ಅನುಷ್ಠಾನಕ್ಕೆ ಬೇಕು ಬದ್ಧತೆ ಕನ್ನಡ ಉಳಿಸಲು ಇನ್ನೊಂದು ನಿರ್ಧಾರ


Team Udayavani, Jul 15, 2017, 7:46 AM IST

15-ANKANA-3.jpg

ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಬದ್ಧತೆಯನ್ನೂ ತೋರಿಸಬೇಕು. ಇಲ್ಲದಿದ್ದರೆ ಕೆಲವು ಶಾಲೆಗಳು ನೆಪ ಮಾತ್ರಕ್ಕೆ ಕನ್ನಡ ಕಲಿಸುವ ನಾಟಕವಾಡುವ ಸಾಧ್ಯತೆಯಿದೆ.

ಕೆಲ ದಿನಗಳ ಹಿಂದೆಯಷ್ಟೇ ಕನಿಷ್ಠ 10ನೇ ತರಗತಿ ತನಕ ಕನ್ನಡ ಮಾಧ್ಯಮದಲ್ಲಿ ಕಲಿತವರಿಗೆ ಸರಕಾರಿ ನೌಕರಿಗಳಲ್ಲಿ ಶೇ.5 ಮೀಸಲಾತಿ ಪ್ರಕಟಿಸಿದ್ದ ಸರಕಾರ ಇದೀಗ ರಾಜ್ಯದ ಎಲ್ಲ ಶಾಲೆಗಳಲ್ಲಿ ಕನ್ನಡವನ್ನು ಒಂದು ಪಠ್ಯ ವಿಷಯವಾಗಿ ಬೋಧಿಸುವುದನ್ನು ಕಡ್ಡಾಯ ಮಾಡಿರುವುದು ಅತ್ಯಂತ ಸಮುಚಿತವಾದ ನಿರ್ಧಾರವಾಗಿದೆ. ಎರಡೂ ನಿರ್ಧಾರಗಳ ಹಿಂದಿನ ಕಾಳಜಿ ನಾಡಿನ ಭಾಷೆಯನ್ನು ಮತ್ತು ಆ ಮೂಲಕ ಸಂಸ್ಕೃತಿಯನ್ನು ಉಳಿಸುವುದಾಗಿದೆ. ಈ ಆದೇಶ ಕೇಂದ್ರೀಯ ಪಠ್ಯಕ್ರಮ ಅಳವಡಿಸಿಕೊಂಡಿರುವ ಎಲ್ಲ ಖಾಸಗಿ ಸಿಬಿಎಸ್‌ಇ, ಐಸಿಎಸ್‌ಇ, ಆಂಗ್ಲಮಾಧ್ಯಮ ಶಾಲೆಗಳು ಮಾತ್ರವಲ್ಲದೆ ತಮಿಳು, ಉರ್ದು ಸೇರಿದಂತೆ ವಿವಿಧ ಅಲ್ಪಸಂಖ್ಯಾಕ ಶಾಲೆಗಳಿಗೂ ಅನ್ವಯಿಸಲಿದೆ. ಮಕ್ಕಳು ಯಾವ ಮಾಧ್ಯಮದಲ್ಲೇ ಕಲಿತರೂ ಕನಿಷ್ಠ ಕನ್ನಡ ಓದಿ ಬರೆಯಲು ಸಾಧ್ಯವಾಗುವಂತೆ ಮಾಡುವ ನಿರ್ಧಾರವಿದು. ಒಂದು ವೇಳೆ ಶಾಲೆಗಳು ಈ ಆದೇಶವನ್ನು ಪಾಲಿಸದಿದ್ದರೆ ಮಾನ್ಯತೆ ಕಳೆದುಕೊಳ್ಳಬೇಕಾಗುತ್ತದೆ ಎಂದು ಶಿಕ್ಷಣ ಸಚಿವ ತನ್ವೀರ್‌ ಸೇs… ಎಚ್ಚರಿಸಿದ್ದಾರೆ. 

