ಸಿಖ್‌ ಹತ್ಯಾಕಾಂಡದ ಮರು ತನಿಖೆ: ಕೊನೆಗಾದರೂ ನ್ಯಾಯ ಸಿಗಲಿ 


Team Udayavani, Jan 12, 2018, 10:05 AM IST

12-16.jpg

1984ರ ಸಿಖ್‌ ಹತ್ಯಾಕಾಂಡ ಪ್ರಕರಣ ಬರೋಬ್ಬರಿ 34 ವರ್ಷಗಳ ಬಳಿಕ ಮತ್ತೂಮ್ಮೆ ತನಿಖೆಗೊಳಪಡಲಿದೆ. ಇದಕ್ಕಾಗಿಯೇ ಸುಪ್ರೀಂ ಕೋರ್ಟ್‌ ದಿಲ್ಲಿ ಹೈಕೋರ್ಟ್‌ ನ್ಯಾಯಾಧೀಶ ಶಿವ ನಾರಾಯಣ್‌ ದಿಂಗ್ರ ನೇತೃತ್ವದಲ್ಲಿ ಹೊಸದಾಗಿ ಮೂರು ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಐಪಿಎಸ್‌ ಅಧಿಕಾರಿಗಳಾದ ರಾಜದೀಪ್‌ ಸಿಂಗ್‌ ಮತ್ತು ಅಭಿಷೇಕ್‌ ಧುಲರ್‌ ಸಿಟ್‌ನ ಉಳಿದಿಬ್ಬರು ಸದಸ್ಯರು. ಈ ಪೈಕಿ ಸಿಂಗ್‌ ಸೇವಾ ನಿವೃತ್ತರಾಗಿದ್ದಾರೆ. ವಿಶೇಷವೆಂದರೆ ಇದೇ ದಿಂಗ್ರ ದಿಲ್ಲಿಯ ಸೆಶನ್ಸ್‌ ನ್ಯಾಯಾಧೀಶರಾಗಿದ್ದ ವೇಳೆ ಸಿಖ್‌ ಹತ್ಯಾಕಾಂಡ ಪ್ರಕರಣದ ವಿಚಾರಣೆ ನಡೆಸಿದ್ದರು. ಹತ್ಯಾಕಾಂಡದ 186 ಪ್ರಕರಣಗಳನ್ನು ಮರು ತನಿಖೆಗೊಳಪಡಿಸಲು ಸುಪ್ರೀಂ ಕೋರ್ಟ್‌ ನಿರ್ಧರಿಸಿದೆ. 2014ರಲ್ಲಿ ರಚಿಸಿದ ಸಿಟ್‌ಗೆ 293 ಪ್ರಕರಣಗಳ ತನಿಖೆ ನಡೆಸಲು ಸೂಚಿಸಲಾಗಿತ್ತು. ಈ ಪೈಕಿ 250 ಪ್ರಕರಣಗಳ ತನಿಖೆ ನಡೆಸಿದ ಸಿಟ್‌ 241 ಪ್ರಕರಣಗಳಲ್ಲಿ ತನಿಖೆ ಮುಕ್ತಾಯ ವರದಿ ಸಲ್ಲಿಸಿತ್ತು. ಇದಕ್ಕೆ ಬಲವಾದ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ವೋತ್ಛ ನ್ಯಾಯಾಲಯ ಹೊಸ ಸಿಟ್‌ ರಚಿಸಿದೆ. ಹಿಂದಿನ ಸಿಟ್‌ನಲ್ಲಿದ್ದವರು ಸುಪ್ರೀಂ ಕೋರ್ಟಿನ ಇಬ್ಬರು ವಿಶ್ರಾಂತ ನ್ಯಾಯಾಧೀಶರು ಎನ್ನುವುದು ಗಮನಾರ್ಹ ಅಂಶ. ಈ ಸಿಟ್‌ 186 ಪ್ರಕರಣಗಳ ತನಿಖೆ ನಡೆಸದೆಯೇ ಮುಕ್ತಾಯ ವರದಿ ಸಲ್ಲಿಸಿತ್ತು. ಹೀಗಾಗಿ ನ್ಯಾಯಾಲಯವೇ ರಚಿಸುವ ಸಿಟ್‌ಗಳು ಎಷ್ಟು ವಿಶ್ವಾಸಾರ್ಹ ಎಂಬ ಸಂದೇಹ ಇದೆ.. 

