ರೆಡಾನ್‌ ಸಮಗ್ರ ಕ್ಯಾನ್ಸರ್‌ ಚಿಕಿತ್ಸಾ ಕೇಂದ್ರ ಉದ್ಘಾಟನೆ 


Team Udayavani, Oct 8, 2018, 5:36 PM IST

8-october-22.gif

ಹುಬ್ಬಳ್ಳಿ: ಆರಂಭಿಕ ಹಂತದಲ್ಲೇ ಪತ್ತೆ ಮಾಡಿದರೆ ಮಾರಕವಾದ ಕ್ಯಾನ್ಸರ್‌ ರೋಗವನ್ನು ಸಹ ಇತರೆ ರೋಗಗಳಂತೆ ನಿಯಂತ್ರಿಸಲು ಸಾಧ್ಯ ಎಂದು ಮುಂಬಯಿಯ ನರ್ಗಿಸ್‌ ದತ್‌ ಮೆಮೋರಿಯಲ್‌ ಚಾರಿಟೇಬಲ್‌ ಟ್ರಸ್ಟ್‌ನ ಧರ್ಮದರ್ಶಿ, ಮಾಜಿ ಸಂಸದೆ ಪ್ರಿಯಾ ದತ್‌ ಹೇಳಿದರು. ಇಲ್ಲಿನ ಗೋಕುಲ ರಸ್ತೆ ಎಂ.ಟಿ. ಸಾಗರದ ಜವಳಿ ಗಾರ್ಡನ್‌ದಲ್ಲಿ ತೆರೆಯಲಾದ ರೆಡಾನ್‌ ಸಮಗ್ರ ಕ್ಯಾನ್ಸರ್‌ ಚಿಕಿತ್ಸಾ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.

ನಾನು 13 ವರ್ಷದವಳಿದ್ದಾಗ ನನ್ನ ತಾಯಿ ನರ್ಗಿಸ್‌ ದತ್‌ ಕ್ಯಾನ್ಸರ್‌ ರೋಗಕ್ಕೊಳಗಾಗಿ ಅಸುನೀಗಿದರು. ಅವರಿಗೆ ಕ್ಯಾನ್ಸರ್‌ ಚಿಕಿತ್ಸೆಗಾಗಿ ಅಮೆರಿಕಕ್ಕೆ ಹೋಗಬೇಕಾಗಿತ್ತು. ಆದರೆ ಅವರು ಚಿಕಿತ್ಸೆ ಪೂರ್ಣಗೊಳಿಸದೇ ಅರ್ಧಕ್ಕೆ ವಾಪಸ್‌ ಭಾರತಕ್ಕೆ ಬಂದು ಒಂದು ತಿಂಗಳೊಳಗೆ ಮೃತಪಟ್ಟರು. ಕ್ಯಾನ್ಸರ್‌ ರೋಗಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ನಮ್ಮ ತಂದೆ ಸುನಿಲ್‌ ದತ್‌ ಅವರು ನರ್ಗಿಸ್‌ ದತ್‌ ಫೌಂಡೇಷನ್‌ ಸ್ಥಾಪಿಸಿದರು ಎಂದರು.

ಈಗ ಗ್ರಾಮಾಂತರ ಪ್ರದೇಶದಲ್ಲೂ 100 ಕ್ಯಾನ್ಸರ್‌ ಆಸ್ಪತ್ರೆಗಳನ್ನು ತೆರೆಯಲಾಗಿದೆ. ಸರಕಾರ, ಜನರು, ಸಮುದಾಯ ಕ್ಯಾನ್ಸರ್‌ ಕುರಿತು ಜಾಗೃತಿ ಮೂಡಿಸಬೇಕು. ದೇಶದ ಎಲ್ಲ ಪ್ರದೇಶಗಳಲ್ಲೂ ಕ್ಯಾನ್ಸರ್‌ ರೋಗಿಗಳಿಗೆ ಚಿಕಿತ್ಸಾ ಸೌಲಭ್ಯ ಸಿಗಬೇಕು. ಹುಬ್ಬಳ್ಳಿಯಲ್ಲೂ ಅತ್ಯಾಧುನಿಕ ಸೌಲಭ್ಯಗಳುಳ್ಳ ಕ್ಯಾನ್ಸರ್‌ ಆಸ್ಪತ್ರೆ ಆರಂಭವಾಗಿರುವುದು ಪ್ರಶಂಸನೀಯ. ನಾನು ಸಹ ಭವಿಷ್ಯದಲ್ಲಿ ಇದರೊಂದಿಗೆ ಕೈಜೋಡಿಸಿ ಕಾರ್ಯನಿರ್ವಹಿಸುವೆ ಎಂದು ಹೇಳಿದರು.

