ದೇವಗಿರಿಯಲ್ಲಿ ಎನ್ನೆಸ್ಸೆಸ್ ಶಿಬಿರ ಸಂಪನ್ನ
Team Udayavani, Mar 12, 2019, 7:39 AM IST
ಧಾರವಾಡ: ದೇವಗಿರಿ ಗ್ರಾಮದಲ್ಲಿ ಕರ್ನಾಟಕ ಕಾನೂನು ಮಹಾವಿದ್ಯಾಲಯ ಹಮ್ಮಿಕೊಂಡಿದ್ದ ಎನ್ನೆಸ್ಸೆಸ್ ಶಿಬಿರ ವಿವಿಧ ಸೇವಾ ಕಾರ್ಯಗಳೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿತು.
ಒಂದು ವಾರ ನಡೆದ ಶಿಬಿರದಲ್ಲಿ ಗ್ರಾಮದಲ್ಲಿ ಸ್ವತ್ಛತೆ, ಹೂಳು ತೆಗೆಯುವುದು, ನೀರಿನ ಮೂಲಗಳ ಸಂರಕ್ಷಣೆ, ಮಳೆನೀರು ಸಂಗ್ರಹ, ಅಂತರ್ಜಲ ರಕ್ಷಣೆ, ಮತದಾನ ಜಾಗೃತಿ, ಶಾಲಾ ಅವರಣದ ಸ್ವತ್ಛತೆ ಮತ್ತು ರಂಗ ಮಂಟಪ ನಿರ್ವಹಣೆ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದರು.
ವರದಕ್ಷಿಣೆ ವಿರೋಧ, ಮಕ್ಕಳಿಗೆ ಅಕ್ಷರ ಕಲಿಕೆ, ಗ್ರಾಮ ನೈರ್ಮಲ್ಯ, ಸಸಿ ನೆಡುವುದು, ರಾಷ್ಟ್ರೀಯ ಭಾವೈಕ್ಯತೆ ಮತ್ತು ಮಹಿಳಾ ಸಬಲೀಕರಣ ಕುರಿತು ಸಂಪನ್ಮೂಲ ವ್ಯಕ್ತಿಗಳು ಗ್ರಾಮಕ್ಕೆ ಭೇಟಿಕೊಟ್ಟು ಉಪನ್ಯಾಸ ನೀಡಿದರು.
ಗ್ರಾಹಕ ಸಮಸ್ಯೆಗಳ ಕುರಿತು ಹಿರಿಯ ವಕೀಲರಾದ ಬಸವಪ್ರಭು ಹೊಸಕೇರಿ ಕೊನೆಯ ದಿನ ಉಪನ್ಯಾಸ ನೀಡಿದರು. ಸಿಪಿಐ ಮುಖಂಡರಾದ ಡಾ| ಸಿದ್ದನಗೌಡ ಪಾಟೀಲ ಅವರು ಗ್ರಾಮೀಣರ ಬದುಕು ಹಸನಾಗಲು ಮಾಡಬೇಕಿರುವ ಅಗತ್ಯ ಕೆಲಸಗಳ ಕುರಿತು ಮಾತನಾಡಿದರು. ಬಾಬು ಪಾಗೋಜಿ, ಸೋಮಲಿಂಗ ಯಂಕಮ್ಮನವರ, ತಾನಾಜಿ ದುರ್ಗಾಯಿ ಇನ್ನಿತರರು ಪಾಲ್ಗೊಂಡಿದ್ದರು.
ಗ್ರಾಮಾಭಿವೃದ್ಧಿಯಿಂದ ದೇಶದ ಪ್ರಗತಿ: ಚಿಕ್ಕನಗೌಡ
ಹುಬ್ಬಳ್ಳಿ: ಗ್ರಾಮಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶ ಪ್ರಗತಿ ಹೊಂದಲು ಸಾಧ್ಯ ಎಂದು ಮಾಜಿ ಶಾಸಕ ಎಸ್.ಐ.
ಚಿಕ್ಕನಗೌಡ್ರ ಹೇಳಿದರು.
