ಸ್ಮಾರ್ಟ್‌ಸಿಟಿಗೆ ತಕ್ಕಂತೆ ಅವಳಿನಗರ ವಿಭಿನ್ನ ಅಭಿವೃದ್ಧಿ ಅಗತ್ಯ


Team Udayavani, Jan 31, 2019, 10:38 AM IST

31-january-24.jpg

ಹುಬ್ಬಳ್ಳಿ: ಅವಳಿನಗರವು ಸ್ಮಾರ್ಟ್‌ ಸಿಟಿ ಆಗುತ್ತಿದ್ದು, ಅದಕ್ಕೆ ತಕ್ಕಂತೆ ವಿಭಿನ್ನವಾಗಿ ಅಭಿವೃದ್ಧಿ ಹೊಂದಬೇಕಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ಹೇಳಿದರು. ಮಹಾತ್ಮಾ ಗಾಂಧಿ ಉದ್ಯಾನವನ ಆವರಣದಲ್ಲಿ ಹು-ಧಾ ಮಹಾನಗರ ಪಾಲಿಕೆ, ಕುಂಚಬ್ರಹ್ಮ ಡಾ| ಎಂ.ವಿ. ಮಿಣಜಗಿ ಆರ್ಟ್‌ ಗ್ಯಾಲರಿ ಸಮಿತಿ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಡಾ| ಎಂ.ವಿ. ಮಿಣಜಗಿ ಅವರ 118ನೇ ಜನ್ಮದಿನೋತ್ಸವ ಅಂಗವಾಗಿ ಡಾ| ಎಂ.ವಿ. ಮಿಣಜಗಿ ಆರ್ಟ್‌ ಗ್ಯಾಲರಿ ಪುನಾರಂಭ ಹಾಗೂ ಚಿತ್ರಕಲಾ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

ಹು-ಧಾ ಅಭಿವೃದ್ಧಿ ಹೊಂದುತ್ತಿದೆ. ದೇಶದ ವಿವಿಧ ಪ್ರದೇಶಗಳಿಂದ ಹಾಗೂ ವಿದೇಶಗಳಿಂದ ಆಗಮಿಸುವವರ ಸಂಖ್ಯೆಯು ಹೆಚ್ಚುತ್ತಿದೆ. ಕಲಾಸಕ್ತರಿಗೆ ವೇದಿಕೆ ಕಲ್ಪಿಸಲು ಹಾಗೂ ನಗರವು ಸ್ಮಾರ್ಟ್‌ ಆಗುತ್ತಿರುವುದಕ್ಕೆ ತಕ್ಕಂತೆ ಆರ್ಟ್‌ ಗ್ಯಾಲರಿ ಅಭಿವೃದ್ಧಿ ಪಡಿಸಬೇಕಿದೆ. ಇದಕ್ಕೆ ಅವಶ್ಯವಾದ ಎಲ್ಲ ಕ್ರಮಗಳನ್ನು ಕೈಗೊಂಡರೆ ಸಹಕಾರ ನೀಡಲಾಗುವುದು. ಆರ್ಟ್‌ ಗ್ಯಾಲರಿ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಶೀಘ್ರವೇ ಕಲಾವಿದರ, ಕಲಾಸಕ್ತರ ಸಭೆ ಕರೆದು ಸಲಹೆ-ಸೂಚನೆ ಪಡೆಯಲಾಗುವುದು ಎಂದರು.

ಮಹಾಪೌರ ಸುಧೀರ ಸರಾಫ ಮಾತನಾಡಿ, ಸ್ಮಾರ್ಟ್‌ ಸಿಟಿ ಯೋಜನೆಯಡಿ ಸದ್ಯ 13.70 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಅದರಲ್ಲಿ ಆರ್ಟ್‌ ಗ್ಯಾಲರಿ ಸಹ ಅಭಿವೃದ್ಧಿ ಪಡಿಸಲಾಗುವುದು. ಇಲ್ಲಿನ ಕಲಾವಿದರಿಗೆ ಅವಶ್ಯವಾದ ಎಲ್ಲ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಿದರು.

ಡಾ| ಎಂ.ವಿ. ಮಿಣಜಗಿ ಆರ್ಟ್‌ ಗ್ಯಾಲರಿ ಸಮಿತಿ ಉಪಾಧ್ಯಕ್ಷ ಎಂ.ಜೆ. ಬಂಗ್ಲೇವಾಲೆ ಪ್ರಾಸ್ತಾವಿಕ ಮಾತನಾಡಿ, ಮಹಾತ್ಮಾಗಾಂಧಿ ಉದ್ಯಾನವನ ಪ್ರವೇಶದ್ವಾರ ಬಲಭಾಗ ಬಳಿಯ ಜಾಗವು ಖುಲ್ಲಾ ಇದ್ದು, ಅಲ್ಲಿ ಬೃಹತ್‌ ಆರ್ಟ್‌ ಗ್ಯಾಲರಿ ನಿರ್ಮಿಸಿದರೆ ಕಲಾವಿದರು ಈ ಭಾಗದ ಸಂಸ್ಕೃತಿ, ಕಲೆ ಪ್ರದರ್ಶಿಸಲು ಅನುಕೂಲವಾಗುತ್ತದೆ. ನಗರಕ್ಕೆ ಇನ್ನಷ್ಟು ಮೆರಗು ಬರುತ್ತದೆ ಎಂದರು.

ಜಿಪಂ ಸಿಇಒ ಡಾ| ಬಿ.ಸಿ. ಸತೀಶ, ರಾಘವೇಂದ್ರ ರಾಮದುರ್ಗ, ಜಗದೀಶ ಗದಗಿನ, ಜಿ.ಬಿ. ಘಾಟಗೆ, ಮಂಜುನಾಥ ಭಂಡಾರೆ, ರಾಘವೇಂದ್ರ ಪತ್ತಾರ, ಮಂಜುನಾಥ ಕರಿಗಾರ ಮೊದಲಾದವರಿದ್ದರು. ಜಿ.ಆರ್‌. ಮಲ್ಲಾಪೂರ ಸ್ವಾಗತಿಸಿದರು. ಶಂಕರ ಕಡಕುಂಟ್ಲ ನಿರೂಪಿಸಿದರು. ಕಲಾವಿದರು ರಚಿಸಿದ 40ಕ್ಕೂ ಅಧಿಕ ಕಲಾಕೃತಿಗಳು ಪ್ರದರ್ಶನಗೊಂಡವು.

ಟಾಪ್ ನ್ಯೂಸ್

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.