ಶಾಶ್ವತ ಕಾರ್ಯಕ್ರಮಗಳು ಅಗತ್ಯ ಮತ್ತೆ ಬರದ ಬವಣೆ


Team Udayavani, Sep 13, 2017, 4:20 PM IST

Drought.jpg

ಮುಂಗಾರು ಆರಂಭಕ್ಕೆ ಮುನ್ನ ಹವಾಮಾನ ಇಲಾಖೆ ನುಡಿದ ಶೇ.95 ಮಳೆಯಾಗುವ ಭವಿಷ್ಯ ಸುಳ್ಳಾಗಿದೆ. ಸಾಕಷ್ಟು ಪ್ರಮಾಣದಲ್ಲಿ ಮಳೆ ಸುರಿದಿ ಲ್ಲ ಮಾತ್ರವಲ್ಲದೆ, ಮಳೆಯ ಅಸಮರ್ಪಕ ಹಂಚಿಕೆಯೂ ಆಗಿದೆ. ಈ ಸಲ ನೆರೆ ಬಂದಿರುವುದು ಮುಂಬಯಿ, ಬೆಂಗಳೂರು, ಲಕ್ನೊ ಮತ್ತಿತರ ದೊಡ್ಡ ನಗರಗಳಲ್ಲಿ ಮಾತ್ರ. ಇದು ಅತಿವೃಷ್ಟಿಯಿಂದಾಗಿರುವ ನೆರೆಯಲ್ಲ, ಬದಲಾಗಿ ಯದ್ವಾತದ್ವಾ ಬೆಳೆದ ನಗರಗಳಿಂದಾಗಿ  ಸೃಷ್ಟಿಯಾಗಿರುವ ಕೃತಕ ಪ್ರವಾಹ. ಒಟ್ಟಾರೆ ಸುಮಾರು ಶೇ. 17ರಷ್ಟು ಮಳೆ ಕೊರತೆಯಾಗಿದ್ದು, ಕರ್ನಾಟಕವೂ ಸೇರಿ 17 ರಾಜ್ಯಗಳಲ್ಲಿ ಮತ್ತೆ ಬರದ ಭೀತಿ ಆವರಿಸಿದೆ.

ಕರ್ನಾಟಕದ ಪಾಲಿಗಂತೂ ಸತತ ನಾಲ್ಕನೇ ವರ್ಷ ವರುಣನ ಮುನಿಸು ಮುಂದುವರಿದಂತಾಗಿದೆ. ಸದ್ಯಕ್ಕೆ 17 ರಾಜ್ಯಗಳ 225 ಜಿಲ್ಲೆಗಳಲ್ಲಿ ಬರಗಾಲ ಕಾಣಿಸಿಕೊಳ್ಳಲಿದೆ ಎಂದು ಕೇಂದ್ರ ಸರಕಾರದ ರಾಷ್ಟ್ರೀಯ ಕೃಷಿ ಮತ್ತು ಬರಗಾಲ ಪರಿಶೀಲನಾ ವ್ಯವಸ್ಥೆ ಎಚ್ಚರಿಸಿದೆ. ಬೇಸಿಗೆ ಆಗಮಿಸಿದಂತೆ ಬರಪೀಡಿತವಾಗುವ ಜಿಲ್ಲೆಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಅದರಲ್ಲೂ ಆಹಾರ ಧಾನ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುವ ಪಂಜಾಬ್‌, ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳು ಬರದ ಹೊಡೆತಕ್ಕೆ ಗುರಿಯಾಗಲಿವೆ ಎನ್ನುವುದು ಹೆಚ್ಚು ಕಳವಳಕಾರಿ  ವಿಚಾರ.

ಬರಗಾಲದ ನಾನಾ ರೀತಿಯ ಪರಿಣಾಮಗಳನ್ನು ಕಳೆದ ಬೇಸಿಗೆ ಯಲ್ಲಿ ನಾವು ನೋಡಿದ್ದೇವೆ. ಒಂದೆಡೆ ಜನರು ಜಾನುವಾರುಗಳು ಅನ್ನ ನೀರು ಇಲ್ಲದೆ ವಿಲಿವಿಲಿ ಒದ್ದಾಡುತ್ತಿದ್ದರೆ ನಮ್ಮನ್ನಾಳುವವರು ಬರ ಪರಿಹಾರ ಮತ್ತು ಸಾಲಮನ್ನಾ ವಿಚಾರಗಳನ್ನು ಹಿಡಿದುಕೊಂಡು ಪರಸ್ಪರರ ಮೇಲೆ ಆರೋಪ ಪ್ರತ್ಯಾರೋಪಗಳನ್ನು ಮಾಡುತ್ತಾ ಎಲ್ಲದ ರಲ್ಲೂ ರಾಜಕೀಯದ ಲಾಭವನ್ನು
ಲೆಕ್ಕ ಹಾಕಿದರು. ಇದೀಗ ಇದೇ ಪ್ರಹಸನ ಈ ವರ್ಷವೂ ಪುನರಾವರ್ತ ನೆಯಾಗುವ ಸಾಧ್ಯತೆಯಿದೆ. ಇದು ಚುನಾವಣಾ ವರ್ಷವೂ ಆಗಿರುವು ದರಿಂದ ಬರದ ಮೇಲಿನ ರಾಜಕೀಯ ಕೆಸರೆರಚಾಟ ಜೋರಾಗಿಯೇ ನಡೆಯಬಹುದು.

