ನ್ಯಾಯಾಂಗದ ಕರಾಳ ದಿನ ನಂಬಿಕೆಗೆ ಕೊಡಲಿಯೇಟು 


Team Udayavani, Jan 13, 2018, 8:56 AM IST

13-6.jpg

ದೇಶದ ನ್ಯಾಯಾಂಗದ ಪಾಲಿಗೆ ಜ.12 ಕರಾಳ ದಿನ. ಸುಪ್ರೀಂ ಕೋರ್ಟಿನ ನಾಲ್ವರು ಹಿರಿಯ ನ್ಯಾಯಮೂರ್ತಿಗಳು ಮುಖ್ಯ ನ್ಯಾಯಮೂರ್ತಿ ವಿರುದ್ಧ ಸಿಡಿದೆದ್ದು ಪತ್ರಿಕಾಗೋಷ್ಠಿ ಕರೆದು ತಮ್ಮ ಅಳಲು ತೋಡಿಕೊಂಡಿ ರುವುದು  ನ್ಯಾಯಾಂಗ ಇತಿಹಾಸದಲ್ಲಿಯೇ ಮೊದಲನೆಯದ್ದು. ಇದು ಅತ್ಯಂತ ಅಘಾತಕಾರಿ ಬೆಳವಣಿಗೆ ಮಾತ್ರವಲ್ಲದೆ ನ್ಯಾಯಾಂಗದ ಮೇಲೆ ಜನರಿಟ್ಟಿರುವ ನಂಬಿಕೆಯ ಅಡಿಪಾಯವನ್ನೇ ಅಲುಗಾಡಿಸಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ವಿರುದ್ಧ ಹಿರಿತನದಲ್ಲಿ ದ್ವಿತೀಯ ಸ್ಥಾನದಲ್ಲಿರುವ ನ್ಯಾ. ಚಲಮೇಶ್ವರ, ನ್ಯಾ. ರಂಜನ್‌ ಗೊಗೋಯ್‌, ನ್ಯಾ.  ಎಂ. ಬಿ. ಲೋಕುರ್‌ ಮತ್ತು ನ್ಯಾ. ಕುರಿಯನ್‌ ಜೋಸೆಫ್ ಗಂಭೀರವಾದ ಆಪಾದನೆಗಳನ್ನು ಮಾಡಿದ್ದಾರೆ. ನ್ಯಾ. ದೀಪಕ್‌ ಮಿಶ್ರಾ ಕಾರ್ಯಶೈಲಿ  ಪಾರದರ್ಶಕ ಮತ್ತು ಸಮರ್ಪಕವಾಗಿಲ್ಲ ಎನ್ನುವುದು ಅವರ ಮುಖ್ಯ ದೂರು. ಮುಖ್ಯ ನ್ಯಾಯಮೂರ್ತಿಯವರು ಮಹತ್ವದ ಪ್ರಕರಣಗಳನ್ನು ತಮಗಿಂತ ಕಿರಿಯ ನ್ಯಾಯಮೂರ್ತಿಗಳುಳ್ಳ ವಿಭಾಗೀಯ ಪೀಠಗಳಿಗೆ ಒಪ್ಪಿಸುವುದು ಈ ನಾಲ್ವರು ಹಿರಿಯರಿಗೆ ಅಸಮಾಧಾನ ತಂದಿದೆ. ಈ ಕುರಿತು ಎರಡು ತಿಂಗಳ ಹಿಂದೆಯೇ ಮುಖ್ಯ ನ್ಯಾಯಮೂರ್ತಿಯವರಿಗೆ ಪತ್ರ ಬರೆದಿದ್ದೇವೆ. ಅವರಿಂದ ಯಾವುದೇ ಪ್ರತಿಸ್ಪಂದನೆ ಬಾರದಿರು ವುದರಿಂದ ಮಾಧ್ಯಮದ ಎದುರು ಬರಬೇಕಾಯಿತು ಎಂದು ತಮ್ಮ ಕ್ರಮಕ್ಕೆ ಅವರು ಸಮರ್ಥನೆಯನ್ನು ಕೊಟ್ಟುಕೊಂಡಿದ್ದಾರೆ. ನ್ಯಾಯಾಂಗದಲ್ಲಿ ನಡೆಯುತ್ತಿರುವ ಅವ್ಯವಹಾರ ಮತ್ತು ಅಕ್ರಮಗಳನ್ನು ತಡೆಯಬೇಕೆನ್ನುವುದು ತಮ್ಮ ಕಾಳಜಿ ಎಂದಿದ್ದಾರೆ.

