ಜಗಕ್ಕೆ ಬೆಳಕು ನೀಡಿದ್ದು 12ನೇ ಶತಮಾನ: ತರಳಬಾಳು ಶ್ರೀ


Team Udayavani, Feb 11, 2019, 11:09 AM IST

11-february-23.jpg

ಹುಬ್ಬಳ್ಳಿ: ಹನ್ನೆರಡನೇ ಶತಮಾನ ಜಗತ್ತಿಗೆ ಬೆಳಕು ನೀಡಿದ ಶತಮಾನ. ಬಸವಾದಿ ಶರಣರು ಸಮಾಜದಲ್ಲಿರುವ ಅಜ್ಞಾನ, ಕಂದಾಚಾರ, ಅಸಮಾನತೆ, ಜಾತಿಯತೆ ಕೊಳೆ ತೊಳೆದು ಸ್ವಚ್ಛತೆ ಮೂಡಿಸುವ ಕಾರ್ಯ ಮಾಡಿದರು ಎಂದು ಸಾಣೆಹಳ್ಳಿ ಶ್ರೀ ತರಳಬಾಳು ಜಗದ್ಗುರು ಡಾ| ಪಂಡಿತಾರಾಧ್ಯ ಶಿವಾಚಾರ್ಯರು ಹೇಳಿದರು.

ನ್ಯೂ ಕಾಟನ್‌ ಮಾರ್ಕೆಟ್‌ನ ಸಾಂಸ್ಕೃತಿಕ ಭವನದಲ್ಲಿ ಸಾಣೆಹಳ್ಳಿ ಶಿವಸಂಚಾರ ಕಲಾಸಂಘದಿಂದ ರವಿವಾರ 100 ಮಕ್ಕಳಿಂದ ನಡೆದ ಜಾನಪದ ಶೈಲಿಯ ನೃತ್ಯ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಮಾಜದಲ್ಲಿರುವ ಜನರ ಬದುಕನ್ನುಉನ್ನತೀಕರಿಸಬೇಕೆಂದು 12ನೇ ಶತಮಾನದ ಬಸವಾದಿ ಶರಣರ ಬದುಕನ್ನು ಜನರಿಗೆ ಮುಟ್ಟಿಸುವ ಕಾರ್ಯ ಮಾಡಿದ್ದಾರೆ. ಅಂದಿನ ಜಗದ್ಗುರುಗಳ ಪ್ರೇರಣೆಯಿಂದ ಸಾಣೆಹಳ್ಳಿಯಲ್ಲಿ ಶಿವಕುಮಾರ ಕಲಾ ಸಂಘ, ಶಿವಸಂಚಾರ ಆರಂಭವಾಯಿತು. ಕಳೆದ 21 ವರ್ಷದಲ್ಲಿ ಶಿವಸಂಚಾರದಿಂದ ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ 63 ನಾಟಕಗಳ 3 ಸಾವಿರಕ್ಕೂ ಹೆಚ್ಚು ಪ್ರದರ್ಶನ ನೀಡಲಾಗಿದೆ ಎಂದರು.

ಇಂದು ಸಮಾಜದಲ್ಲಿ ಶುದ್ಧ ರಾಜಕಾರಣ ಉಳಿದಿಲ್ಲ, ಶುದ್ಧವಾದ ರಾಜಕೀಯ ಬೇಕು. ಕೊಳಕು ರಾಜಕೀಯ ಬೇಡವಾಗಿದೆ. ನಾವು ಯೋಗ್ಯರನ್ನು ಆಯ್ಕೆ ಮಾಡಬೇಕಿದೆ. ಮತ ಮಾರಿಕೊಳ್ಳುವವರು ಇರುವವರೆಗೂ ಪ್ರಜಾಪ್ರಭುತ್ವ ಹಾಳಾಗಿ ಹೋಗುತ್ತದೆ ಎಂದರು. ಮೂರುಸಾವಿರ ಮಠದ ಶ್ರೀ ಜಗದ್ಗುರು ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಮಾತನಾಡಿ, ಪಂಡಿತಾರಾಧ್ಯರು ಪ್ರಯೋಗಶೀಲರು, ಸದಾ ಒಂದಿಲ್ಲೊಂದು ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡವರು. ಅವರ ಮೂಲಕವೇ ವಚನಗಳು ಇಂದು ಎಲ್ಲೆಡೆ ಪ್ರಚಾರ ಪಡೆಯುತ್ತಿವೆ ಎಂದರು. ಡಾ| ಎಸ್‌.ಪಿ.ಬಳಿಗಾರ ಮಾತನಾಡಿ, ಶಿವಸಂಚಾರ ಕಲಾಸಂಘದ 100 ಮಕ್ಕಳು 40ಕ್ಕೂ ಹೆಚ್ಚು ವಚನಗಳನ್ನು ನೃತ್ಯರೂಪದಲ್ಲಿ ತೋರಿಸುವುದು ಸಾಮಾನ್ಯ ಕೆಲಸವಲ್ಲ. ಔಷಧಿ ಇಲ್ಲದೇ ರೋಗ ಗುಣವಾಗಬೇಕೆಂದರೆ ಇಂತಹ ಕಾರ್ಯಕ್ರಮದ ಮೂಲಕವೇ ಸಾಧ್ಯ ಎಂದು ಹೇಳಿದರು.

