ಕ್ರಾಂತಿಕಾರಿ ಹೋರಾಟ ಅಗತ್ಯ:ಹರೀಶ


Team Udayavani, Mar 20, 2019, 10:13 AM IST

20-march-14.jpg

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರ 20 ವರ್ಷಗಳ ರಾಜಕೀಯವನ್ನು ಕಟ್ಟಿಕೊಟ್ಟಿರುವ ಡಾ| ಕೆ.ಎಸ್‌.ಶರ್ಮಾ ಅವರ ಪುಸ್ತಕ ಭಾರತೀಯ ರಾಜಕೀಯದ ಎರಡು ದಶಕದ ಚರಿತ್ರೆಯನ್ನು ಕೂಲಂಕುಷವಾಗಿ ವಿಮರ್ಶಿಸಿದ ಆಕರ ಗ್ರಂಥವಾಗಿದೆ ಎಂದು ಕರ್ನಾಟಕ ವಿವಿ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ| ಹರೀಶ ರಾಮಸ್ವಾಮಿ ಹೇಳಿದರು.

ಪುರೋಗಾಮಿ ಪ್ರಕಾಶನ ಹೊರತಂದಿರುವ ಡಾ| ಕೆ.ಎಸ್‌. ಶರ್ಮಾ ರಚಿಸಿದ ‘ಮುಖ್ಯಮಂತ್ರಿ-ಪ್ರಧಾನ ಮಂತ್ರಿ ನರೇಂದ್ರ ಮೋದಿ: ಧೋರಣೆಗಳ-ಕಾರ್ಯಕ್ರಮಗಳ ಕ್ಷ-ಕಿರಣ’ ಕೃತಿ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. ಎರಡು ದಶಕದ ರಾಜಕೀಯವನ್ನು 130 ಪ್ರಬಂಧಗಳ ಮೂಲಕ ಪ್ರಮುಖ ಘಟನಾವಳಿಗಳನ್ನು ತೀಕ್ಷ್ಣವಾಗಿ ವಿಮರ್ಷಿಸಿದ್ದಾರೆ. ಇದೊಂದು ಕೇವಲ ಪುಸ್ತಕವಾಗಿರದೇ ರಾಜಕೀಯ ಕ್ಷೇತ್ರದ ಉತ್ತಮ ಗ್ರಂಥವಾಗಿದೆ ಎಂದರು.

ಮಾನವ ಹಕ್ಕುಗಳ ಹೋರಾಟಗಾರ ದಿವಾಕರ್‌ ನಾರಾಯಣ ಮಾತನಾಡಿ, ಇಂದು ದೇಶದ ಜನತೆ ಅನುಭವಿಸುತ್ತಿರುವ ಎಲ್ಲಾ ರೀತಿಯ ಸಮಸ್ಯೆಗಳಿಗೆ ಪ್ರಚಲಿತ ವ್ಯವಸ್ಥೆ ಕಾರಣವಾಗಿದ್ದು, ಈ ವ್ಯವಸ್ಥೆ ಬದಲಿಸಲು ಕ್ರಾಂತಿಕಾರಿ ಹೋರಾಟಗಳ ಮೂಲಕ ಮಾತ್ರ ಸಾಧ್ಯವಾಗುತ್ತದೆ ಎಂದು ಹೇಳಿದರು. ನಿವೃತ್ತ ಪ್ರಾಧ್ಯಾಪಕ ಪ್ರೊ| ಕೆ.ಎಸ್‌. ಕೌಜಲಗಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ಕುರಿತಾದ ಈ ಪುಸ್ತಕದಲ್ಲಿ ಭಾರತೀಯ ದಂಡಸಂಹಿತೆಯಲ್ಲಿ ದೇಶದ್ರೋಹ ಅಪರಾಧ ಕುರಿತಾದ ಕಲಂ ತಿದ್ದುಪಡಿ ಮಾಡಬೇಕೆಂಬ ಅಂಶ, ನ್ಯಾಯಮೂರ್ತಿಗಳ ನೇಮಕದ ಬಗ್ಗೆ ಪ್ರಧಾನಿ ಮೋದಿ ಸರಕಾರ ತಳೆದ ನಿಲುವು ಹೇಗೆ ನ್ಯಾಯಾಂಗೀಯ ವ್ಯವಸ್ಥೆಯನ್ನು ಕಾರ್ಯಾಂಗ ತನ್ನ ಅಧೀನದಲ್ಲಿ ಇರಿಸಿಕೊಳ್ಳಬೇಕೆಂಬ ಪ್ರಯತ್ನಗಳು ವಿಫ‌ಲವಾಗಿರುವುದು ಸೇರಿದಂತೆ ದೇಶದ ರಾಜಕೀಯ ಬಗ್ಗೆ ಹೊಸ ಬೆಳಕು ಚೆಲ್ಲುವಂತಿದೆ. ಶರ್ಮಾ ಅವರು ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಗಮನಾರ್ಹವಾಗಿದ್ದಾದರೂ ಅವರಿಗೆ ಸೂಕ್ತ ಸ್ಥಾನಮಾನಗಳು ದೊರೆಯದಿರುವುದು ವಿಷಾದನೀಯ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾರ್ಮಿಕ ಹೋರಾಟಗಾರ ಡಾ| ಕೆ.ಎಸ್‌. ಶರ್ಮಾ, ನರೇಂದ್ರ ಮೋದಿಯವರು ಕಳೆದ ಇಪ್ಪತ್ತು ವರ್ಷಗಳಲ್ಲಿ ಅನುಸರಿಸಿರುವ ರಾಜಕೀಯ ಪಥದ ಧೋರಣೆಗಳ ಹಾಗೂ ಕಾರ್ಯಕ್ರಮಗಳ ಕ್ಷ-ಕಿರಣವಾಗಿ ಈ ಕೃತಿಯನ್ನು ರಚಿಸಿದ್ದು, ಇಂದಿನ ಸಮಾಜದ ವ್ಯವಸ್ಥೆಗೆ ಯಾವ ರೋಗ ಅಂಟಿದೆ ಎಂಬುದನ್ನು ತಿಳಿಯಬಹುದಾಗಿದೆ. ತಜ್ಞರು ಹಾಗೂ ದೇಶದ ಪ್ರಜೆಗಳು ಅಂಟಿರುವ ರೋಗವನ್ನು ಗುಣಪಡಿಸುವ ಹೊಣೆಗಾರರಾಗಿದ್ದಾರೆ ಎಂದು ಹೇಳಿದರು.

ತಮಿಳುನಾಡಿನ ಪೀಪಲ್ಸ್‌ ಯೂನಿಯನ್‌ ಆಫ್‌ ಸಿವಿಲ್‌ ಲಿಬರ್ಟೀಸ್‌ ಸಂಸ್ಥೆ ರಾಜ್ಯ ಉಪಾಧ್ಯಕ್ಷ ಪೊನ್ನಪ್ಪ ಚಂದ್ರನ್‌ ಮಾತನಾಡಿದರು. ಡಾ| ಗಾಯತ್ರಿ ದೇಶಪಾಂಡೆ ಅವರು ಕ್ರಾಂತಿ ಗೀತೆಗಳನ್ನು ಪ್ರಸ್ತುತಪಡಿಸಿದರು. ಪ್ರೊ| ರವೀಂದ್ರ ಶಿರೋಳ್ಕರ್‌ ನಿರ್ವಹಿಸಿದರು. ಬಿ. ಜಯದೇವರಾಜೆ ಅರಸು ವಂದಿಸಿದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.