ಮತ್ತೆರಡು ಕ್ರೀಡಾಂಗಣಕ್ಕೆ ಕೆಎಸ್‌ಸಿಎ ಸಿದ್ಧತೆ


Team Udayavani, Nov 23, 2018, 4:35 PM IST

hub-1.jpg

ಹುಬ್ಬಳ್ಳಿ: ಉತ್ತರ ಕರ್ನಾಟಕ ಕ್ರಿಕೆಟ್‌ ಪಟುಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಇನ್ನೂ ಎರಡು ಕ್ರೀಡಾಂಗಣಗಳನ್ನು ನಿರ್ಮಿಸಲು ಉತ್ಸುಕವಾಗಿದ್ದು, ಸರ್ಕಾರ ಹಾಗೂ ಜಿಲ್ಲಾಡಳಿತಗಳು ಸಹಕಾರ ನೀಡಿದರೆ ತ್ವರಿತಗತಿಯಲ್ಲಿ ಕ್ರೀಡಾಂಗಣಗಳು ಸಜ್ಜಾಗಲಿವೆ.

ಈಗಾಗಲೇ ಧಾರವಾಡ ವಲಯದಲ್ಲಿ ಹುಬ್ಬಳ್ಳಿ ಹಾಗೂ ಬೆಳಗಾವಿ ಕ್ರೀಡಾಂಗಣಗಳಿದ್ದು, ಗದಗ ಹಾಗೂ ಕಾರವಾರದಲ್ಲಿ ಹೊಸ ಕ್ರೀಡಾಂಗಣಗಳು ತಲೆ ಎತ್ತಲಿವೆ. ಇದರಿಂದ ಧಾರವಾಡ, ಹಾವೇರಿ, ಕಾರವಾರ, ಗದಗ ಹಾಗೂ ಬೆಳಗಾವಿ ಜಿಲ್ಲೆಗಳ ವ್ಯಾಪ್ತಿಯ ಧಾರವಾಡ ವಲಯದಲ್ಲಿ ನಾಲ್ಕು ಕ್ರೀಡಾಂಗಣಗಳಾಗಲಿವೆ.
 
ಗದಗನಲ್ಲಿ ಗದಗ-ರೋಣ ರಸ್ತೆಯ ನರಸಾಪುರ ಸಮೀಪ ಎಂಟೂವರೆ ಎಕರೆ ಭೂಮಿಯಲ್ಲಿ ಕ್ರೀಡಾಂಗಣ ನಿರ್ಮಾಣಗೊಳ್ಳಲಿದೆ. ಜಾಗವನ್ನು ಖರೀದಿಸಲಾಗಿದ್ದು, ನೀರಿನ ಕೊರತೆಯಿಂದಾಗಿ ಕಾಮಗಾರಿ ಸ್ಥಗಿತಗೊಂಡಿದೆ. ಕ್ರೀಡಾಂಗಣದ ಜಾಗದಲ್ಲಿ 4-5 ಕೊಳವೆಬಾವಿಗಳನ್ನು ಕೊರೆಸಿದರೂ ನೀರಿನ ಸೆಲೆ ಸಿಕ್ಕಿಲ್ಲ. ಶಾಸಕ ಎಚ್‌. ಕೆ.ಪಾಟೀಲ ಅವರು ಕೂಡಾ ಕ್ರೀಡಾಂಗಣ ನಿರ್ಮಾಣಕ್ಕೆ ಆಸಕ್ತಿ ತೋರಿದ್ದು, ನಾಲೆಯ ಮೂಲಕ ನೀರು ತರಲಾಗುತ್ತಿದ್ದು, ಆಗ ನೀರು ಪೂರೈಕೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಇನ್ನು ಕಾರವಾರದಲ್ಲಿ ಸದಾಶಿವಗಡ ಸಮೀಪ ಕ್ರೀಡಾಂಗಣಕ್ಕೆ ಭೂಮಿ ಗುರುತಿಸಲಾಗಿದೆ. ಸಮುದ್ರ ಹಾಗೂ ನದಿಗೆ ಸಮೀಪದಲ್ಲಿ ಜಾಗವಿದ್ದು, ರಮಣೀಯ ದೃಷ್ಯ ಇಲ್ಲಿ ಸಿಗಲಿದೆ. ಆದರೆ ಸಚಿವ ಸಂಪುಟದಿಂದ ಅನುಮೋದನೆ ಸಿಕ್ಕರೆ ಪ್ರಕ್ರಿಯೆ ಮುಂದುವರೆಯಲಿದೆ. ಇದಕ್ಕೆ ಜನಪ್ರತಿನಿಧಿಗಳ ಆಸಕ್ತಿ ಮುಖ್ಯವಾಗಿದೆ. 

ಹುಬ್ಬಳ್ಳಿ ಹಾಗೂ ಬೆಳಗಾವಿ ಕ್ರೀಡಾಂಗಣಗಳಲ್ಲಿ ಶೇ.80ರಷ್ಟು ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದ್ದು, ಹುಬ್ಬಳ್ಳಿ ಕ್ರೀಡಾಂಗಣದಲ್ಲಿ ಕೆಪಿಎಲ್‌ ಪಂದ್ಯಗಳು ನಡೆದಿವೆ. ಬಾಂಗ್ಲಾದೇಶ ಮಹಿಳಾ ತಂಡ ಹಾಗೂ ವೆಸ್ಟ್‌ಇಂಡೀಸ್‌ ಎ ತಂಡಗಳು ಆಡಿವೆ. ಬೆಳಗಾವಿ ಕ್ರೀಡಾಂಗಣ ಕೂಡ ಕೆಪಿಎಲ್‌ ಪಂದ್ಯಗಳಿಗೆ ಆತಿಥ್ಯ ವಹಿಸಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದು ಹೋಗುವ ವಿಮಾನಗಳ ಸಂಖ್ಯೆ ಹೆಚ್ಚಾಗಿದ್ದು, ತಾರಾ ಹೊಟೇಲ್‌ಗಳು ಕೂಡ ಆರಂಭಗೊಂಡಿವೆ.