ಕರ್ನಾಟಕ ಕ್ಯಾನ್ಸರ್‌ ಚಿಕಿತ್ಸೆ ಮತ್ತು ಸಂಶೋಧನಾ ಸಂಸ್ಥೆಯ ಸಂಸ್ಥಾಪಕ ಪದ್ಮಶ್ರೀ ಡಾ| ಆರ್‌.ಬಿ. ಪಾಟೀಲ ಮಾತನಾಡಿ, ಮನುಷ್ಯನ ಒಂದು ಸೆಲ್‌ನಿಂದ ಆರಂಭವಾಗುವ ಕ್ಯಾನ್ಸರ್‌ ನಿಧಾನವಾಗಿ ಇಡೀ ದೇಹ ಆವರಿಸುತ್ತದೆ. ಕ್ಯಾನ್ಸರ್‌ ರೋಗ ಮೊದಲ ಹಂತ ದಾಟಿದ ಮೇಲೆ ಅದನ್ನು ನಿವಾರಣೆ ಮಾಡುವುದು ಹೇಗೆ ಹಾಗೂ ದೇಹದಲ್ಲಿನ ಇಂತಹ ಸೆಲ್‌ ಗಳನ್ನು ತೆಗೆದು ಹಾಕುವುದು ಹೇಗೆ ಎಂಬುದೇ ಇಂದಿಗೂ ಜಗತ್ತಿನ ಎದುರಿಗಿರುವ ಬಹುದೊಡ್ಡ ಸವಾಲಾಗಿದೆ ಎಂದರು.

ನಾಲ್ಕು ದಶಕಗಳ ಹಿಂದೆ ಕ್ಯಾನ್ಸರ್‌ ಹೇಗೆ ಬರುತ್ತದೆ ಎಂಬುದು ಯಾರಿಗೂ ಗೊತ್ತಿರಲಿಲ್ಲ. ಈಗ ತಂತ್ರಜ್ಞಾನದಲ್ಲಿ ಸುಧಾರಣೆಯಾಗಿದೆ. ರೋಗ ಬೇಗನೆ ಪತ್ತೆಯಾದರೆ ಶೇ. 100 ಗುಣಪಡಿಸಬಹುದು. ಶಸ್ತ್ರಚಿಕಿತ್ಸೆ, ಪಿಸಿಯೋಥೆರಪಿ, ಕಿಮೋಥೆರಪಿ ನಂತರ ಹಲವಾರು ಚಿಕಿತ್ಸೆಗಳನ್ನು ಈಗ ಕ್ಯಾನ್ಸರ್‌ ರೋಗಿಗಳಿಗೆ ನೀಡಲಾಗುತ್ತದೆ. ಆದರೆ ಇಂದಿಗೂ ಪೂರ್ಣಪ್ರಮಾಣದ ಪರಿಹಾರ ಕಂಡುಕೊಳ್ಳುವಲ್ಲಿ ನಮಗೆ ಸಾಧ್ಯವಾಗಿಲ್ಲ. ಆರಂಭದಲ್ಲೇ ಇದನ್ನು ಪತ್ತೆ ಮಾಡುವ ಕುರಿತು ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವುದು ಅವಶ್ಯ ಎಂದು ಹೇಳಿದರು.

ಗ್ಲೋಬಲ್‌ ಯುನೈಟೆಡ್‌ ಲೆಫ್‌ಟೈಮ್‌ ಕ್ವೀನ್‌ ಮತ್ತು ಕ್ಯಾನ್ಸರ್‌ ರೋಗಿಗಳ ಸಲಹೆಗಾರ್ತಿ ಡಾ| ನಮಿತಾ ಪಾರಿತೋಷ ಕೊಹಕ್‌, ಅಹ್ಮದಾಬಾದ್‌ ನ ಗುಜರಾತ ಕ್ಯಾನ್ಸರ್‌ ಸಂಶೋಧನಾ ಸಂಸ್ಥೆಯ ಸರ್ಜಿಕಲ್‌ ಆಂಕಾಲಜಿ ವಿಭಾಗದ ಮಾಜಿ ಎಚ್‌ಒಡಿ ಡಾ| ಶಕುಂತಲಾಬೆನ್‌ ಶಾಹ ಮಾತನಾಡಿದರು. ವೀರೆನ್‌ ಶಾಹ, ಯಮನವ್ವ ಆರ್‌. ಪಾಟೀಲ, ಡಾ| ವಿಜಯ ಸಂಕೇಶ್ವರ ಮೊದಲಾದವರಿದ್ದರು. ರೆಡಾನ್‌ ಕ್ಯಾನ್ಸರ್‌ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕ ಡಾ| ಸಂಜೀವ ಕುಲಗೋಡ ಪ್ರಾಸ್ತಾವಿಕ ಮಾತನಾಡಿದರು. ಡಾ| ಶಶಿಕಾಂತ ಕುಲಗೋಡ ಸ್ವಾಗತಿಸಿದರು.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.