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರನ್ನು ಅವರ ಸಿಖ್‌ ಅಂಗರಕ್ಷಕರೇ ಗುಂಡಿಕ್ಕಿ ಕೊಂದ ಘಟನೆಗೆ ಪ್ರತೀಕಾರವಾಗಿ ನಡೆದ ಸಿಖVರ ಮಾರಣಹೋಮ ದೇಶದ ಇತಿಹಾಸದಲ್ಲಿ ಎಂದೂ ಅಳಿಸಲಾಗದ ಕಪ್ಪು ಚುಕ್ಕೆ. ಬಾಬರಿ ಕಟ್ಟಡ ನೆಲಸಮವಾದ ಬಳಿಕ ನಡೆದ ದಂಗೆ ಹಾಗೂ 2002ರ ಗುಜರಾತ್‌ ಹಿಂಸಾಚಾರಗಳನ್ನು ಈ ಸಾಲಿಗೆ ಸೇರಿಸಬಹುದು. ಈ ಎಲ್ಲ ಪ್ರಕರಣಗಳಲ್ಲಿ ಆಡಳಿತ ವ್ಯವಸ್ಥೆ ನಡೆದುಕೊಂಡ ರೀತಿ ಇಂದಿಗೂ ಶಂಕಾಸ್ಪದವಾಗಿಯೇ ಉಳಿದಿದೆ. ಇಂದಿರಾ ಹತ್ಯೆಯಿಂದ ರೊಚ್ಚಿಗೆದ್ದ ಜನರು ತೋರಿಸಿದ ಆವೇಶದ ಪ್ರತಿಸ್ಪಂದನವೇ ಸಿಖರ ಮಾರಣಹೋಮ ಎಂದು ನಂಬಿಸುವ ಪ್ರಯತ್ನಗಳು ಆಗಿದ್ದರೂ ಅನಂತರ ನಡೆದ ತನಿಖೆಗಳು ಇದೊಂದು ವ್ಯವಸ್ಥಿತ ಹತ್ಯಾಕಾಂಡ ಎನ್ನುವುದನ್ನು ರುಜು ಪಡಿಸಿವೆ. ದಿಲ್ಲಿಯೊಂದರಲ್ಲೇ ಸುಮಾರು 3000 ಸಿಖರನ್ನು ಕೊಲ್ಲಲಾಗಿತ್ತು. ದೇಶಾದ್ಯಂತ ಸುಮಾರು 5000 ಸಿಖರು ಬಲಿಯಾಗಿದ್ದಾರೆ ಎನ್ನಲಾಗುತ್ತಿದೆ. ಕಾನ್ಪುರ, ಬೊಕಾರೊ ಸೇರಿ ಹಲವು ನಗರಗಳಲ್ಲೂ ಹಿಂಸಾಚಾರ ನಡೆದಿತ್ತು. ಹೀಗಾಗಿ ಲೆಕ್ಕಕ್ಕೆ ಸಿಗದ ಹತ್ಯೆಗಳು ಇನ್ನೆಷ್ಟೋ ಇವೆ ಎನ್ನುತ್ತಿವೆ ಮಾನವ ಹಕ್ಕುಗಳ ಸಂಘಟನೆಗಳು.ಕಾಂಗ್ರೆಸ್‌ ನಾಯಕರ ಕುಮ್ಮಕ್ಕಿನಲ್ಲಿ ಮತ್ತು ನೇರ ಭಾಗೀದಾರಿಕೆಯಲ್ಲಿ ನಡೆದ ಹತ್ಯಾಕಾಂಡಕ್ಕೆ ಪೊಲೀಸರು ಮೂಕಪ್ರೇಕ್ಷಕರಾಗಿದ್ದರು. ನೂರಾರು ಕುಟುಂಬಗಳನ್ನು ಬೀದಿಗೆ ತಳ್ಳಿದ , ಮಕ್ಕಳನ್ನು ತಬ್ಬಲಿಯಾಗಿಸಿದ ಈ ಹತ್ಯಾಕಾಂಡದ ಸಂತ್ರಸ್ತರು ಮೂರೂವರೆ ದಶಕಗಳ ಅನಂತರವೂ ನ್ಯಾಯಕ್ಕಾಗಿ ಗೋಗರೆಯುತ್ತಿರುವುದು ನಮ್ಮ ವ್ಯವಸ್ಥೆಯ ಜಡತ್ವಕ್ಕೆ ಹಿಡಿದ ಕೈಗನ್ನಡಿ. 

