ಸೌಲಭ್ಯಕ್ಕೆ ಆಗ್ರಹಿಸಿ ನಿವೃತ್ತ ಸಾರಿಗೆ ನೌಕರರ ಪ್ರತಿಭಟನೆ
Team Udayavani, Jan 25, 2019, 11:48 AM IST
ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿವೃತ್ತ ಹಾಗೂ ಹಾಲಿ ನೌಕರರಿಗೆ ವಿವಿಧ ಸೌಲಭ್ಯ ನೀಡುವಲ್ಲಿ ಸರಕಾರ ಹಾಗೂ ಸಂಸ್ಥೆ ವಿಫಲವಾಗಿದೆ ಎಂದು ಆರೋಪಿಸಿ ನಿವೃತ್ತ ನೌಕರರ ಸಂಘದಿಂದ ಇಲ್ಲಿನ ಕೇಂದ್ರ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ಗುರುವಾರ ಇಲ್ಲಿನ ಕೇಂದ್ರ ಕಚೇರಿಗೆ ಮುತ್ತಿಗೆ ಹಾಕಿದ ನಿವೃತ್ತ ನೌಕರರು, 2018 ರಿಂದ ನಿವೃತ್ತಿಯಾದ ನೌಕರರಿಗೆ ಉಪದಾನ, ರಜೆ ನಗದೀಕರಣ ನೀಡಿಲ್ಲ. ಹಾಲಿ ನೌಕರರಿಗೆ ಸಮಯಕ್ಕೆ ವೇತನ ಆಗುತ್ತಿಲ್ಲ. ಈ ನೌಕರರಿಗೆ ನೀಡಬೇಕಾದ ರಜೆ ನಗದೀಕರಣ, ಪ್ರೊಬೇಷನರಿ ಹಿಂಬಾಕಿ, ವೇತನ ಪರಿಷ್ಕರಣೆ ಬಾಕಿ, ಓಟಿ ಸೇರಿದಂತೆ ಇತರೆ ಯಾವುದೇ ಸೌಲಭ್ಯಗಳನ್ನು ನೀಡುತ್ತಿಲ್ಲ. ಸಂಸ್ಥೆ ಆರ್ಥಿಕ ನಷ್ಟದಲ್ಲಿದೆ ಎನ್ನುವ ಕಾರಣಕ್ಕೆ ಕಾರ್ಮಿಕರನ್ನು ಸೌಲಭ್ಯ ವಂಚಿತರನ್ನಾಗಿ ಮಾಡುತ್ತಿರುವುದು ಆಡಳಿತ ವರ್ಗ ಹಾಗೂ ಸರಕಾರದಿಂದ ನಡೆಯುತ್ತಿರುವ ಕಾರ್ಮಿಕ ದೌರ್ಜನ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಾಕರಸಾಸಂ ನೌಕರರ ಹಾಗೂ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಚ್.ಜಿ. ಕೊಪ್ಪದ ಮಾತನಾಡಿ, ಇತರೆ ಸಾರಿಗೆ ನಿಗಮಗಳ ನೌಕರರು ಸಕಾಲಕ್ಕೆ ಸೌಲಭ್ಯ ಸೇರಿದಂತೆ ವೇತನ ಪಡೆಯುತ್ತಿದ್ದಾರೆ. ಆದರೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಮಾತ್ರ ನೌಕರರನ್ನು ಶೋಷಣೆ ಮಾಡಲಾಗುತ್ತಿದೆ. ಸಂಸ್ಥೆಯ ಆರ್ಥಿಕ ಅವನತಿಗೆ ಸರಕಾರ ನಿರ್ಲಕ್ಷ್ಯವೇ ಕಾರಣವಾಗಿದೆ. ಸಂಸ್ಥೆ ಉಳಿಸುವ ನಿಟ್ಟಿನಲ್ಲಿ 2019-20ನೇ ಸಾಲಿಗೆ ವಿದ್ಯಾರ್ಥಿಗಳ ರಿಯಾಯಿತಿ ಪಾಸ್ ವಿತರಣೆ, ಸಿ ಶೆಡ್ಯೂಲ್ಗಳನ್ನು ಸ್ಥಗಿತಗೊಳಿಸುವ ತೀರ್ಮಾನ ಕೈಗೊಂಡು ಸರಕಾರಕ್ಕೆ ಎಚ್ಚರಿಕೆ ರವಾನಿಸಬೇಕು ಎಂದು ಒತ್ತಾಯಿಸಿದರು.
ಕೂಡಲೇ ಬಾಕಿಗಳನ್ನು ಪಾವತಿ ಮಾಡಬೇಕು. ದುಡಿಯುತ್ತಿರುವ ಕಾರ್ಮಿಕರಿಗೆ ಸರಿಯಾದ ಸಮಯಕ್ಕೆ ವೇತನ ಬಟವಡೆ ಮಾಡಬೇಕು. ಬಾಕಿ ಉಳಿಸಿಕೊಂಡಿರುವುದಕ್ಕೆ ಬಡ್ಡಿ ಸಮೇತ ಪಾವತಿ ಮಾಡಬೇಕು. ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.
ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಕೇಂದ್ರ ಕಚೇರಿಯಲ್ಲಿ ಇಲ್ಲದ್ದರಿಂದ ಮುಖ್ಯ ಲೆಕ್ಕಾಧಿಕಾರಿ ಶಾಂತಪ್ಪ ಗೋಟಖಂಡಕಿ ಹಾಗೂ ಮುಖ್ಯ ಕಾರ್ಮಿಕ ಕಲ್ಯಾಣಾಧಿಕಾರಿ ಎಸ್.ಕೆ. ಹಳ್ಳಿ ಮನವಿ ಸ್ವೀಕರಿಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಬಿ. ತಹಶೀಲ್ದಾರ, ಕಾರ್ಮಿಕ ಮುಖಂಡರಾದ ಆರ್.ಎಫ್. ಕವಳಿಕಾಯಿ, ಆರ್.ಸಿ. ಮಠದ, ಎ.ಎಚ್. ಜವಳಿ, ವಿ.ಎಸ್. ಮಜ್ಜಿಗುಡ್ಡ, ಬಿ.ಎಸ್. ದೋತ್ರದ, ಅರುಣ ಭೊಸ್ಲೆ, ಆರ್.ಡಿ. ಎಲಿಸೂರ, ಐ.ವಿ. ಭದ್ರಾಪುರ, ಎಸ್.ಎಸ್. ವಿರಕ್ತಿಮಠ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್