ಬ್ರಿಟಿಷರ ಕಾನೂನು ತ್ಯಜಿಸಿ ಸಂವಿಧಾನ ರಚಿಸಿದ ದಿನ


Team Udayavani, Jan 27, 2019, 11:21 AM IST

chamaraj.jpg

ಚಾಮರಾಜನಗರ: ರಾಜ ಮಹಾರಾಜರು ಹಾಗೂ ಪಾಳೇಯಗಾರರ ಸಂಸ್ಥಾನಗಳಲ್ಲಿ ಹರಿದು ಹಂಚಿ ಹೋಗಿದ್ದ ಭಾರತವನ್ನು ಒಗ್ಗೂಡಿಸಿ ಒಕ್ಕೂಟ ರಾಷ್ಟ್ರವ ನ್ನಾಗಿ ಮಾಡಿದ ಗಣರಾಜ್ಯೋತ್ಸವ ದಿನ ಭಾರತದ ಇತಿಹಾಸದಲ್ಲಿ ಮಹತ್ವದ ದಿನವಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಹೇಳಿದರು.

ನಗರದ ಅಂಬೇಡ್ಕರ್‌ ಕ್ರೀಡಾಂಗಣದಲ್ಲಿ ಜಿಲ್ಲಾಡ ಳಿತದಿಂದ ಆಯೋಜಿಸಿದ್ದ 70ನೇ ಗಣರಾಜೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಬ್ರಿಟಿಷರ ವಿರುದ್ಧ 90 ವರ್ಷಗಳು ಹೋರಾಟ ನಡೆಸಿದ ಫ‌ಲವಾಗಿ 1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಲಭಿಸಿತು. 26 ಜನವರಿ 1950ರಲ್ಲಿ ಬ್ರಿಟಿಷರ ಕಾನೂನು ಗಳನ್ನು ತ್ಯಜಿಸಿ ಅಂಬೇಡ್ಕರ್‌ ರಚಿಸಿದ ಸಂವಿಧಾನವನ್ನು ಅಳವಡಿಸಿಕೊಂಡ ದಿನ. ನಮ್ಮ ಸಂವಿಧಾನ ಸಮಾನತೆ, ಸೋದರತ್ವ, ಸಾಮಾಜಿಕ ನ್ಯಾಯದ ಮೇಲೆ ರಚನೆ ಯಾಗಿದೆ. 700ಕ್ಕೂ ಹೆಚ್ಚು ರಾಜರ ಆಳ್ವಿಕೆಯಲ್ಲಿ ಹಂಚಿ ಹೋಗಿದ್ದ 6 ಸಾವಿರಕ್ಕೂ ಹೆಚ್ಚು ಭಾಷಾ ವೈವಿಧ್ಯತೆ ಹೊಂದಿದ್ದ ದೇಶವನ್ನು ಆಡಳಿತಾತ್ಮಕವಾಗಿ ಒಗ್ಗೂಡಿ ಸುವ ಕಾರ್ಯ ಸುಲಭವಾಗಿರಲಿಲ್ಲ. ವೈವಿಧ್ಯತೆ ನಡುವೆ ಏಕತೆ ಸ್ಥಾಪಿಸಿ ಎಲ್ಲರಿಗೂ ಒಂದೇ ತರಹದ ಹಕ್ಕು ಮತ್ತು ಕರ್ತವ್ಯಗಳನ್ನು ಪ್ರತಿಪಾದಿಸುವ ಸಂವಿಧಾನ ‌ವನ್ನು ಅಂಬೇಡ್ಕರ್‌ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಾಲಮನ್ನಾ: ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಾಧನೆಗಳನ್ನು ತಿಳಿಸಿದ ಅವರು, ಸರ್ಕಾರದ ಮಹತ್ತರ ಯೋಜನೆಯಾದ ರೈತರ ಬೆಳೆ ಸಾಲ ಮನ್ನಾ ಯೋಜನೆಯಲ್ಲಿ ಸಹಕಾರ ಸಂಘಗಳಿಗೆ 191 ಕೋಟಿ ಮತ್ತು ಬ್ಯಾಂಕ್‌ಗಳಿಗೆ 131 ಕೋಟಿ ರೂ. ಬಿಡುಗಡೆಯಾಗ್ದಿದು, ಈಗಾಗಲೇ ಶೇಕಡಾ 90ರಷ್ಟು ಡೇಟಾ ಎಂಟ್ರಿ ಮತ್ತು ಪರಿಶೀಲನಾ ಕಾರ್ಯ ಪೂರ್ಣಗೊಂಡಿದೆ ಎಂದರು.

