ಸೌರ ವಿದ್ಯುತ್ ಉತ್ಪಾದನೆಗೆ ಮುಂದಾದ ಕ್ಯಾನ್ಸರ್ ಆಸ್ಪತ್ರೆ
Team Udayavani, Dec 7, 2018, 5:09 PM IST
ಹುಬ್ಬಳ್ಳಿ: ಸೌರ ವಿದ್ಯುತ್ ಉತ್ಪಾದನೆಗೆ ಸರಕಾರ ಉತ್ತೇಜನ ನೀಡುತ್ತಿದ್ದು, ಈ ಬಗ್ಗೆ ಜಾಗೃತಿ ಮೂಡುತ್ತಿದೆ. ಜನರು ಆಸಕ್ತಿ ತೋರುತ್ತಿದ್ದಾರೆ. ಹೆಸ್ಕಾಂ ಅವಲಂಬನೆ ಕಡಿಮೆ ಮಾಡಿಕೊಳ್ಳುವ ನಿಟ್ಟಿನಲ್ಲಿ ನವನಗರ ಕ್ಯಾನ್ಸರ್ ಆಸ್ಪತ್ರೆ ಟ್ರಸ್ಟ್ ಕಳೆದ ಎರಡು ತಿಂಗಳಿಂದ ನವೀಕರಿಸಬಹುದಾದ ಇಂಧನ ಸೌರ ವಿದ್ಯುತ್ ಉತ್ಪಾದಿಸುತ್ತಿದೆ.
ಶಸ್ತ್ರ ಚಿಕಿತ್ಸೆ, ಕಿಮೋಥೆರಪಿ ಸೇರಿದಂತೆ ವಿವಿಧ ವೈದ್ಯಕೀಯ ಸೇವೆಗಳಿಗೆ ವಿದ್ಯುತ್ ಅವಶ್ಯಕತೆ ಇರುವುದರಿಂದ ಕ್ಯಾನ್ಸರ್ ಆಸ್ಪತ್ರೆ ಅಧ್ಯಕ್ಷ ವಿಜಯ ಸಂಕೇಶ್ವರ ಅವರ ಸಲಹೆಯನ್ವಯ ಛಾವಣಿ ಮೇಲೆ ಸೌರ ಫಲಕಗಳನ್ನು ಜೋಡಿಸಿ ವಿದ್ಯುತ್ ಉತ್ಪಾದಿಸಿ ಅದನ್ನೇ ಬಳಸಿಕೊಳ್ಳಲಾಗುತ್ತಿದೆ. ಬಾಷ್ ಕಂಪನಿಯ ಸೌರ ಫಲಕಗಳನ್ನು ಅಳವಡಿಸಲಾಗಿದ್ದು, ಒಟ್ಟು 100 ಕಿಲೋ ವ್ಯಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ. ಸೌರ ವಿದ್ಯುತ್ ಬಳಕೆಯಿಂದ ಹೆಸ್ಕಾಂ ವಿದ್ಯುತ್ ಬಿಲ್ನಲ್ಲಿ ಶೇ.60 ಇಳಿಕೆಯಾಗಿದೆ.
ಇಡೀ ಕಟ್ಟಡದ ಛಾವಣಿ ಮೇಲೆ ಸೌರ ಫಲಕಗಳನ್ನು ಕೂಡಿಸಲು ಅನುಕೂಲವಾಗುವಂತೆ ಫ್ಯಾಬ್ರಿಕೇಶನ್ ಮಾಡಲಾಗಿದ್ದು, ಸದ್ಯಕ್ಕೆ 300ಕ್ಕೂ ಅಧಿಕ ಸೋಲಾರ್ ಪ್ಯಾನೆಲ್ಗಳನ್ನು ಜೋಡಿಸಲಾಗಿದೆ. ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ಸೌರ ವಿದ್ಯುತ್ ಘಟಕ ಆರಂಭಿಸಲಾಗಿದೆ. 50 ಕಿಲೋ ವ್ಯಾಟ್ ಸಾಮರ್ಥ್ಯದ ಎರಡು ಇನ್ವರ್ಟರ್ಗಳನ್ನು ಜೋಡಿಸಲಾಗಿದ್ದು, ಸಿಡಿಲಿನಿಂದ ರಕ್ಷಣೆಗೆ ಅರ್ಥಿಂಗ್ ಸ್ಟ್ರಿಪ್ ಅಳವಡಿಸಲಾಗಿದೆ.