ಪಾಳೆ ಗ್ರಾಮದಲ್ಲಿ ಅದರಗುಂಚಿ ಸಿಐಸಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಎಂಕಾಂ ಸ್ನಾತಕೋತ್ತರ ವಿಭಾಗದ ಎನ್ನೆಸ್ಸೆಸ್ ವಿಶೇಷ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಭಾರತ ಹಳ್ಳಿಗಳಿಂದ ಕೂಡಿದ ರಾಷ್ಟ್ರವಾಗಿರುವುದರಿಂದ ಪ್ರಮುಖವಾಗಿ ಗ್ರಾಮಗಳ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಿದೆ. ವಿದ್ಯಾರ್ಥಿಗಳು ಸಾಮಾಜಿಕ ಕಾಳಜಿಯನ್ನು ರೂಢಿಸಿಕೊಂಡು ದೇಶದ ಪ್ರಗತಿಗೆ ಶ್ರಮಿಸಬೇಕು ಎಂದು ಹೇಳಿದರು.
ಆರ್.ಎಫ್. ಭರಮಗೌಡರ ಮಾತನಾಡಿದರು. ಶ್ರೀ ಷಡಕ್ಷರಯ್ಯ ಹಿರೇಮಠ ಸಾನ್ನಿಧ್ಯ ವಹಿಸಿದ್ದರು. ಎಚ್.ಯು. ಮುಜಿತನವರ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯೆ ಚನ್ನಮ್ಮ ಶಿವನಗೌಡ್ರ, ಜಿಪಂ ಮಾಜಿ ಸದಸ್ಯ ಜಿ.ವಿ. ಕಳ್ಳಿಮನಿ, ಎನ್.ಜೆ. ಬಡಿಗೇರ ಇನ್ನಿತರರಿದ್ದರು.
ಸಮಾಜಮುಖೀ ಕಾರ್ಯ ಕೈಗೊಳ್ಳಿ
ಕುಂದಗೋಳ: ತಾಲೂಕಿನ ಗುಡಗೇರಿ ಗ್ರಾಮದಲ್ಲಿ ಕುಂದಗೋಳ ಸರ್ಕಾರಿ ಡಿಗ್ರಿ ಕಾಲೇಜಿನ ಎನ್ನೆಸ್ಸೆಸ್ ಘಟಕ ಹಮ್ಮಿಕೊಂಡ ಶಿಬಿರದಲ್ಲಿ ವಿಶೇಷ ಕಾರ್ಯಕ್ರಮ ನಡೆಯಿತು.
ವಿಜಯಕುಮಾರ ಹಾಲಿ ಮಾತನಾಡಿ, ವಿದ್ಯಾರ್ಥಿಗಳು ಸಮಾಜಮುಖೀ ಕಾರ್ಯವನ್ನು ತಮ್ಮ ಕಾಲೇಜಿನ ಎನ್ನೆಸ್ಸೆಸ್ ಮೂಲಕ ವ್ಯಕ್ತಪಡಿಸಿಕೊಂಡು ಸಾಗಿದಾಗ ಅವರಲ್ಲಿ ಹೊಸಹುಮ್ಮಸ್ಸು ಮೂಡಿದಂತಾಗುತ್ತದೆ ಎಂದರು.
ಪ್ರಾಚಾರ್ಯ ಎಂ.ಕೆ. ಅಂಗಡಿ ಅಧ್ಯಕ್ಷತೆ ವಹಿಸಿದ್ದರು. ತಾಪಂ ಸದಸ್ಯ ಬಸನಗೌಡ ಕರೆಹೊಳಲಪ್ಪಗೌಡ್ರ, ನಿಂಗಪ್ಪ ಕುಡುವಕ್ಕಲ, ದಾಕ್ಷಾಯಿಣಿ ಕೊಪ್ಪದ, ಬಸವರಾಜ ಮಡಿವಾಳರ, ಪ್ರೊ| ರಾಧಾಮತಿ ನಾಕೋಡ ಇದ್ದರು. ಕೃಷ್ಣಪ್ಪ ಲಮಾಣಿ ನಿರೂಪಿಸಿದರು, ಪ್ರವೀಣ ತಿಮ್ಮನಗೌಡ್ರ ಸ್ವಾಗತಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