ಕೃಷಿ ಭಾಗ್ಯ ಯೋಜನೆ, ಕೃಷಿ ಯಾಂತ್ರೀಕರಣ, ಲಘು ನೀರಾವರಿ, ಮಣ್ಣು ಆರೋಗ್ಯ ಅಭಿಯಾನ ಮುಂತಾದ ಯೋಜನೆಗಳಡಿ ರೈತರಿಗೆ ಕಾಲಕಾಲಕ್ಕೆ ಉಪಯೋಗವಾಗುವಂತಹ 376.49 ಲಕ್ಷ ರೂ.ವೆಚ್ಚದಲ್ಲಿ 486 ಕೃಷಿ ಹೊಂಡಗಳ ನಿರ್ಮಾಣ, 229.38 ಲಕ್ಷ ರೂ.ವೆಚ್ಚದಲ್ಲಿ 2889 ವಿವಿಧ ಕೃಷಿ ಯಂತ್ರೋಪಕರಣಗಳ ವಿತರಣೆ, 79.76 ಲಕ್ಷ ರೂ.ಮೌಲ್ಯದ 305 ರೈತರಿಗೆ ಲಘು ನೀರಾವರಿ ಉಪಕರಣ ವಿತರಣೆ ಮಾಡಲಾಗಿದೆ ಎಂದರು.

ಉದ್ಯೋಗ ಖಾತ್ರಿ: ಉದ್ಯೋಗ ಖಾತ್ರಿಯಡಿ ಜಿಲ್ಲೆಗೆ 23.53 ಲಕ್ಷ ಮಾನವ ದಿನಗಳ ಸೃಜನೆಯ ಗುರಿಯನ್ನು ನಿಗದಿಪಡಿಸಲಾಗಿದೆ. ಈ ಪೈಕಿ 16.86 ಲಕ್ಷ ಮಾನವ ದಿನ ಸೃಜಿಸಲಾಗಿದ್ದು, 64.12 ಕೋಟಿ ರೂ.ವ್ಯಯಿಸಲಾಗಿದೆ ಎಂದು ತಿಳಿಸಿದರು.

ಮಾತೃ ಪೂರ್ಣ: ಮಾತೃ ಪೂರ್ಣ ಯೋಜನೆಯಡಿ 5,009 ಗರ್ಭಿಣಿಯರು ಮತ್ತು 6,114 ಬಾಣಂತಿ ಯರು ಹಾಗೂ 1,421 ಅಂಗನವಾಡಿ ಕಾರ್ಯಕರ್ತೆ ಯರು ಮತ್ತು 1,371 ಅಂಗನವಾಡಿ ಸಹಾಯಕಿ ಯರು ಈ ಯೋಜನೆಯ ಪ್ರಯೋಜನ ಪಡೆಯು ತ್ತಿದ್ದಾರೆ. ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ ಯಡಿ ಗರ್ಭಿಣಿಯರಿಗೆ ಆನ್‌ಲೈನ್‌ ಅರ್ಜಿಗಳ ಮೂಲಕ 5 ಸಾವಿರ ಸಹಾಯಧನ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ 8,454 ಫ‌ಲಾನುಭವಿಗಳು ಆರ್ಥಿಕ ಪ್ರಯೋಜನ ಪಡೆದಿದ್ದಾರೆ. ಅಲ್ಲದೇ ಮುಖ್ಯ ಮಂತ್ರಿಗಳ ಮಹತ್ವಾಕಾಂಕ್ಷಿ ಯೋಜನೆಯಾದ ಮಾತೃಶ್ರೀ ಯೋಜನೆಯಡಿ ಆದ್ಯತಾ ಕುಟುಂಬದ ಫ‌ಲಾನುಭವಿಗಳಿಗೆ 6 ಸಾವಿರ ಸಹಾಯಧನ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಸಮಾರಂಭದಲ್ಲಿ ಸಂಸದ ಆರ್‌. ಧ್ರುವ ನಾರಾಯಣ, ಜಿಪಂ ಅಧ್ಯಕ್ಷೆ ಶಿವಮ್ಮ, ಉಪಾಧ್ಯಕ್ಷ ಜೆ. ಯೋಗೀಶ್‌, ತಾಪಂ ಅಧ್ಯಕ್ಷೆ ದೊಡ್ಡಮ್ಮ, ಉಪಾಧ್ಯಕ್ಷ ಬಸವಣ್ಣ, ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಎಸ್ಪಿ ಧರ್ಮೇಂದರ್‌ ಕುಮಾರ್‌ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆನಂದ್‌, ಜಿಪಂ ಸಿಇಒ ಡಾ. ಕೆ. ಹರೀಶ್‌ ಕುಮಾರ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.