ಶಾಂತ ಗಂಗಾಧರ ಮಾತನಾಡಿ, ಶತಮಾನದಿಂದ ದೀಪ ಬೆಳಗುತ್ತಿದೆ. ಆದರೆ ಬೆಂಕಿ ಹಚ್ಚುವವರು ಕೆಲವರು, ದೀಪ ಹಚ್ಚುವವರು ಕೆಲವರು. ಮಾತು ಬೆಲೆಬಾಳುವ ಸಮಾಜ ಕಟ್ಟುತ್ತದೆ. ನಾವೆಲ್ಲರೂ ಒಂದು ಎಂದು ತೋರಿಸಿರುವುದು ವಚನ. ವಚನ ಹೇಳಬಹುದು, ಹಾಡಬಹುದು, ನೃತ್ಯ ಮಾಡಬಹುದು ಎಂಬುದನ್ನು ತರಳಬಾಳು ಶ್ರೀಗಳು ತೋರಿಸಿ ಕೊಟ್ಟಿದ್ದಾರೆ ಎಂದು ಶ್ಲಾಘಿಸಿದರು. ಪ್ರಾಚಾರ್ಯ ಐ.ಜಿ. ಚಂದ್ರಶೇಖರ ಮಾತನಾಡಿದರು. ನಂತರ ಮಕ್ಕಳು ವಿವಿಧ ವಚನಗಳ ನೃತ್ಯ ಪ್ರದರ್ಶನ ನೀಡಿದರು. ಪಿ.ಎಸ್‌. ಧರಣೆಪ್ಪನವರ, ಕಾಡಯ್ಯ ಹಿರೇಮಠ, ಡಾ| ಕೆ.ಎಚ್. ಜಿತೂರಿ, ಡಾ| ಸುರೇಶ ಹಿರೇಗೌಡರ, ಡಾ| ಅಭಯಕುಮಾರ ಮಂಟಗಾಣಿಕರ, ವಿ.ಸಿ. ಶಿಗ್ಲಿ, ಎಸ್‌.ಕೆ. ಆದಪ್ಪನವರ, ಡಾ| ಸವಿತಾ ರಾಯಚೂರ ಇನ್ನಿತರರು ಇದ್ದರು. ಆರ್‌.ಟಿ. ಮಜ್ಜಗಿ ನಿರೂಪಿಸಿದರು.

12ನೇ ಶತಮಾನದಲ್ಲಿ ವಚನಗಳು ಸೃಷ್ಟಿ ಆಗಿದ್ದರೂ ಇಂದಿಗೂ ಅವು ಪ್ರಸ್ತುತವಾಗಿವೆ. ನಮ್ಮ ಬದುಕಿಗೆ ದಾರಿ ದೀಪವಾಗಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಹಿರಿಯ ತರಳುಬಾಳು ಶ್ರೀಗಳು ಮೊಟ್ಟ ಮೊದಲಿಗೆ ವಚನಗಳನ್ನು ಹಾಡಿಸಿದರು. ನಂತರ ನಾಟಕಗಳನ್ನು ಮಾಡಿಸಿದರು. ಪುಸ್ತಕಗಳನ್ನು ಪ್ರಕಟಿಸಿದರು. ನೃತ್ಯದ ಮೂಲಕ ವಚನಗಳನ್ನು ಜನರಿಗೆ ತಲುಪಿಸಿದರು. ಇಂದಿನ ದೃಶ್ಯ ಮಾಧ್ಯಮ ಹಿಂದೆ ಇದ್ದಿದ್ದರೆ ದೊಡ್ಡ ಕ್ರಾಂತಿಯೇ ಆಗುತ್ತಿತ್ತು.
•ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ,ಸಾಣೇಹಳ್ಳಿ, ಶ್ರೀ ತರಳಬಾಳು ಮಠ

ಟಾಪ್ ನ್ಯೂಸ್

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.