ಜಲಮೂಲ ರಕ್ಷಣೆ: ಯುವ ಬ್ರಿಗೇಡ್ ಕಾರ್ಯಕ್ಕೆ ಮೆಚ್ಚುಗೆ
Team Udayavani, Jan 28, 2019, 10:50 AM IST
ಹುಬ್ಬಳ್ಳಿ: ನೀರಿನ ಮಟ್ಟ ಕುಸಿಯುತ್ತಿರುವ ಇಂತಹ ಸಮಯದಲ್ಲಿ, ಅಂತರ್ಜಲ ಮೇಲೆತ್ತುವ ಕಾರ್ಯದಲ್ಲಿ ಯುವ ಬ್ರಿಗೇಡ್ ತಂಡ ಹಳೇ ಹುಬ್ಬಳ್ಳಿ ಕಪಿಲಾ ಬಾವಿ ಹೂಳೆತ್ತುವ ಮೂಲಕ ಮಾಡಿ ತೋರಿಸಿರುವು ದು ಹೆಮ್ಮೆಯ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.
ಹು-ಧಾ ಮಹಾನಗರ ಪಾಲಿಕೆ ವಾರ್ಡ್ 41 ರಲ್ಲಿ ಬರುವ ಶ್ರೀನಗರ ಕಪಿಲಾ ಬಾವಿ ದೀಪೋತ್ಸವ ಹಾಗೂ ಉದ್ಯಾನವನಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಕಳೆದ ಹಲವು ದಿನಗಳಿಂದ ಶ್ರೀನಗರದಲ್ಲಿರುವ ಕಪಿಲಾ ಬಾವಿಗೆ ಪುನರ್ ಜೀವ ನೀಡಬೇಕೆಂದು ಯುವ ಬ್ರಿಗೇಡ್ ತಂಡ ಅತ್ಯುತ್ತಮ ಕಾರ್ಯ ಮಾಡಿದೆ. ಒಬ್ಬರಲ್ಲ, ಇಬ್ಬರಲ್ಲ ನೂರಾರು ಜನರು ಸ್ವಪ್ರೇರಣೆಯಿಂದ ಆಗಮಿಸಿ ಹಾಳಾಗಿ ಹೋಗಿದ್ದ ಕಪಿಲಾ ಬಾವಿ ಮರು ಜೀವ ನೀಡಿದ್ದಾರೆ. ಇದಕ್ಕೆ ಪ್ರೇರಣೆ ಎನ್ನುವಂತೆ ಸ್ಥಳೀಯರು ಕೂಡಾ ಸಾಥ್ ನೀಡುವ ಮೂಲಕ ನೂರಾರು ವರ್ಷಗಳ ಹಳೇಯದಾಗಿದ್ದ ಬಾವಿಗೆ ಹೊಸ ಸ್ಪರ್ಶ ನೀಡಿದ್ದು, ಅವರ ಕಾರ್ಯ ಮೆಚ್ಚುವಂತಹದ್ದು ಎಂದು ಶೆಟ್ಟರು ಮೆಚ್ಚುಗೆ ವ್ಯಕ್ತಪಡಿಸಿದರು.
ಕಪಿಲಾ ಬಾವಿಯ ಪಕ್ಕದಲ್ಲಿರುವ ಜಾಗದಲ್ಲಿ ಉತ್ತಮ ಉದ್ಯಾನವನ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಲಾಗಿದ್ದು, ಅದಕ್ಕಾಗಿ ಮಹಾನಗರ ಪಾಲಿಕೆಯಿಂದ 20 ಲಕ್ಷ ರೂ. ಅನುದಾನ ಹಾಗೂ ಸಂಸದ ಪ್ರಹ್ಲಾದ ಜೋಶಿ ಅವರ ಇಂಧನ ಕಂಪನಿಗಳಿಂದ 19 ಲಕ್ಷ ರೂ.ಗಳ ಅನುದಾನ ನೀಡುವ ಭರವಸೆ ನೀಡಿದ್ದು, ಒಟ್ಟು ಸುಮಾರು 40 ಲಕ್ಷ ರೂ.ಗಳಲ್ಲಿ ಶ್ರೀನಗರದಲ್ಲಿ ಉತ್ತಮ ಉದ್ಯಾನವನ ನಿರ್ಮಿಸೋಣ ಎಂದರು.
ಯುವ ಬ್ರಿಗೇಡ್ ಮುಖಂಡ ಸುಭಾಸಸಿಂಗ್ ಜಮಾದಾರ ಮಾತನಾಡಿ, ಕಪಿಲಾ ಬಾವಿ ಸ್ವಚ್ಛತೆಯಲ್ಲಿ ಯಶಸ್ವಿಯಾಗಿದ್ದೇವೆ. ನಗರದ ವಿವಿಧ ಪ್ರದೇಶಗಳಲ್ಲಿ ಇಂತಹ ಕಾರ್ಯದ ಯೋಜನೆ ಇದ್ದು, ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.
ಪಾಲಿಕೆ ಸದಸ್ಯ ಲಕ್ಷ್ಮಣ ಗಂಡಗಾಳೇಕರ, ಬಡಾವಣೆಯ ಅಧ್ಯಕ್ಷ ರಂಜನ್ ಅಣ್ವೇಕರ ಹಾಗೂ ಇನ್ನಿತರರು ಮಾತನಾಡಿದರು. ವಿಠ್ಠಲ ಶೆಟ್ಟಿ, ಹೆಗಡೆ ಸೇರಿದಂತೆ ನೂರಾರು ಮಹಿಳೆಯರು ಇದ್ದರು. ಕೊನೆಯಲ್ಲಿ ಕಪಿಲಾ ಬಾವಿ ಸುತ್ತಲೂ ದೀಪ ಹಚ್ಚುವ ಮೂಲಕ ದೀಪೋತ್ಸವ ಆಚರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
MUST WATCH
ಹೊಸ ಸೇರ್ಪಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?