ನಿರ್ಣಾಯಕ ನಿರ್ಧಾರ ಕೈಗೊಳ್ಳಲಿ ಸಾಧಿಸಲು ಬೇಕಾದಷ್ಟಿದೆ


Team Udayavani, May 26, 2018, 11:35 AM IST

narendra-modi.jpg

ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರ ಅಧಿಕಾರದಲ್ಲಿ ನಾಲ್ಕು ವರ್ಷಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ಸರಕಾರದ ಸಾಧನೆ ಮತ್ತು ವೈಫ‌ಲ್ಯಗಳ ಕುರಿತು ಮೌಲ್ಯಮಾಪನ ಮಾಡುವುದು ಸಹಜ ಪ್ರಕ್ರಿಯೆ. ಹಾಗೆ ತಕ್ಕಡಿಗೆ ಹಾಕಿದರೆ ಸಾಧನೆಗಳ ತಟ್ಟೆಯೇ ಹೆಚ್ಚು ತೂಗುತ್ತದೆ. ಹಾಗೆಂದು ವಿಫ‌ಲವಾಗಿಯೇ ಇಲ್ಲ ಎಂದಲ್ಲ.

ಯಾವುದೇ ಸರಕಾರದ ಮೌಲ್ಯಮಾಪನ ಮಾಡುವಾಗ ಆರ್ಥಿಕ, ಅಂತಾರಾಷ್ಟ್ರೀಯ, ಸಾಮಾಜಿಕ, ರಾಜಕೀಯ ಕ್ಷೇತ್ರಗಳನ್ನು ಆದ್ಯತೆಯಲ್ಲಿ ಪರಿಗಣಿಸುವುದು ವಾಡಿಕೆ. ಈ ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗಣನೀಯ ಎನ್ನುವಂತಹ ಸಾಧನೆಯನ್ನೇ ಮಾಡಿದೆ. ಜಿಎಸ್‌ಟಿಯನ್ನು ಜಾರಿಗೊಳಿಸುವ ಮೂಲಕ ಸರಕಾರ ಇಡೀ ಆರ್ಥಿಕ ವ್ಯವಸ್ಥೆಯನ್ನು ಹೊಸ ದಿಕ್ಕಿಗೆ ತಿರುಗಿಸಿದೆ. ನೋಟು ರದ್ದತಿ ಮತ್ತು ಜಿಎಸ್‌ಟಿಯಿಂದಾಗಿ ಆರಂಭದಲ್ಲಿ ಸಮಸ್ಯೆಗಳಾಗಿದ್ದರೂ ಈಗ ಇವೆರಡು ಅತ್ಯಂತ ಯಶಸ್ವೀ ನಿರ್ಧಾರಗಳು ಎಂದು ಅನುಭವಕ್ಕೆ ಬರುತ್ತದೆ. ಈ ಎರಡು ದಿಟ್ಟ ನಿರ್ಧಾರಗಳ ಬಳಿಕವೂ ದೇಶದ ಜಿಡಿಪಿ ಸ್ಥಿರವಾಗಿದೆ. ಅಂತೆಯೇ ಹಣದುಬ್ಬರವನ್ನು ನಿಯಂತ್ರಿಸಿ ಬೆಲೆಯೇರಿಕೆಯನ್ನು ತಡೆಯುವಲ್ಲಿ ಸರಕಾರ ಯಶಸ್ವಿಯಾಗಿದೆ. ಆದರೆ ಇದೇ ವೇಳೆ ಪೆಟ್ರೋಲು ಮತ್ತು ಡೀಸೆಲ್‌ ಬೆಲೆ ಏರಿಕೆ ತಡೆಯದೆ ಟೀಕೆಗೂ ಗುರಿಯಾಗಿದೆ.

ಅಂತಾರಾಷ್ಟ್ರೀಯ ಸಂಬಂಧ ವೃದ್ಧಿಗೆ ಮೋದಿ ಕೈಗೊಂಡಿರುವ ನಿರ್ಧಾರಗಳೆಲ್ಲ ಫ‌ಲ ನೀಡುತ್ತಿವೆ.  ಸಾಮಾಜಿಕ ಪರಿವರ್ತನೆಗಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ. ಇವುಗಳೆಲ್ಲ ಸಂಪೂರ್ಣವಾಗಿ ಗುರಿಮುಟ್ಟಿರದಿದ್ದರೂ ಭವಿಷ್ಯದಲ್ಲಿ ಸದೃಢ ಸಮಾಜ ನಿರ್ಮಿಸಲು ಬುನಾದಿಯಾಗಬಹುದು. 

