ಇಂದಿರಾ ಕ್ಯಾಂಟೀನ್‌ಗೆ ಹೆಚ್ಚಿದ ಬೇಡಿಕೆ 


Team Udayavani, Oct 7, 2018, 5:34 PM IST

7-october-23.gif

ಹುಬ್ಬಳ್ಳಿ: ನಗರದಲ್ಲಿ ಆರಂಭಗೊಂಡ ಮೂರು ಇಂದಿರಾ ಕ್ಯಾಂಟೀನ್‌ಗಳಿಗೆ ಜನಸ್ಪಂದನೆ ಹೆಚ್ಚುತ್ತಿದ್ದು, ನಿತ್ಯ 500 ಜನರಿಗೆ ಊಟ-ಉಪಹಾರ ನೀಡಿದರೂ ಹೆಚ್ಚಿನ ಬೇಡಿಕೆ ವ್ಯಕ್ತವಾಗುತ್ತಿದೆ. ನಗರದ ಇನ್ನಷ್ಟು ಕಡೆ ಇಂದಿರಾ ಕ್ಯಾಂಟೀನ್‌ ಆರಂಭಿಸುವ ಒತ್ತಾಯವೂ ಹೆಚ್ಚತೊಡಗಿದೆ.

ನಗರದಲ್ಲಿ ಪ್ರಸ್ತುತ ಆರಂಭಗೊಂಡಿರುವ ಪ್ರತಿ ಕ್ಯಾಂಟೀನ್‌ ನಲ್ಲಿ 500 ಪ್ಲೇಟ್‌ ಉಪಹಾರ, ಊಟ ನೀಡಲಾಗುತ್ತಿದೆ. ಆದರೆ ಇದು ಕಡಿಮೆ ಬೀಳುತ್ತಿದ್ದು, ಬೆಳಗ್ಗೆ ಉಪಹಾರ ಹಾಗೂ ಮಧ್ಯಾಹ್ನ ಊಟಕ್ಕೆ ಹೆಚ್ಚಿನ ಬೇಡಿಕೆ ಇದೆ. ಬೆಳಗ್ಗೆ ಉಪಹಾರ 500 ಹಾಗೂ ಮಧ್ಯಾಹ್ನ ಊಟ 500 ಪ್ಲೇಟ್‌ಗಳು ಖಾಲಿ ಆಗುತ್ತಿದ್ದು ಜನರು ಮರಳಿ ಹೋಗುತ್ತಿದ್ದಾರೆ. ಆದರೆ ರಾತ್ರಿ ಊಟ ಸುಮಾರು 350-400 ಪ್ಲೇಟ್‌ಗಳು ಮಾರಾಟವಾಗುತ್ತಿದೆ.

ಅವಳಿನಗರಕ್ಕೆ ಮಂಜೂರಾದ 12 ಕ್ಯಾಂಟೀನ್‌ಗಳಲ್ಲಿ, ಸದ್ಯಕ್ಕೆ ಮೂರು ಮಾತ್ರ ಆರಂಭವಾಗಿದ್ದು, ಇನ್ನುಳಿದ 9 ಕ್ಯಾಂಟೀನ್‌ ಗಳು ಆರಂಭವಾಗಬೇಕಾಗಿವೆ. ಇದರಲ್ಲಿ ಬೆಂಗೇರಿ ಮಾರುಕಟ್ಟೆ, ಉಣಕಲ್ಲ ಹಾಗೂ ಕಿಮ್ಸ್‌ ಹಿಂಭಾಗ, ಹೊಸ ಬಸ್‌ ನಿಲ್ದಾಣದಲ್ಲಿನ ಕ್ಯಾಂಟಿನ್‌ಗಳು ಸಿದ್ಧಗೊಂಡಿದ್ದರೂ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ.

ಕಿಮ್ಸ್‌, ಬೆಂಗೇರಿ ಹಾಗೂ ಉಣಕಲ್ಲನಲ್ಲಿರುವ ಕ್ಯಾಂಟೀನ್‌ಗಳಿಗೆ ದಿನವೂ ಜನರು ಬಂದು ಹೋಗುತ್ತಿದ್ದಾರೆ. ಆದರೆ ಉದ್ಘಾಟನೆಯಾಗದ ಹಿನ್ನೆಲೆಯಲ್ಲಿ ಉಪಹಾರ, ಊಟ ಅಲ್ಲಿ ವಿತರಿಸಲಾಗುತ್ತಿಲ್ಲ. ಧಾರವಾಡದಲ್ಲಿ ಮಿನಿವಿಧಾನಸೌಧ ಹಾಗೂ ಹೊಸ ಬಸ್‌ ನಿಲ್ದಾಣದಲ್ಲಿ ಕ್ಯಾಂಟೀನ್‌ ನಿರ್ಮಾಣ ಸಂಪೂರ್ಣವಾಗಿದ್ದು ಉದ್ಘಾಟನೆ ಆಗಬೇಕಿದೆ. ಹುಬ್ಬಳ್ಳಿ ಹೊಸ ಬಸ್‌ ನಿಲ್ದಾಣದಲ್ಲಿ ನೀರಿನ ಕೊರತೆ ಎದುರಾಗಿದೆ.