ಎಲ್ಲ ಸರಿ. ನ್ಯಾಯಮೂರ್ತಿಗಳೂ ಮನುಷ್ಯರೇ. ತಮಗಿಂತ ಕಿರಿಯರಿಗೆ ಹೆಚ್ಚಿನ ಮಹತ್ವ ಲಭಿಸಿದಾಗ ಅವರಿಗೆ ನೋವಾಗುವುದು ಸಹಜ. ಹಿರಿತನಕ್ಕೆ, ಸೇವಾ     ಅನುಭವಕ್ಕೆ ಆದ್ಯತೆ ಸಿಗಬೇಕೆನ್ನುವ ಅವರ ವಾದವನ್ನು ಒಪ್ಪಿ ಕೊಳ್ಳೋಣ. ಆದರೆ ಮುಖ್ಯ ನ್ಯಾಯಮೂರ್ತಿರ ವಿರುದ್ಧ ಆರೋಪಗಳನ್ನು ಮಾಡಲು ಅವರು ಆರಿಸಿಕೊಂಡ ವಿಧಾನ ಮಾತ್ರ ಸರಿಯೇ ಎನ್ನುವುದು ಪ್ರಶ್ನೆ. ಈ ರೀತಿ ಮಾಡುವ ಮೂಲಕ ತಾವು ಸಾಂವಿಧಾನಿಕ ವ್ಯವಸ್ಥೆಗೆ ಇನ್ನಿಲ್ಲದ ಹಾನಿ ಮಾಡುತ್ತಿದ್ದೇವೆ ಎಂಬ ಜ್ಞಾನ ಅವರಿಗಿರಲಿಲ್ಲವೆ? ನಾಲ್ವರು ನ್ಯಾಯಮೂರ್ತಿಗಳ ಈ ನಡೆಯಿಂದ ನ್ಯಾಯಾಂಗ ವ್ಯವಸ್ಥೆಗೆ ಸರಿಪಡಿಸಲಾಗದಷ್ಟು ಹಾನಿಯಾಗಿದೆ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ,  ಸೊಲಿ ಸೊರಾಬ್ಜಿ ಮುಂತಾದವರು ಸರಿಯಾಗಿಯೇ ಹೇಳಿದ್ದಾರೆ. ಈಗಾಗಲೇ ಜನರಿಗೆ ಶಾಸಕಾಂಗ ಮತ್ತು ಕಾರ್ಯಾಂಗದ ಮೇಲಿರುವ ನಂಬಿಕೆ ಹೋಗಿದೆ. ಆದರೆ ನ್ಯಾಯಾಂಗದ ವಿರುದ್ಧ ಏನೇ ದೂರುಗಳಿದ್ದರೂ ಅದರ ಮೇಲೆ ಅಚಲವಾದ ನಂಬಿಕೆಯಿತ್ತು. ಈ ನಂಬಿಕೆಗೆ ಚ್ಯುತಿ ಬರುವಂತಹ ಬೆಳವಣಿಗೆ ಇಂದು ಸಂಭವಿಸಿದೆ. ನ್ಯಾಯಾಂಗ ಮತ್ತು ನ್ಯಾಯಮೂರ್ತಿರನ್ನು ಟೀಕಿಸಬಾರದು. ಅವರು ಎಲ್ಲ ಟೀಕೆಗಳಿಗೆ ಅತೀತರು ಎಂಬ ನಂಬಿಕೆಯಿತ್ತು. ಇದೀಗ ನ್ಯಾಯಮೂರ್ತಿಗಳ ಪರಸ್ಪರ ಟೀಕಿಸಿಕೊಳ್ಳುವ ಮೂಲಕ ಈ ನಂಬಿಕೆಯನ್ನು ಹುಸಿಗೊಳಿಸಿದ್ದಾರೆ. 

