ ವಿಸ್ತರಿಸಲು ಸಿದ್ಧತೆ ನಡೆದಿದ್ದು, ತ್ವರಿತ ಸೇವೆಗೆ ಮತ್ತಷ್ಟು ಬಸ್‌ಗಳು ಸೇರ್ಪಡೆಯಾಗಲಿವೆ.

ಚಿಗರಿ ಸಂಚಾರಕ್ಕೆ ಅತ್ಯಂತ ಕಡಿಮೆ 5 ರೂ. ಪ್ರೋತ್ಸಾಹ ದರ ನಿಗದಿ ಮಾಡಿ ಜನರನ್ನು ಆಕರ್ಷಿಸುವಲ್ಲಿ ವಾಯವ್ಯ ಸಾರಿಗೆ ಸಂಸ್ಥೆ ಹಾಗೂ ಬಿಆರ್‌ಟಿಎಸ್‌ ಅಧಿಕಾರಿಗಳು ಕೊಂಚ ಮಟ್ಟಿಗೆ ಯಶಸ್ವಿಯಾಗಿದ್ದಾರೆ. ದಿನದಿಂದ ದಿನಕ್ಕೆ ಬಸ್‌ನಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಅಧಿಕಾರಿಗಳಲ್ಲಿ ಒಂದಿಷ್ಟು ಸಮಾಧಾನ ಮೂಡಿಸಿದೆ. ಇದೇ ಹುಮ್ಮಸ್ಸಿನಲ್ಲಿ ಬಿಎಸ್ಸೆನ್ನೆಲ್‌ ಕಚೇರಿಯಿಂದ ಇಸ್ಕಾನ್‌ ಮಂದಿರದ ವರೆಗೆ ಚಿಗರಿ ಸೇವೆ ವಿಸ್ತರಿಸಲು ಸಿದ್ಧತೆ ನಡೆಸಿದ್ದು, ಬಹುತೇಕ ಪೂರ್ಣಗೊಂಡಿದೆ.

ಹೆಚ್ಚುವರಿ ಬಸ್‌ ರಸ್ತೆಗೆ: ಬಿಎಸ್ಸೆನ್ನೆಲ್‌ ಕಚೇರಿಯಿಂದ ಇಸ್ಕಾನ್‌ ಮಂದಿರದ ವರೆಗೆ ವಾಯವ್ಯ ಸಾರಿಗೆ ಸಂಸ್ಥೆಯ ಬಸ್‌ ದರ 15 ರೂ.ವನ್ನೇ ಅಥವಾ ಅದಕ್ಕಿಂತ ಕಡಿಮೆ ಮೊತ್ತವನ್ನು ಪ್ರೊತ್ಸಾಹ ದರವಾಗಿ ನಿಗದಿ ಮಾಡುವ ಸಾಧ್ಯತೆ ಇದೆ. ಹೆಚ್ಚುವರಿಯಾಗಿ ಮತ್ತೆ 5 ಬಸ್‌ಗಳು ರಸ್ತೆಗಿಳಿಯಲಿವೆ. ಇದರಿಂದ ಸರಾಸರಿ 10 ನಿಮಿಷಕ್ಕೊಂದು ಬಸ್‌ ಸೇವೆ ದೊರೆಯಲಿದೆ. ಈಗಿರುವ ಪ್ರೋತ್ಸಾಹ ದರ 5 ರೂ. ಶ್ರೀನಗರದ ವರೆಗೆ ಮಾತ್ರ ಉಳಿಸಿಕೊಳ್ಳುವ ಬಗ್ಗೆ ಅಧಿಕಾರಿಗಳಿಂದ ಅಭಿಪ್ರಾಯ ವ್ಯಕ್ತವಾಗಿದೆ.

ಯೋಗ್ಯ ಸ್ಥಳವಲ್ಲ: ಪ್ರಾಯೋಗಿಕ ಚಾಲನೆಗೆ ಆಯ್ದುಕೊಂಡಿದ್ದ ಆರಂಭಿಕ ಹಾಗೂ ಕೊನೆ ಸ್ಥಳ ಮಾರುಕಟ್ಟೆ ಅಥವಾ ಪ್ರಮುಖ ಪ್ರದೇಶವಲ್ಲ. ಹೀಗಾಗಿ ಬಿಆರ್‌ಟಿಎಸ್‌ ಬಸ್‌ ಸಂಚಾರ ನಿರೀಕ್ಷಿತ ಪ್ರಮಾಣದಲ್ಲಿ ಈಡೇರಲಿಲ್ಲ. 5 ರೂ. ಪ್ರೋತ್ಸಾಹ ದರ ಘೋಷಿಸುತ್ತಿದ್ದಂತೆ ಐಷಾರಾಮಿ ಚಿಗರಿ ಸವಾರಿಗೆ ಜನರು ಮುಗಿಬಿದ್ದಿದ್ದಾರೆ. ಇದೀಗ ಇಸ್ಕಾನ್‌ ಮಂದಿರದ ವರೆಗೆ ಬಸ್‌ ಸಂಚಾರ ವಿಸ್ತರಿಸುವುದರಿಂದ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಲಿದೆ ಎನ್ನುವ ವಿಶ್ವಾಸ ಅಧಿಕಾರಿಗಳದ್ದು.

