ಕನಕರ ತತ್ವಗಳು ಬದುಕಿಗೆ ದಾರಿದೀಪ 


Team Udayavani, Dec 6, 2018, 4:56 PM IST

6-december-19.gif

ಧಾರವಾಡ: ಕನಕದಾಸರ ಜನನ, ಬದುಕು, ಬರಹ ಮತ್ತು ನೀಡಿದ ನೀತಿ, ತತ್ವಗಳು ಸಮಾಜದ ನೆಮ್ಮದಿಯ ಬದುಕಿಗೆ ದಾರಿದೀಪವಾಗಿವೆ ಎಂದು ಜಿ.ಪಂ. ಅಧ್ಯಕ್ಷೆ ಚೈತ್ರಾ ಶಿರೂರು ಹೇಳಿದರು. ನಗರದ ಆಲೂರು ವೆಂಕಟರಾವ್‌ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ದಾಸ ಶ್ರೇಷ್ಠರಾದ ಕನಕದಾಸರ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಹೀಗಾಗಿ ಕನಕದಾಸರಂತಹ ಶ್ರೇಷ್ಠ ಸಂತರ ಬದುಕು, ಬರಹ, ಗೀತೆಗಳು ಇಂದಿನ ಪೀಳಿಗೆಗೆ ಮಟ್ಟುವಂತೆ ಪಠ್ಯ-ಪುಸ್ತಕಗಳಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ವಿಧಾನ ಪರಿಷತ್‌ ಸದಸ್ಯ ಶ್ರೀನಿವಾಸ ಮಾನೆ ಮಾತನಾಡಿ, ಪವಾಡ ಪುರುಷ, ನಿಸ್ವಾರ್ಥ ಬದುಕಿನ ಸಮಾಜ ಸುಧಾರಕ ಕನಕದಾಸರ ಜಯಂತಿ ಆಚರಣೆ ಸಮಾಜದಲ್ಲಿ ಸಂತ ಪರಂಪರೆ ಬೆಳೆಸುವುದಾಗಿದೆ. ಸಂತ ಕನಕದಾಸರಂತಹ ಶ್ರೇಷ್ಠರು ನೀಡಿರುವ ಸಂಸ್ಕಾರ, ಸಂಸ್ಕೃತಿ, ಸಂಪ್ರದಾಯಗಳನ್ನು ಗೌರವಿಸಿ ಮುಂದುವರಿಸೋಣ ಎಂದು ತಿಳಿಸಿದರು.

ಕನಕದಾಸರ ಜೀವನ ಹಾಗೂ ಚಿಂತನೆಗಳ ಕುರಿತು ಬಸವರಾಜ ಪಾಟೀಲ ಮಾತನಾಡಿ, ಈ ನಾಡಿನಲ್ಲಿ ಸಾಮರಸ್ಯ, ಸಮಾನತೆ, ವ್ಯಕ್ತಿ ಮೌಲ್ಯ ಸಾರಿ ಜೀವನದುದ್ದಕ್ಕೂ ಹೋರಾಡಿದ ಇಬ್ಬರು ಶ್ರೇಷ್ಠರಾದ ಬಸವಣ್ಣ ಮತ್ತು ಕನಕದಾಸರು ಗುರಿ ಒಂದೇ ಆಗಿದ್ದರೂ ಕ್ರಮಿಸಿದ ದಾರಿ ಭಿನ್ನವಾಗಿತ್ತು ಎಂದರು.