ನ್ಯಾಯಾಲಯ ಒಂದು ಕುಟುಂಬದಂತೆ. ಈ ಕುಟುಂಬದ ಸದಸ್ಯರಲ್ಲಿ ಭಿನ್ನಾಭಿಪ್ರಾಯ ಕಾಣಿಸಿಕೊಂಡಾಗ ಅವರವರೇ ಕುಳಿತು ಮಾತುಕತೆ ನಡೆಸಿ ಬಗೆಹರಿಸಿಕೊಳ್ಳಬೇಕೆ ಹೊರತು ಜಗಳವನ್ನು ಬೀದಿಗೆ ಎಳೆದು ತರಬಾರದು. ಈಗ ನಾಲ್ವರು ನ್ಯಾಯಮೂರ್ತಿಗಳು ಮಾಡಿದ್ದು ಈ ಕೆಲಸವನ್ನು. ಇದರಿಂದ ಅವರು ತಮಗೆ ಮಾತ್ರವಲ್ಲದೆ ಇಡೀ ವ್ಯವಸ್ಥೆಗೆ ಹಾನಿ ಉಂಟು ಮಾಡಿದ್ದಾರೆ. ಸೂಕ್ಷ್ಮ ಪ್ರಕರಣಗಳಲ್ಲಿ ಮಾಧ್ಯಮಗಳು ನಡೆದುಕೊಳ್ಳುತ್ತಿರುವ ರೀತಿಯನ್ನು ಆಕ್ಷೇಪಿಸುತ್ತಿದ್ದ, ಮಾಧ್ಯಮಗಳೇ ವಿಚಾರಣೆ ನಡೆಸಿ ತೀರ್ಪು ನೀಡುತ್ತಿವೆ ಎಂದು ಟೀಕಿಸುತ್ತಿದ್ದ ನ್ಯಾಯಮೂರ್ತಿಗಳೇ ಇಂದು ಮಾಧ್ಯಮ ಗಳ ಎದುರು ಬಂದು ನಮಗೆ ಅನ್ಯಾಯವಾಗಿದೆ ನ್ಯಾಯ ಕೊಡಿಸಿ ಎಂದು ಹೇಳುವ ಸ್ಥಿತಿ ನಿರ್ಮಾಣವಾಗಿರುವುದು ವಿಪರ್ಯಾಸವಲ್ಲವೆ? ನ್ಯಾಯ ಮೂರ್ತಿಗಳಿಗೆ ರಾಷ್ಟ್ರಪತಿಯವರಿಗೆ ದೂರು ನೀಡುವ ಅವಕಾಶವಿತ್ತು. ಅದನ್ನು ಅವರೇಕೆ ಬಳಸಿಕೊಂಡಿಲ್ಲ?  ಅಂತೆಯೇ ಒಟ್ಟೂ ಬೆಳವಣಿಗೆಯ ಹಿಂದೆ ರಾಜಕೀಯದ ವಾಸನೆಯೂ ಹೊಡೆಯು ತ್ತಿದೆ. ಚುನಾವಣೆ ಹತ್ತಿರವಾಗುತ್ತಿರುವಾಗ ಕೇಂದ್ರ ಸರಕಾರ ನ್ಯಾಯಾಂಗ ದಲ್ಲೂ ಹಸ್ತಕ್ಷೇಪ ಮಾಡುತ್ತಿದೆ ಎಂಬ ಭಾವನೆ ಉಂಟು ಮಾಡುವ ಹುನ್ನಾರವೇನಾದರೂ ಇದರ ಹಿಂದಿದೆಯೇ ಎಂಬ ಅನುಮಾನವೂ ಇದೆ. ಇದಕ್ಕೆ ಕಾರಣವಾಗಿ ರುವುದು ನಾಲ್ವರು ನ್ಯಾಯಮೂರ್ತಿಗಳು ಕೆಲವು ಪ್ರಕರಣಗಳನ್ನು ನಿರ್ದಿಷ್ಟ ವಾಗಿ ಉಲ್ಲೇಖೀಸಿದ್ದು, ಈ ಪೈಕಿ ಸೊಹ್ರಾಬುದ್ದೀನ್‌ ಎನ್‌ಕೌಂಟರ್‌ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾಯಮೂರ್ತಿ ಲೋಯಾ ಸಾವಿನ ಪ್ರಕರಣವೂ ಇದೆ. ನ್ಯಾಯಾಂಗದಲ್ಲಿ ಎಲ್ಲವೂ ಸರಿಯಿಲ್ಲ ಮತ್ತು ಅದಕ್ಕೆ ಉನ್ನತ ನ್ಯಾಯಾಂಗವೂ ಹೊರತಾಗಿಲ್ಲ ಎನ್ನುವುದು ಈ ಪ್ರಕರಣದಿಂದ ಮತ್ತೂಮ್ಮೆ ಸಾಬೀತಾದಂತಾಗಿದೆ. ಮುಖ್ಯವಾಗಿ ನ್ಯಾಯಮೂರ್ತಿಗಳ ನೇಮಕಾತಿ ವಿಧಾನದಲ್ಲಿ ಆಮೂಲಾಗ್ರ ಬದಲಾವಣೆ ಯಾಗಬೇಕು ಮತ್ತು ಅದು ತುರ್ತಾಗಿ ಆಗ ಬೇಕು.ನೇಮಕಾತಿಯಲ್ಲಿ ಪಾರದರ್ಶಕತೆಯನ್ನು ತರಬೇಕೆಂಬ ಬೇಡಿಕೆ ಇಂದು ನಿನ್ನೆಯದ್ದಲ್ಲ. ನಮ್ಮ ನ್ಯಾಯಾಂಗ ಈಗಲೂ ಬ್ರಿಟಿಷರ ಬಿಟ್ಟು ಹೋದ ವ್ಯವಸ್ಥೆಯ ಪಳೆಯುಳಿಕೆಯಂತೆಯೇ ಇದೆ. ಇದನ್ನು ಸಮಗ್ರವಾಗಿ ಬದಲಾಯಿಸುವ ಅಗತ್ಯವಿದೆ.

ಟಾಪ್ ನ್ಯೂಸ್

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.