ಮೋದಿ ರಷ್ಯಾ ಭೇಟಿ ಸಂಬಂಧ ಪುನಶ್ಚೇತನಕ್ಕೆ ಸಹಕಾರಿ 


Team Udayavani, May 22, 2018, 6:00 AM IST

16.jpg

ಭಯೋತ್ಪಾದನೆ ನಿಗ್ರಹ, ಆರ್ಥಿಕ ಸಹಭಾಗಿತ್ವ,  ಪರಮಾಣು ತಂತ್ರಜ್ಞಾನ ಮತ್ತಿತರ ಕ್ಷೇತ್ರಗಳಲ್ಲಿ ಉಭಯ ದೇಶಗಳು ಕಾರ್ಯಯೋಜನೆಗಳನ್ನು ಹಾಕಿಕೊಳ್ಳುವ ಅಗತ್ಯವಿದೆ.

ಪ್ರಧಾನಿ ನರೇಂದ್ರ ಮೋದಿ ಕೈಗೊಂಡಿರುವ ರಷ್ಯಾ ಭೇಟಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಹೊಸ ಮಜಲಿಗೊಯ್ಯುವ ನಿರೀಕ್ಷೆ ಮೂಡಿಸಿದೆ. ಸೋಚಿಯಲ್ಲಿ ನಡೆದ ಅನೌಪಚಾರಿಕ ಸಭೆಯಲ್ಲಿ ಮೋದಿ ಮತ್ತು ರಷ್ಯಾದ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಜಾಗತಿಕವಾಗಿ ಮಹತ್ವ ಪಡೆದುಕೊಂಡಿರುವ ಹಲವಾರು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಆರಂಭದಿಂದಲೂ ಭಾರತ ಮತ್ತು ರಷ್ಯಾ ನಡುವೆ ಅತ್ಯುತ್ತಮ ವಾದ ದ್ವಿಪಕ್ಷೀಯ ಸಂಬಂಧವಿತ್ತು. ರಷ್ಯಾವನ್ನು ಭಾರತದ ಆಪತಾºಂಧವ ದೇಶ ಎಂದೇ ಅರಿಯಲಾಗುತ್ತಿತ್ತು. ಭಾರತಕ್ಕೆ ಅಗತ್ಯವಿರುವ ಶಸ್ತ್ರಾÕಸ್ತ್ರ ಮಾತ್ರವಲ್ಲದೆ ಆಹಾರ ಧಾನ್ಯಗಳು ಕೂಡಾ ರಷ್ಯಾದಿಂದಲೇ ಬರುತ್ತಿದ್ದವು.ಆದರೆ ಕ್ರಮೇಣ ಭಾರತ ಆಹಾರ ಉತ್ಪಾದನೆ ಯಲ್ಲಿ ಸ್ವಾವಲಂಬನೆ ಸಾಧಿಸಿದೆ. ಶಸ್ತ್ರಾಸ್ತ್ರ ಆಮದು ಈಗಲೂ ನಡೆಯುತ್ತಿದ್ದರೂ ಅದರ ಪ್ರಮಾಣ ತುಸು ಕಡಿಮೆಯಾಗಿದೆ. 

