ಇನ್ನಾದರೂ ಪಾಠ ಕಲಿತೀತೆ ಬಿಜೆಪಿ?: ಉಪಚುನಾವಣೆ ಫ‌ಲಿತಾಂಶ


Team Udayavani, Mar 16, 2018, 7:30 AM IST

a-31.jpg

ಈಗಲೂ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಜೋಡಿಯೇ ಚುನಾವಣೆ ಗೆಲ್ಲಿಸಿಕೊಡಬೇಕಾದ ಪರಿಸ್ಥಿತಿಯನ್ನು ಬಿಜೆಪಿ ಸೃಷ್ಟಿಸಿಕೊಳ್ಳುತ್ತಿದೆ.

ತ್ರಿಪುರದ ಐತಿಹಾಸಿಕ ಗೆಲುವಿನ ಸಿಹಿಯನ್ನು ಚಪ್ಪರಿಸುತ್ತಿರುವಾಗಲೇ ಉತ್ತರ ಪ್ರದೇಶದ ಉಪಚುನಾವಣೆಯ ಕಹಿಯನ್ನು ಉಣ್ಣಬೇಕಾದ ಪರಿಸ್ಥಿತಿ ಬಿಜೆಪಿಗೆ ಎದುರಾಗಿದೆ. ಅದರಲ್ಲೂ ಬಿಜೆಪಿಯ ಫ‌ಯರ್‌ಬ್ರ್ಯಾಂಡ್‌ ಲೀಡರ್‌ ಎಂಬ ಖ್ಯಾತಿಯಿರುವ ಮುಖ್ಯಮಂತ್ರಿ ಆದಿತ್ಯನಾಥ್‌ ಯೋಗಿಯ ತವರು ಕ್ಷೇತ್ರವಾಗಿರುವ ಗೋರಖಪುರ ಮತ್ತು ಉಪಮುಖ್ಯಮಂತ್ರಿ ಕೇಶವ ಪ್ರಸಾದ್‌ ಮೌರ್ಯ ಪ್ರತಿನಿಧಿಸುತ್ತಿದ್ದ ಫ‌ೂಲ್‌ಪುರ ಲೋಕಸಭಾ ಕ್ಷೇತ್ರ ಗಳಲ್ಲೇ ಆಗಿರುವ ಮುಖಭಂಗವನ್ನು ಮರೆಯಲು ಬಿಜೆಪಿಗೆ ಬಹುಕಾಲ ಬೇಕಾಗಬಹುದು. ಅತ್ತ ಬಿಹಾರದಲ್ಲೂ ಬಿಜೆಪಿ-ಜೆಡಿಯು ಮೈತ್ರಿ ಕೂಟದ ನಿರ್ವಹಣೆಯೂ ಕಳಪೆಯಾಗಿದೆ. ಹಿಂದಿ ಬೆಲ್ಟ್ ಎಂದು ಕರೆಯಲಾಗುವ ಉತ್ತರ ಭಾರತದಲ್ಲಿ ರಾಜಕೀಯವಾಗಿ ಈ ಎರಡು ರಾಜ್ಯಗಳು ಬಹಳ ಮಹತ್ವ ಪಡೆದುಕೊಂಡಿವೆ. ಇಡೀ ದೇಶದ ರಾಜಕೀಯ ಭವಿಷ್ಯವನ್ನು ನಿರ್ಧರಿಸುವ ಕೀಲಿಕೈ ಇರುವುದು ಹಿಂದಿಬೆಲ್ಟ್ನ ನಾಲ್ಕೈದು ರಾಜ್ಯಗಳಲ್ಲಿ. ಈ ರಾಜ್ಯಗಳಲ್ಲೇ ಉಪಚುನಾವಣೆಗಳಲ್ಲಿ ಬಿಜೆಪಿ ಸೋಲುತ್ತಿರುವುದು ಮುಂದಿನ ರಾಜಕೀಯದ ದಿಕ್ಸೂಚಿಯೆಂದೇ ಹೇಳಲಾಗುತ್ತಿದೆ. 

