ಎಪಿಎಂಸಿ ಜಾಗದಲ್ಲೇ ತಾಲೂಕು ಕಚೇರಿ ನಿರ್ಮಿಸಿ


Team Udayavani, Jan 13, 2019, 11:48 AM IST

13-january-23.jpg

ಅಳ್ನಾವರ: ಹೊಸ ತಾಲೂಕು ಕಚೇರಿಯನ್ನು ಇಲ್ಲಿನ ಎಪಿಎಂಸಿ ಆವರಣದಲ್ಲಿ ನಿರ್ಮಿಸಬೇಕು. ಈ ಜಾಗೆಯನ್ನು ಹಂಚಿಕೆ ಮಾಡಲು ಹೊರಟಿರುವ ಎಪಿಎಂಸಿ ಕ್ರಮ ತಡೆಯಬೇಕು ಎಂದು ಆಗ್ರಹಿಸಿ ಸ್ಥಳೀಯ ಮುಖಂಡರ ನಿಯೋಗ ಧಾರವಾಡಕ್ಕೆ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.

ಜಿಲ್ಲಾಧಿಕಾರಿಗಳು ಈಚೆಗೆ ಪಟ್ಟಣಕ್ಕೆ ಆಗಮಿಸಿ ಎಪಿಎಂಸಿ ಜಾಗೆಯನ್ನು ಪರಿಶೀಲಿಸಿದ ನಂತರ ಈ ಜಾಗೆ ಸೂಕ್ತ ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಸರ್ವೇ ಕೂಡಾ ನಡೆದಿದೆ. ಇದಾದ ನಂತರ ಧಾರವಾಡ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯವರು ಇದೇ ಜಾಗೆಯನ್ನು ವ್ಯಾಪಾರಸ್ಥರಿಗೆ ಹಂಚಿಕೆ ಮಾಡಲು ಹೊರಟಿರುವ ಕ್ರಮ ಖಂಡನೀಯ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಎಪಿಎಂಸಿ ಆವರಣ ಸುಮಾರು 16 ಎಕರೆ ವಿಶಾಲವಾದ ಜಾಗೆ ಹೊಂದಿದೆ. ಇದು ಉಪ ಮಾರುಕಟ್ಟೆ ಪ್ರಾಂಗಣವಾದ್ದರಿಂದ ಹೆಚ್ಚಿನ ವಹಿವಾಟು ಇಲ್ಲದೆ ಸಾಕಷ್ಟು ಜಾಗೆ ನಿರುಪಯುಕ್ತವಾಗಿದೆ. ಅದರಲ್ಲಿ ತಾಲೂಕು ಆಡಳಿತ ಭವನಕ್ಕೆ ಕೇವಲ 3.12 ಏಕರೆ ಜಾಗೆಯನ್ನು ಮಾತ್ರ ಗುರುತಿಸಲಾಗಿದೆ. ಕಚೇರಿ ಕೆಲಸಕ್ಕೆ ಆಗಮಿಸುವ ಜನರಿಗೆ ಈ ಜಾಗೆ ಅನುಕೂಲಕರವಾಗಿದೆ. ಇಲ್ಲಿಯೇ ತಾಲೂಕು ಕಚೇರಿ ನಿರ್ಮಿಸಬೇಕು ಎಂದು ವಿನಂತಿಸಲಾಗಿದೆ.

ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ ಅವರು ನಿಯೋಗದ ಮನವಿ ಸ್ವೀಕರಿಸಿ ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ ಎಂದು ಮುಖಂಡರು ಪತ್ರಿಕೆಗೆ ತಿಳಿಸಿದ್ದಾರೆ.