ಎಲ್ಲ ಕ್ಯಾಂಟೀನ್‌ಗಳಲ್ಲಿ ನೀರಿನ ಕೊರತೆ: ಈಗಾಗಲೇ ಆರಂಭಗೊಂಡಿರುವ ನ್ಯೂ ಇಂಗ್ಲಿಷ್‌ ಸ್ಕೂಲ್‌, ಎಸ್‌.ಎಂ.ಕೃಷ್ಣ ನಗರ ಹಾಗೂ ಸೋನಿಯಾ ಗಾಂಧಿ ನಗರ ಇಂದಿರಾ ಕ್ಯಾಂಟೀನ್‌ ಗಳಲ್ಲಿ ನೀರಿನ ಕೊರತೆ ಎದುರಾಗುತ್ತಿದ್ದು, ಜಲಮಂಡಳಿ ಪ್ರತಿದಿನ ಒಂದು ಟ್ಯಾಂಕರ್‌ ನೀರು ನೀಡುತ್ತಿದೆ. ಆದರೆ ಎಲ್ಲ ಕ್ಯಾಂಟೀನ್‌ ಹಾಗೂ ಬೆಂಗೇರಿಯಲ್ಲಿರುವ ಕಿಚನ್‌ಗೆ ಎರಡು ನೀರಿನ ಟ್ಯಾಂಕ್‌ಗಳು ಬೇಕಾಗುತ್ತದೆ. ಇನ್ನು ಎಸ್‌.ಎಂ.ಕೃಷ್ಣಾ ನಗರ ಹಾಗೂ ಸೋನಿಯಾ ಗಾಂಧಿ ನಗರದಲ್ಲಿ ಕುಡಿಯುವ ನೀರಿನ ಬದಲಾಗಿ ಬೋರ್‌ವೆಲ್‌ ನೀರು ನೀಡಲಾಗುತ್ತಿದ್ದು, ಇದು ಕೂಡಾ ಒಂದು ಸಮಸ್ಯೆ ಆಗಿದೆ.

ಸದ್ಯ ಆರಂಭಗೊಂಡಿರುವ ಮೂರು ಇಂದಿರಾ ಕ್ಯಾಂಟೀನ್‌ನಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಹೆಚ್ಚಿನ ಬೇಡಿಕೆಯೂ ಬರುತ್ತಿದೆ. ಆದರೆ ಸರಕಾರದ ನಿರ್ದೇಶನದಂತೆ 500 ಪ್ಲೇಟ್‌ಗಳಿಗೆ ಸೀಮಿತಗೊಳಿಸಿದ್ದಾರೆ. ಹೆಚ್ಚಿಗೆ ಆಗಮಿಸಿದ ಜನರು ಮರಳಿ ಹೋಗುತ್ತಿರುವುದನ್ನು ಕಾಣುತ್ತಿದ್ದೇವೆ. ಇನ್ನುಳಿದ ಹುಬ್ಬಳ್ಳಿಯ ಮೂರು ಹಾಗೂ ಧಾರವಾಡದ ಎರಡು ಕ್ಯಾಂಟೀನ್‌ಗಳು ಉದ್ಘಾಟನೆಗೊಂಡರೆ ಜನರಿಗೆ 
 ಅನುಕೂಲವಾಗಲಿದೆ. ಇದಲ್ಲದೇ ಕಿಮ್ಸ್‌ ಹಿಂಭಾಗದಲ್ಲಿರುವ ಕ್ಯಾಂಟೀನ್‌ಗೆ ದಿನನಿತ್ಯ ಜನರು ಆಗಮಿಸಿ ಯಾವಾಗ ಆರಂಭಿಸುತ್ತೀರಿ ಎಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ.
 ಪ್ರಕಾಶ ಪವಾರ,
 ಇಂದಿರಾ ಕ್ಯಾಂಟಿನ್‌ ನಿರ್ವಹಣಾ ವ್ಯವಸ್ಥಾಪಕ.

„ಬಸವರಾಜ ಹೂಗಾರ

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.