ಸಿಬಿಎಸ್‌ಇ ಪಠ್ಯಕ್ರಮ ಅನುಸರಿಸುವ ಶಾಲೆಗಳಲ್ಲಿ ತೃತೀಯ ಭಾಷೆಯಾಗಿ ಕನ್ನಡ ಕಲಿಸುವ ವ್ಯವಸ್ಥೆ ಈಗಾಗಲೇ ಇದೆ. ಎಂಟನೇ ತರಗತಿ ತನಕ ಮಕ್ಕಳಿಗೆ ಕನ್ನಡ ಕಲಿಸಲಾಗುತ್ತಿದೆ. ಆದರೆ ಐಸಿಎಸ್‌ಇ ಮತ್ತು ಭಾಷಾ ಅಲ್ಪಸಂಖ್ಯಾಕ ಶಾಲೆಗಳಲ್ಲಿ ಮಾತ್ರ ಕನ್ನಡವನ್ನು ಕಡ್ಡಾಯವಾಗಿ ಕಲಿಸಲಾಗುತ್ತಿಲ್ಲ. ಇದರಿಂದಾಗಿ ಕರ್ನಾಟಕದಲ್ಲೇ ಕಲಿತರೂ ಅನೇಕ ಮಕ್ಕಳಿಗೆ ಕನ್ನಡದ ಗಂಧಗಾಳಿ ಇರುವುದಿಲ್ಲ. ಸಚಿವರು ಹೇಳಿರುವ ಪ್ರಕಾರ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಕನ್ನಡ ಬೋಧನೆ ಮಾಡಬೇಕು. ಆದರೆ ಈಗಾಗಲೇ ಶಾಲೆಗಳು ಶುರುವಾಗಿ ಒಂದೂವರೆ ತಿಂಗಳಾಗುತ್ತಾ ಬಂದಿದೆ. ಸಿಬಿಎಸ್‌, ಐಸಿಎಸ್‌ಇಯಂತಹ ಕೇಂದ್ರೀಯ ಪಠ್ಯ ಕ್ರಮ ಅನುಸರಿಸುವ ಶಾಲೆಗಳು ಪ್ರತಿವರ್ಷ ಜೂನ್‌ ಒಂದರಂದೇ ಕರಾರುವಾಕ್ಕಾಗಿ ಶುರುವಾಗುತ್ತವೆ. ಎಲ್ಲ ಶಾಲೆಗಳಲ್ಲಿ ಈ ವರ್ಷ ಶೈಕ್ಷಣಿಕ ಚಟುವಟಿಕೆಗಳ ವೇಳಾಪಟ್ಟಿಯೂ ತಯಾರಾಗಿದೆ. ಶಾಲೆಗಳು ಪ್ರಾರಂಭವಾಗಿ ಒಂದೂವರೆ ತಿಂಗಳು ಕಳೆದ ಬಳಿಕ ಈ ಆದೇಶ ಹೊರಡಿಸಿರುವುದರಿಂದ ಕೆಲವು ಶಾಲೆಗಳಿಗೆ ಅದನ್ನು ಪಾಲಿಸುವುದು ಕಷ್ಟವಾಗಬಹುದು.  ಹಿಂದೆ ಕನ್ನಡ ಮಾಧ್ಯದಲ್ಲೇ ಪ್ರಾಥಮಿಕ ವಿದ್ಯಾಭ್ಯಾಸ ಕಡ್ಡಾಯಗೊಳಿಸಲು ಸರಕಾರ ಮುಂದಾಗಿತ್ತು. ಆದರೆ ಸುಪ್ರೀಂ ಕೋರ್ಟ್‌ ಕಲಿಕಾ ಮಾಧ್ಯಮ ಹೆತ್ತವರ ಆಯ್ಕೆಗೆ ಬಿಟ್ಟದ್ದು ಎಂದು ತೀರ್ಪು ನೀಡಿದ ಬಳಿಕ ಈ ಪ್ರಸ್ತಾವವನ್ನು ಹಿಂದೆಗೆದುಕೊಳ್ಳಲಾಗಿದೆ. ಕಲಿಕಾ ಮಾಧ್ಯಮ  ವಿಚಾರದಲ್ಲಿ ಸರಕಾರ ಯಾವುದೇ ಆದೇಶ ಹೊರಡಿಸಿದರೂ ಅದು ಒಂದಲ್ಲ ಒಂದು ವಿವಾದವನ್ನು ಸೃಷ್ಟಿಸುತ್ತದೆ. ಇಂಗ್ಲಿಷ್‌ ಅನ್ನ ಕೊಡುವ ಭಾಷೆ ಎಂಬ ಭಾವನೆ ದಟ್ಟವಾಗಿರುವ ಕಾರಣ ಪೋಷಕರೆಲ್ಲ ಎಷ್ಟೇ ಕಷ್ಟವಾದರೂ ತಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಗಳಿಗೆ ಸೇರಿಸುತ್ತಾರೆ. ಜನರ ಈ ಭಾವನೆಯೇ ಶಿಕ್ಷಣ ಎನ್ನುವುದು ಈಗ ವ್ಯಾಪಾರವಾಗಲು ಮೂಲಕಾರಣ. ಪ್ರತಿ ವರ್ಷ ಆಂಗ್ಲ ಮಾಧ್ಯಮ ಶಾಲೆಗಳ ಸಂಖ್ಯೆ ಹೆಚ್ಚುತ್ತಿದೆ. ಇದೇ ವೇಳೆ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಹೇಳುವುದಾದರೆ ಎಲ್ಲ ಶಾಲೆಗಳಲ್ಲಿ ಕನ್ನಡವನ್ನು ಒಂದು ಭಾಷಾ ವಿಷಯವಾಗಿ ಕಲಿಸುವುದು ಅತ್ಯಂತ ಅಗತ್ಯ. ಈ ನಿರ್ಧಾರವನ್ನು ಬಹಳ ಹಿಂದೆಯೇ ಕೈಗೊಳ್ಳಬೇಕಿತ್ತು.  ಇದೀಗ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಬದ್ಧತೆಯನ್ನೂ ತೋರಿಸಬೇಕು. ಇಲ್ಲದಿದ್ದರೆ ಕೆಲವು ಶಾಲೆಗಳು ನೆಪ ಮಾತ್ರಕ್ಕೆ ಕನ್ನಡ ಕಲಿಸುವ ನಾಟಕವಾಡಿ ಕಣ್ಣಿಗೆ ಮಣ್ಣೆರಚುವ ಸಾಧ್ಯತೆಯಿದೆ. ಹಾಗೆಂದು ಈ ರೀತಿಯ ಆದೇಶ ಹೊರಡಿಸಿದ ಮೊದಲ ರಾಜ್ಯ ಕರ್ನಾಟಕವಲ್ಲ. ಪಕ್ಕದ ಕೇರಳದಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ ಮಲಯಾಳಂ ಕಡ್ಡಾಯಗೊಳಿಸಲಾಗಿದೆ ಹಾಗೂ ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಮರೋಪಾದಿಯಲ್ಲಿ ವ್ಯವಸ್ಥೆಗಳನ್ನು ಮಾಡ ಲಾಗಿದೆ. ಅಚ್ಚ ಕನ್ನಡದ ಕಾಸರಗೋಡಿನಲ್ಲಿ ಕನ್ನಡಿಗರ ಪ್ರಬಲ ಪ್ರತಿಭಟನೆಯ ನಡುವೆಯೂ ಅಲ್ಲಿನ ಸರಕಾರ ಮಲಯಾಳಂ ಬೋಧಿಸಲು ವ್ಯವಸ್ಥೆಗಳನ್ನು ಮಾಡಿದೆ. ಕನ್ನಡಿಗರ ಹಿತದೃಷ್ಟಿಯಿಂದ ಇದು ಉತ್ತಮ ಬೆಳವಣಿಗೆ ಅಲ್ಲದಿದ್ದರೂ ಅಲ್ಲಿನ ಸರಕಾರ ತನ್ನ ಆದೇಶವನ್ನು ಕಾರ್ಯಗತಗೊಳಿಸಲು ತೋರಿಸಿರುವ ಬದ್ಧತೆ ಮಾತ್ರ ಅನುಕರಣೀಯ.

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.