ಕಳೆದ ಎರಡು ದಶಕಗಳಲ್ಲಿ ಭಾರತ ಮತ್ತು ಅಮೆರಿಕ ಸಂಬಂಧ ಗಾಢ ವಾಗುತ್ತಿದ್ದು, ಇದರಿಂದಾಗಿ ರಷ್ಯಾ ದೂರವಾಗುತ್ತಿದೆ ಎಂಬ ಕಳವಳವಿದೆ. ಭಾರತದ ಈ ತಂತ್ರಕ್ಕೆ ಎದುರಾಗಿ ರಷ್ಯಾ, ಪಾಕಿಸ್ಥಾನ ಮತ್ತು ಚೀನವನ್ನು ತನ್ನ ನಿಕಟ ವಲಯಕ್ಕೆ ಸೇರಿಸಿಕೊಂಡಿದೆ. ಅದರಲ್ಲೂ ರಷ್ಯಾ ಮತ್ತು ಪಾಕಿಸ್ಥಾನದ ಗೆಳೆತನ ಭಾರತದ ಪಾಲಿಗೆ ಬಿಸಿ ತುಪ್ಪವಾಗಿತ್ತು. 2016ರಲ್ಲಿ ಈ ದೇಶಗಳ ಜಂಟಿ ಸಮರಾಭ್ಯಾಸವನ್ನು ನಡೆಸಿ ಭಾರತದ ಕಳವಳವನ್ನು ಇನ್ನಷ್ಟು ಹೆಚ್ಚಿಸಿವೆ. ಉರಿ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಸಮರಾ ಭ್ಯಾಸವನ್ನು ಮುಂದೂಡ ಬೇಕು ಎನ್ನುವ ಭಾರತದ ಕೋರಿಕೆಗೂ ರಷ್ಯಾ ಮನ್ನಣೆ ನೀಡಿರಲಿಲ್ಲ. ಹೀಗೆ ಎರಡು ಶತ್ರು ರಾಷ್ಟ್ರಗಳನ್ನು ರಷ್ಯಾ ವಿಶ್ವಾಸಕ್ಕೆ ತೆಗೆದುಕೊಂಡು ಪ್ರತಿ ವ್ಯೂಹ ರಚಿಸಿ ದಾಗ ರಷ್ಯಾ ಜತೆಗಿನ ಸಂಬಂಧ ಸುಧಾರಣೆ ಆಗುವ ಸಾಧ್ಯತೆಯಿಲ್ಲ ಎನ್ನುವ ಆತಂಕ ಎದುರಾಗಿತ್ತು. ಇದೀಗ ಅನೌಪ ಚಾರಿಕ ಮಾತುಕತೆ ಗಾಗಿ ನರೇಂದ್ರ ಮೋದಿ ಯನ್ನು ಆಹ್ವಾನಿಸಿರುವುದರಿಂದ ಈ ಆತಂಕ ನಿವಾರಣೆಗೆ ವೇದಿಕೆ ಸಿದ್ಧ ವಾಗಬಹುದು. 18 ವರ್ಷದ ಹಿಂದೆ ಅಂದಿನ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಮತ್ತು ಪುಟಿನ್‌ ಭಾರತ-ರಷ್ಯಾ ವ್ಯೂಹಾತ್ಮಕ ಸಹ ಭಾಗಿತ್ವ ಒಪ್ಪಂದಕ್ಕೆ ಸಹಿ ಹಾಕಿದ್ದರು. ಇದು ಸೋವಿಯತ್‌ ರಷ್ಯಾ ಪತನದ ಬಳಿಕ ಉಭಯ ದೇಶಗಳ ನಡುವಿನ ಮೊದಲ ಒಪ್ಪಂದವಾಗಿತ್ತು. ದ್ವಿಪಕ್ಷೀಯ ಸಂಬಂಧ ವರ್ಧನೆಯೇ ಒಪ್ಪಂದದ ಮೂಲ ಆಶಯವಾಗಿತ್ತು. ಆದರೆ ಅನಂತರ ನಡೆದ ಜಾಗತಿಕ ರಾಜಕೀಯ ಪಲ್ಲಟಗಳಿಂದಾಗಿ ಈ ಒಪ್ಪಂದ ನೇಪಥ್ಯಕ್ಕೆ ಸರಿದಿತ್ತು. ಇದೀಗ ಮೋದಿ ಭೇಟಿಯಿಂದ ಈ ಒಪ್ಪಂದ ಮರುಜೀವ ಪಡೆಯುವ ನಿರೀಕ್ಷೆಯಿದೆ. ಭಯೋತ್ಪಾದನೆ ನಿಗ್ರಹ, ರಕ್ಷಣಾ ಸಹಭಾಗಿತ್ವ, ಆರ್ಥಿಕ ಸಹಭಾಗಿತ್ವ, ವ್ಯಾಪಾರ ಸಂಬಂಧ, ಬಾಹ್ಯಾಕಾಶ ವಿಜ್ಞಾನ, ಪರಮಾಣು ತಂತ್ರಜ್ಞಾನ ಮತ್ತಿತರ ಕ್ಷೇತ್ರಗಳಲ್ಲಿ ಉಭಯ ದೇಶಗಳು ಜಂಟಿಯಾಗಿ ಕಾರ್ಯ ಯೋಜನೆಗಳನ್ನು ಹಾಕಿ ಕೊಳ್ಳುವ ಅಗತ್ಯವಿದೆ. ಈಗಲೂ ದೇಶದ ಶೇ. 60ರಷ್ಟು ಶಸ್ತ್ರಾಸ್ತ್ರಗಳು ರಷ್ಯಾ ದಿಂದ ಆಮದು ಮಾಡಿಕೊಂಡವುಗಳಾಗಿವೆ. ಇವುಗಳ ನಿರ್ವಹಣೆಗೆ ರಷ್ಯಾ ಜತೆಗೆ ಉತ್ತಮ ಸಂಬಂಧ ಇಟ್ಟುಕೊಳ್ಳುವ ಅನಿವಾರ್ಯತೆಯಿದೆ. 