ಬರ ಎಲ್ಲರನ್ನೂ ಕಾಡಿದರೂ ಹೆಚ್ಚು ಹೊಡೆತ ನೀಡುವುದು ರೈತ ಸಮುದಾಯಕ್ಕೆ. ಈ ಸಮುದಾಯ ಉಳಿದೆಲ್ಲ ಜನವರ್ಗಗಳ ತಳಪಾಯ ಇದ್ದ ಹಾಗೆ. ಇದು ತನಕ ರೈತ ಸಮುದಾಯಕ್ಕೆ ಸತತ ಉಂಟಾಗುತ್ತಿರುವ ಬರದ ಬಾಧೆಯ ಪರಿಣಾಮ ಉಳಿದ ಜನವರ್ಗಗಳನ್ನು ಅಷ್ಟಾಗಿ ತಟ್ಟಿಲ್ಲ. ಆದರೆ ಇಂದಲ್ಲ ನಾಳೆಯಾದರೂ ಅದು ಆಹಾರ ಕ್ಷಾಮ, ಬೆಲೆಯೇರಿಕೆಯಂತಹ ಪರಿಣಾಮಗಳ ಮೂಲಕ ಸಮಾಜದ ಇತರ ಸಮುದಾಯಗಳನ್ನೂ ತೀವ್ರವಾಗಿ ತಟ್ಟುವುದು ಶತಸ್ಸಿದ್ಧ. ಕೃಷಿಯಿಂದ ದೇಶದ ಜಿಡಿಪಿಗೆ ಈಗ ಭಾರೀ ಎನ್ನಬಹುದಾದ ಯೋಗದಾನ ಇಲ್ಲದಿದ್ದರೂ, ಈಗಲೂ ಅತ್ಯಧಿಕ ಜನರಿಗೆ ಉದ್ಯೋಗ ನೀಡುತ್ತಿರುವುದು
ಕೃಷಿ ಕ್ಷೇತ್ರ ಮತ್ತು ಕೃಷಿ ಸಂಬಂಧಿ ಉದ್ಯಮಗಳು. ಬರದಿಂದಾಗಿ ಬೆಳೆ ವಿಫ‌ಲವಾದರೆ ಕೋಟಿಗಟ್ಟಲೆ ಜನರು ನಿರುದ್ಯೋಗಿಗಳಾಗುತ್ತಾರೆ  ಹಾಗೂ ಇದರಿಂದ ದೇಶದ ಆರ್ಥಿಕತೆಯ ಮೇಲೆ ಪ್ರತಿಕೂಲ ಪರಿಣಾಮವಾಗುತ್ತದೆ.

ಹಲವು ರಾಜ್ಯಗಳು ಬರಕ್ಕೆ ತುತ್ತಾಗುವ ಮುನ್ಸೂಚನೆ ಇದ್ದರೂ ಒಟ್ಟಾರೆ ಆಹಾರ ಉತ್ಪಾದನೆ ಕಡಿಮೆಯಾಗುವುದಿಲ್ಲ ಎಂದು ಕೇಂದ್ರ ಕೃಷಿ ಸಚಿವಾಲಯ ಹೇಳಿರುವುದು ಪೂರ್ಣ ನಿಜವಲ್ಲ. ಹಾಲಿ ಹಂಗಾಮಿನ ಕೊಯ್ಲು ಇನ್ನಷ್ಟೇ ಆಗಬೇಕಾಗಿದೆ. ಇದಕ್ಕೂ ಮೊದಲು ಆಹಾರ ಉತ್ಪಾದನೆಯನ್ನು ಅಂದಾಜಿಸುವುದು ಸಾಧ್ಯವಿಲ್ಲ. ಒಂದು ವೇಳೆ ಉತ್ಪಾದನೆ ಕಡಿಮೆಯಾದರೂ ವಿದೇಶದಿಂದ ಆಮದು ಮಾಡಿಕೊಳ್ಳುವ ಆಯ್ಕೆ ಇದೆ ಎಂದು ನಿಶ್ಚಿಂತೆಯಿಂದ ಇರಬಹುದು.

ಆದರೆ ಪ್ರತಿ ವರ್ಷ ಆಹಾರ ಧಾನ್ಯಗಳಿಗಾಗಿ ವಿದೇಶಗಳ ಅವಲಂಬನೆ ಆರ್ಥಿಕವಾಗಿ ಮಾತ್ರವಲ್ಲದೆ ದೇಶದ ಒಟ್ಟು ಹಿತಾಸಕ್ತಿಯಿಂದಲೂ ಸರಿಯಾದ ನಡೆಯಲ್ಲ ಎಂದು ತಜ್ಞರು ಪದೇ ಪದೇ ಎಚ್ಚರಿಸುತ್ತಿದ್ದಾರೆ. ಬರ ಮಾಮೂಲಾಗುತ್ತಿರುವ ಸಂದರ್ಭದಲ್ಲಿ ಸರಕಾರ ಇದನ್ನು ಪರಿಣಾಮಕಾರಿಯಾಗಿ ಎದುರಿಸಲು ಶಾಶ್ವತ ಕಾರ್ಯಕ್ರಮಗಳನ್ನು
ರೂಪಿಸುವತ್ತ ಗಮನ ಹರಿಸಬೇಕು. ಈ ನಿಟ್ಟಿನಲ್ಲಿ ಎಂ. ಎಸ್‌. ಸ್ವಾಮಿನಾಥನ್‌ ಆಯೋಗ ಮಾಡಿರುವ ಶಿಫಾರಸುಗಳನ್ನು ಹೆಚ್ಚು ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ.

*ಸಂಪಾದಕೀಯ

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.