ಸವಾಯಿ ಗಂಧರ್ವ ಭವನ ನವನವೀನ


Team Udayavani, Mar 5, 2019, 7:13 AM IST

hub-1.jpg

ಹುಬ್ಬಳ್ಳಿ: ಕಳೆದ 7 ವರ್ಷಗಳಿಂದ ನವೀಕರಣದ ಹಣೆಪಟ್ಟಿ ಕಟ್ಟಿಕೊಂಡ ದೇಶಪಾಂಡೆ ನಗರದ ಸವಾಯಿ ಗಂಧರ್ವ ಕಲಾಭವನ ಕೊನೆಗೂ ಉದ್ಘಾಟನೆಗೆ ಸಿದ್ಧಗೊಂಡಿದೆ. ಮಾ.5 ರಂದು ಲೋಕಾರ್ಪಣೆಗೊಳ್ಳಲಿದೆ.

ನವೀಕರಣಕ್ಕಾಗಿ 2013ರಿಂದಲೇ ಭವನದ ಸಾರ್ವಜನಿಕ ಬಳಕೆ ಸ್ಥಗಿತಗೊಳಿಸಲಾಗಿತ್ತು. ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಕೇಂದ್ರೀಕೃತ ಹವಾನಿಯಂತ್ರಿತ ಕಲಾಭವನ ಇದೀಗ ಉದ್ಘಾಟನೆಗೊಳ್ಳುತ್ತಿದೆ. ಬೆಂಗಳೂರಿನ ಕಲರ್‌ ವೈಬ್ರೇಷನ್‌ ಸಂಸ್ಥೆ ಆಸನ, ಹವಾನಿಯಂತ್ರಿತ ವ್ಯವಸ್ಥೆ, ಪ್ಲೋರಿಂಗ್‌, ಪ್ಲಾಸ್ಟರಿಂಗ್‌ ಹಾಗೂ ವಿದ್ಯುತ್‌ ಸೌಲಭ್ಯ ಅಳವಡಿಕೆ ಕಾರ್ಯ ಮಾಡಿದೆ. ಉತ್ತಮ ಸೌಂಡ್‌ಸಿಸ್ಟ್‌ಮ್‌ ವ್ಯವಸ್ಥೆ ಸಹ ಮಾಡಲಾಗಿದೆ.

480 ಆಸನ ವ್ಯವಸ್ಥೆ ಮಾಡಲಾಗಿದ್ದು , 6 ವಿವಿಐಪಿ-10 ವಿಐಪಿ ಆಸನ ತರಿಸಲಾಗಿದೆ. ಕೇಂದ್ರೀಕೃತ ಹವಾನಿಯಂತ್ರಿತ ವ್ಯವಸ್ಥೆ ಕೈಗೊಳ್ಳಲಾಗಿದೆ. 200 ಕೆವಿ ಸಾಮರ್ಥ್ಯದ ಜನರೇಟರ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಕೆಳಭಾಗದಲ್ಲಿ 5 ಕೊಠಡಿಗಳು, ಮೇಲ್ಭಾಗದಲ್ಲಿ 1 ದೊಡ್ಡ ಹಾಲ್‌ ಹಾಗೂ 1 ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಕೆಳಭಾಗದ ಎರಡು ಕೊಠಡಿಗಳು ಡ್ರೆಸ್ಸಿಂಗ್‌ ಕೊಠಡಿಗಳಾಗಿದ್ದು, ಒಂದು ವಿವಿಐಪಿ ಕೊಠಡಿ ಇದೆ. ಕಲಾಭವನ ನವೀಕರಣಕ್ಕಾಗಿ ರಾಜ್ಯ ಸರ್ಕಾರ 3.25 ಕೋಟಿ ಹಾಗೂ ಪಾಲಿಕೆ 1.5 ಕೋಟಿ ರೂ. ಅನುದಾನ ನೀಡಿದೆ.

ಭವನದ ಇತಿಹಾಸ: 1971ರಲ್ಲಿ ಆರಂಭಗೊಂಡ ಕಲಾಭವನದಲ್ಲಿ ಹಲವಾರು ದಿಗ್ಗಜರು ತಮ್ಮ ಸಂಗೀತ ರಸದೌತಣ ಉಣಬಡಿಸಿದ್ದಾರೆ. 1971ರಲ್ಲೇ ಹಿರಿಯರು ಸೇರಿ ಭವನ ನಿರ್ವಹಣೆಗೆಂದು ಯುಥ್‌ ವೆಲ್‌ಫೇರ್‌ ಟ್ರಸ್ಟ್‌ ರಚಿಸಿದ್ದು, ಮುನ್ನಡೆಸಿಕೊಂಡು ಬರಲಾಗಿದೆ. ಶಿಥಿಲಾವಸ್ಥೆ ತಲುಪಿದ್ದ ಭವನ
ನೆಲಸಮ ಮಾಡಿ ನೂತನ ಭವನ ನಿರ್ಮಾಣಕ್ಕೆ ಚಿಂತಿಸಲಾಗಿತ್ತು. ಆದರೆ ಹಿರಿಯರು ಪರಿಶ್ರಮಪಟ್ಟು ನಿರ್ಮಿಸಿದ ಭವನ ನೆಲಸಮ ಮಾಡುವುದು ಬೇಡ ಎಂಬ ಹಲವರ ಅಭಿಪ್ರಾಯದ ಹಿನ್ನೆಲೆಯಲ್ಲಿ ಇದೀಗ ನವೀಕರಣ ಕಾಮಗಾರಿ ಕೈಗೊಳ್ಳಲಾಗಿದೆ.

ಯುಥ್‌ ವೆಲ್‌ಫೇರ್‌ ಟ್ರಸ್ಟ್‌ ಕಲಾಭವನದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಯುಥ್‌ ವೆಲ್‌ಫೇರ್‌ ಟ್ರಸ್ಟ್‌ನಲ್ಲಿ ಜಿಲ್ಲಾಧಿಕಾರಿ ಚೇರನ್‌, ಕಾರ್ಯದರ್ಶಿಯಾಗಿ ಮಹಾನಗರ ಪಾಲಿಕೆ ಹಾಗೂ ಪೊಲೀಸ್‌ ಆಯುಕ್ತರು, ವ್ಯವಸ್ಥಾಪಕ ಧರ್ಮದರ್ಶಿ ವೀರಣ್ಣ ಸವಡಿ, ಧರ್ಮದರ್ಶಿಗಳಾಗಿ
ಸುನೀಲ ಕೊಠಾರಿ, ಅಜಿತ ಜವಳಿ, ವಿಕ್ರಮ ಶಿರೂರ, ರಿಯಾಜ ಬಸರಿ, ತಿಲಕ ವಿಕಂಸಿ, ವೆಂಕಟೇಶ ಜೋಶಿ ಹಾಗೂ ಕಾನೂನು ಸಲಹೆಗಾರರಾಗಿ ಆರ್‌.ಬಿ. ನೀಲಿ ಇದ್ದಾರೆ. ಭವನಕ್ಕೆ ಸಿಸಿ ಕ್ಯಾಮರಾ ಹಾಗೂ ಎಲ್‌ಇಡಿ ಸ್ಕ್ರೀನ್‌ ಅಳವಡಿಸುವ ಕುರಿತು ಟ್ರಸ್ಟ್‌ ನಿಂದ ಚಿಂತನೆ ನಡೆದಿದೆ.

ಇಂದು ಉದ್ಘಾಟನೆ ಮಾ. 5ರಂದು ಬೆಳಗ್ಗೆ 11:30 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ. ದೇಶಪಾಂಡೆ ಭವನವನ್ನು ಉದ್ಘಾಟಿಸಲಿದ್ದಾರೆ. ಶಾಸಕ ಜಗದೀಶ ಶೆಟ್ಟರ ಅಧ್ಯಕ್ಷತೆ ವಹಿಸಲಿದ್ದಾರೆ. ಸಚಿವ ಸಿ.ಎಸ್‌. ಶಿವಳ್ಳಿ ಉಪಸ್ಥಿತರಿರಲಿದ್ದಾರೆ. ಸಂಸದ ಪ್ರಹ್ಲಾದ ಜೋಶಿ, ಶಾಸಕರಾದ
ಪ್ರಸಾದ ಅಬ್ಬಯ್ಯ, ಶಿವರಾಮ ಹೆಬ್ಟಾರ, ಅರವಿಂದ ಬೆಲ್ಲದ, ಅಮೃತ ದೇಸಾಯಿ, ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ಎಸ್‌.ವಿ. ಸಂಕನೂರ, ಮಹಾಪೌರ ಸುಧೀರ ಸರಾಫ‌, ಉಪಮಹಾಪೌರ ಮೇನಕಾ ಹುರಳಿ ಆಗಮಿಸಲಿದ್ದಾರೆ.

ಮಲ್ಟಿಜಿಮ್‌
ಈ ಹಿಂದೆ ಇದ್ದಂತೆ ಜಿಮ್‌ ಮುಂದುವರಿಸಲಾಗಿದ್ದು, ಪ್ರತ್ಯೇಕ ಕೊಠಡಿ ವ್ಯವಸ್ಥೆ ಕಲ್ಪಿಸಲಾಗಿದೆ. ಅತ್ಯಾಧುನಿಕ ಜಿಮ್‌ ಸಾಮಗ್ರಿ ಖರೀದಿಸಲಾಗಿದ್ದು, ಪ್ರತ್ಯೇಕ ಸಮಿತಿ ನಿರ್ಮಿಸಿ ನಡೆಸಲಾಗುವುದು. ಅಲ್ಲದೇ ಜಿಮ್‌ಗೆ ಹೋಗಿ ಬರಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ.

ಕಲಾಭವನ ಮುಕ್ತಾಯಗೊಂಡು ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಸುಮಾರು 5 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕವಾಗಿ  ನವೀಕರಣಗೊಂಡಿರುವ ಭವನ ಕಲಾಭಿಮಾನಿಗಳಿಗೆ ಲೋಕಾರ್ಪಣೆಗೊಳ್ಳಲಿದೆ. ಉತ್ತರ ಕರ್ನಾಟಕದಲ್ಲಿಯೇ ಮಾದರಿ ಕಲಾಭವನವಾಗಿ
ನಡೆಸಿಕೊಂಡು ಹೋಗಲಾಗುವುದು. ಶುಲ್ಕದ ಕುರಿತು ಟ್ರಸ್ಟ್‌ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ತೀರ್ಮಾನಿಸಲಾಗುವುದು.
 ವೀರಣ್ಣ ಸವಡಿ, ವ್ಯವಸ್ಥಾಪಕ ಧರ್ಮದರ್ಶಿ

„ಬಸವರಾಜ ಹೂಗಾರ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.