ಮುಗ್ಧರೂ ಜೈಲು ಸೇರುವ ಪರಿ!


Team Udayavani, Apr 18, 2018, 4:24 PM IST

Jail-New.jpg

ನ್ಯಾಯದೇವತೆಯ ಅಂಗಳದಲ್ಲಿ ಕೆಲವೊಮ್ಮೆ ಮುಗ್ಧªರೂ ಜೈಲು ಪಾಲಾಗುವ ತೀರ್ಪಿಗೆ ಒಳಗಾಗಬೇಕಾಗುತ್ತದೆ. ಅನೇಕ ಸಂದರ್ಭಗಳಲ್ಲಿ ಪ್ರಕರಣಗಳ ವಿಚಾರಣೆಗೆಂದೇ ಕೋರ್ಟಿಗೆ ಅಲೆದಾಡಬೇಕಾಗುತ್ತದೆ. ನ್ಯಾಯಕ್ಕಾಗಿ ಹೋರಾಟ ನಡೆಸುವ ಸಮಯದಲ್ಲಿ ತಮ್ಮ ಜೀವನದ ಅತ್ಯಮೂಲ್ಯ ಸಮಯವನ್ನೇ ಕಳೆದುಕೊಳ್ಳಬೇಕಾಗುತ್ತದೆ. ತಪ್ಪು ಮಾಡದೆ ಜೈಲು ಪಾಲಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆಯಲ್ಲ, ಅದೇ ನರಕ ಸದೃಶ. ಸ್ವಾಮಿ ಅಸೀಮಾನಂದ ಮತ್ತು ಅವರೊಡನೆ ಜೈಲು ಪಾಲಾದ ಇತರ ನಾಲ್ವರ ಪರಿಸ್ಥಿತಿ ಇದಕ್ಕೆ ಭಿನ್ನವಾದುದೇನಲ್ಲ. ಆಂಧ್ರಪ್ರದೇಶದ ಮೆಕ್ಕಾ ಮಸೀದಿಯಲ್ಲಿ ಹನ್ನೊಂದು ವರ್ಷಗಳ ಹಿಂದೆ ಸಂಭವಿಸಿದ ಬಾಂಬ್‌ ನ್ಪೋಟ ಪ್ರಕರಣದಲ್ಲಿ ಅಸೀಮಾನಂದ ಮತ್ತು ಇತರ ನಾಲ್ವರು ಶಿಕ್ಷೆಗೊಳಗಾಗಿ ಜೈಲು ಪಾಲಾಗಬೇಕಾಯಿತು.

ಇದೀಗ ಎನ್‌ಐಎ ವಿಶೇಷ ನ್ಯಾಯಾಲಯ ಇಷ್ಟೂ ಜನರನ್ನು ದೋಷಮುಕ್ತಗೊಳಿಸಿದೆ. ಸಾಕ್ಷ್ಯಾಧಾರ ಗಳ ಕೊರತೆಯೇ ದೋಷಮುಕ್ತಗೊಳಿಸಲು ನ್ಯಾಯಾಲಯ ನೀಡಿದ ಪ್ರಮುಖ ಕಾರಣ. ಅಸೀಮಾನಂದ ಜತೆಗೆ ದೇವೇಂದ್ರ ಗುಪ್ತಾ, ಲೋಕೇಶ್‌ ಶರ್ಮ, ಭರತ್‌ ಮೋಹನ್‌ ಲಾಲ್‌ ರಾತೇಶ್ವರ್‌ ಮತ್ತು ರಾಜೇಂದ್ರ ಚೌಧರಿ ಅವರನ್ನೂ ಬಿಡುಗಡೆಗೊಳಿಸಲಾಗಿದೆ. ಹಿಂದು ಸಂಘಟನೆಯ ವ್ಯಕ್ತಿಗಳು ಈ ಪ್ರಕರಣದಲ್ಲಿ ಸಿಲುಕಿದ್ದರಿಂದಲೇ ದೇಶವ್ಯಾಪಿ ಪ್ರಕರಣ ಭಾರೀ ಪ್ರಚಾರಕ್ಕೆ ಒಳಗಾಗಿತ್ತು. ಕೇಸರಿ ಭಯೋತ್ಪಾದನೆ ಎಂಬ ಹೊಸ ವ್ಯಾಖ್ಯಾನವನ್ನು ಹೆಣೆಯಲು ಅಂದಿನ ಕೇಂದ್ರದ ಯುಪಿಎ ಸರ್ಕಾರ ಹೂಡಿದ ಫ‌ಲಿತಾಂಶ ಅದಾಗಿತ್ತು. ಅಂದಿನ ಸಂದರ್ಭದಲ್ಲಿ ಯುಪಿಎ ಸರ್ಕಾರ ತನ್ನ ಕಾರ್ಯತಂತ್ರದಲ್ಲಿ ಯಶಸ್ಸನ್ನು ಕಂಡಿತ್ತು. ಹಿಂದು ಸಂಘಟನೆಗಳ ಆಯ್ದ ಪ್ರಮುಖರನ್ನು ಜೈಲಿಗೆ ಕಳುಹಿಸಿ, ಸನ್ಯಾಸಿಗಳ ಬಗ್ಗೆ ದೇಶದ ಜನರಿಗೆ ಸಂಶಯ ಬರುವ ರೀತಿಯಲ್ಲಿ ಆರೋಪ ಮತ್ತು ಸಾಕ್ಷ್ಯಗಳನ್ನು ಸಿದ್ದಪಡಿಸಿತ್ತು ಯುಪಿಎ ಸರ್ಕಾರ. ಅದಕ್ಕಾಗಿ ಸಿಬಿಐ ದುರ್ಬಳಕೆ ಮಾಡಿಕೊಂಡಿತ್ತು ಎಂದೇ ಹೇಳಬಹುದು.