ನೆಟ್ ಮೀಟರಿಂಗ್ ಅಳವಡಿಸಿದ್ದರಿಂದ ಉತ್ಪಾದನೆಗೊಂಡ ಹೆಚ್ಚುವರಿ ವಿದ್ಯುತ್ ಹೆಸ್ಕಾಂಗೆ ಹೋಗುತ್ತದೆ. ವರ್ಷಕ್ಕೆ 1.5ಲಕ್ಷ ಯುನಿಟ್ ವಿದ್ಯುತ್ ಉತ್ಪಾದನೆ ಗುರಿ ಹೊಂದಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಛಾವಣಿ ಮೇಲೆಯೂ ಸೌರ ಫಲಕಗಳನ್ನು ಅಳವಡಿಸುವ ಯೋಜನೆಯಿದೆ.
ಆಸ್ಪತ್ರೆ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ| ವಿಜಯ ಸಂಕೇಶ್ವರ ಅವರ ಸಲಹೆಯಂತೆ ಆಸ್ಪತ್ರೆ ಕಟ್ಟಡದ ಛಾವಣಿ ಮೇಲೆ ಸೌರ ಫಲಕ ಅಳವಡಿಸಿ ವಿದ್ಯುತ್ ಉತ್ಪಾದಿಸಲಾಗುತ್ತಿದೆ. ಇದರಿಂದ ಹೆಸ್ಕಾಂ ವಿದ್ಯುತ್ ಬಿಲ್ನಲ್ಲಿ ಶೇ.60 ಇಳಿಕೆಯಾಗಿದೆ. ಹಾಕಿದ ಬಂಡವಾಳ 3-4 ವರ್ಷಗಳಲ್ಲಿ ಮರಳುವ ನಿರೀಕ್ಷೆಯಿದೆ. ಗೋ ಗ್ರೀನ್ ತಂತ್ರಜ್ಞಾನ ಬಗ್ಗೆ ಜನರಲ್ಲಿ ಜಾಗೃತಿ ಮೂಡುತ್ತಿದೆ. ಸೌರ ವಿದ್ಯುತ್ ಬಗ್ಗೆ ಕೇವಲ ಮಾತನಾಡದೇ ತಮ್ಮ ಕಟ್ಟಡಗಳ ಮೇಲೆ ಅಳವಡಿಸಿಕೊಳ್ಳಲು ಮುಂದಾಗಬೇಕು. ಮುಂದಿನ ದಿನಗಳಲ್ಲಿ ಛಾವಣಿ ಮೇಲೆ ಇನ್ನಷ್ಟು ಸೌರ ಫಲಕಗಳನ್ನು ಅಳವಡಿಸಿ ಸಾಮರ್ಥ್ಯ ಹೆಚ್ಚಿಸಲಾಗುವುದು.
ಡಾ| ಮಂಜುಳಾ ಹುಗ್ಗಿ,
ನವನಗರ ಕ್ಯಾನ್ಸರ್ ಆಸ್ಪತ್ರೆ ಆಡಳಿತಾಧಿಕಾರಿ
ಸೌರ ವಿದ್ಯುತ್ ಹಾಗೂ ಪವನ ವಿದ್ಯುತ್ ಸೇರಿದಂತೆ ನವೀಕರಿಸಬಹುದಾದ ಇಂಧನ ಉತ್ಪಾದನೆಯನ್ನು ಹೆಚ್ಚಿಸುವುದು ಇಂದಿನ ಅವಶ್ಯವಾಗಿದೆ. ಈಗಾಗಲೇ ಸರಕಾರಿ ಆಸ್ಪತ್ರೆಗಳ ಛಾವಣಿ ಮೇಲೆ ಸೌರ ವಿದ್ಯುತ್ ಉತ್ಪಾದಿಸುವ ಪ್ರಕ್ರಿಯೆ ಆರಂಭಗೊಂಡಿದೆ. ಖಾಸಗಿ ಆಸ್ಪತ್ರೆಗಳು, ಹಾಸ್ಟೆಲ್ಗಳು, ಕಲ್ಯಾಣ ಮಂಟಪಗಳು, ಚಿತ್ರ ಮಂದಿರಗಳು, ಭವನಗಳು, ಮಾಲ್ಗಳಂಥ ಬೃಹತ್ ಕಟ್ಟಡಗಳ ಮೇಲೂ ಸೌರ ವಿದ್ಯುತ್ ಉತ್ಪಾದನೆ ಆರಂಭಗೊಂಡರೆ ವಿದ್ಯುತ್ ವೆಚ್ಚ ತಗ್ಗಿಸಬಹುದಾಗಿದೆ.
ವಿಶ್ವನಾಥ ಕೋಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