ಮೈಸೂರು ರೇಷ್ಮೆ ಸೀರೆ ಮಾರಾಟ ಮೇಳಕ್ಕೆ ಚಾಲನೆ
Team Udayavani, Dec 8, 2018, 5:05 PM IST
ಧಾರವಾಡ: ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ (ಕೆಎಸ್ಐಸಿ) ಪಾರಂಪರಿಕ ಉತ್ಪನ್ನವಾದ ಮೈಸೂರ್ ಸಿಲ್ಕ್ ಸೀರೆಗಳಿಗೆ ಹೆಸರುವಾಸಿ ಆಗಿದ್ದು, ಗುಣಮಟ್ಟ ಮತ್ತು ಮೌಲ್ಯಕ್ಕೆ ಖಾತ್ರಿ ಇರುವ ಈ ಉತ್ಪನ್ನಗಳನ್ನು ಸಾರ್ವಜನಿಕರು ಪ್ರೋತ್ಸಾಹಿಸಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.
ಹಳೆಯ ಡಿಎಸ್ಪಿ ಕಚೇರಿ ಎದುರಿನ ಭಾವಸಾರ ಮಂಗಲ ಕಾರ್ಯಾಲಯದಲ್ಲಿ ಆರಂಭವಾದ ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೆಎಸ್ಐಸಿ ಮೈಸೂರು ಸಿಲ್ಕ್ ಸೀರೆಗಳು ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಹೆಚ್ಚಾಗಿ ಮಾರಾಟವಾಗುವ ಮತ್ತು ಬೇಡಿಕೆಯಲ್ಲಿರುವ ರೇಷ್ಮೆ ಸೀರೆಗಳಾಗಿವೆ. ಅದರಲ್ಲೂ ಮಹಿಳೆಯರಿಗೆ ವಿವಾಹ ಮತ್ತು ಹಬ್ಬ ಹರಿದಿನ ಸಂದರ್ಭಗಳಲ್ಲಿ ಬಹು ಅಚ್ಚುಮೆಚ್ಚಿನ ಆಯ್ಕೆಯ ಸೀರೆ ಮೈಸೂರು ಸಿಲ್ಕ್ ಸೀರೆಗಳಾಗಿವೆ ಎಂದರು.
ಸಂಸ್ಥೆಯ ವ್ಯವಸ್ಥಾಪಕ ಭಾನುಪ್ರಕಾಶ ಮಾತನಾಡಿ, ಮೈಸೂರ್ ಸಿಲ್ಕ್ ಸೀರೆಗಳಿಗೆ ಭೌಗೋಳಿಕ ಗುರುತಿನ ನೋಂದಣಿ ಪಡೆದುಕೊಳ್ಳಲಾಗಿದೆ. ಇದು ಸರಕುಗಳ ಭೌಗೋಳಿಕ ಗುರುತಿನ (ನೋಂದಣಿ ಮತ್ತು ಸಂರಕ್ಷಣೆ) ಕಾಯ್ದೆ 1999ರಲ್ಲಿ ಲೋಕಸಭೆಯಲ್ಲಿ ಅನುಮೋದನೆಗೊಂಡಿದೆ. ಈ ನೋಂದಣಿಯ ಪ್ರಕಾರ ಕೆಎಸ್ಐಸಿಯು ಮೈಸೂರ್ ಸಿಲ್ಕ್ನ ಏಕೈಕ ಮಾಲೀಕತ್ವ ಹೊಂದಿದೆ. ಇದಲ್ಲದೆ ಕೆಎಸ್ಐಸಿ ನಿಗಮಕ್ಕೆ 2016-17ನೇ ಆರ್ಥಿಕ ವರ್ಷದಲ್ಲಿ ಕರ್ನಾಟಕ ಸಾರ್ವಜನಿಕ ಉದ್ದಿಮೆಗಳಿಗೆ ಪ್ರದಾನ ಮಾಡಲಾಗುವ ಮುಖ್ಯಮಂತ್ರಿಗಳ ವಾರ್ಷಿಕ ರತ್ನ ಪ್ರಶಸ್ತಿ ಲಭಿಸಿದೆ ಎಂದರು. ಜಿಪಂ ಸಿಇಒ ಡಾ| ಬಿ.ಸಿ. ಸತೀಶ ಇದ್ದರು. ಡಿ. 11ರ ವರೆಗೆ ಪ್ರತಿದಿನ ಬೆಳಗ್ಗೆ 10ರಿಂದ ರಾತ್ರಿ 8 ಗಂಟೆವರೆಗೆ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
ರಾಜ್ಯದಲ್ಲಿ ಎನ್ಕೌಂಟರ್ ಕಾನೂನು ಜಾರಿ ಅವಶ್ಯ: ಸಂತೋಷ್ ಲಾಡ್
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