ರಾಜಕೀಯವಾಗಿ ಮೋದಿಯದ್ದು ತಡೆಯಿಲ್ಲದ ಓಟ. 2014ರ ಬಳಿಕ ನಡೆದ ಹೆಚ್ಚಿನೆಲ್ಲ ಚುನಾವಣೆಗಳಲ್ಲಿ ಬಿಜೆಪಿ ಗೆದ್ದಿದೆ. ಪ್ರಸ್ತುತ 19 ರಾಜ್ಯಗಳಲ್ಲಿ ಬಿಜೆಪಿ ಸರಕಾರವೇ ಇದೆ. ಅದೇ ರೀತಿ ರಾಜಕೀಯವಾಗಿ ಅತಿ ಹೆಚ್ಚು ಜನಪ್ರಿಯತೆಯನ್ನು ಸಂಪಾದಿಸಿದ ಹಾಗೂ ಇದೇ ವೇಳೆ ಅತಿ ಹೆಚ್ಚು ವಿರೋಧಿಸಲ್ಪಟ್ಟ ನಾಯಕ ಮೋದಿ. ಮೋದಿ ಪ್ರಭಾವ ಎಷ್ಟು ದಟ್ಟವಾಗಿವೆ ಎಂದರೆ 2019ರಲ್ಲಿ ಎನ್‌ಡಿಎ ಗೆಲುವಿನ ಓಟವನ್ನು ತಡೆಯುವ ಸಲುವಾಗಿ ಎಲ್ಲ ವಿಪಕ್ಷಗಳು ಒಂದಾಗಿವೆ. ವಿಶೇಷವೆಂದರೆ ಕಾಂಗ್ರೆಸ್‌ ಈ ಪ್ರಾದೇಶಿಕ ಪಕ್ಷಗಳ ಕಿರಿಯ ಪಾಲುದಾರನಾಗಲು ಕೂಡಾ ತಯಾರಾಗಿದೆ. 

ಜನಜೀವನದ ಮೇಲೆ ಗುಣಾತ್ಮಕ ಪರಿಣಾಮಗಳನ್ನು ಬೀರುವಲ್ಲಿ ಸಫ‌ಲವಾದ ಸರಕಾರವನ್ನು ಯಶಸ್ವಿ ಸರಕಾರ ಎಂದು ಪರಿಭಾವಿಸುತ್ತೇವೆ. ಈ ಮಾನದಂಡದ ಪ್ರಕಾರ ಹೇಳುವುದಾದರೆ ಮೋದಿ ಇನ್ನೂ ಸಾಧಿಸಲು ಬೇಕಾದಷ್ಟಿದೆ.ಇದೇ ವೇಳೆ ಕಪ್ಪುಹಣವನ್ನು ತರುವಂತಹ ಜನಪ್ರಿಯ ಘೋಷಣೆಯನ್ನು ಈಡೇರಿಸಲು ಸಾಧ್ಯವಾಗದೆ ಇರುವುದು ಸರಕಾರದ ಜನಪ್ರಿಯತೆಯ ಓಟಕ್ಕೂ ತಡೆಯಾಗಿದೆ.  ಇನ್ನೊಂದು ವರ್ಷದಲ್ಲಿ ಈ ನಿಟ್ಟಿನಲ್ಲಿ ಸರಕಾರ ಯಾವಕ್ರಮಗಳನ್ನು ಕೈಗೊಳ್ಳುತ್ತದೆ ಎನ್ನುವುದು ಮುಖ್ಯ. ಕೊನೆಯ ವರ್ಷದಲ್ಲಿ ಸರಕಾರ ಮಾಡುವ ಸಾಧನೆಯೇ ಜನರ ಮನಸ್ಸಿನಲ್ಲಿ ಅಚ್ಚೊತ್ತಿ ನಿಲ್ಲುವುದರಿಂದ  ಮೋದಿ ಸರಕಾರ ನಿರ್ಣಾಯಕವಾದ ನಿರ್ಧಾರಗಳನ್ನು ಕೈಗೊಳ್ಳುವುದು ಅನಿವಾರ್ಯ. 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.