ಬ್ಯಾಂಕ್ ವಿಲೀನ ನಿರ್ಧಾರ ವಿರೋಧಿಸಿ ಪ್ರತಿಭಟನೆ
Team Udayavani, Oct 12, 2018, 5:19 PM IST
ಹುಬ್ಬಳ್ಳಿ: ಕೇಂದ್ರ ಸರಕಾರ ವಿಜಯಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ ಹಾಗೂ ದೇನಾ ಬ್ಯಾಂಕ್ ವಿಲೀನಗೊಳಿಸುವ ನಿರ್ಧಾರ ಕೈಗೊಂಡಿರುವುದನ್ನು ವಿರೋಧಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯುನಿಯನ್ಸ್ ವತಿಯಿಂದ ಇಲ್ಲಿನ ಸರ್ ಸಿದ್ದಪ್ಪ ಕಂಬಳಿ ಮಾರ್ಗದ ವಿಜಯಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಲಾಯಿತು.
ಸಂಘದ ಅಧ್ಯಕ್ಷ ಸ್ಟಿಫನ್ ಜಯಚಂದ್ರ ಮಾತನಾಡಿ, ಬ್ಯಾಂಕ್ಗಳ ವಿಲೀನದಿಂದ ಅನೇಕ ಶಾಖೆಗಳು ಮುಚ್ಚಲಿವೆ. ಇದರಿಂದ ಗ್ರಾಹಕರಿಗೆ ತುಂಬಾ ತೊಂದರೆಯಾಗಲಿದೆ. ಈ ನೀತಿಯಿಂದ ಮಧ್ಯಮ ವರ್ಗದ ಗ್ರಾಹಕರಿಗೆ ಲಾಭವಾಗುವುದಿಲ್ಲ. ಕೇಂದ್ರ ಸರಕಾರದ ಬ್ಯಾಂಕ್ಗಳ ವಿಲೀನ ನೀತಿಯನ್ನು ಸಂಘ ತೀವ್ರವಾಗಿ ಖಂಡಿಸುತ್ತದೆ. ವಿಲೀನ ಪ್ರಕ್ರಿಯೆ ವಾಪಸ್ ಪಡೆಯಬೇಕು. ಇಲ್ಲವಾದರೆ ಪ್ರತಿಭಟನೆ ಮುಂದುವರಿಸಲಾಗುವುದು ಎಂದರು.
ಅಖಿಲ ಭಾರತ ವಿಜಯಾ ಬ್ಯಾಂಕ್ ಅಧಿಕಾರಿಗಳ ಒಕ್ಕೂಟದ ಕ್ಷೇತ್ರೀಯ ಕಾರ್ಯದರ್ಶಿ ಚಿದಂಬರ ಗೋಠೆ ಸೇರಿದಂತೆ ವಿಜಯಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ದೇನಾ ಬ್ಯಾಂಕ್ನ ಸಿಬ್ಬಂದಿ, ಸಂಘದ ಸದಸ್ಯರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