ಕಾಂಗ್ರೆಸ್‌ ಹೊರತುಪಡಿಸಿ ಹಾವು ಮುಂಗುಸಿಯಂತಿದ್ದ ಎಸ್‌ಪಿ ಮತ್ತು ಬಿಎಸ್‌ಪಿ ಹಾಗೂ ಉಳಿದೆಲ್ಲ ಪಕ್ಷಗಳು ಒಂದಾದ ಕಾರಣ ಗೋರಖಪುರ ಹಾಗೂ ಫ‌ೂಲ್‌ಪುರದಲ್ಲಿ ಬಿಜೆಪಿ ಸೋಲುಂಡಿದೆ ಎನ್ನುವುದು ನಿಜ. ಜತೆಗೆ ಈಸಲ ಗೋರಖನಾಥ ಮಠದ ಅಭ್ಯರ್ಥಿ ಬದಲಾಗಿ ಹೊರಗಿನವರೊಬ್ಬರು ಸ್ಪರ್ಧಿಸಿದ್ದರು, ಪ್ರಚಾರಕ್ಕೆ ರಾಷ್ಟ್ರೀಯ ನಾಯಕ ರ್ಯಾರೂ ಬಂದಿರಲಿಲ್ಲ ಎನ್ನುವ ಕಾರಣಗಳೆಲ್ಲ ಇವೆ. ಒಂದು ವರ್ಷದ ಹಿಂದೆಯಷ್ಟೇ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 403ರ ಪೈಕಿ 312 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಈ ಅಭೂತಪೂರ್ವ ಗೆಲುವನ್ನು ಮೆಲುಕಾಡುತ್ತಿರುವಾ ಗಲೇ ಜನಪ್ರಿಯತೆ ಕುಸಿಯಿತೇ? ಬಿಜೆಪಿಯ ಮತ್ತು ಸ್ವತಃ ಯೋಗಿಯ ಅತಿಯಾದ ಆತ್ಮವಿಶ್ವಾಸವೇ ಸೋಲಿಗೆ ಮುಖ್ಯ ಕಾರಣ ಎಂದರೆ ತಪ್ಪಾಗಲಾರದು. ಈ ಮಾತನ್ನು ಸ್ವತಃ ಯೋಗಿಯೇ ಹೇಳಿಕೊಂಡಿದ್ದಾರೆ. ಪ್ರಸ್ತುತ ಬಿಜೆಪಿಯಲ್ಲಿ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಬಳಿಕ ಮೂರನೇ ಜನಪ್ರಿಯ ನಾಯಕ ಯೋಗಿ. ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳ ಚುನಾವಣೆ ಪ್ರಚಾರಕ್ಕೆ ಯೋಗಿ ಹೋಗುತ್ತಿದ್ದಾರೆ. ಕೆಲವರು ಆಗಲೇ ಅವರನ್ನು ಮುಂದಿನ ಪ್ರಧಾನಿ ಎಂದು ಬಿಂಬಿಸಿಯಾಗಿದೆ. ಆದರೆ ತಾನು ಐದು ಅವಧಿಗೆ ಪ್ರತಿನಿಧಿಸಿದ ಕ್ಷೇತ್ರವನ್ನು ಉಳಿಸಿಕೊಳ್ಳಲು ಸಾಧ್ಯವಾಗದ ಕಳಂಕ ಅವರ ನಾಗಾಲೋಟಕ್ಕೆ ಬ್ರೇಕ್‌ ಹಾಕಿದಂತಾಗಿದೆ.  

ಉತ್ತರ ಪ್ರದೇಶದ ಎರಡು ಲೋಕಸಭಾ ಕ್ಷೇತ್ರಗಳನ್ನು ಕಳೆದು ಕೊಳ್ಳುವುದರೊಂದಿಗೆ ಲೋಕಸಭೆಯಲ್ಲಿ ಬಿಜೆಪಿಯ ಸಂಖ್ಯಾಬಲ 273ಕ್ಕೆ ಇಳಿದಿದೆ. 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯೊಂದೇ 282 ಸೀಟುಗಳಲ್ಲಿ ಗೆದ್ದು ಸರಳ ಬಹುಮತ ಪಡೆದುಕೊಂಡಿತ್ತು. ಕಳೆದ ಆರು ತಿಂಗಳಲ್ಲಿ ನಡೆದ ಉಪಚುನಾವಣೆಗಳಲ್ಲಿ ಆರು ಕ್ಷೇತ್ರಗಳನ್ನು ಬಿಜೆಪಿ ಕಳೆದುಕೊಂಡಂತಾಗಿದೆ. ಇನ್ನೂ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಈ ಪೈಕಿ ಎರಡು ಕ್ಷೇತ್ರಗಳು ಮಹಾರಾಷ್ಟ್ರದಲ್ಲಿವೆ. ಈ ಕ್ಷೇತ್ರಗಳ ಫ‌ಲಿತಾಂಶದಿಂದ 2019ರ ರಾಜಕೀಯ ಗತಿಯನ್ನು ಸ್ಪಷ್ಟವಾಗಿ ಗುರುತಿಸಬಹುದು. ಲಾಲೂ ಯಾದವ್‌ ಜೈಲಿನಲ್ಲಿದ್ದರೂ ಅರಾರಿಯ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಆರ್‌ಜೆಡಿ ಸಫ‌ಲವಾಗಿದೆ. ಅಂತೆಯೇ ಉಳಿದೆರಡು ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಆರ್‌ಜೆಡಿ ತಲಾ 1 ಕ್ಷೇತ್ರಗಳನ್ನು ಗೆದ್ದುಕೊಂಡಿವೆ. ಅಧಿಕಾರದಲ್ಲಿದ್ದು ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲಲಾಗದೆ ಹೋದದ್ದು ಬಿಜೆಪಿಗಿಂತ ಹೆಚ್ಚಾಗಿ ಮುಖ್ಯಮಂತ್ರಿ ನಿತೀಶ್‌ಕುಮಾರ್‌ಗೆ ಆಗಿರುವ ಹಿನ್ನಡೆ. ಕಳೆದ ವರ್ಷ ಮಹಾಘಟಬಂಧನ್‌ ಸಖ್ಯ ಮುರಿದು ಎನ್‌ಡಿಎ ತೆಕ್ಕೆಗೆ ಸೇರಿದ ನಿರ್ಧಾರ ಕೈಕೊಟ್ಟಿತೇ ಎನ್ನುವುದನ್ನು ಅವರು ಆತ್ಮಾವಲೋಕನ ಮಾಡಿಕೊಳ್ಳಬೇಕು.

