ಒಳ್ಳೆಯ ನಿರೀಕ್ಷೆ ಹುಟ್ಟಿಸಿದೆ ಮುಂಗಾರು, ಸುಭಿಕ್ಷೆ ಉಂಟಾಗಲಿ


Team Udayavani, May 16, 2017, 12:23 PM IST

rain.jpg

ಮುಂಗಾರು ಸರಿಯಾದ ಸಮಯಕ್ಕೆ ಅಥವಾ ತುಸು ಬೇಗನೆ ಆರಂಭವಾದರೆ ರೈತರಿಗೆ ಒಳ್ಳೆಯದು ಅನ್ನುವುದು ಮೇಲ್ನೋಟಕ್ಕೆ ಕಾಣಿಸುವ ಸತ್ಯ. ಆದರೆ, ಸರಿಯಾದ ಕಾಲದಲ್ಲಿ ಸರಿಯಾದ ಪ್ರಮಾಣದಲ್ಲಿ ಮಳೆಯಾದರೆ ಎಲ್ಲ ಕ್ಷೇತ್ರಗಳಲ್ಲೂ ಎಲ್ಲರಿಗೂ ಸುಭಿಕ್ಷೆ. ಈ ಮಳೆಗಾಲ ಅಂಥ ನಿರೀಕ್ಷೆ ಹುಟ್ಟಿಸಿದೆ. 

ಬಹಳ ವರ್ಷಗಳ ಬಳಿಕ ವರುಣ ದೇವ ದೇಶಕ್ಕೆ ಧಾರಾಳ ಕೃಪಾದೃಷ್ಟಿ ಹರಿಸುವ ನಿರೀಕ್ಷೆ ಹುಟ್ಟಿದೆ. ಮೇ ತಿಂಗಳ ಆರಂಭದಿಂದಲೇ ಸರಕಾರಿ ಮತ್ತು ಖಾಸಗಿ ಹವಾಮಾನ ವೀಕ್ಷಣಾ ಸಂಸ್ಥೆಗಳು ಶುಭ ಸುದ್ದಿಯನ್ನು ಬಿತ್ತರಿಸುತ್ತಿವೆ. ಈ ವರ್ಷ ವಾಡಿಕೆಯಂತೆ ಮಳೆಯಾಗಲಿದೆ ಹಾಗೂ ಕೆಲವು ದಿನ ಮೊದಲೇ ಮುಂಗಾರು ಆಗಮನವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಸಂಸ್ಥೆಗಳು ಭವಿಷ್ಯ ನುಡಿದಿದ್ದವು. ಅದು ನಿಜವಾಗುವ ಲಕ್ಷಣ ಗೋಚರಿಸಿದೆ. ಹವಾಮಾನ ತಜ್ಞರು ನಿರೀಕ್ಷಿಸಿದಂತೆ ಮೇ 15ಕ್ಕೂ ಮೊದಲೇ ಅಂಡಮಾನ್‌-ನಿಕೋಬಾರ್‌ಗೆ ನೈಋತ್ಯ ಮುಂಗಾರು ತಲುಪಿದೆ. ಅಂದರೆ ನಾಲ್ಕು ದಿನಗಳ ಮೊದಲೇ ಮುಂಗಾರು ಬಂದಂತಾಗಿದೆ. ಸಾಮಾನ್ಯವಾಗಿ ಅಂಡಮಾನ್‌ಗೆ ಬಂದ ಮುಂಗಾರು 12 ದಿನಗಳಲ್ಲಿ ಶ್ರೀಲಂಕಾ ಹಾದು ಕೇರಳ ಪ್ರವೇಶಿಸಬೇಕು. ಈ ಲೆಕ್ಕಾಚಾರದ ಪ್ರಕಾರ ಹೇಳುವುದಾದರೆ ಮೇ 14ರಂದು ಅಂಡಮಾನ್‌ಗೆ ಬಂದಿರುವ ಮುಂಗಾರು ಮೇ 26 ಅಥವಾ 27ಕ್ಕೆ ಕೇರಳ ಪ್ರವೇಶಿಸಬೇಕು. ಇದಾದ ಎರಡು ದಿನಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಮಳೆಯಾಗಬೇಕು.ಅಂದರೆ ಮೇ 29 ಅಥವಾ 30ರೊಳಗೆ ಕರ್ನಾಟಕಕ್ಕೆ ಅಧಿಕೃತವಾಗಿ ಮಳೆಗಾಲ ಪದಾರ್ಪಣೆ ಮಾಡಬೇಕು. ಹೀಗಾದರೆ ವಾಡಿಕೆಗಿಂತ ನಾಲ್ಕೈದು ದಿನ ಮೊದಲೇ ಮಳೆಗಾಲ ಶುರುವಾಗಲಿದೆ ಎಂಬ ಹವಾಮಾನ ವರದಿ ನಿಜವಾಗಲಿದೆ. 