ತಳ ಸಮುದಾಯದಿಂದ ಹುಟ್ಟಿ ಬಂದ ಕನಕದಾಸರು ಸಮಾಜದಲ್ಲಿ ಸಮಾನತೆ, ಸಾಮರಸ್ಯ ತರಲು ಏಕಾಂಗಿಯಾಗಿ ಹೋರಾಡಿದರು. ಅದ್ಭುತವಾದ ಜೀವನ ಮೌಲ್ಯಗಳನ್ನು ಸಾರಿದ ಶ್ರೇಷ್ಠ ಧ್ವನಿಯಾಗಿ ಕನಕದಾಸರು ಇತಿಹಾಸದಲ್ಲಿ ದಾಖಲಾಗಿದ್ದಾರೆ. ಬಸವಣ್ಣನವರು ಮೇಲ್ವರ್ಗದಲ್ಲಿ ಹುಟ್ಟಿ, ಶರಣರೊಂದಿಗೆ ಸಮಾಜದ ಸಾಮರಸ್ಯ, ವ್ಯಕ್ತಿ ಸ್ವಾತಂತ್ರ್ಯ ಕಾಯಕ ಮಹತ್ವ ಸಾರಲು ಶ್ರಮಿಸಿದರೂ ಕನಕದಾಸರ ಮನೋಭಾವ ಮತ್ತು ಏಕಾಂಗಿ ಹೋರಾಟ ನಮಗೆ ವಿಭಿನ್ನವಾಗಿ ಕಾಣುತ್ತದೆ ಎಂದರು.

ತಹಶೀಲ್ದಾರ್‌ ಪ್ರಕಾಶ ಕುದರಿ, ಹಿರಿಯ ಅಧಿಕಾರಿಗಳಾದ ಮುನಿರಾಜು, ಬಸವರಾಜ ವರವಟ್ಟಿ, ಆರ್‌.ಎಸ್‌. ಮುಳ್ಳೂರ ಮತ್ತು ಹಿರಿಯ ಮುಖಂಡರಾದ ಯಲ್ಲಮ್ಮ ನಾಯ್ಕರ್‌, ಡಾ| ಲೋಹಿತ್‌ ನಾಯ್ಕರ್‌, ನಾಗರಾಜ ಗುರಿಕಾರ, ದೇವರಾಜ ಕಂಬಳಿ, ಪ್ರಕಾಶ ಉಡಕೇರಿ, ರಾಜಶ್ರೀ ಸಾಲಗಟ್ಟಿ ಸೇರಿದಂತೆ ಹಲವರು ಇದ್ದರು. ಎಸ್‌.ಕೆ. ರಂಗಣ್ಣವರ ಸ್ವಾಗತಿಸಿದರು. ಆರತಿ ದೇವಶಿಖಾಮಣಿ ನಿರೂಪಿಸಿದರು. ಡಾ| ಲೋಹಿತ್‌ ನಾಯ್ಕರ್‌ ವಂದಿಸಿದರು.

ಬಹುಮಾನ ವಿತರಣೆ
ನ.13ರಂದು ನಡೆದ ಜಿಲ್ಲಾಮಟ್ಟದ ಕನಕದಾಸರ ಜಯಂತಿ ಸಮಾರಂಭದಲ್ಲಿ ಜಿಲ್ಲಾಮಟ್ಟದ ಕನಕ ಸಾಹಿತ್ಯ ಲೋಕ ಪ್ರಬಂಧ ರಚನಾ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಾದ ಯರಿಕೊಪ್ಪ ಸರ್ಕಾರಿ ಪ್ರೌಢಶಾಲೆಯ ವನಿತಾ ಶಿ. ಹಿರೇಮಠ, ಹುಬ್ಬಳ್ಳಿ ನೇಕಾರ ನಗರದ ಸರ್ಕಾರಿ ಪ್ರೌಢಶಾಲೆಯ ಜ್ಯೋತಿ ಬಸವರಾಜ ಶಿರೋಳ, ಉಪ್ಪಿನಬೆಟಗೇರಿಯ ಎಸ್‌ಜೆವಿ ಪ್ರೌಢಶಾಲೆಯ ಗಂಗೋತ್ರಿ ವಿರೂಪಾಕ್ಷಪ್ಪ ಯಾವಗಲ್‌, ಕುಂದಗೋಳದ ಸದ್ಗುರು ಶಿವಾನಂದ ಬಾಲಿಕಾ ಪ್ರೌಢಶಾಲೆಯ ಶ್ರೀದೇವಿತಿ. ಹಳೇಮನಿ, ಕಲಘಟಗಿ ಚಳಮಟ್ಟಿ ಸರ್ಕಾರಿ ಪ್ರೌಢಶಾಲೆಯ ಶಿಲ್ಪಾ. ನಿ. ಮೋರೆ ಅವರಿಗೆ ಬಹುಮಾನ ವಿತರಿಸಲಾಯಿತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.