ಸಭೆ: ಈ ಕುರಿತು ಚರ್ಚಿಸಲು ಬೆಳಗ್ಗೆ ಮುಖಂಡರ ಸಭೆಯನ್ನು ಸ್ಥಳೀಯ ಅಂಜುಮನ್‌ ಏ ಇಸ್ಲಾಂ ಸಂಸ್ಥೆಯ ಶಾದಿ ಮಹಲ್‌ದಲ್ಲಿ ಕರೆಯಲಾಗಿತ್ತು. ಹಲವು ಮುಖಂಡರು ಮಾತನಾಡಿ, ನಾಲ್ಕು ದಶಕಗಳ ಹೋರಾಟದ ಫಲವಾಗಿ ದೊರೆತ ತಾಲೂಕು ಕೇಂದ್ರ ಜನರಿಗೆ ಅನುಕೂಲವಾದ ಸ್ಥಳದಲ್ಲಿ ಆಗಲಿ ಎಂದರು. ಈ ಕುರಿತು ಪಪಂ ಸಾಮಾನ್ಯ ಸಭೆಯಲ್ಲಿ ಸರ್ವ ಸಮ್ಮತದ ಠರಾವು ಪಾಸ್‌ ಮಾಡಿ ಜಿಲ್ಲಾಡಳಿತಕ್ಕೆ ಕಳುಹಿಸಲಾಗಿದೆ ಎಂದು ಸಭೆಗೆ ತಿಳಿಸಲಾಯಿತು. ಜಿಲ್ಲಾಧಿಕಾರಿಯನ್ನು ಖುದ್ದಾಗಿ ಭೇಟಿ ಮಾಡಿ ಮನವಿ ಸಲ್ಲಿಸಲು ನಿರ್ಣಯಿಸಲಾಗಿತ್ತು.

ಎಂ.ಸಿ. ಹಿರೇಮಠ, ಫಹೀಮ್‌ ಕಾಂಟ್ರಾಕ್ಟರ, ಶಿವಾನಂದ ಹೊಸಕೇರಿ, ಎಸ್‌.ಬಿ. ಪಾಟೀಲ, ನಾರಾಯಣ ಗಡಕರ, ಕೃಷ್ಣ ಅಷ್ಟೇಕರ, ಬಸವರಾಜ ತೇಗೂರ, ಛಗನಲಾಲ ಪಟೇಲ, ಡಾ| ಬಸವರಾಜ ಮೂಡಬಾಗಿಲ್‌, ನದೀಮ ಕಾಂಟ್ರಾಕ್ಟರ್‌, ಅಮೂಲ ಗುಂಜೀಕರ, ನಾರಾಯಣ ಮೋರೆ, ಅನ್ವರಖಾನ ಬಾಗೇವಾಡಿ, ಕಿರಣ ಗಡಕರ, ಜೈಲಾನಿ ಸುದರ್ಜಿ, ಮಂಜುಳಾ ಮೇದಾರ, ನಾಗರತ್ನಾ ವಾಘಮೋಡೆ, ರಾಜೇಶ ಬೈಕೇರಿಕರ, ವೀರೇಶ ಲಿಂಗನಮಠ, ನಾಗರತ್ನಾ ಜಮಖಂಡಿ, ಅನ್ನಪೂರ್ಣಾ ಹಿರೇಮಠ, ಸಂತೋಷ ಬಡಿಗೇರ, ಸುವರ್ಣಾ ಕಡಕೋಳ, ಜಾವಿದ್‌ ತೊಲಗಿ, ಪ್ರವೀಣ ಪವಾರ, ಬಾಳು ಜಾಧವ, ಎಚ್.ಒ ಪಾಲಕರ, ವಿನಾಯಕ ಕುರುಬರ, ಪರಶುರಾಮ ಬೇಕನೆಕರ, ಪರಮೇಶ್ವರ ತೇಗೂರ, ನಬಿಸಾಬ ಮುಜಾವರ, ಮುಬಾರಕ ಅವರಾದಿ, ಹನುಮಂತ ಶಿಂಧೆ, ಇನಾಯಿತುಲ್ಲಾ ತೊಲಗಿ, ಮಹ್ಮದ್‌ಶಫೀಕ್‌ ಖತೀಬ ಇದ್ದರು.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.