ಆದ್ಯತೆಯಲ್ಲಿ ಸಮಸ್ಯೆ ಬಗೆಹರಿಸಿ: ನಗದು ಅಭಾವ


Team Udayavani, Apr 19, 2018, 7:00 AM IST

16.jpg

ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳ ಎಟಿಎಂಗಳಲ್ಲಿ ನಗದು ಅಭಾವ ಕಾಣಿಸಿಕೊಂಡಿರುವುದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ಮುಖ್ಯವಾಗಿ ಚುನಾವಣೆಯ ಹೊಸ್ತಿಲಲ್ಲಿರುವ ನಮ್ಮ ರಾಜ್ಯದ ಕೆಲ ನಗರಗಳ ಎಟಿಎಂಗಳಲ್ಲಿ ಹಣವಿಲ್ಲ. ಎಟಿಎಂಗಳ ಎದುರು ಇರುವ ಜನರ ಸರತಿ ಸಾಲು ನೋಟು ಅಪನಗದೀಕರಣ ಸಂದರ್ಭದ ಪರಿಸ್ಥಿತಿಯನ್ನು ನೆನಪಿಸುತ್ತಿದೆ. ಕೆಲವು ಎಟಿಎಂಗಳನ್ನು ನಗದು ಇಲ್ಲ ಎಂಬ ಕಾರಣಕ್ಕೆ ಖಾಯಂ ಆಗಿ ಮುಚ್ಚಲಾಗಿದೆ. ಜನರು ದೈನಂದಿನ ಖರ್ಚುವೆಚ್ಚದ ಹಣಕ್ಕಾಗಿ ಪರದಾಡುವ ಪರಿಸ್ಥಿತಿ ಉಂಟಾಗಿದೆ. ಮಧ್ಯ ಪ್ರದೇಶ, ಬಿಹಾರ, ರಾಜಸ್ಥಾನ, ಉತ್ತರ ಪ್ರದೇಶ, ದಿಲ್ಲಿಯಲ್ಲೂ ನಗದು ಅಭಾವ ತಲೆದೋರಿರುವ ಕುರಿತು ವರದಿಯಾಗಿದೆ. ಆಂಧ್ರ ಮತ್ತು ತೆಲಂಗಾಣ ರಾಜ್ಯಗಳು ಕಳೆದೊಂದು ತಿಂಗಳಿಂದ ಈ ಸಮಸ್ಯೆಯನ್ನು ಎದುರಿಸುತ್ತಿವೆ. 

ಹೀಗೆ ದಿಢೀರ್‌ ಎಂದು ನಗದಿನ ಕೊರತೆ ಉಂಟಾಗಲು ಕಾರಣ ಏನು ಎನ್ನುವುದು ಜನರನ್ನು ಕಾಡುತ್ತಿರುವ ಪ್ರಶ್ನೆ. ಸದ್ಯದಲ್ಲಿಯೇ ಚುನಾವಣೆ ಎದುರಿಸಲಿರುವ ಕೆಲವು ರಾಜ್ಯಗಳಲ್ಲಿಯೇ ನಗದು ಕೊರತೆ ಹೆಚ್ಚಿದೆ. ಜತೆಗೆ ಮುಂದಿನ ವರ್ಷ ಸಾರ್ವತ್ರಿಕ ಚುನಾವಣೆಯೂ ನಡೆಯವಲಿರುವುದರಿಂದ ನಗದು ಸಂಗ್ರಹ ಪ್ರಾರಂಭವಾಗಿರುವ ಗುಮಾನಿಯೂ ಇದೆ. ಸಾಮಾನ್ಯವಾಗಿ ಜನವರಿಯಿಂದ ಮೇ ತನಕ ಹೆಚ್ಚು ಆರ್ಥಿಕ ವಹಿವಾಟುಗಳು ನಡೆಯುವ ಕಾಲ. ಸಹಜವಾಗಿ ಈ ಸಂದರ್ಭದಲ್ಲಿ ಹಣದ ಚಲಾವಣೆಯೂ ಹೆಚ್ಚಿರುತ್ತದೆ. ಹೀಗಾಗಿ ಕೆಲವು ಕಡೆ ನಗದು ಕೊರತೆ ಉಂಟಾಗಿರುವ ಸಾಧ್ಯತೆ ಇದೆ ಎನ್ನುವುದು ಸರಕಾರ ನೀಡುತ್ತಿರುವ ಸಮಜಾಯಿಷಿ. ಕಳೆದ ಮೂರು ತಿಂಗಳಲ್ಲಿ ಎಟಿಎಂಗಳಿಂದ ನಗದು ಹಿಂದೆಗೆತ ಹೆಚ್ಚಾಗಿದೆ ಎನ್ನುವ ಅರುಣ್‌ ಜೈಟ್ಲೀ ಹೇಳಿಕೆ ಇದನ್ನು ಪುಷ್ಟೀಕರಿಸುತ್ತದೆ. ಆದರೆ ಆರ್ಥಿಕತೆಯಲ್ಲಿ ಬರೀ 13 ದಿನಗಳಲ್ಲಿ 45,000 ಕೋ. ರೂ. ನಗದಿಗೆ ಬೇಡಿಕೆಯಿತ್ತು ಎಂಬ ಅಂಕಿಅಂಶ ಮಾತ್ರ ಬೇರೆಯದ್ದೇ ಕತೆ ಹೇಳುತ್ತಿದೆ. ಹೀಗೆ ಬೇಡಿಕೆ ದಿಢೀರ್‌ ಏರಿಕೆಯಾಗಲು ಕಾರಣ ಏನು ಎನ್ನುವುದನ್ನು ಸರಕಾರ ಪತ್ತೆ ಹಚ್ಚಬೇಕು. 

