ಸಮಾಜದ ವೈಷಮ್ಯ ಸ್ಥಿತಿಗೆ ಭಗವದ್ಗೀತೆ ಸಂಜೀವಿನಿ


Team Udayavani, Oct 29, 2018, 5:30 PM IST

29-october-21.gif

ಹುಬ್ಬಳ್ಳಿ: ಇಂದಿನ ವೈಷಮ್ಯ ಸ್ಥಿತಿಗೆ ಭಗವಾನ್‌ ಶ್ರೀಕೃಷ್ಣ ಬೋಧಿಸಿದ ಭಗವದ್ಗೀತೆ ಸಂಜೀವಿನಿಯಾಗಿದೆ. ಜೀವನದಲ್ಲಿ ಗೀತೆಯ ಅನುಸರಣೆಯಿಂದ ಉತ್ತಮ ಸಮಾಜ ನಿರ್ಮಿಸಬಹುದು ಎಂದು ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಜಗದ್ಗುರು ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಹೇಳಿದರು. ಭಗವದ್ಗೀತಾ ಅಭಿಯಾನ ಸಮರ್ಪಣಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರವಿವಾರ ಇಲ್ಲಿನ ಸ್ಟೇಶನ್‌ ರಸ್ತೆಯ ಶೃಂಗಾರ ಪ್ಯಾಲೇಸ್‌ನಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.

ವಿಶ್ವದಲ್ಲಿ ಇಂದು ಭಯೋತ್ಪಾದನೆ ತಾಂಡವಾಡುತ್ತಿದೆ. ಉತ್ತಮವಾಗಿರುವ ಭಾರತೀಯ ಸಂಸ್ಕೃತಿಯ ಮೇಲೆ ಆಕ್ರಮಣಗಳು ನಡೆದಿದ್ದು, ಸಮಾಜ ದ್ವಂದ್ವದಲ್ಲಿ ಸಿಲುಕಿಕೊಂಡಿದೆ. ಮಾನಸಿಕ ನೆಮ್ಮದಿ ಕಳೆದುಕೊಂಡಿದೆ. ಇದೆಲ್ಲದರ ಪರಿಹಾರವಾಗಿ ಶ್ರೀಕೃಷ್ಣ ಉಪದೇಶಿಸಿದ ಭಗವದ್ಗೀತೆಯ ಅನುಷ್ಠಾನ ಮತ್ತು ಅನುಸಂಧಾನದಿಂದ ಮತ್ತೆ ಮಾನವ ಕುಲವನ್ನು ಉತ್ತಮ ಮಾರ್ಗದಲ್ಲಿ ಕೊಂಡೊಯ್ಯಲು ಸಾಧ್ಯವಾಗುತ್ತದೆ. ಅನೇಕ ದಿನಗಳಿಂದ ಅನೂಚಾನವಾಗಿ ನಡೆಸಿಕೊಂಡು ಬಂದಿರುವ ಈ ಗೀತಾ ಅಭಿಯಾನದ ಬೃಹತ್‌ ಸಮರ್ಪಣಾ ಸಮಾರಂಭ ನಗರದಲ್ಲಿ ಡಿಸೆಂಬರ್‌ನಲ್ಲಿ ನಡೆಯಲಿದೆ. ಭಕ್ತರು ತನು-ಮನ-ಧನದಿಂದ ಸೇವೆ ಸಲ್ಲಿಸಬೇಕು ಎಂದರು.