ಇರಾನ್‌ನಲ್ಲಿ ತೈಲ ಉತ್ಪಾದನೆ ಕುಸಿತವಾಗಿರುವುದರಿಂದ ಭಾರತ ಪರ್ಯಾಯ ಮೂಲಗಳತ್ತ ಗಮನ ಹರಿಸುವ ಅಗತ್ಯ ಸೃಷ್ಟಿಯಾಗಿದೆ. ರಷ್ಯಾ ಭೇಟಿ ಫ‌ಲಪ್ರದವಾದರೆ ಅಲ್ಲಿರುವ ವಿಫ‌ುಲ ಇಂಧನ ಮೂಲಗಳ ಪ್ರಯೋಜನ ಭಾರತಕ್ಕಾಗಬಹುದು. ಶಾಂತಿಯುತ ಉದ್ದೇಶಗಳಿಗೆ ಪರಮಾಣು ಇಂಧನ ಬಳಸುವ ಭಾರತದ ಯೋಜನೆಗಳನ್ನು ರಷ್ಯಾ ಹಿಂದಿನಿಂದಲೂ ಬೆಂಬಲಿಸುತ್ತಿದೆ. ತಮಿಳುನಾಡಿನ ಕೂಡಂಕುಳಂನಲ್ಲಿ ನಿರ್ಮಾಣವಾಗಿರುವ ಅಣು ವಿದ್ಯುತ್‌ ಸ್ಥಾವರದಲ್ಲಿ ರಷ್ಯಾದ ಸಹ ಭಾಗಿತ್ವವಿದೆ. ಇನ್ನಷ್ಟು ಪರಮಾಣು ಕಾರ್ಯಕ್ರಮಗಳಿಗೆ ರಷ್ಯಾದ ಸಹ ಭಾಗಿತ್ವವನ್ನು ನಿರೀಕ್ಷಿಸಬಹುದು. ಬಾಹ್ಯಾಕಾಶ ವಿಜ್ಞಾನ ರಷ್ಯಾ ಸಹಭಾಗಿತ್ವ ಬಯಸುವ ಇನ್ನೊಂದು ಕ್ಷೇತ್ರ. ನಾಲ್ಕು ದಶಕದ ಹಿಂದೆ ರಷ್ಯಾ ನೆರವಿನಿಂದ ಭಾರತ ತನ್ನ ಮೊದಲ ಉಪಗ್ರಹ ಆರ್ಯಭಟವನ್ನು ಉಡಾವಣೆ ಮಾಡಿತ್ತು. ಅನಂತರ ಬಾಹ್ಯಾಕಾಶ ಕ್ಷೇತ್ರದಲ್ಲಿ ಉಭಯ ದೇಶಗಳು ಬಹಳಷ್ಟು ಸಾಧನೆ ಮಾಡಿವೆ. ಮೋದಿ ಭೇಟಿಯ ಫ‌ಲವಾಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಉಭಯ ದೇಶಗಳ ಸಹಭಾಗಿತ್ವ ಇನ್ನಷ್ಟು ಹೆಚ್ಚಳವಾಗಲಿದೆ. 

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.