ಹಾಗೆಂದು ಹವಾಮಾನ ಸಂಸ್ಥೆಗಳ ವರದಿಗಳು ಶತ ಪ್ರತಿಶತ ನಿಜವಾಗುತ್ತವೆ ಎನ್ನುವಂತಿಲ್ಲ. ಕಳೆದ ವರ್ಷ ಹೆಚ್ಚಿನೆಲ್ಲ ಸಂಸ್ಥೆಗಳು ವಾಡಿಕೆಗಿಂತ ಹೆಚ್ಚು ಮಳೆ ಸುರಿಯುವ ಭವಿಷ್ಯ ನುಡಿದಿದ್ದವು. ಆದರೆ ಕೊನೆಗೆ ನೋಡಿದಾಗ ಬಹಳ ಕಡಿಮೆ ಮಳೆಯಾಗಿತ್ತು. ಅದರಲ್ಲೂ ದಕ್ಷಿಣ ಭಾರತದಲ್ಲಿ ದಶಕದಲ್ಲೇ ಗರಿಷ್ಠ ಮಳೆ ಕೊರತೆಯಾಗಿತ್ತು. ಇದರ ಪರಿಣಾಮವನ್ನು ಈ ಬೇಸಿಗೆಯಲ್ಲಿ ಜನರು ಅನುಭವಿಸಿದ್ದಾರೆ.  ಕರ್ನಾಟಕ, ಕೇರಳ ಸೇರಿದಂತೆ ದಕ್ಷಿಣದ ಬಹುತೇಕ ರಾಜ್ಯಗಳು ಸತತವಾಗಿ ಬರದಿಂದ ಕಂಗಾಲಾಗಿವೆ. ಉತ್ತರದಲ್ಲಿ ಕಳೆದ ಮಳೆಗಾಲದಲ್ಲಿ ಉತ್ತಮ ಮಳೆಯಾಗಿದ್ದರೂ ಈ ಸಲ ಬಿಸಿಲಿನ ಬೇಗೆ ತೀವ್ರವಾಗಿತ್ತು. ಮಳೆಯನ್ನೇ ಅವಲಂಬಿಸಿರುವ ರೈತಾಪಿ ವರ್ಗಕ್ಕೆ ಮಳೆ ಬೇಗ ಬಂದಷ್ಟು ಒಳ್ಳೆಯದು.

ಬಿತ್ತನೆ ಮತ್ತಿತರ ಕೃಷಿ ಕಾರ್ಯಗಳು ಸಮಯಕ್ಕೆ ಸರಿಯಾಗಿ ಶುರುವಾದರೆ, ಸಕಾಲಕ್ಕೆ ಕೊಯ್ಲು ಆಗಿ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗುತ್ತದೆ. ಶೈಕ್ಷಣಿಕ ವರ್ಷ ಪ್ರಾರಂಭವಾಗಲು ಕೂಡ ಮಳೆ ಸಕಾಲಕ್ಕೆ ಪ್ರಾರಂಭವಾಗುವುದು ಅಗತ್ಯ. ಬೇಸಿಗೆ ಮುಂದುವರಿದರೆ ತೀವ್ರ ಸೆಖೆ ಮತ್ತು ಕುಡಿಯುವ ನೀರಿನ ಕೊರತೆಯಿಂದಾಗಿ ಜೂನ್‌ ಮೊದಲ ವಾರದಲ್ಲಿ ಶಾಲೆಗಳನ್ನು ಪ್ರಾರಂಭಿಸಲು ಕಷ್ಟವಾಗುತ್ತದೆ. ಹೀಗಾಗಿ ಹವಾಮಾನ ಇಲಾಖೆಯ ವರದಿಗಳು ಮಳೆಗಾಲಕ್ಕೂ ಮೊದಲೇ ಎಲ್ಲ ವರ್ಗಕ್ಕೂ ತಂಪೆರೆದಿವೆ.  ಎಲ್‌ ನಿನೊ ಪ್ರಭಾವದಿಂದಾಗಿ ಕಳೆದ ವರ್ಷ ಮಳೆ ಕಡಿಮೆಯಾದ ಪರಿಣಾಮವಾಗಿ ಕರ್ನಾಟಕ, ಕೇರಳ, ಮತ್ತು ತಮಿಳುನಾಡು ತೀವ್ರವಾಗಿ ತತ್ತರಿಸಿವೆ. ಕುಡಿಯುವ ನೀರಿಗೂ ತತ್ವಾರವಾಗಿದೆ. ಆದರೆ ಈ ನಡುವೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಬೇಸಿಗೆ ಮಳೆಯಾಗಿ ಪರಿಸ್ಥಿತಿ ತುಸು ಸುಧಾರಿಸಿದೆ. ಕೇರಳದ ಕೆಲವು ಜಿಲ್ಲೆಗಳಲ್ಲೂ ಬೇಸಿಗೆ ಮಳೆಯಾಗಿದ್ದರೂ ನೀರಿನ ಕೊರತೆ ಮಾತ್ರ ನೀಗಿಲ್ಲ. ಮುಂಗಾರನ್ನು ಸ್ವಾಗತಿಸುವ ರಾಜ್ಯವೆಂಬ ಹಿರಿಮೆ ಹೊಂದಿರುವ ಕೇರಳದ ಈ ವರ್ಷದ ಬರ ಪರಿಸ್ಥಿತಿ ಆತಂಕವುಂಟು ಮಾಡಿದೆ. 