ಪದ್ಮಶ್ರೀ ಡಾ| ಎಂ.ಎಂ. ಜೋಶಿ ಮಾತನಾಡಿ, ಸ್ವರ್ಣವಲ್ಲಿ ಶ್ರೀಗಳು ಸಮಾಜಮುಖಿಯಾಗಿ ಭಗವದ್ಗೀತಾ ಅಭಿಯಾನ ಹಮ್ಮಿಕೊಳ್ಳುವ ಮೂಲಕ ನೈತಿಕತೆ ಮತ್ತು ಸಂಸ್ಕಾರ ಬಿತ್ತುತ್ತಿದ್ದಾರೆ. ಇಂಥ ಕಾರ್ಯಕ್ರಮಕ್ಕೆ ನಗರವು ಸದಾ ಸಿದ್ಧವಾಗಿದ್ದು, ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಹೇಳಿದರು. ಬ್ರಾಹ್ಮಣ ಸಮಾಜದ ಮುಖಂಡ ಎಂ.ಬಿ. ನಾತು ಮಾತನಾಡಿ, ಗೀತಾ ಜಯಂತಿ ಡಿ. 19ರಂದು ಭಗವದ್ಗೀತಾ ಅಭಿಯಾನದ ಸಮರ್ಪಣೆ ನಡೆಯಲಿದೆ. ಇದಕ್ಕಾಗಿ ಈಗಾಗಲೇ ವಲಯಗಳನ್ನಾಗಿಸಿ ಪ್ರಚಾರ ಕಾರ್ಯ ನಡೆಸಲಾಗುತ್ತಿದೆ. ಲಕ್ಷಕ್ಕೂ ಅಧಿಕ ಜನತೆ ಆಗಮಿಸುವುದರಿಂದ ವಿವಿಧ ಸಮಿತಿ ರಚಿಸಲಾಗಿದೆ. ಮಾಡಬೇಕಾದ ಕೆಲಸ ಕಾರ್ಯಗಳಿಗೆ ಇನ್ನಷ್ಟು ವೇಗ ನೀಡಬೇಕಾಗಿದ್ದು, ಎಲ್ಲರೂ ಸಹಕರಿಸಬೇಕು ಎಂದರು.

ನ್ಯಾಯವಾದಿ ಬಿ.ಡಿ. ಹೆಗಡೆ, ವಿನಾಯಕ ಆಕಳವಾಡಿ, ಅನಂತ ಹೆಗಡೆ ಸೇರಿದಂತೆ ಇತರರು ಮಾತನಾಡಿ, ಶ್ರೀಗಳು ಸದಾಕಾಲ ಶ್ರೀಕೃಷ್ಣನ ಗೀತೆಯಿಂದಲೇ ಸಮಾಜದ ಉದ್ಧಾರವೆಂದು ಕಂಡಿದ್ದಾರೆ. ಆ ನಿಟ್ಟಿನಲ್ಲಿ ಸರ್ವ ಸಮಾಜದ ಏಳ್ಗೆ ಬಯಸಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸಂತಸ ತಂದಿದೆ. ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಲಾಗುವುದು ಎಂದರು.

ಎಸ್‌ಎಸ್‌ಕೆ ಸಮಾಜದ ನೀಲಕಂಠ ಜಡಿ, ವಿಠಲ ಲದ್ವಾ, ಗೀತಾ ಅಭಿಯಾನದ ಪ್ರಚಾರ ಸಮಿತಿ ಮುಖಂಡ ಎ.ಸಿ. ಗೋಪಾಲ, ಶೃಂಗಾರ ಪ್ಯಾಲೇಸ್‌ ಮಾಲೀಕ ತುಳಸಿದಾಸ ಧರ್ಮದಾಸ ಬಂಧುಗಳು, ಹೋಟೆಲ್‌ ಉದ್ಯಮಿ ಕೃಷ್ಣರಾಜ ಕೆಮ್ತೂರು, ಜುವೆಲರಿ ಮಾಲೀಕ ಶ್ರೀಕಾಂತ ಕರಿ, ನೀಲಕಂಠ ಆಕಳವಾಡಿ, ಕನ್ಹಯ್ನಾಲಾಲ್‌ ಠಕ್ಕರ, ಮನೋಹರ ಪರ್ವತಿ, ವೆಂಕಟರಮಣ ಹೆಗಡೆ, ಶ್ರೀಕಾಂತ ಹೆಗಡೆ ಮೊದಲಾದವರಿದ್ದರು. ವೀಣಾ ಶಿವರಾಮ ಹೆಗಡೆ ತಂಡದಿಂದ ಭಗವದ್ಗೀತಾ ಶ್ಲೋಕ ಪಠಣ ನಡೆಯಿತು. ಸುಭಾಸಸಿಂಗ ಜಮಾದಾರ ನಿರೂಪಿಸಿದರು. ಅರವಿಂದ ಮುತಗಿ ವಂದಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.