ಪೆಟ್ರೋಲು, ಡೀಸೆಲ್‌ ಜಿಎಸ್‌ಟಿಯಡಿ ಬರಲಿ: ಗ್ರಾಹಕರಿಗೇಕಿಲ್ಲ ಲಾಭ?


Team Udayavani, Sep 16, 2017, 12:19 PM IST

16-PTI-20.jpg

ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಬಳಿಕ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಅರ್ಧಕ್ಕರ್ಧ ಕಡಿಮೆಯಾಗಿದೆ. ಆದರೆ ದೇಶದಲ್ಲಿ ಪೆಟ್ರೋಲು ಮತ್ತು ಡೀಸೆಲ್‌ ಬೆಲೆ ಮಾತ್ರ ಒಂದೇ ಸವನೆ ಹೆಚ್ಚಾಗುತ್ತಿದೆ. ಸದ್ಯ ಮಹಾನಗರಗಳಲ್ಲಿ ಪೆಟ್ರೋಲು ಮತ್ತು ಡೀಸೆಲ್‌ ಬೆಲೆ 2014ರಲ್ಲಿದ್ದ ಸ್ಥಿತಿಗೆ ತಲುಪಿದೆ. ಮುಂಬಯಿಯಲ್ಲಿ ಪೆಟ್ರೋಲು 80 ರೂ. ಸನಿಹದಲ್ಲಿದೆ. ಬೆಂಗಳೂರು, ಕೋಲ್ಕತ್ತ, ದಿಲ್ಲಿ, ಚೆನ್ನೈಯ ಮತ್ತಿತರ ನಗರಗಳಲ್ಲಿ 70ರಿಂದ 75ರೂ.ಆಸುಪಾಸಿನಲ್ಲಿದೆ. ನಿತ್ಯ ಬೆಲೆ ಪರಿಷ್ಕರಿಸುವ ವ್ಯವಸ್ಥೆಯನ್ನು ಅಳವಡಿಸಿಕೊಂಡ ಬಳಿಕ ಪೈಸೆಗಳ ಲೆಕ್ಕದಲ್ಲಿ ಬೆಲೆ ಏರುತ್ತಾ ಹೋಗಿರುವುದು ಗಮನಕ್ಕೆ ಬಂದಿಲ್ಲ. ಈ ವ್ಯವಸ್ಥೆ ಜಾರಿಗೆ ಬಂದ ಬಳಿಕ ಪೆಟ್ರೋಲು ಮತ್ತು ಡೀಸೆಲ್‌ ಬೆಲೆ ಸುಮಾರು 7 ರೂ. ಹೆಚ್ಚಾಗಿದೆ. ಹಿಂದೆ 15 ದಿನಗಳಿಮ್ಮೆ 2-3 ರೂಪಾಯಿ ಹೆಚ್ಚಾದಾಗ ಒಮ್ಮೆಲೆ ಇದರ ಬಿಸಿ ತಟ್ಟಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದವು.ಜಿಎಸ್‌ಟಿ ಜಾರಿಗೆ ಬಂದ ದಿನ ಸುಮಾರು 3 ರೂ. ಇಳಿಕೆಯಾಗಿರುವುದು ಬಿಟ್ಟರೆ ಅನಂತರ ನಿತ್ಯವೂ ಹೆಚ್ಚಳವೇ ಆಗುತ್ತಿದೆ. ಪೆಟ್ರೋಲು ಮತ್ತು ಡೀಸೆಲ್‌ ಬೆಲೆ ಹೆಚ್ಚಳದ ಬಿಸಿ ಜನರಿಗೆ ಮುಟ್ಟಲಾರಂಭಿಸಿದೆ. ಆಹಾರ ಬೆಲೆಯುಬ್ಬರವಾಗುತ್ತಿದ್ದು, ಇದರಿಂದ ಬಡ ಮತ್ತು ಮಧ್ಯಮ ವರ್ಗದವರ ಬದುಕು ದುಸ್ತರವಾಗುತ್ತಿದೆ. ಆಗಸ್ಟ್‌ನಲ್ಲಿ ಸಗಟು ಆಹಾರ ಬೆಲೆಯುಬ್ಬರ ಶೇ.5.75ಕ್ಕೇರಿತ್ತು. ಎಲ್ಲ ಅಗತ್ಯ ವಸ್ತುಗಳ ಬೆಲೆ ಹೆಚ್ಚುತ್ತಿದ್ದು, ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಜನರ ಜೇಬಿಗೆ ಇನ್ನಷ್ಟು ಕತ್ತರಿ ಬೀಳಲಿದೆ. ಆದರೆ ಸರಕಾರ ಇದರ ಪರಿವೇ ಇಲ್ಲದಂತೆ ವರ್ತಿಸುವುದನ್ನು ನೋಡುವಾಗ ಆಶ್ಚರ್ಯವಾಗುತ್ತದೆ. 