ಸಮಾಜದಲ್ಲಿ ನಾನಾ ರೀತಿಯ ಸೇವೆಗಳನ್ನು ಮಾಡುತ್ತ, ಸಮಾಜದ ಸ್ವಾಸ್ಥ್ಯದ ಬಗ್ಗೆಯೇ ಯೋಚನೆ ಮತ್ತು ಕೆಲಸ ಮಾಡುವವರಿಗೆ ಹೀಗೆ ಹಠಾತ್‌ ಆರೋಪಗಳ ಮೂಲಕ ಚಾರಿತ್ರ್ಯವಧೆ ಮಾಡುವ ಕೆಲಸ ಸರ್ಕಾರದಿಂದಲೇ ಆಗಿದ್ದು ವಿಪರ್ಯಾಸ. ಅಸೀಮಾನಂದ ಅವರು ಈಗಾಗಲೇ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದು, ಈಗ ಆರೋಪ ಮುಕ್ತರಾದರು. ಆದರೆ, ಇವರ ಮೇಲೆ ಇದುವರೆಗೆ ಸಮಾಜದಲ್ಲಿ ಇದ್ದ ಕೆಟ್ಟ ಹೆಸರಿನಿಂದಾಗಿ ಅವರು ಅನುಭವಿಸಿದ ಅವಮಾನ, ಮುಜುಗರವನ್ನು ಇಲ್ಲವಾಗಿಸಲು ಸಾಧ್ಯವಾದೀತೇ? ದೇಶವನ್ನು ಆಳುವ ಯಾವುದೇ ಸರ್ಕಾರಕ್ಕೆ ಇದೊಂದು ಎಚ್ಚರಿಕೆಯ ಗಂಟೆ. ರಾಜಕೀಯ ದುರುದ್ದೇಶವೊಂದೇ ಸರ್ಕಾರಕ್ಕೆ ಇರಕೂಡದು. ಪೋಲೀಸರ ತನಿಖೆಯಲ್ಲಿ ಹಸ್ತಕ್ಷೇಪ ಯಾವ ರೀತಿ ಮಾಡಬಹುದು ಎಂಬುದಕ್ಕೆ ಇದೊಂದು ಸ್ಪಷ್ಟ ಉದಾಹರಣೆ 
ಯಾಗಿದೆ. ತಮ್ಮ ಅನುಕೂಲಕ್ಕೆ ತನಿಖೆಯ ದಿಕ್ಕನ್ನು ಬದಲಾಯಿಸಿ, ತಮಗೆ ಆಗದವರನ್ನು ಜೈಲಿಗೆ ಕಳುಹಿಸಲು ಸಂಚು ಹೂಡಬಾರದು ಎಂಬ ಪಾಠ ಕಲಿಯಬೇಕಾಗಿದೆ.