ಇದು ಅಂತಾರಾಷ್ಟ್ರೀಯ ಪಂದ್ಯಗಳ ಆಯೋಜನೆಗೆ ಪೂರಕವಾಗಿದೆ. ಧಾರವಾಡ ವಲಯ ಹೊರತು ಪಡಿಸಿದರೆ ಮೈಸೂರು, ರಾಯಚೂರು, ಶಿವಮೊಗ್ಗ, ತುಮಕೂರ ಹಾಗೂ ಮಂಗಳೂರು ವಲಯಗಳಲ್ಲಿ ಕೆಲವೆಡೆ ಕ್ರೀಡಾಂಗಣಗಳಿಲ್ಲ. ಇನ್ನು ಕೆಲವೆಡೆ ಕ್ರೀಡಾಂಗಣಗಳಿದ್ದರೂ ಅವು ಅಭಿವೃದ್ಧಿಯಾಗಿಲ್ಲ. ಆದರೆ ಧಾರವಾಡ ವಲಯದ ಪದಾಧಿಕಾರಿಗಳ ಇಚ್ಛಾಶಕ್ತಿಯಿಂದಾಗಿ ನೂತನ ಕ್ರೀಡಾಂಗಣಗಳು ಇಲ್ಲಿ ಆರಂಭಗೊಳ್ಳುವಂತಾಗಿದೆ.  

ಹಲವು ವರ್ಷಗಳ ಹಿಂದೆ ರಣಜಿ ತಂಡದಲ್ಲಿ ಉತ್ತರ ಕರ್ನಾಟಕದ ಸಾಕಷ್ಟು ಕ್ರಿಕೆಟಿಗರು ಅವಕಾಶ ಪಡೆದುಕೊಳ್ಳುತ್ತಿದ್ದರು. ಆದರೆ ಈಗ ಕ್ರೀಡಾಳುಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಇಲ್ಲಿ ಪ್ರತಿಭಾವಂತ ಹುಡುಗರಿದ್ದು, ಅವರಿಗೆ ಅವಕಾಶ ನೀಡುವ ಉದ್ದೇಶದಿಂದ ಧಾರವಾಡ ವಲಯದ ಅಭಿವೃದ್ಧಿಗೆ ಕೆಎಸ್‌ಸಿಎ ಆದ್ಯತೆ ನೀಡುತ್ತಿದೆ. ಬಿಸಿಸಿಐ ನಕಾಶೆಯಲ್ಲಿ ಉತ್ತರ ಕರ್ನಾಟಕದ ಕ್ರೀಡಾಂಗಣಗಳು ಸ್ಥಾನ ಪಡೆದುಕೊಳ್ಳಬೇಕು ಎಂಬುದು ನಮ್ಮ ಇಚ್ಛೆ.
 ಸಂತೋಷ ಮೆನನ್‌, ಕೆಎಸ್‌ಸಿಎ ಸಹಾಯಕ ಕಾರ್ಯದರ್ಶಿ

ಕ್ರೀಡಾಂಗಣದಲ್ಲೇ ಮಕ್ಕಳು ಕ್ರಿಕೆಟ್‌ ಅಭ್ಯಾಸ ಮಾಡುವಂತಾದರೆ ಅವರು ಕ್ರೀಡಾಂಗಣದ ವಾತಾವರಣಕ್ಕೆ ಹೊಂದಿಕೊಂಡು ಆಡುವುದು ಕಷ್ಟವಾಗುವುದಿಲ್ಲ. ಇದನ್ನು ಮನಗಂಡು ಕೆಎಸ್‌ಸಿಎ ಹೆಚ್ಚೆಚ್ಚು ಕ್ರೀಡಾಂಗಣಗಳ ನಿರ್ಮಾಣಕ್ಕೆ ಮುಂದಾಗಿದೆ. ಕ್ರೀಡಾಂಗಣಕ್ಕೆ ಸಂಪರ್ಕ ಕಲ್ಪಿಸಲು ವಿಶಾಲವಾದ ರಸ್ತೆಗಳು, ಸಮರ್ಪಕ ನೀರಿನ ಸೌಲಭ್ಯ ಒದಗಿಸಿದರೆ ಕ್ರೀಡಾಂಗಣಗಳು ದೊಡ್ಡ ದೊಡ್ಡ ಪಂದ್ಯಗಳಿಗೆ ಆತಿಥ್ಯ ವಹಿಸಲು ಸಾಧ್ಯವಾಗುತ್ತದೆ. 
 ಬಾಬಾ ಭೂಸದ, ಕೆಎಸ್‌ಸಿಎ ಧಾರವಾಡ ವಲಯ ಸಂಯೋಜಕ

ವಿಶ್ವನಾಥ ಕೋಟಿ

ಟಾಪ್ ನ್ಯೂಸ್

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.