ಇಂದಿರಾ ಗಾಂಧಿಯ ಹತ್ಯೆಯ ಬಳಿಕ ಭರ್ಜರಿ ಬಹುಮತ ಪಡೆದುಕೊಂಡು ಪ್ರಧಾನಿಯಾದ ಅವರ ಪುತ್ರ ರಾಜೀವ್‌ ಗಾಂಧಿ ಸಿಖರ ಮಾರಣಹೋಮವನ್ನು ದೊಡ್ಡ ಮರ ಉರುಳಿದಾಗ ನೆಲ ನಡುಗಿ ಚಿಕ್ಕಪುಟ್ಟ ಗಿಡಗಳು ಸಾಯುವುದು ಸಾಮಾನ್ಯ ವಿಷಯ ಎಂಬ ಲಘು ಹೇಳಿಕೆ ನೀಡಿದ್ದರು. ಹಾಗೆಂದು ಹತ್ಯಾಕಾಂಡದ ತನಿಖೆ ನಡೆದಿಲ್ಲ ಎಂದಲ್ಲ. ಗಲಭೆ ಶಮನಗೊಂಡ ಬೆನ್ನಿಗೆ ರಂಗನಾಥ ಮಿಶ್ರ ನೇತೃತ್ವದಲ್ಲಿ ನ್ಯಾಯಾಂಗ ಆಯೋಗವನ್ನು ನೇಮಿಸಲಾಗಿತ್ತು. ಅನಂತರವೂ ಹಲವು ಆಯೋಗಗಳು ಮತ್ತು ಸಿಟ್‌ಗಳು ತನಿಖೆ ನಡೆಸಿದ್ದರೂ ನ್ಯಾಯ ಮಾತ್ರ ಮರೀಚಿಕೆಯಾಗಿಯೇ ಉಳಿದಿದೆ. ಆರೋಪಿಗಳೆಂದು ಹೆಸರಿಸಲ್ಪಟ್ಟಿದ್ದ ಜಗದೀಶ್‌ ಟೈಟ್ಲರ್‌, ಎಚ್‌.ಕೆ.ಎಲ್‌.ಭಗತ್‌ ಅವರಂತಹ ಹಲವು ನಾಯಕರನ್ನು ಕಾಂಗ್ರೆಸ್‌ ಸರಕಾರ ಅನಂತರ ಉನ್ನತ ಅಧಿಕಾರಗಳನ್ನು ಪುರಸ್ಕರಿಸಿದೆ. ಗಲಭೆ ಸಂದರ್ಭದಲ್ಲಿ ನಿಷ್ಕ್ರಿಯತೆ ತೋರಿಸಿದ ಆರೋಪ ಹೊತ್ತಿದ್ದ ಹಲವು ಪೊಲೀಸ್‌ ಅಧಿಕಾರಿಗಳು ಅನಂತರ ಉನ್ನತ ಹುದ್ದೆಗಳನ್ನು ಪಡೆದುಕೊಂಡು ನಿವೃತ್ತರಾಗಿದ್ದಾರೆ. ರಾಜಕೀಯ ಪಕ್ಷಗಳು ಮುಖ್ಯವಾಗಿ ಕಾಂಗ್ರೆಸ್‌ ಮತ್ತು ಬಿಜೆಪಿ ಹತ್ಯಾಕಾಂಡವನ್ನು ಪರಸ್ಪರರ ಮೇಲೆ ದೋಷಾರೋಪ ಹೊರಿಸಲು ಬಳಸಿಕೊಂಡದ್ದೂ ಇದೆ. 34 ವರ್ಷದ ಬಳಿಕ ಮತ್ತೂಮ್ಮೆ ಪ್ರಕರಣದ ತನಿಖೆ ನಡೆಸುವ ಅಗತ್ಯವಿದೆಯೇ? ನಡೆಸಿದರೂ ಆರೋಪಿಗಳಿಗೆ ಶಿಕ್ಷೆಯಾಗುವ ಸಾಧ್ಯತೆಯಿದೆಯೇ ಎಂದೆಲ್ಲ ಕೇಳಲಾಗುತ್ತಿದೆ. ಘಟನೆ ಸಂಭವಿಸಿ ಎಷ್ಟೇ ಸಮಯವಾಗಿದ್ದರೂ ನಿಜವಾದ ಆರೋಪಿಗಳಿಗೆ ಶಿಕ್ಷೆಯಾಗುವ ತನಕ ತನಿಖೆ ನಡೆಸುವ ಅಗತ್ಯವಿದೆ. ಇಲ್ಲದಿದ್ದರೆ ರಾಜಕೀಯ ಕೃಪಾಶ್ರಯದಲ್ಲಿ ಘೋರ ಪಾತಕಗಳನ್ನು ಎಸಗಿದರೆ ನ್ಯಾಯದ ಕೈಯಿಂದ ಪಾರಾಗಿ ಬಿಡಬಹುದು ಎಂಬ ತಪ್ಪು ಸಂದೇಶ ರವಾನೆಯಾಗುವ ಸಾಧ್ಯತೆಯಿದೆ. ಹೀಗಾದರೆ ನಮ್ಮ ನ್ಯಾಯಾಂಗ ವ್ಯವಸ್ಥೆಯ ವಿಶ್ವಾಸಾರ್ಹತೆಗೆ ಧಕ್ಕೆಯಾಗಬಹುದು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.