ಆದರೆ ಒಟ್ಟಾರೆ ಪರಿಸ್ಥಿತಿಯನ್ನು ಗಮನಿಸುವಾಗ ಜನರು ಆತಂಕಕ್ಕೀಡಾಗುವ ಅಗತ್ಯವಿಲ್ಲ ಎಂದೆನಿಸುತ್ತಿದೆ. ಪ್ರಸ್ತುತ 18 ಲಕ್ಷ ಕೋ. ರೂ. ಚಲಾವಣೆಯಲ್ಲಿದೆ. ಇದು ಅಪನಗದೀಕರಣದ ಸಂದರ್ಭದಲ್ಲಿ ಇದ್ದ ನಗದು ಚಲಾವಣೆಗಿಂತ ಹೆಚ್ಚಿನ ಮೊತ್ತ.ಅಂದರೆ ಚಲಾವಣೆಯಲ್ಲಿರುವ ಒಟ್ಟು ನಗದು ತೃಪ್ತಿಕರ ಮಟ್ಟದಲ್ಲಿದೆ. ಹೀಗಾಗಿ ದೇಶದ ಕೆಲವು ಕಡೆ ಮಾತ್ರ ನಗದು ಕೊರತೆ ಕಾಣಿಸಿಕೊಂಡಿರುವುದಕ್ಕೆ ಬೇರೆಯೇ ಕಾರಣಗಳಿರಬಹುದು ಎಂಬ ವಾದವನ್ನು ಒಪ್ಪಿಕೊಳ್ಳಬಹುದು.ಸರಕಾರವೇ ಹೇಳಿರುವಂತೆ ನಗದಿನ ಅಸಮಾನ ಹಂಚಿಕೆಯೂ ಆಗಿರಬಹುದು. ಇದನ್ನು ಮೂರು ದಿನಗಳಲ್ಲಿ ಸರಿಪಡಿಸುತ್ತೇವೆ ಎಂದು ಆರ್‌ಬಿಐ ಗವರ್ನರ್‌ ಊರ್ಜಿತ್‌ ಪಟೇಲ್‌ ಭರವಸೆ ನೀಡಿರುವುದರಿಂದ ಸದ್ಯ ನೆಮ್ಮದಿಯಿಂದಿರಬಹುದು. ಅದೇ ರೀತಿ ಸಮಸ್ಯೆಯ ಮೂಲವನ್ನು ಪತ್ತೆಹಚ್ಚಲು ಆರ್‌ಬಿಐ ಸಮಿತಿ ರಚನೆ ಮಾಡಿರುವುದು ಕೂಡಾ ಸ್ವಾಗತಾರ್ಹ. 