ಈ ಹಿನ್ನೆಲೆಯಲ್ಲಿ ಈ ಸಲ ವಾಡಿಕೆಯಂತೆ ಮಳೆಯಾಗಲಿದೆ ಎಂಬ ಭವಿಷ್ಯವಾಣಿ ರೈತರೂ ಸೇರಿದಂತೆ ಎಲ್ಲರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಜೂನ್‌ ಮತ್ತು ಜುಲೈ ತಿಂಗಳಲ್ಲಿ ಎಂದಿನಂತೆ ಮಳೆಯ ಅಬ್ಬರ ಜೋರಾಗಿರಬಹುದು. ಆಗಸ್ಟ್‌, ಸೆಪ್ಟೆಂಬರ್‌ನಲ್ಲಿ ಮಳೆ ಪ್ರಮಾಣ ತುಸು ಕಡಿಮೆಯಾಗುವ ಸಾಧ್ಯತೆಯಿದೆ.

ಒಟ್ಟಾರೆಯಾಗಿ ಶೇ. 96ರಿಂದ ಶೇ. 97ರಷ್ಟು ಮಳೆಯಾಗಬಹುದು ಎಂದು ತಜ್ಞರು ಅಂದಾಜು ಮಾಡಿದ್ದಾರೆ. ಹೀಗಾದರೆ ಬಹಳ ವರ್ಷಗಳ ಅನಂತರ ಸಾಮಾನ್ಯವಾದ ಮಳೆಗಾಲವನ್ನು ನೋಡುವ ಭಾಗ್ಯ ಜನರಿಗಿದೆ ಎಂದಾಯಿತು. 
ಅನೇಕ ವರ್ಷಗಳ ಬಳಿಕ ಉತ್ತಮ ಮಳೆಯಾಗುವ ಲಕ್ಷಣವೊಂದು ಕಾಣಿಸಿದೆ. ಸುರಿದ ಪ್ರತಿಯೊಂದು ಹನಿಯನ್ನೂ ರಕ್ಷಿಸಿ ಭವಿಷ್ಯಕ್ಕೆ ಕಾಪಿಡುವ ಕೆಲಸವನ್ನು ಮಾಡಲು ಇದು ಸಕಾಲ. ಅಂತರ್ಜಲ ಮಟ್ಟ ತೀವ್ರವಾಗಿ ಕುಸಿಯುತ್ತಿದ್ದು, ಇದರಿಂದಾಗಿ ಕೃಷಿಯ ಮೇಲೆ ಮಾತ್ರವಲ್ಲದೆ ಒಟ್ಟಾರೆ ಪರಿಸರದ ಮೇಲೆ ಪ್ರತಿಕೂಲ ಪರಿಣಾಮವಾಗುತ್ತಿದೆ. ಮಳೆಯ ನೀರನ್ನು ಇಂಗಿಸಿ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಕೆಲಸವನ್ನು ಸಮರೋಪಾದಿಯಲ್ಲಿ ಮಾಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರಕಾರ ಮಾತ್ರವಲ್ಲ ಜನರು ಕೂಡ ಕಾರ್ಯಪ್ರವೃತ್ತರಾಗಬೇಕು.

ಟಾಪ್ ನ್ಯೂಸ್

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.