ಕಾಂಗ್ರೆಸ್‌ ಇರಲಿ, ಬಿಜೆಪಿ ಇರಲಿ ಅಥವಾ ರಾಜ್ಯಗಳಲ್ಲಿ ಅಧಿಕಾರದಲ್ಲಿ ಇರುವ ಪಕ್ಷಗಳೇ ಇರಲಿ, ದ್ವೇಶವನ್ನು ಸಾಧಿಸುವ ಪರಿಪಾಠ ಇಟ್ಟುಕೊಳ್ಳಲೇಬಾರದು. ಅಂದು ಪ್ರಕರಣ ಸಂಭವಿಸಿದಾಗ ಕೇಂದ್ರದಲ್ಲಿ ಗೃಹಸಚಿವರಾಗಿದ್ದರು ಶಿವರಾಜ್‌ ಪಾಟೀಲ್‌. ಪ್ರತಿ ಬಾರಿಯೂ ಬಾಂಬ್‌ ಸ್ಫೋಟ ಸಂಭವಿಸಿದಾಗ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ತಪ್ಪಿತಸ್ಥರನ್ನು ಶೀಘ್ರವೇ ಸೆರೆಹಿಡಿ ಯಲಾಗುವುದು ಎಂದು ಹೇಳಿಕೆ ನೀಡುವುದರಲ್ಲೇ ನಿಸ್ಸೀಮರಾಗಿದ್ದವರು ಪಾಟೀಲರು. ಇದಕ್ಕಿಂತ ಬೇರೇನೂ ಅವರು ಸಾಧಿಸಲಿಲ್ಲ. ಇದೇ ವೈಫ‌ಲ್ಯದಿಂದಾಗಿ ಅವರು ಹುದ್ದೆಯನ್ನೇ ಕಳೆದುಕೊಳ್ಳಬೇಕಾಯಿತು. ಆದರೆ, ಅವರ ಗೃಹ ಸಚಿವ ಹುದ್ದೆಯ ಅವಧಿಯಲ್ಲಿ ಸಮಾಜ ವಿದ್ರೋಹಿಗಳನ್ನು ಸದೆಬಡಿಯುವುದಕ್ಕಿಂತ ಅಸೀಮಾನಾಂದ ರಂತಹ ಮುಗ್ಧರನ್ನು ಆರೋಪಿಗಳನ್ನಾಗಿ ಮಾಡಿದರು.
 
ಯುಪಿಎ ಸರ್ಕಾರ ವರ್ಚಸ್ಸನ್ನು ಕಳೆದುಕೊಳ್ಳಲು ಇಂತಹ ಪ್ರಕರಣಗಳೂ ಕಾರಣವಾಯಿತು. ಸ್ವಾಮಿ ಅಸೀಮಾನಂದ ಆರೋಪಮುಕ್ತರಾಗುವ ಸುದ್ದಿ ಸೋಮವಾರ ಬಿತ್ತರವಾದ ಕೆಲವೇ ಹೊತ್ತಿಗೆ ತೀರ್ಪು ನೀಡಿದ ನ್ಯಾಯಾಧೀಶರೂ ರಾಜೀನಾಮೆ ನೀಡಿದ್ದು ಅಚ್ಚರಿಯ ಸಂಗತಿ. ಇದರ ಹಿಂದೆ ಏನಾದರೂ ನಡೆಯಿತೇ ಎಂಬ ಸಂಶಯ ಸಾರ್ವಜನಿಕರಲ್ಲಿ ಮೂಡುವುದು ಸಹಜ. ಆದಕ್ಕಾಗಿಯೇ ಅವರ ರಾಜೀನಾಮೆಗೆ ನಿಖರ ಕಾರಣಗಳೂ ಬಹಿರಂಗಗೊಂಡರೆ ಒಳ್ಳೆಯದು. ಇಲ್ಲದಿದ್ದಲ್ಲಿ ರಾಜೀನಾಮೆಗೆ ಕಾರಣವೇನು ಎಂಬ ಪ್ರಶ್ನೆಗೆ ಉತ್ತರ ಸಿಗದೇ ಹೋಗಬಹುದು. ನ್ಯಾಯದೇಗುಲದ ಗೌರವಕ್ಕೆ ಚ್ಯುತಿ ಬಾರದಿರಲಿ. 

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.