ಹಿಂದಿನ ಯುಪಿಎ ಸರಕಾರದ ಆಡಳಿತವಿದ್ದಾಗ ಕಚ್ಚಾತೈಲ ಬೆಲೆ ಬ್ಯಾರಲ್‌ಗೆ 120 ಡಾಲರ್‌ ತನಕ ಏರಿತ್ತು. ಆಗ ಪೆಟ್ರೋಲು ಬೆಲೆಯೂ 80 ರೂ. ದಾಟಿತ್ತು. ಆದರೆ ಮೋದಿ ಪ್ರಧಾನಿಯಾದ ಬಳಿಕ ಕಚ್ಚಾತೈಲ ಬೆಲೆ ಬ್ಯಾರಲ್‌ಗೆ 28 ರೂ. ಆದರೂ ಪೆಟ್ರೋಲು ಮತ್ತು ಡೀಸಿಲ್‌ ಬೆಲೆಯಲ್ಲಿ ಹೇಳಿಕೊಳ್ಳುವಂತಹ ಇಳಿಕೆ ಆಗಲಿಲ್ಲ. ಪ್ರಸ್ತುತ ಕಚ್ಚಾತೈಲ ಬೆಲೆ ಬ್ಯಾರಲ್‌ಗೆ 50 ಡಾಲರ್‌ ಇದೆ. ಈ ಲೆಕ್ಕದಲ್ಲಿ ಗರಿಷ್ಠ ಎಂದರೆ 45 ರೂ.ಗೆ ಪೆಟ್ರೋಲು ಸಿಗಬೇಕಿತ್ತು. ಆದರೆ ಹತ್ತಾರು ತೆರಿಗೆಗಳ ಪರಿಣಾಮವಾಗಿ ಪೆಟ್ರೋಲು ಈಗಲೂ ದುಬಾರಿಯಾಗಿ ಉಳಿದಿದೆ. ಈ ವಿಚಾರದಲ್ಲಿ ನಮ್ಮ ನೆರೆಯ ಪಾಕಿಸ್ಥಾನ, ಬಾಂಗ್ಲಾದೇಶಗಳೇ ವಾಸಿ. ಈ ನೆರೆ ದೇಶಗಳಲ್ಲಿ ನಮಗಿಂತ ಪೆಟ್ರೋಲು ಬೆಲೆ ಬಹಳಷ್ಟು ಕಡಿಮೆಯಿದೆ ಹಾಗೂ ಕಚ್ಚಾತೈಲ ಬೆಲೆ ಇಳಿಕೆಯಾದಾಗಲೆಲ್ಲ ಲಾಭ ಗ್ರಾಹಕರಿಗೆ ಸಿಗುತ್ತದೆ. ಈ ಬೆಲೆ ಇಳಿಕೆಯಾದಾಗ ಅದರ ಲಾಭವನ್ನು ಜನರಿಗೆ ನೀಡುವ ಬದಲು ಕೇಂದ್ರ ಮತ್ತು ರಾಜ್ಯ ಸರಕಾರಗಳು ವಿವಿಧ ರೀತಿಯ ತೆರಿಗೆ ಮತ್ತು ಮೇಲೆ¤ರಿಗೆ ವಿಧಿಸಿ ಬೊಕ್ಕಸ ತುಂಬಿಸಿಕೊಳ್ಳುತ್ತಿರುವುದೇ ಈ ಅಗತ್ಯ ಇಂಧನಗಳ ಬೆಲೆ ಸದಾ ಗಗನಮುಖೀಯಾಗಿರುವುದಕ್ಕೆ ಕಾರಣ.  ತೈಲ ಸಂಸ್ಕಾರಣಾಗಾರದಿಂದ ಪೆಟ್ರೋಲು ಹೊರಬರುವಾಗ ಅದರ ಬೆಲೆ ಬರೀ ರೂ. 26.65 ಇರುತ್ತದೆ. ಸಾಗಾಟ ವೆಚ್ಚ ಸೇರಿ ತೈಲ ಕಂಪೆನಿಗಳಿಗೆ ಬರುವಾಗ 30.70 ರೂ. ಆಗುತ್ತದೆ. ಆದರೆ ಪೆಟ್ರೋಲು ಪಂಪ್‌ಗ್ಳಲ್ಲಿ 70-71 ರೂಗೆ ಮಾರಾಟವಾಗುತ್ತದೆ. ಅಂದರೆ ಪೆಟ್ರೋಲು ಬೆಲೆಯಲ್ಲಿ ಅರ್ಧಕ್ಕರ್ಧ ಭಾಗ ತೆರಿಗೆ ಒಳಗೊಂಡಿರುತ್ತದೆ. ತೆರಿಗೆ ವ್ಯಾಪ್ತಿಗೆ ಬರುವ ಬಹುತೇಕ ಎಲ್ಲ ವಸ್ತುಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತಂದಿದ್ದರೂ ಪೆಟ್ರೋಲು ಮತ್ತು ಡೀಸೆಲ್‌ನ್ನು ಹೊರಗಿಡಲಾಗಿದೆ. ಈ ಎರಡು ಇಂಧನಗಳಿಗೆ ಈಗಲೂ ವ್ಯಾಟ್‌ ಅನ್ವಯವಾಗುತ್ತದೆ. ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ವ್ಯಾಟ್‌ ಆಯಾಯ ರಾಜ್ಯಕ್ಕೆ ತಕ್ಕಂತೆ ಬದಲಾಗುತ್ತದೆ. ಹೀಗಾಗಿ ರಾಜ್ಯದಿಂದ ರಾಜ್ಯಕ್ಕೆ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯಲ್ಲಿ ಸುಮಾರು 9 ರೂ. ತನಕ ವ್ಯತ್ಯಾಸವಿರುತ್ತದೆ. 2014ರಿಂದೀಚೆಗೆ ಕೇಂದ್ರ ಸರಕಾರ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕವನ್ನು ಶೇ. 54 ಏರಿಸಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಪೆಟ್ರೋಲಿಯಂ ಉತ್ಪನ್ನಗಳು ಸುಲಭವಾಗಿ ಬೊಕ್ಕಸ ತುಂಬಿಸಿಕೊಳ್ಳುವ ಮಾರ್ಗವಾಗಿದೆ. 

ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಮಾತ್ರ ಬೆಲೆ ಕಡಿಮೆಯಾಗಲಿದೆ ಎಂದು ಎರಡು ದಿನಗಳ ಹಿಂದೆಯಷ್ಟೇ ಈ ಖಾತೆಯನ್ನು ನಿರ್ವಹಿಸುತ್ತಿರುವ ಧರ್ಮೇಂದ್ರ ಪ್ರಧಾನ್‌ ಹೇಳಿದ್ದಾರೆ. ಪ್ರಸ್ತುತ ಇರುವ ಕಚ್ಚಾತೈಲ ಬೆಲೆಯೇ ಆಧಾರದಲ್ಲಿ ಹೇಳುವುದಾದರೆ ಪೆಟ್ರೋಲಿಯಂ ಉತ್ಪನ್ನಗಳು ಜಿಎಸ್‌ಟಿ ವ್ಯಾಪ್ತಿಗೆ ಬಂದರೆ ಬೆಲೆ ಅರ್ಧದಷ್ಟು ಕಡಿಮೆಯಾಗಬೇಕು. ಗರಿಷ್ಠ ಶೇ. 28 ಜಿಎಸ್‌ಟಿ ವಿಧಿಸಿದರೂ ಪೆಟ್ರೋಲು ಬೆಲೆ ಲೀಟರಿಗೆ 44 ರೂ. ಆಗಬಹುದು. ಮೇಲೆ¤ರಿಗೆ ವಿಧಿಸಿ 50 ರೂ.ಗೆ ಪೆಟ್ರೋಲು ಕೊಟ್ಟರೂ ಸಾಕು. ಇಂತಹ ಒಂದು ಸುವರ್ಣ ಯುಗ ಬರಬೇಕಾದರೆ ಸರಕಾರ ದೃಢ ಸಂಕಲ್ಪ ಮಾಡಬೇಕಷ್ಟೆ.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.