ರಾಜಿ ಸಂಧಾನ: ಹುಲ್ಲಂಬಿ ವ್ಯಾಜ್ಯ ಇತ್ಯರ್ಥ


Team Udayavani, Mar 12, 2019, 7:45 AM IST

hub-4.jpg

ಕಲಘಟಗಿ: ಹುಲ್ಲಂಬಿಯ ಒಂದೇ ಕುಟುಂಬದ 68 ಸದಸ್ಯ ವಾದಿ-ಪ್ರತಿವಾದಿಗಳಿಗೆ ಸಂಬಂಧಿಸಿದ ಆಸ್ತಿ ವ್ಯಾಜ್ಯ ಪಟ್ಟಣದಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ಸುಖಾಂತ್ಯಗೊಂಡಿದೆ.

ಹಿರಿಯ ದಿವಾಣಿ ನ್ಯಾಯಾಧೀಶೆ ಜಿ.ಕೆ. ದಾಕ್ಷಾಯಿಣಿ ಅವರು ಕಕ್ಷಿಗಾರರ ಮನವೊಲಿಸುವುದರೊಂದಿಗೆ ರಾಜಿ ಸಂಧಾನದ ಮೂಲಕ ಪ್ರಕರಣ ಬಗೆಹರಿಸಲಾಯಿತು.

ತಾಲೂಕಿನ ಹುಲ್ಲಂಬಿ ಗ್ರಾಮದ 68 ಜನ ರಕ್ತ ಸಂಬಂಧಿಗಳು ತಮ್ಮ ಹಿರಿಯರ ಆಸ್ತಿಯ ವಾಟಿಗೆ ಸಂಬಂಧಿಸಿ ವ್ಯಾಜ್ಯ ಹೂಡಿದ್ದರು. ಅಜ್ಜ-ಮುತ್ತಜ್ಜರ ಕಾಲದಿಂದ ಪ್ರಕರಣ ನಡೆಯುತ್ತಿತ್ತು. ನ್ಯಾಯಾಧೀಶರು ಮತ್ತು ನ್ಯಾಯವಾದಿಗಳ ಸಲಹೆ-ಸೂಚನೆಗೆ ಕುಟುಂಬ
ಸದಸ್ಯರು ತಮ್ಮ ಸಹಮತಿ ನೀಡಿ ರಾಜಿ ಸಂಧಾನಕ್ಕೆ ಮುಂದಾದರು.

ಅದಾಲತ್‌ನ ರಾಜಿ ಸಂಧಾನದಲ್ಲಿ ಹಿರಿಯ ದಿವಾಣಿ ನ್ಯಾಯಾಲಯದಲ್ಲಿ ದಾಖಲಿತಗೊಂಡು ಪ್ರತಿದಿನವೂ ವಿಚಾರಣೆಗೊಳಪಡುತ್ತಿರುವ 19 ಪ್ರಕರಣಗಳು ಮತ್ತು ವಿವಾದ ಪೂರ್ವ 14 ಪ್ರಕರಣಗಳನ್ನೂ ಇತ್ಯರ್ಥ ಪಡಿಸಲಾಯಿತು. ಅಲ್ಲದೇ ಮೋಟಾರ್‌ ವಾಹನ ಕಾಯ್ದೆಯಡಿ ದಾಖಲಾದ ನಾಲ್ಕು ಪ್ರಕರಣಗಳಿಂದ 4.90 ಲಕ್ಷ ರೂ. ಪರಿಹಾರವನ್ನು ನೊಂದ ಕಕ್ಷಿಗಾರರಿಗೆ
ನೀಡುವಂತೆ ರಾಜಿ ಸಂಧಾನದಲ್ಲಿ ಬಗೆಹರಿಸಲಾಯಿತು.

ಇನ್ನುಳಿದಂತೆ ವಿವಿಧ ವಿವಾದ ಪೂರ್ವ ಪ್ರಕರಣಗಳಲ್ಲಿ ಅರ್ಜಿದಾರರು ಮತ್ತು ಎದುರುದಾರರು ನ್ಯಾಯಾಧೀಶರ ಮತ್ತು ನ್ಯಾಯವಾದಿಗಳ ಸಲಹೆ ಮೇರೆಗೆ ರಾಜಿ ಮಾಡಿಕೊಂಡು ಒಟ್ಟೂ 13 ಲಕ್ಷ ರೂ. ನೀಡುವಂತೆ ಬಗೆಹರಿಸಲಾಯಿತು.

ಕಿರಿಯ ದಿವಾಣಿ ನ್ಯಾಯಾಲಯದಲ್ಲಿ ನ್ಯಾಯಾಧೀಶ ಬಿ.ಗಿರಿಗೌಡ ಅವರು ಒಟ್ಟೂ 88 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿದರು. ಅವುಗಳಲ್ಲಿ 13 ಮೂಲ ದಾವೆ ಪ್ರಕರಣ, 1 ದರಖಾಸ್ತ ಪ್ರಕರಣ, 5 ಐಪಿಸಿ ಪ್ರಕರಣ, 15 ಎನ್‌ಐ ಆ್ಯಕ್ಟ್
ಪ್ರಕರಣಗಳು, 16 ಕ್ರಿಮಿನಲ್‌ ಮಿಸಲೇನಿಯಸ್‌ ಪ್ರಕರಣಗಳು ಮತ್ತು 37 ಕ್ರಿಮಿನಲ್‌ ಪೆಟಿ ಕೇಸ್‌ಗಳನ್ನು ಇತ್ಯರ್ಥ ಪಡಿಸಲಾಯಿತು. ರಾಜಿ ಸಂಧಾನದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕ ಎಂ.ಎಂ. ಉತ್ತೂರ ಸೇರಿದಂತೆ ನ್ಯಾಯವಾದಿಗಳು, ನ್ಯಾಯಾಲಯ ಸಿಬ್ಬಂದಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.