ಡಿಜಿಟಲ್‌ ವಹಿವಾಟಿಗೆ ಹೆಚ್ಚಿನ ಉತ್ತೇಜನ ನೀಡಬೇಕೆಂಬ ಉದ್ದೇಶದಿಂದ ಪ್ರಧಾನಿ ಮೋದಿ 2016ರ ನವಂಬರ್‌ನಲ್ಲಿ 500 ಮತ್ತು 1000 ರೂ. ನೋಟುಗಳ ಚಲಾವಣೆ ರದ್ದುಪಡಿಸುವ ನಿರ್ಧಾರ ಘೋಷಿಸಿದ್ದರು. ಈ ಸಂದರ್ಭದಲ್ಲಿ ಕೆಲ ದಿನಗಳ ಮಟ್ಟಿಗೆ ಡಿಜಿಟಲ್‌ ವಹಿವಾಟಿನತ್ತ ಜನರು ವಾಲಿದರೂ ಇದರಲ್ಲಿರುವ ಹಲವು ಅಡೆತಡೆಗಳಿಂದ ಬೇಸತ್ತು ನಗದು ವಹಿವಾಟಿನತ್ತ ಮರಳಿದ್ದಾರೆ. ಹೀಗಾಗಿ ವ್ಯವಸ್ಥೆಯಲ್ಲಿ ನಗದು ಸರಾಗವಾಗಿ ಹರಿದಾಡದಿದ್ದರೆ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಮದುವೆ, ಹಬ್ಬಹರಿದಿನಗಳಂತಹ ದಿನಗಳಲ್ಲಿ ನಗದು ಬೇಡಿಕೆ ಹೆಚ್ಚಳವನ್ನು ಮುಂದಾಗಿಯೇ ಅಂದಾಜಿಸಿ ಸಮರ್ಪಕ ವ್ಯವಸ್ಥೆ ಮಾಡುವುದು ಆರ್‌ಬಿಐ ಕರ್ತವ್ಯ. ಆದರೆ ಆರ್‌ಬಿಐ ಇದಕ್ಕೆ ತದ್ವಿರುದ್ಧವಾಗಿ ಸಮಸ್ಯೆ ಉಲ್ಬಣಿಸಿದ ಬಳಿಕ 500 ರೂ. ನೋಟನ್ನು ಹೆಚ್ಚು ಮುದ್ರಿಸುವಂತಹ ಪರಿಹಾರೋಪಾಯಗಳನ್ನು ಹುಡುಕುತ್ತಿದೆ. ಇದೇ ವೇಳೆ ನಗದು ಹಣವನ್ನು ಹಿಡಿದಿಡುವ ಪ್ರಯತ್ನಗಳಾಗುತ್ತಿರುವ ಸಂದೇಹವೂ ಇದೆ.

ಚಿಲ್ಲರೆ ಮತ್ತು ಅಸಂಘಟಿತ  ವಲಯದ ಶೇ.90ಕ್ಕಿಂತಲೂ ಹೆಚ್ಚಿನ ವಹಿವಾಟುಗಳು ನಗದನ್ನು ಅವಲಂಬಿಸಿವೆ. ನಗದು ಪೂರೈಕೆಯಲ್ಲಾಗುವ ವ್ಯತ್ಯಯದ ಮೊದಲ ಪರಿಣಾವಾಗುವುದೇ ಈ ವಲಯಗಳ ಮೇಲೆ. ಈ ವಲಯಗಳು ಹದತಪ್ಪಿದರೆ ಇಡೀ ಆರ್ಥಿಕ ವ್ಯವಸ್ಥೆಯೇ ಅಸ್ತವ್ಯಸ್ತವಾಗಬಹುದು. ಏಕೆಂದರೆ ನಮ್ಮ ಆರ್ಥಿಕತೆಯ ದೊಡ್ಡ ಪಾಲು ಈ ವಲಯಗಳದ್ದು.  ಈಗ ಕಾಣಿಸಿಕೊಂಡಿರುವ ನಗದು ಕೊರತೆಯ ಖಚಿತ ಕಾರಣ ಏನೇ ಇದ್ದರೂ ಈಗ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರುವುದು ಸರಕಾರದ ಮುಖ್ಯ ಆದ್ಯತೆಯಾಗಬೇಕು. 

ಟಾಪ್ ನ್ಯೂಸ್

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mob

OTT; ಅಸಭ್ಯ ಒಟಿಟಿ ನಿಯಂತ್ರಣ: ಶಾಶ್ವತ ಕಡಿವಾಣ ಅಗತ್ಯ

ಒಂದು ದೇಶ-ಒಂದು ಚುನಾವಣೆ ಎಲ್ಲರ ಸಹಮತ ದೊರೆಯಲಿ

ಒಂದು ದೇಶ-ಒಂದು ಚುನಾವಣೆ ಎಲ್ಲರ ಸಹಮತ ದೊರೆಯಲಿ

ಕೃತಕ ಬಣ್ಣ ಬಳಕೆಗೆ ನಿಷೇಧ: ಕಟ್ಟುನಿಟ್ಟಾಗಿ ಪಾಲನೆಯಾಗಲಿ…

ಕೃತಕ ಬಣ್ಣ ಬಳಕೆಗೆ ನಿಷೇಧ: ಕಟ್ಟುನಿಟ್ಟಾಗಿ ಪಾಲನೆಯಾಗಲಿ…

Aviation: ವಿಮಾನಯಾನ: ಭದ್ರತಾ ಕಾರ್ಯತಂತ್ರವೂ ಬದಲಾಗಲಿ

Aviation: ವಿಮಾನಯಾನ: ಭದ್ರತಾ ಕಾರ್ಯತಂತ್ರವೂ ಬದಲಾಗಲಿ

Karnataka Governament: ಕಾರ್ಯಸಾಧು ಶಿಫಾರಸುಗಳ ಜಾರಿಗೆ ಸರಕಾರ ಮುಂದಾಗಲಿ

Karnataka Governament: ಕಾರ್ಯಸಾಧು ಶಿಫಾರಸುಗಳ ಜಾರಿಗೆ ಸರಕಾರ ಮುಂದಾಗಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.