ಬಿಆರ್‌ಟಿಎಸ್‌ ಮಂಡಳಿ ನಿರ್ದೇಶಕರ ಸಭೆ
ನವನಗರದ ಬಿಆರ್‌ಟಿಎಸ್‌ ಕಚೇರಿಯಲ್ಲಿ ಅ. 6ರಂದು ಬೆಳಗ್ಗೆ 11 ಗಂಟೆಗೆ ಮಂಡಳಿ ನಿರ್ದೇಶಕರ ಸಭೆ ನಡೆಯಲಿದ್ದು, ಬಸ್‌ ಸಂಚಾರ ಆರಂಭವಾದ ನಂತರದಲ್ಲಿ ನಡೆಯುತ್ತಿರುವ ಈ ಸಭೆ ಮಹತ್ವ ಪಡೆದಿದೆ. ನಾಲ್ಕು ದಿನಗಳಿಂದ ನಗರದಲ್ಲಿ ನಡೆದ ಪ್ರಾಯೋಗಿಕ ಸಂಚಾರ, ಸಾಧಕ-ಬಾಧಕಗಳ ಕುರಿತು ಚರ್ಚೆಯಾಗಲಿದೆ. ಅ. 15ರ ನಂತರ ಪೂರ್ಣ ಪ್ರಮಾಣದ ಬಸ್‌ಗಳ ಪ್ರಾಯೋಗಿಕ ಸಂಚಾರ, ನ. 1ರಂದು ಅಧಿಕೃತ ಚಾಲನೆ, ಪರಿಣಾಮಕಾರಿ ಸೇವೆ ನೀಡುವ ನಿಟ್ಟಿನಲ್ಲಿ ವಾಯವ್ಯ ಸಾರಿಗೆ ಸಂಸ್ಥೆಯಿಂದ ಅಧಿಕಾರಿ-ಸಿಬ್ಬಂದಿ ಎರವಲು, ದರ ನಿರ್ಧಾರ ಸೇರಿದಂತೆ ಹಲವು ವಿಷಯಗಳ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳು ಇರುವುದರಿಂದ ಸಭೆ ಮಹತ್ವ ಪಡೆದಿದೆ.

17 ನಿಲ್ದಾಣಕ್ಕೆ ಸೇವೆ 
ಇಸ್ಕಾನ್‌ ಮಂದಿರದವರೆಗೆ ಬಿಆರ್‌ಟಿಎಸ್‌ ಬಸ್‌ ವಿಸ್ತರಿಸುವುದರಿಂದ ಪ್ರಮುಖವಾಗಿ ಬೈರಿದೇವರಕೊಪ್ಪ, ನವನಗರ ಪ್ರದೇಶಗಳು ಒಳಗೊಳ್ಳಲಿವೆ. ಈ ಭಾಗದಲ್ಲಿ ಬಿಆರ್‌ಟಿಎಸ್‌ ಸಂಚಾರಕ್ಕೆ ಹೆಚ್ಚಿನ ಒಲವು ವ್ಯಕ್ತವಾಗಲಿದ್ದು, ನಿರೀಕ್ಷಿತ ಸ್ಪಂದನೆ ದೊರೆಯಲಿದೆ. ವಿಸ್ತರಣೆಯಿಂದ ಒಟ್ಟು 17 ನಿಲ್ದಾಣಗಳಲ್ಲಿ ಸೇವೆ ದೊರೆತಂತಾಗುತ್ತದೆ. 11 ಕಿಮೀ ದೂರದ ಪ್ರಯಾಣವನ್ನು ಸುಮಾರು 25-30 ನಿಮಿಷದೊಳಗೆ ಪೂರೈಸಬೇಕು ಎನ್ನುವ ಗುರಿಯಿದೆ. ಆದರೆ ಮಿಕ್ಸ್‌ ಟ್ರಾಫಿಕ್‌ ಪರಿಣಾಮ ಇದು ಕಷ್ಟವಾದರೂ ಹೊಸೂರು ಬಸ್‌ ನಿಲ್ದಾಣ ನಂತರ ಪ್ರತ್ಯೇಕ ಕಾರಿಡಾರ್‌ ಇರುವುದರಿಂದ ಸಂಚಾರದ ಸಮಸ್ಯೆಯಾಗುವುದಿಲ್ಲ ಎನ್ನುವುದು ಅಧಿಕಾರಿಗಳ ಅಭಿಪ್ರಾಯ.

ಚನ್ನಮ್ಮ ವೃತ್ತದಲ್ಲಿ ಒಂದಿಷ್ಟು ಸಂಚಾರ ದಟ್ಟಣೆ ಹೊರತುಪಡಿಸಿ ಇತರೆ ಯಾವುದೇ ಪ್ರದೇಶದಲ್ಲಿ ಬಿಆರ್‌ಟಿಎಸ್‌ ಸಂಚಾರಕ್ಕೆ ಸಮಸ್ಯೆಯಾಗುತ್ತಿಲ್ಲ. ಕಳೆದ ನಾಲ್ಕು ದಿನಗಳಿಂದ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸೇವೆಯನ್ನು ಇಸ್ಕಾನ್‌ ಮಂದಿರದ ವರೆಗೆ ವಿಸ್ತರಿಸಲು ವ್ಯವಸ್ಥಾಪಕ ನಿರ್ದೇಶಕರು ನಿರ್ಧರಿಸಿದ್ದು, ಬಸ್‌ ದರ, ಸಂಖ್ಯೆಯಲ್ಲಿ ಹೆಚ್ಚಳ ಕುರಿತು ಇನ್ನಷ್ಟೇ ಚರ್ಚೆಯಾಗಬೇಕಿದೆ.
 ಬಸವರಾಜ ಕೇರಿ,
ಡಿಜಿಎಂ, ಬಿಆರ್‌ಟಿಎಸ್‌

„ಹೇಮರಡ್ಡಿ ಸೈದಾಪುರ 

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.