ಉಪಚುನಾವಣೆಗಳ ಫ‌ಲಿತಾಂಶದ ಬಳಿಕ ವಿಪಕ್ಷಗಳಲ್ಲಿ ಎಲ್ಲರೂ ಒಟ್ಟಾದರೆ ಬಿಜೆಪಿಯನ್ನು ಸೋಲಿಸುವುದು ಕಷ್ಟವಲ್ಲ ಎಂಬ ನಂಬಿಕೆ ಹುಟ್ಟಿರುವುದು ಸುಳ್ಳಲ್ಲ. ಫ‌ಲಿತಾಂಶ ಪ್ರಕಟವಾದ ದಿನವೇ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಸೋನಿಯಾ ಗಾಂಧಿ ತನ್ನ ಮನೆಯಲ್ಲಿ ವಿಪಕ್ಷ ನಾಯಕರಿಗೆ ಔತಣಕೂಟ ನೀಡಿರುವುದು ಈ ಹಿನ್ನೆಲೆಯಲ್ಲಿ ಮಹತ್ವದ ನಡೆ. 17 ಪಕ್ಷಗಳ ನಾಯಕರು ಔತಣಕೂಟದಲ್ಲಿ ಭಾಗವಹಿಸಿದ್ದಾರೆ. ಹೀಗೆ ಮತ್ತೂಮ್ಮೆ ಯುಪಿಎಯನ್ನು ಬಲಿಷ್ಠಗೊಳಿಸುವ ಮೂಲಕ ಸೋನಿಯಾ ಹೋರಾಟಕ್ಕೆ ಅಣಿಯಾಗುತ್ತಿದ್ದಾರೆ. ಇದೇ ವೇಳೆ ಬಿಜೆಪಿ ತನ್ನ ತಪ್ಪುಗಳಿಂದ ಇನ್ನೂ ಪಾಠ ಕಲಿತಂತೆ ಕಾಣಿಸುವುದಿಲ್ಲ. ಈಗಲೂ ಮೋದಿ ಮತ್ತು ಅಮಿತ್‌ ಶಾ ಜೋಡಿಯೇ ಚುನಾವಣೆ ಗೆಲ್ಲಿಸಿಕೊಡಬೇಕಾದ ಪರಿಸ್ಥಿತಿಯನ್ನು ಪಕ್ಷ ಸೃಷ್ಟಿಸಿಕೊಳ್ಳುತ್ತಿದೆ. ಇದು ಪಕ್ಷದಲ್ಲಿ ಈ ಜೋಡಿಯ ಏಕಸ್ವಾಮ್ಯವನ್ನು ಇನ್ನಷ್ಟು ಬಲಪಡಿಸುತ್ತಿದೆ. ಪ್ರಾದೇಶಿಕವಾಗಿ ನಾಯಕರನ್ನು ಬೆಳೆಸುವ ಉತ್ಸಾಹವನ್ನು ಪಕ್ಷ ಕಳೆದುಕೊಂಡಿರುವಂತೆ ಕಾಣಿಸುತ್ತದೆ. ಉಪಚುನಾವಣೆ ಫ‌ಲಿತಾಂಶ ಬಿಜೆಪಿಗೆ ಎಚ್ಚರಿಕೆಯ ಸಂದೇಶ ನೀಡಿರುವುದು ನಿಜ. ಹಾಗೆಂದು ಕಾಂಗ್ರೆಸ್‌ ಸಂಭ್ರಮಿಸುತ್ತಿರುವುದರಲ್ಲಿ ಯಾವುದೇ ಅರ್ಥವಿಲ್ಲ. ಏಕೆಂದರೆ ಉತ್ತರ ಪ್ರದೇಶದ ಎರಡೂ ಕ್ಷೇತ್ರಗಳಲ್ಲಿ ಅದು ಠೇವಣಿ ಕಳೆದುಕೊಂಡಿದೆ. 

ಟಾಪ್ ನ್ಯೂಸ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

Editorial:ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Editorial: ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.